Homeಮುಖಪುಟಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

ಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

- Advertisement -
- Advertisement -

ಕರ್ನಾಟಕದಲ್ಲಿ ಸದ್ಯಕ್ಕಿರುವ ರಾಜಕೀಯ ಪರಿಸ್ಥಿತಿಯನ್ನಾಧರಿಸಿ ಆಯಾ ವಿಧಾನಸಭಾ ಕ್ಷೇತ್ರಗಳ ಜಿದ್ದಾಜಿದ್ದಿ, ಚುನಾವಣಾ ಟ್ರಂಡ್‍ಗಳನ್ನು ಅಧ್ಯಯನ ನಡೆಸಿ, ನಮ್ಮ ಪತ್ರಿಕಾ ತಂಡ ಕ್ಷೇತ್ರವಾರು ನಡೆಸಿದ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‍ಗೆ 117-122, ಬಿಜೆಪಿಗೆ 55-60, ಜೆಡಿಎಸ್‍ಗೆ 34-37 ಮತ್ತು ಇತರರಿಗೆ 3-5 ಸ್ಥಾನಗಳು ಲಭಿಸಬಹುದು.

ನಾನು ಗೌರಿ ತಂಡದ ಸಮೀಕ್ಷೆ

ಮುಖ್ಯವಾಗಿ ತನ್ನ ಪಾರಂಪರಿಕ ಪಾರುಪತ್ಯದ ಹೈದ್ರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿರುವುದಲ್ಲದೇ ಬಿಜೆಪಿಯ ಭದ್ರ ನೆಲೆ ಎಂದು ಪರಿಗಣಿತವಾಗಿದ್ದ, ಲಿಂಗಾಯತ ಪ್ರಾಬಲ್ಯದ ಮುಂಬೈ ಕರ್ನಾಟಕದಲ್ಲೂ ಕೈ ಪಡೆ ಮುಂದಿರುವುದು ಸರಳ ಬಹುಮತಕ್ಕೆ ಸನಿಹವಾಗಿಸಿದೆ. ಕಳೆದ ಬಾರಿಯೂ ಕೈ ಪಾರ್ಟಿ ಈ ಎರಡು ಪ್ರಾಂತ್ಯಗಳಲ್ಲಿ ಗಣನೀಯ ಸಾಧನೆ ಮಾಡಿದ್ದು ಅಧಿಕಾರಕ್ಕೆ ಹತ್ತಿರವಾಗಿಸಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕಾಂಗ್ರೆಸ್‍ಗೆ ಅದ್ಭುತ ಮೈಲೇಜ್ ತಂದುಕೊಡದೆ ಹೋದರೂ ಯಡಿಯೂರಪ್ಪನವರಿಂದ ಲಿಂಗಾಯತ ಲೀಡರಿಕೆಯನ್ನು ವಿಮುಖಗೊಳಿಸಿರುವುದು ಬಿಜೆಪಿಗೆ ಏಟು ನೀಡುತ್ತಿದೆ. ಅದು ಗಣನೀಯವಲ್ಲ, ಆದರೂ ಕೆಜೆಪಿ-ಬಿಜೆಪಿ-ಬಿಎಸ್‍ಆರ್ ಸಮಾಗಮದ ಆಘಾತವನ್ನು ತಡೆದುಕೊಳ್ಳಬಹುದಾದಷ್ಟು ಶಕ್ತಿಯನ್ನು ಅದು ಕಾಂಗ್ರೆಸ್‍ಗೆ ತುಂಬಿದೆ. ಇನ್ನು ಕರಾವಳಿ ಪ್ರಾಂತ್ಯದಲ್ಲಿ ಕಳೆದ ಆಘಾತವೇ ಬಿಜೆಪಿಗೆ ಈ ಸಲವೂ ಮುಂದುವರೆಯುವ ಲಕ್ಷಣಗಳಿವೆ. ಇನ್ನು ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಅತ್ಯದ್ಭುತವಾಗಿ ಚೇತರಿಸಿಕೊಳ್ಳುವ ಪರಿಸ್ಥಿತಿ ಇಲ್ಲ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳು ಹಿಂದೆಂದಿಗಿಂತಲೂ ಹೆಚ್ಚು ದೃವೀಕರಣಗೊಂಡ ದೇವೇಗೌಡರ ಬೆನ್ನಿಗೆ ನಿಂತಿರುವುದರಿಂದ ಇಲ್ಲಿ ಕೈಗೆ ಕಳೆದ ಬಾರಿಗಿಂತ ಅಲ್ಪ ಹಿನ್ನಡೆಯಾಗಬಹುದು. ಆದರೂ ಅದು ಸರಳ ಬಹುಮತದಿಂದ ಕಾಂಗ್ರೆಸ್ಸನ್ನು ದೂರಕ್ಕೆ ತಳ್ಳಲಾರದು. ಬೆಂಗಳೂರು ಸಿಟಿ ಬಿಜೆಪಿ ಮತ್ತು ಕಾಂಗ್ರೆಸ್ ಪಾಲಿಗೆ ಮಿಶ್ರ ಪ್ರತಿಫಲ ಕೊಡಲಿದೆ. ಇಲ್ಲಿ ಬಿಜೆಪಿ ಕಾಂಗ್ರೆಸ್‍ಗಿಂತ ಒಂದು ಹೆಜ್ಜೆ ಮುಂದಕ್ಕೆ ಹೋದರೂ ಅಚ್ಚರಿಯಿಲ್ಲ.

