Homeಮುಖಪುಟಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

ಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

- Advertisement -
- Advertisement -

ಕರ್ನಾಟಕದಲ್ಲಿ ಸದ್ಯಕ್ಕಿರುವ ರಾಜಕೀಯ ಪರಿಸ್ಥಿತಿಯನ್ನಾಧರಿಸಿ ಆಯಾ ವಿಧಾನಸಭಾ ಕ್ಷೇತ್ರಗಳ ಜಿದ್ದಾಜಿದ್ದಿ, ಚುನಾವಣಾ ಟ್ರಂಡ್‍ಗಳನ್ನು ಅಧ್ಯಯನ ನಡೆಸಿ, ನಮ್ಮ ಪತ್ರಿಕಾ ತಂಡ ಕ್ಷೇತ್ರವಾರು ನಡೆಸಿದ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‍ಗೆ 117-122, ಬಿಜೆಪಿಗೆ 55-60, ಜೆಡಿಎಸ್‍ಗೆ 34-37 ಮತ್ತು ಇತರರಿಗೆ 3-5 ಸ್ಥಾನಗಳು ಲಭಿಸಬಹುದು.

ನಾನು ಗೌರಿ ತಂಡದ ಸಮೀಕ್ಷೆ

ಮುಖ್ಯವಾಗಿ ತನ್ನ ಪಾರಂಪರಿಕ ಪಾರುಪತ್ಯದ ಹೈದ್ರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿರುವುದಲ್ಲದೇ ಬಿಜೆಪಿಯ ಭದ್ರ ನೆಲೆ ಎಂದು ಪರಿಗಣಿತವಾಗಿದ್ದ, ಲಿಂಗಾಯತ ಪ್ರಾಬಲ್ಯದ ಮುಂಬೈ ಕರ್ನಾಟಕದಲ್ಲೂ ಕೈ ಪಡೆ ಮುಂದಿರುವುದು ಸರಳ ಬಹುಮತಕ್ಕೆ ಸನಿಹವಾಗಿಸಿದೆ. ಕಳೆದ ಬಾರಿಯೂ ಕೈ ಪಾರ್ಟಿ ಈ ಎರಡು ಪ್ರಾಂತ್ಯಗಳಲ್ಲಿ ಗಣನೀಯ ಸಾಧನೆ ಮಾಡಿದ್ದು ಅಧಿಕಾರಕ್ಕೆ ಹತ್ತಿರವಾಗಿಸಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕಾಂಗ್ರೆಸ್‍ಗೆ ಅದ್ಭುತ ಮೈಲೇಜ್ ತಂದುಕೊಡದೆ ಹೋದರೂ ಯಡಿಯೂರಪ್ಪನವರಿಂದ ಲಿಂಗಾಯತ ಲೀಡರಿಕೆಯನ್ನು ವಿಮುಖಗೊಳಿಸಿರುವುದು ಬಿಜೆಪಿಗೆ ಏಟು ನೀಡುತ್ತಿದೆ. ಅದು ಗಣನೀಯವಲ್ಲ, ಆದರೂ ಕೆಜೆಪಿ-ಬಿಜೆಪಿ-ಬಿಎಸ್‍ಆರ್ ಸಮಾಗಮದ ಆಘಾತವನ್ನು ತಡೆದುಕೊಳ್ಳಬಹುದಾದಷ್ಟು ಶಕ್ತಿಯನ್ನು ಅದು ಕಾಂಗ್ರೆಸ್‍ಗೆ ತುಂಬಿದೆ. ಇನ್ನು ಕರಾವಳಿ ಪ್ರಾಂತ್ಯದಲ್ಲಿ ಕಳೆದ ಆಘಾತವೇ ಬಿಜೆಪಿಗೆ ಈ ಸಲವೂ ಮುಂದುವರೆಯುವ ಲಕ್ಷಣಗಳಿವೆ. ಇನ್ನು ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಅತ್ಯದ್ಭುತವಾಗಿ ಚೇತರಿಸಿಕೊಳ್ಳುವ ಪರಿಸ್ಥಿತಿ ಇಲ್ಲ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳು ಹಿಂದೆಂದಿಗಿಂತಲೂ ಹೆಚ್ಚು ದೃವೀಕರಣಗೊಂಡ ದೇವೇಗೌಡರ ಬೆನ್ನಿಗೆ ನಿಂತಿರುವುದರಿಂದ ಇಲ್ಲಿ ಕೈಗೆ ಕಳೆದ ಬಾರಿಗಿಂತ ಅಲ್ಪ ಹಿನ್ನಡೆಯಾಗಬಹುದು. ಆದರೂ ಅದು ಸರಳ ಬಹುಮತದಿಂದ ಕಾಂಗ್ರೆಸ್ಸನ್ನು ದೂರಕ್ಕೆ ತಳ್ಳಲಾರದು. ಬೆಂಗಳೂರು ಸಿಟಿ ಬಿಜೆಪಿ ಮತ್ತು ಕಾಂಗ್ರೆಸ್ ಪಾಲಿಗೆ ಮಿಶ್ರ ಪ್ರತಿಫಲ ಕೊಡಲಿದೆ. ಇಲ್ಲಿ ಬಿಜೆಪಿ ಕಾಂಗ್ರೆಸ್‍ಗಿಂತ ಒಂದು ಹೆಜ್ಜೆ ಮುಂದಕ್ಕೆ ಹೋದರೂ ಅಚ್ಚರಿಯಿಲ್ಲ.

