Homeಕರೋನಾ ತಲ್ಲಣಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

ಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

- Advertisement -
- Advertisement -

ಇಷ್ಟು ದೊಡ್ಡ ಜನಸಂಖ್ಯೆಯನ್ನು ನಾವು ಹೇಗೆ ಉಳಿಸಲಿದ್ದೇವೆ ಎಂಬುದರ ಬಗ್ಗೆ ಇಡೀ ದೇಶ ಮಾತನಾಡುತ್ತಿತ್ತು. ಒಂದು ವರ್ಷದಲ್ಲಿ, ನಾವು ಎರಡು ಲಸಿಕೆಗಳನ್ನು ಪ್ರಾರಂಭಿಸಿದ್ದೇವೆ. ಈವರೆಗೆ 23 ಕೋಟಿ ಜನರಿಗೆ ಚುಚ್ಚುಮದ್ದು ನೀಡಲಾಗಿದೆ. ಇನ್ನು ಮುಂದೆ ಕೇಂದ್ರ ಸರ್ಕಾರವೇ ಲಸಿಕೆಗಳನ್ನು ಖರೀದಿಸಿ, ರಾಜ್ಯಗಳಿಗೆ ಶೇ.75 ರಷ್ಟು ಲಸಿಕೆಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ’ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸೋಮವಾರ ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಕ್ರಾಮಿಕದ ಎರಡನೆ ಅಲೆ ಮತ್ತು ಲಸಿಕಾ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇದೇ ವೇಳೆ ಲಸಿಕೆ ಕುರಿತಂತೆ ವಿವಿಧ ರಾಜ್ಯಗಳು ಎತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ರೂಪಿಸುವ ಭರವಸೆ ನೀಡಿದರು.

‘ಲಸಿಕಾ ಅಭಿಯಾನದಲ್ಲಿ ರಾಜ್ಯಗಳು ವಿಕೇಂದ್ರಿಕರಣ ಬಯಸಿದವು. ಆರೋಗ್ಯ ರಾಜ್ಯದ ವಿಷಯವಾಗಿದ್ದರಿಂದ ಅದು ಸೂಕ್ತವಾಗಿತ್ತು. ಆದರೆ ರಾಜ್ಯ ಸರ್ಕಾರಗಳು ತಮಗೆ ಎದುರಾದ ಅಡೆತಡೆಗಳನ್ನು ನಿವಾರಿಸಿಕೊಳ್ಳಲು ವಿಫಲವಾದವು’ ಎಂದು ಮೋದಿ ರಾಜ್ಯ ಸರ್ಕಾರಗಳನ್ನು ದೂರಿದರು.

‘ಇನ್ನು ಮುಂದೆ 18-44 ವಯೋಮಾನದವರಿಗೂ ಉಚಿತ ಲಸಿಕೆ ಸಿಗಲಿದೆ. ಜೂನ್‍ 21ರಿಂದ ಉತ್ಪಾದಕರಿಂದ ಕೇಂದ್ರವು ಶೇ. 75 ಲಸಿಕೆಗಳನ್ನು ಖರೀದಿಸಲಿದ್ದು ರಾಜ್ಯಗಳಿಗೆ ಉಚಿತವಾಗಿ ನೀಡಲಿದೆ. ಉಳಿದ ಶೇ. 25ರಷ್ಟನ್ನು ಖಾಸಗಿ ವಲಯ ನೇರ ಉತ್ಪಾದಕರಿಂದ ಖರೀದಿಸಲಿದೆ’ ಎಂದು ಮೋದಿ ಮೊದಲಿನ ಲಸಿಕಾ ನೀತಿಗೆ ವಿಭಿನ್ನವಾದ ಹೊಸ ಲಸಿಕಾ ನೀತಿಯನ್ನು ಘೋಷಿಸಿದರು.

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯು ದೇಶದ ಕೆಲವು ಭಾಗಗಳಲ್ಲಿ ಕಡಿಮೆಯಾಗುವ ಲಕ್ಷಣಗಳನ್ನು ತೋರಿಸುತ್ತಿರುವ ಸಮಯದಲ್ಲಿ ಮತ್ತು ಅನೇಕ ರಾಜ್ಯಗಳು ಲಾಕ್‌ಡೌನ್‌ಗಳನ್ನು ಸರಾಗಗೊಳಿಸಲು ಆರಂಭಿಸಿದ ಸಂದರ್ಭದಲ್ಲಿ ಮೋದಿಯವರು ಇಂದು ಭಾಷಣ ಮಾಡಿದ್ದಾರೆ. ಪ್ರಕರಣಗಳು ಹೆಚ್ಚಾಗುತ್ತಿದ್ದಾಗ ಪ್ರಧಾನಿ ಮೋದಿ ಕೊನೆಯ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಏಪ್ರಿಲ್‍ 20ರಂದು ಮಾತನಾಡಿದ್ದರು.

