Homeಕರೋನಾ ತಲ್ಲಣಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

ಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

- Advertisement -
- Advertisement -

ಇಷ್ಟು ದೊಡ್ಡ ಜನಸಂಖ್ಯೆಯನ್ನು ನಾವು ಹೇಗೆ ಉಳಿಸಲಿದ್ದೇವೆ ಎಂಬುದರ ಬಗ್ಗೆ ಇಡೀ ದೇಶ ಮಾತನಾಡುತ್ತಿತ್ತು. ಒಂದು ವರ್ಷದಲ್ಲಿ, ನಾವು ಎರಡು ಲಸಿಕೆಗಳನ್ನು ಪ್ರಾರಂಭಿಸಿದ್ದೇವೆ. ಈವರೆಗೆ 23 ಕೋಟಿ ಜನರಿಗೆ ಚುಚ್ಚುಮದ್ದು ನೀಡಲಾಗಿದೆ. ಇನ್ನು ಮುಂದೆ ಕೇಂದ್ರ ಸರ್ಕಾರವೇ ಲಸಿಕೆಗಳನ್ನು ಖರೀದಿಸಿ, ರಾಜ್ಯಗಳಿಗೆ ಶೇ.75 ರಷ್ಟು ಲಸಿಕೆಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ’ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸೋಮವಾರ ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಕ್ರಾಮಿಕದ ಎರಡನೆ ಅಲೆ ಮತ್ತು ಲಸಿಕಾ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇದೇ ವೇಳೆ ಲಸಿಕೆ ಕುರಿತಂತೆ ವಿವಿಧ ರಾಜ್ಯಗಳು ಎತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ರೂಪಿಸುವ ಭರವಸೆ ನೀಡಿದರು.

‘ಲಸಿಕಾ ಅಭಿಯಾನದಲ್ಲಿ ರಾಜ್ಯಗಳು ವಿಕೇಂದ್ರಿಕರಣ ಬಯಸಿದವು. ಆರೋಗ್ಯ ರಾಜ್ಯದ ವಿಷಯವಾಗಿದ್ದರಿಂದ ಅದು ಸೂಕ್ತವಾಗಿತ್ತು. ಆದರೆ ರಾಜ್ಯ ಸರ್ಕಾರಗಳು ತಮಗೆ ಎದುರಾದ ಅಡೆತಡೆಗಳನ್ನು ನಿವಾರಿಸಿಕೊಳ್ಳಲು ವಿಫಲವಾದವು’ ಎಂದು ಮೋದಿ ರಾಜ್ಯ ಸರ್ಕಾರಗಳನ್ನು ದೂರಿದರು.

‘ಇನ್ನು ಮುಂದೆ 18-44 ವಯೋಮಾನದವರಿಗೂ ಉಚಿತ ಲಸಿಕೆ ಸಿಗಲಿದೆ. ಜೂನ್‍ 21ರಿಂದ ಉತ್ಪಾದಕರಿಂದ ಕೇಂದ್ರವು ಶೇ. 75 ಲಸಿಕೆಗಳನ್ನು ಖರೀದಿಸಲಿದ್ದು ರಾಜ್ಯಗಳಿಗೆ ಉಚಿತವಾಗಿ ನೀಡಲಿದೆ. ಉಳಿದ ಶೇ. 25ರಷ್ಟನ್ನು ಖಾಸಗಿ ವಲಯ ನೇರ ಉತ್ಪಾದಕರಿಂದ ಖರೀದಿಸಲಿದೆ’ ಎಂದು ಮೋದಿ ಮೊದಲಿನ ಲಸಿಕಾ ನೀತಿಗೆ ವಿಭಿನ್ನವಾದ ಹೊಸ ಲಸಿಕಾ ನೀತಿಯನ್ನು ಘೋಷಿಸಿದರು.

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯು ದೇಶದ ಕೆಲವು ಭಾಗಗಳಲ್ಲಿ ಕಡಿಮೆಯಾಗುವ ಲಕ್ಷಣಗಳನ್ನು ತೋರಿಸುತ್ತಿರುವ ಸಮಯದಲ್ಲಿ ಮತ್ತು ಅನೇಕ ರಾಜ್ಯಗಳು ಲಾಕ್‌ಡೌನ್‌ಗಳನ್ನು ಸರಾಗಗೊಳಿಸಲು ಆರಂಭಿಸಿದ ಸಂದರ್ಭದಲ್ಲಿ ಮೋದಿಯವರು ಇಂದು ಭಾಷಣ ಮಾಡಿದ್ದಾರೆ. ಪ್ರಕರಣಗಳು ಹೆಚ್ಚಾಗುತ್ತಿದ್ದಾಗ ಪ್ರಧಾನಿ ಮೋದಿ ಕೊನೆಯ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಏಪ್ರಿಲ್‍ 20ರಂದು ಮಾತನಾಡಿದ್ದರು.