ಒಟ್ಟಾರೆ ಹೇಳಬೇಕೆಂದರೆ ಬಿಜೆಪಿಯೊಳಗಿನ ನಾಯಕತ್ವದ ಗೊಂದಲಗಳು, ಮೋದಿಯ ಎಂಪಿ ಎಲೆಕ್ಷನ್ ಭರವಸೆಗಳು ಜನರನ್ನು ಭ್ರಮಾ ನಿರಸನಗೊಳಿಸಿರುವುದು, ಕೇಂದ್ರ ಸರ್ಕಾರ ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ವಿಫಲವಾಗಿರೋದು, ಕರ್ನಾಟಕದ ಪ್ರಾದೇಶಿಕ ಸವಾಲುಗಳಿಗೆ ಬಿಜೆಪಿ ಸ್ಪಂದಿಸಿದ ನಿರಾಶದಾಯಕ ರೀತಿ, ಕಾಂಗ್ರೆಸ್‍ನೊಳಗೆ ಮಡುಗಟ್ಟಿರುವ ಅಪರೂಪದ ಒಗ್ಗಟ್ಟು, ರಾಜ್ಯ ಸರ್ಕಾರದ ಜನಪ್ರಿಯತೆ, ಪ್ರಧಾನ ಹಗರಣ-ಭ್ರಷ್ಟಾಚಾರ ಮುಕ್ತ ಆಡಳಿತಗಳು ಕಾಂಗ್ರೆಸ್ಸನ್ನು ಮತ್ತೆ ಅಧಿಕಾರಕ್ಕೆ ತರುವ ಸಾಧ್ಯತೆಗಳೇ ದಟ್ಟವಾಗಿ ಕಾಣುತ್ತಿವೆ.