‘ಎರಡನೇ ಅಲೆಯು ಚಂಡಮಾರುತದಂತೆ ಭಾರತವನ್ನು ಅಪ್ಪಳಿಸಿದೆ. ಆದರೆ ಲಾಕ್‍ಡೌನ್‍ಗಳನ್ನು ಕೊನೆಯ ಉಪಾಯವಾಗಿ ಮಾತ್ರ ಬಳಸಬೇಕೆಂದು ರಾಜ್ಯಗಳಿಗೆ ಹಿಂದೆಯೇ ಮನವಿ ಮಾಡಿದ್ದೆ’ ಎಂದು ಅವರು ನೆನಪಿಸಿದ್ದಾರೆ.

‘ನಮ್ಮ ವಿಜ್ಞಾನಿಗಳಲ್ಲಿ ನಮಗೆ ನಂಬಿಕೆ ಇತ್ತು, ಅದಕ್ಕಾಗಿಯೇ ಅವರು ತಮ್ಮ ಸಂಶೋಧನೆ ನಡೆಸುತ್ತಿರುವಾಗ, ನಾವು ಲಸಿಕಾ ಅಭಿಯಾನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಸಿದ್ಧಪಡಿಸಿದ್ದೆವು…’ ಎಂದು ಪ್ರಧಾನಿ ತಮ್ಮ ಸರ್ಕಾರದ ಪೂರ್ವಸಿದ್ಧತೆಯ ಬಗ್ಗೆ ವಿವರಿಸಿದರು.

ಈ ಅದೃಶ್ಯ ವೈರಸ್ ವಿರುದ್ಧದ ಹೋರಾಟದಲ್ಲಿ ಆಂಟಿ-ಕೋವಿಡ್ ಪ್ರೋಟೋಕಾಲ್ ಪ್ರಮುಖ ಅಂಶವಾಗಿದೆ. ಲಸಿಕೆ ಇದರ ವಿರುದ್ಧ ರಕ್ಷಣೆಯ ಹೊದಿಕೆಯಂತಿದೆ … ನಮ್ಮಲ್ಲಿ ಭಾರತ ನಿರ್ಮಿತ ಲಸಿಕೆ ಇಲ್ಲದಿದ್ದರೆ ಸನ್ನಿವೇಶ ಹೇಗಿರುತ್ತಿತ್ತು ಎಂದು ಊಹಿಸಿ’ ಎಂದು ಪ್ರಧಾನಿ ಹೇಳಿದರು.

‘ಪೋಲಿಯೊ ಅಥವಾ ಹೆಪಟೈಟಿಸ್ ಬಿ ಆಗಿರಲಿ, ದೇಶವು ದಶಕಗಳವರೆಗೆ ಕಾಯಬೇಕಾಗಿತ್ತು. 2014ರಲ್ಲಿ ದೇಶವು ನಮಗೆ ಅವಕಾಶ ನೀಡಿದಾಗ, ವ್ಯಾಕ್ಸಿನೇಷನ್ ವ್ಯಾಪ್ತಿ ಆಗ ಕೇವಲ ಶೇ.60 ಆಗಿತ್ತು. ಅದು ಆತಂಕಕಾರಿ ಪರಿಸ್ಥಿತಿ. ಅದಕ್ಕೆ ಪರಿಹಾರವಾಗಿ ನಾವು ಮಿಷನ್ ಇಂದ್ರಧನುಷ್ ಅನ್ನು ಪ್ರಾರಂಭಿಸಿದ್ದೇವೆ. ನಾವು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದೇವೆ. ಕೇವಲ 5-6 ವರ್ಷಗಳಲ್ಲಿ, ಲಸಿಕೆ ವ್ಯಾಪ್ತಿಯನ್ನು ಶೇ 60 ರಿಂದ 90ಕ್ಕೆ ಹೆಚ್ಚಿಸಲಾಗಿದೆ’ ಎಂದು ಇತರ ಲಸಿಕಾ ಅಭಿಯಾನಗಳ ಕುರಿತು ತಿಳಿಸಿದರು.

‘ಈಗ ಐಸಿಯು ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಇತರ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲಾಯಿತು. ಏಪ್ರಿಲ್-ಮೇನಲ್ಲಿ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಊಹಿಸಲೂ  ಆಗದಷ್ಟು ಬೇಡಿಕೆ ಇತ್ತು. ನಾವು ಆಕ್ಸಿಜನ್‍ ಎಕ್ಸ್‌ಪ್ರೆಸ್‌ಗಳನ್ನು ಓಡಿಸುತ್ತಿದ್ದೇವೆ. ಸೈನ್ಯ ಮತ್ತು ನೌಕಾಪಡೆಯು ಕೂಡ ಭಾಗಿಯಾಗಿದ್ದವು. ಈಗ ಆಮ್ಲಜನಕ ಉತ್ಪಾದನೆಯನ್ನು ಹತ್ತು ಪಟ್ಟು ಹೆಚ್ಚಿಸಲಾಗಿದೆ’ ಎಂದು ಎರಡನೆ ಅಲೆ ಎದುರಿಸಲು ಮಾಡಲಾದ ಸಿದ್ಧತೆಗಳ ಬಗ್ಗೆ ತಿಳಿಸಿದರು.