ಒಟ್ಟಾರೆ ಹೇಳಬೇಕೆಂದರೆ ಬಿಜೆಪಿಯೊಳಗಿನ ನಾಯಕತ್ವದ ಗೊಂದಲಗಳು, ಮೋದಿಯ ಎಂಪಿ ಎಲೆಕ್ಷನ್ ಭರವಸೆಗಳು ಜನರನ್ನು ಭ್ರಮಾ ನಿರಸನಗೊಳಿಸಿರುವುದು, ಕೇಂದ್ರ ಸರ್ಕಾರ ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ವಿಫಲವಾಗಿರೋದು, ಕರ್ನಾಟಕದ ಪ್ರಾದೇಶಿಕ ಸವಾಲುಗಳಿಗೆ ಬಿಜೆಪಿ ಸ್ಪಂದಿಸಿದ ನಿರಾಶದಾಯಕ ರೀತಿ, ಕಾಂಗ್ರೆಸ್‍ನೊಳಗೆ ಮಡುಗಟ್ಟಿರುವ ಅಪರೂಪದ ಒಗ್ಗಟ್ಟು, ರಾಜ್ಯ ಸರ್ಕಾರದ ಜನಪ್ರಿಯತೆ, ಪ್ರಧಾನ ಹಗರಣ-ಭ್ರಷ್ಟಾಚಾರ ಮುಕ್ತ ಆಡಳಿತಗಳು ಕಾಂಗ್ರೆಸ್ಸನ್ನು ಮತ್ತೆ ಅಧಿಕಾರಕ್ಕೆ ತರುವ ಸಾಧ್ಯತೆಗಳೇ ದಟ್ಟವಾಗಿ ಕಾಣುತ್ತಿವೆ.