ದೇವರಾಜ ಅರಸು

ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಆಡಳಿತ ನಡೆಸಿದ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೆ ಪರದಾಡುತ್ತ ಬಂದಿದ್ದವು. ಪ್ರಭುತ್ವ ವಿರೋಧಿ ಅಲೆಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಪಕ್ಷ ತೇಲಿ ಹೋಗುವುದು ಸರ್ವೇ ಸಾಮಾನ್ಯ ಸಂಗತಿಯಾಗಿತ್ತು. 1978ರ ವಿಧಾನಸಭಾ ಚುನಾವಣೆಯಲ್ಲಿ ಆಗ ಐದು ವರ್ಷಗಳ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಿದ್ದ ಮುಖ್ಯಮಂತ್ರಿ ದೇವರಾಜ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರಿತ್ತು. ಅದಾದ ನಂತರದ ದಿನಗಳಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷವೂ ಪುನರಾಯ್ಕೆ ಆಗಿಲ್ಲ. ದೇವರಾಜ ಅರಸು ನಂತರ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸಿದ ಹೆಗ್ಗಳಿಕೆ ಸಿದ್ಧರಾಮಯ್ಯನವರದು. 1978ರಲ್ಲಿ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 149 ಸ್ಥಾನ ಪಡೆದಿತ್ತು. ಈಗ ಐದು ವರ್ಷ ಪೂರೈಸಿದ ಸಿದ್ಧರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಹೌದು. ಇತಿಹಾಸ ಮರುಕಳಿಸಲಿದೆ. ಎಷ್ಟೇ ಅಳೆದು ತೂಗಿ ನೋಡಿದರು. ಕಾಂಗ್ರೆಸ್‍ಗೆ ಸರಳ ಬಹುಮತ ಬರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ದುರ್ಬಲ ಹೈಕಮಾಂಡ್‍ಗೆ ಪ್ರತಿಕ್ರಿಯೆಯಾಗಿ ಸ್ಥಳೀಯ ಪ್ರಬಲ ನಾಯಕತ್ವ ರಾಜ್ಯಕ್ಕೆ ಪರ್ಯಾಯ ಎನ್ನುವ ಸಂದೇಶ ಕರ್ನಾಟಕ ಮತ್ತೊಮ್ಮೆ ನೀಡುವ ಸಾಧ್ಯತೆಗಳು ನಿಚ್ಚಳವಾಗಿವೆ. ಸಿದ್ಧರಾಮಯ್ಯನವರ ಅಲೆಯು ‘ಮಾತುಗಾರ’ರ ಮೋಡಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಲಿದೆ. ದೆಹಲಿಯಿಂದ ಅಧಿಕಾರ ನಡೆಸುವ ಕೇಂದ್ರದ ನಿಲುವಿಗೆ ಕರ್ನಾಟಕ ಯಾವತ್ತೂ ಸೊಪ್ಪು ಹಾಕಿಲ್ಲ. ದೆಹಲಿ ದೊರೆಗಳಿಗೆ ಕರ್ನಾಟಕ ಖಚಿತ ಉತ್ತರ ನೀಡುತ್ತಲೇ ಬಂದಿದೆ. ಅದೇ ಈ ಬಾರಿಯೂ ಪುನರಾವರ್ತನೆ ಆಗಲಿದೆ. ಕಳೆದ ಸಲಕ್ಕಿಂತ ಮತ ಗಳಿಕೆಯ ಪ್ರಮಾಣದಲ್ಲಿ ಉತ್ತಮ ಪ್ರಗತಿ ತೋರಿಸುವ ಸಾಧ್ಯತೆಗಳಿವೆ. ಆಡಳಿತಾರೂಢ ಕಾಂಗ್ರೆಸ್ ಶೇ. 40ರಷ್ಟು ಮತಗಳನ್ನು ಪಡೆಯಬಹುದು ಎಂದು ಅಂದಾಜಿಸಲಾಗುತ್ತದೆ. ಕೇಂದ್ರ ಗುಪ್ತಚರ ಇಲಾಖೆಯ ವರದಿಯೂ ಸರಳ ಬಹುಮತದ ಸೂಚನೆ ಒದಗಿಸಿದೆ ಎನ್ನಲಾಗುತ್ತಿದೆ. ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ ಸೇರಿದಂತೆ ಹಳೆ ಮೈಸೂರು ಮತ್ತು ಕರಾವಳಿಗಳಲ್ಲಿಯೂ ಕಾಂಗ್ರೆಸ್‍ನ ಸಾಧನೆಯು ಕಳೆದ ಬಾರಿಗಿಂತ ಉತ್ತಮವಾಗಿರಲಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದ ದುರ್ದಿನಗಳನ್ನು ಜನತೆ ಇನ್ನೂ ಮರೆತಿಲ್ಲ. ಕಳೆದ ಬಾರಿ ಸೋಲಿಸಿ ಪಾಠ ಕಲಿಸಿದ್ದ ಮತದಾರ ಈಗ ಮತ್ತೊಮ್ಮೆ ಬಿಜೆಪಿಗೆ ಅದರ ಸ್ಥಾನ ಸೂಚಿಸಲಿದ್ದಾನೆ. ರಾಜ್ಯದಾದ್ಯಂತ ಕಾಂಗ್ರೆಸ್ ಪರವಾಗಿರುವ ಅಭಿಪ್ರಾಯವು ಸರಳ ಬಹುಮತ ತಂದು ಕೊಡುವುದಕ್ಕೆ ಕಾರಣವಾಗಲಿದೆ. ‘ಸುಳ್ಳು’ಗಳ ಮೂಲಕ ಮಾತಿನ ಅರಮನೆ ಕಟ್ಟಲು ಹೊರಟ ‘ಮೋಜು’ಗಾರನಿಗೆ ಕರ್ನಾಟಕ ಸೂಕ್ತ ಉತ್ತರ ನೀಡಲಿದೆ. ಕರ್ನಾಟಕದ ಆಡಳಿತದ ಕೇಂದ್ರ ಬೆಂಗಳೂರೇ ಹೊರತು ದೆಹಲಿ ಅಲ್ಲ ಎಂಬುದು ಮತ್ತೇ ಸಾಬೀತಾಗಲಿದೆ.