‘ನಾವು ಕೊರನಾ ಎರಡನೇ ಅಲೆಯೊಂದಿಗೆ ಹೋರಾಡುತ್ತಿದ್ದೇವೆ. ಇತರ ದೇಶಗಳಂತೆ, ಈ ಅಲೆಯ ಸಮಯದಲ್ಲಿ ಭಾರತವು ಪ್ರಕ್ಷುಬ್ಧ ಸಮಯವನ್ನು ಅನುಭವಿಸಿತು. ಬಹಳಷ್ಟು ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ, ನನ್ನ ಸಂತಾಪ ಅವರೊಂದಿಗೆ ಇದೆ’ ಎಂದರು.

ಇದು ಕಳೆದ 100 ವರ್ಷಗಳಲ್ಲಿ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದೆ. ಈ ಪ್ರಮಾಣದ ಸಾಂಕ್ರಾಮಿಕ ರೋಗಕ್ಕೆ ಆಧುನಿಕ ಪ್ರಪಂಚ ಸಾಕ್ಷಿಯಾಗಿಲ್ಲ. ಹೀಗಾಗಿ ಸವಾಲಿನಿಂದ ಇದರ ನಿರ್ಮೂಲನೆಗೆ ಎಲ್ಲರೂ ಯತ್ನಿಸಬೇಕಿದೆ’ ಎಂದರು.

ರಾಜಕೀಯ ಪಂಡಿತರು, ತಜ್ಞರ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿ ಬದಲಿಸುವ ಅಗತ್ಯವಿತ್ತು. 18-44 ವಯೋಮಾನದವರಿಗೂ ಉಚಿತ ನೀಡಲೇಬೇಕಿತ್ತು. ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಸಂಶೋಧನಾ ಸಂಸ್ಥೆಗಳು ಇದನ್ನೇ ಹೇಳಿದ್ದವು. ಜನರಲ್ಲೂ ಸರ್ಕಾರದ ಬಗ್ಗೆ ಅಸಮಾಧಾನ ಶುರುವಾಗಿತ್ತು. ಈಗ ಎಚ್ಚೆತ್ತುಕೊಂಡ ಮೋದಿ ಸರ್ಕಾರ ಲಸಿಕಾ ನೀತಿಯಲ್ಲಿ ಯು-ಟರ್ನ್ ತೆಗೆದುಕೊಂಡಿದೆ, ಇದು ಜನಾಗ್ರಹಕ್ಕೆ ಸಿಕ್ಕ ಗೆಲುವು’ ಎಂದಿದ್ದಾರೆ.


ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 1947 ರಿಂದ 2013 ರವರೆಗೆ ದೇಶದಲ್ಲಿ ಯಾವುದೆ ರೋಗಗಳು ಬಂದರೆ ಅದರ ಲಸಿಕೆ ಗಳನ್ನು ಕಂಡು ಹಿಡಿಯಲು ಹಿಂದಿನ ಸರ್ಕಾರ ಗಳು ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತಿದ್ದರು.
    ಈಗಿನ ಬಿಜೆಪಿ ಸರ್ಕಾರ ತಮ್ಮ ಪಕ್ಷದ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳಲು ಜನರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ.
    ಹಾಗೂ ಕರೋನಾ ಬಗ್ಗೆ ಜನರಿಗೆ ಧೈರ್ಯ ತೋರಲಿಲ್ಲ. ಸರ್ಕಾರ ಜನರಿಗೆ ಹೆದರಿಸಿ ಜೀವ ಹೋಗೋ ಹಾಗೆ ಮಾಡ್ತಾಯಿದ್ದಾರೆ.ಇವರು ಲಸಿಕೆ ಕಂಡುಹಿಡದಿದ್ದೆವೆ ಅಂತಾರೆ ಜನ ಸಾಯ್ತಾಯಿದ್ದಾರೆ. ಈ ಸರ್ಕಾರ ಉಂಡು ಹೋದಾ,ಕೊಂಡು ಹೋದಾ ಅಂತ ನೇಡ್ಸತಾಯಿದ್ದರೆ. ಈ ಸರ್ಕಾರ ಕ್ಕೆ ಮಾನ,ಮರ್ಯಾದೆ, ನಾಚಿಕೆ ಇಲ್ಲಾ.ಇವರಿಗೆ ದುಡ್ಡೆ ಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...