ದೇವರಾಜ ಅರಸು

ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಆಡಳಿತ ನಡೆಸಿದ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೆ ಪರದಾಡುತ್ತ ಬಂದಿದ್ದವು. ಪ್ರಭುತ್ವ ವಿರೋಧಿ ಅಲೆಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಪಕ್ಷ ತೇಲಿ ಹೋಗುವುದು ಸರ್ವೇ ಸಾಮಾನ್ಯ ಸಂಗತಿಯಾಗಿತ್ತು. 1978ರ ವಿಧಾನಸಭಾ ಚುನಾವಣೆಯಲ್ಲಿ ಆಗ ಐದು ವರ್ಷಗಳ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಿದ್ದ ಮುಖ್ಯಮಂತ್ರಿ ದೇವರಾಜ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರಿತ್ತು. ಅದಾದ ನಂತರದ ದಿನಗಳಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷವೂ ಪುನರಾಯ್ಕೆ ಆಗಿಲ್ಲ. ದೇವರಾಜ ಅರಸು ನಂತರ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸಿದ ಹೆಗ್ಗಳಿಕೆ ಸಿದ್ಧರಾಮಯ್ಯನವರದು. 1978ರಲ್ಲಿ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 149 ಸ್ಥಾನ ಪಡೆದಿತ್ತು. ಈಗ ಐದು ವರ್ಷ ಪೂರೈಸಿದ ಸಿದ್ಧರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಹೌದು. ಇತಿಹಾಸ ಮರುಕಳಿಸಲಿದೆ. ಎಷ್ಟೇ ಅಳೆದು ತೂಗಿ ನೋಡಿದರು. ಕಾಂಗ್ರೆಸ್‍ಗೆ ಸರಳ ಬಹುಮತ ಬರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ದುರ್ಬಲ ಹೈಕಮಾಂಡ್‍ಗೆ ಪ್ರತಿಕ್ರಿಯೆಯಾಗಿ ಸ್ಥಳೀಯ ಪ್ರಬಲ ನಾಯಕತ್ವ ರಾಜ್ಯಕ್ಕೆ ಪರ್ಯಾಯ ಎನ್ನುವ ಸಂದೇಶ ಕರ್ನಾಟಕ ಮತ್ತೊಮ್ಮೆ ನೀಡುವ ಸಾಧ್ಯತೆಗಳು ನಿಚ್ಚಳವಾಗಿವೆ. ಸಿದ್ಧರಾಮಯ್ಯನವರ ಅಲೆಯು ‘ಮಾತುಗಾರ’ರ ಮೋಡಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಲಿದೆ. ದೆಹಲಿಯಿಂದ ಅಧಿಕಾರ ನಡೆಸುವ ಕೇಂದ್ರದ ನಿಲುವಿಗೆ ಕರ್ನಾಟಕ ಯಾವತ್ತೂ ಸೊಪ್ಪು ಹಾಕಿಲ್ಲ. ದೆಹಲಿ ದೊರೆಗಳಿಗೆ ಕರ್ನಾಟಕ ಖಚಿತ ಉತ್ತರ ನೀಡುತ್ತಲೇ ಬಂದಿದೆ. ಅದೇ ಈ ಬಾರಿಯೂ ಪುನರಾವರ್ತನೆ ಆಗಲಿದೆ. ಕಳೆದ ಸಲಕ್ಕಿಂತ ಮತ ಗಳಿಕೆಯ ಪ್ರಮಾಣದಲ್ಲಿ ಉತ್ತಮ ಪ್ರಗತಿ ತೋರಿಸುವ ಸಾಧ್ಯತೆಗಳಿವೆ. ಆಡಳಿತಾರೂಢ ಕಾಂಗ್ರೆಸ್ ಶೇ. 40ರಷ್ಟು ಮತಗಳನ್ನು ಪಡೆಯಬಹುದು ಎಂದು ಅಂದಾಜಿಸಲಾಗುತ್ತದೆ. ಕೇಂದ್ರ ಗುಪ್ತಚರ ಇಲಾಖೆಯ ವರದಿಯೂ ಸರಳ ಬಹುಮತದ ಸೂಚನೆ ಒದಗಿಸಿದೆ ಎನ್ನಲಾಗುತ್ತಿದೆ. ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ ಸೇರಿದಂತೆ ಹಳೆ ಮೈಸೂರು ಮತ್ತು ಕರಾವಳಿಗಳಲ್ಲಿಯೂ ಕಾಂಗ್ರೆಸ್‍ನ ಸಾಧನೆಯು ಕಳೆದ ಬಾರಿಗಿಂತ ಉತ್ತಮವಾಗಿರಲಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದ ದುರ್ದಿನಗಳನ್ನು ಜನತೆ ಇನ್ನೂ ಮರೆತಿಲ್ಲ. ಕಳೆದ ಬಾರಿ ಸೋಲಿಸಿ ಪಾಠ ಕಲಿಸಿದ್ದ ಮತದಾರ ಈಗ ಮತ್ತೊಮ್ಮೆ ಬಿಜೆಪಿಗೆ ಅದರ ಸ್ಥಾನ ಸೂಚಿಸಲಿದ್ದಾನೆ. ರಾಜ್ಯದಾದ್ಯಂತ ಕಾಂಗ್ರೆಸ್ ಪರವಾಗಿರುವ ಅಭಿಪ್ರಾಯವು ಸರಳ ಬಹುಮತ ತಂದು ಕೊಡುವುದಕ್ಕೆ ಕಾರಣವಾಗಲಿದೆ. ‘ಸುಳ್ಳು’ಗಳ ಮೂಲಕ ಮಾತಿನ ಅರಮನೆ ಕಟ್ಟಲು ಹೊರಟ ‘ಮೋಜು’ಗಾರನಿಗೆ ಕರ್ನಾಟಕ ಸೂಕ್ತ ಉತ್ತರ ನೀಡಲಿದೆ. ಕರ್ನಾಟಕದ ಆಡಳಿತದ ಕೇಂದ್ರ ಬೆಂಗಳೂರೇ ಹೊರತು ದೆಹಲಿ ಅಲ್ಲ ಎಂಬುದು ಮತ್ತೇ ಸಾಬೀತಾಗಲಿದೆ.