ಯಡಿಯೂರಪ್ಪ
ಕುಮಾರಸ್ವಾಮಿ

ವಿರೋಧ ಪಕ್ಷದ ಸ್ಥಾನವನ್ನು ಸರಿಯಾಗಿ ನಿಭಾಯಿಸಲಾಗದ ಬಿಜೆಪಿಯು ನಾಯಕತ್ವದ ಕೊರತೆಯಿಂದ ಬಳಲಿತು. ಮೋದಿಯಂತಹ ಮಾತುಗಾರ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಾಡಿದರೂ ಸುಸ್ತಾಗುವಷ್ಟು ರ್ಯಾಲಿಗಳನ್ನು ಮಾಡಿದರೂ ಫಲ ನೀಡಲಿಲ್ಲ. ಸಿದ್ಧರಾಮಯ್ಯನವರ ಪರವಾಗಿ ರಾಜ್ಯದಾದ್ಯಂತ ಇರುವ ‘ಅಲೆ’ಯ ಪ್ರಮಾಣ ಕಡಿಮೆ ಮಾಡುವದು ಸಾಧ್ಯವಾಗಲೇ ಇಲ್ಲ. ಬಿಜೆಪಿ ಪಕ್ಷದೊಳಗಿನ ಭಿನ್ನಮತ ಮತ್ತು ದೆಹಲಿ ಹೈಕಮಾಂಡ್ ಅಣತಿಯಂತೆ ನಡೆಯಬೇಕಾದ ಅನಿವಾರ್ಯತೆ ಸಿಲುಕಿದ ಯಡಿಯೂರಪ್ಪ ಅವರು ‘ಪ್ರಮಾಣವಚನ’ ಸ್ವೀಕರಿಸುವ ಭ್ರಮಾತ್ಮಕ ಹೇಳಿಕೆ ನೀಡುವುದಕ್ಕ್ಕೆ ಮಾತ್ರ ಸೀಮಿತವಾಯಿತು. ಚುನಾವಣೆಯ ಪ್ರಚಾರ ಭಾಷಣದಲ್ಲಿಯೇ ‘ಬಜೆಟ್’ ಮಂಡಿಸುವ ಮತ್ತು ಸಂಪುಟದ ಸ್ಥಾನ ಹಂಚುವ ತಮಾಷೆಯ ಪ್ರಸಂಗಗಳು ಯಡಿಯೂರಪ್ಪ ಅವರು ತಲುಪಿದ್ದ ಹತಾಶೆಯ ಸ್ಥಿತಿಯನ್ನು ಬಿಂಬಿಸುವಂತಿತ್ತು. ದೆಹಲಿಯ ನಾಯಕರುಗಳ ಚರಿಸ್ಮಾ ತಮಗೆ ಸಹಾಯವಾಗಬಹುದು ಎಂದು ಕಾದು ಕುಳಿತಿದ್ದ ಬಿಜೆಪಿಯ ರಾಜ್ಯ ಮುಖಂಡರಿಗೆ ಕೇವಲ ಕಾದದ್ದಷ್ಟೇ ಲಾಭವಾಯಿತು. ಯಡಿಯೂರಪ್ಪ ಹೊರತು ಪಡಿಸಿದ ಎರಡನೇ ಸಾಲಿನ ನಾಯಕರೇ ಇಲ್ಲದ ಬಿಜೆಪಿಯ ಸ್ಥಿತಿ ಚಿಂತಾಜನಕವಾಗಿತ್ತು. ಮುಂಚೂಣಿಯಲ್ಲಿದ್ದ ನಾಯಕ ಕೂಡ ಎದೆಗುಂದುವಂತಹ ಬೆಳವಣಿಗೆಗಳನ್ನು ಎದುರಿಸಬೇಕಾಯಿತು. ಆಪ್ತರಿಗೇ ಟಿಕೆಟ್ ಕೊಡಿಸಲಾಗದ ಹತಾಶೆ ಒಂದೆಡೆಯಾದರೆ, ಮತದಾನದ ದಿನ ಹತ್ತಿರವಾದಂತೆ ಹೆಚ್ಚುತ್ತ ಹೋದ ಸಿದ್ಧರಾಮಯ್ಯನವರ ಜನಪ್ರಿಯತೆಯು ಕಾಂಗ್ರೆಸ್ ಪಕ್ಷವನ್ನು ಸರಳ ಬಹುಮತದ ಹಂತಕ್ಕೆ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...