ಯಡಿಯೂರಪ್ಪ
ಕುಮಾರಸ್ವಾಮಿ

ವಿರೋಧ ಪಕ್ಷದ ಸ್ಥಾನವನ್ನು ಸರಿಯಾಗಿ ನಿಭಾಯಿಸಲಾಗದ ಬಿಜೆಪಿಯು ನಾಯಕತ್ವದ ಕೊರತೆಯಿಂದ ಬಳಲಿತು. ಮೋದಿಯಂತಹ ಮಾತುಗಾರ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಾಡಿದರೂ ಸುಸ್ತಾಗುವಷ್ಟು ರ್ಯಾಲಿಗಳನ್ನು ಮಾಡಿದರೂ ಫಲ ನೀಡಲಿಲ್ಲ. ಸಿದ್ಧರಾಮಯ್ಯನವರ ಪರವಾಗಿ ರಾಜ್ಯದಾದ್ಯಂತ ಇರುವ ‘ಅಲೆ’ಯ ಪ್ರಮಾಣ ಕಡಿಮೆ ಮಾಡುವದು ಸಾಧ್ಯವಾಗಲೇ ಇಲ್ಲ. ಬಿಜೆಪಿ ಪಕ್ಷದೊಳಗಿನ ಭಿನ್ನಮತ ಮತ್ತು ದೆಹಲಿ ಹೈಕಮಾಂಡ್ ಅಣತಿಯಂತೆ ನಡೆಯಬೇಕಾದ ಅನಿವಾರ್ಯತೆ ಸಿಲುಕಿದ ಯಡಿಯೂರಪ್ಪ ಅವರು ‘ಪ್ರಮಾಣವಚನ’ ಸ್ವೀಕರಿಸುವ ಭ್ರಮಾತ್ಮಕ ಹೇಳಿಕೆ ನೀಡುವುದಕ್ಕ್ಕೆ ಮಾತ್ರ ಸೀಮಿತವಾಯಿತು. ಚುನಾವಣೆಯ ಪ್ರಚಾರ ಭಾಷಣದಲ್ಲಿಯೇ ‘ಬಜೆಟ್’ ಮಂಡಿಸುವ ಮತ್ತು ಸಂಪುಟದ ಸ್ಥಾನ ಹಂಚುವ ತಮಾಷೆಯ ಪ್ರಸಂಗಗಳು ಯಡಿಯೂರಪ್ಪ ಅವರು ತಲುಪಿದ್ದ ಹತಾಶೆಯ ಸ್ಥಿತಿಯನ್ನು ಬಿಂಬಿಸುವಂತಿತ್ತು. ದೆಹಲಿಯ ನಾಯಕರುಗಳ ಚರಿಸ್ಮಾ ತಮಗೆ ಸಹಾಯವಾಗಬಹುದು ಎಂದು ಕಾದು ಕುಳಿತಿದ್ದ ಬಿಜೆಪಿಯ ರಾಜ್ಯ ಮುಖಂಡರಿಗೆ ಕೇವಲ ಕಾದದ್ದಷ್ಟೇ ಲಾಭವಾಯಿತು. ಯಡಿಯೂರಪ್ಪ ಹೊರತು ಪಡಿಸಿದ ಎರಡನೇ ಸಾಲಿನ ನಾಯಕರೇ ಇಲ್ಲದ ಬಿಜೆಪಿಯ ಸ್ಥಿತಿ ಚಿಂತಾಜನಕವಾಗಿತ್ತು. ಮುಂಚೂಣಿಯಲ್ಲಿದ್ದ ನಾಯಕ ಕೂಡ ಎದೆಗುಂದುವಂತಹ ಬೆಳವಣಿಗೆಗಳನ್ನು ಎದುರಿಸಬೇಕಾಯಿತು. ಆಪ್ತರಿಗೇ ಟಿಕೆಟ್ ಕೊಡಿಸಲಾಗದ ಹತಾಶೆ ಒಂದೆಡೆಯಾದರೆ, ಮತದಾನದ ದಿನ ಹತ್ತಿರವಾದಂತೆ ಹೆಚ್ಚುತ್ತ ಹೋದ ಸಿದ್ಧರಾಮಯ್ಯನವರ ಜನಪ್ರಿಯತೆಯು ಕಾಂಗ್ರೆಸ್ ಪಕ್ಷವನ್ನು ಸರಳ ಬಹುಮತದ ಹಂತಕ್ಕೆ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...