‘ಎರಡನೇ ಅಲೆಯು ಚಂಡಮಾರುತದಂತೆ ಭಾರತವನ್ನು ಅಪ್ಪಳಿಸಿದೆ. ಆದರೆ ಲಾಕ್‍ಡೌನ್‍ಗಳನ್ನು ಕೊನೆಯ ಉಪಾಯವಾಗಿ ಮಾತ್ರ ಬಳಸಬೇಕೆಂದು ರಾಜ್ಯಗಳಿಗೆ ಹಿಂದೆಯೇ ಮನವಿ ಮಾಡಿದ್ದೆ’ ಎಂದು ಅವರು ನೆನಪಿಸಿದ್ದಾರೆ.

‘ನಮ್ಮ ವಿಜ್ಞಾನಿಗಳಲ್ಲಿ ನಮಗೆ ನಂಬಿಕೆ ಇತ್ತು, ಅದಕ್ಕಾಗಿಯೇ ಅವರು ತಮ್ಮ ಸಂಶೋಧನೆ ನಡೆಸುತ್ತಿರುವಾಗ, ನಾವು ಲಸಿಕಾ ಅಭಿಯಾನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಸಿದ್ಧಪಡಿಸಿದ್ದೆವು…’ ಎಂದು ಪ್ರಧಾನಿ ತಮ್ಮ ಸರ್ಕಾರದ ಪೂರ್ವಸಿದ್ಧತೆಯ ಬಗ್ಗೆ ವಿವರಿಸಿದರು.

ಈ ಅದೃಶ್ಯ ವೈರಸ್ ವಿರುದ್ಧದ ಹೋರಾಟದಲ್ಲಿ ಆಂಟಿ-ಕೋವಿಡ್ ಪ್ರೋಟೋಕಾಲ್ ಪ್ರಮುಖ ಅಂಶವಾಗಿದೆ. ಲಸಿಕೆ ಇದರ ವಿರುದ್ಧ ರಕ್ಷಣೆಯ ಹೊದಿಕೆಯಂತಿದೆ … ನಮ್ಮಲ್ಲಿ ಭಾರತ ನಿರ್ಮಿತ ಲಸಿಕೆ ಇಲ್ಲದಿದ್ದರೆ ಸನ್ನಿವೇಶ ಹೇಗಿರುತ್ತಿತ್ತು ಎಂದು ಊಹಿಸಿ’ ಎಂದು ಪ್ರಧಾನಿ ಹೇಳಿದರು.

‘ಪೋಲಿಯೊ ಅಥವಾ ಹೆಪಟೈಟಿಸ್ ಬಿ ಆಗಿರಲಿ, ದೇಶವು ದಶಕಗಳವರೆಗೆ ಕಾಯಬೇಕಾಗಿತ್ತು. 2014ರಲ್ಲಿ ದೇಶವು ನಮಗೆ ಅವಕಾಶ ನೀಡಿದಾಗ, ವ್ಯಾಕ್ಸಿನೇಷನ್ ವ್ಯಾಪ್ತಿ ಆಗ ಕೇವಲ ಶೇ.60 ಆಗಿತ್ತು. ಅದು ಆತಂಕಕಾರಿ ಪರಿಸ್ಥಿತಿ. ಅದಕ್ಕೆ ಪರಿಹಾರವಾಗಿ ನಾವು ಮಿಷನ್ ಇಂದ್ರಧನುಷ್ ಅನ್ನು ಪ್ರಾರಂಭಿಸಿದ್ದೇವೆ. ನಾವು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದೇವೆ. ಕೇವಲ 5-6 ವರ್ಷಗಳಲ್ಲಿ, ಲಸಿಕೆ ವ್ಯಾಪ್ತಿಯನ್ನು ಶೇ 60 ರಿಂದ 90ಕ್ಕೆ ಹೆಚ್ಚಿಸಲಾಗಿದೆ’ ಎಂದು ಇತರ ಲಸಿಕಾ ಅಭಿಯಾನಗಳ ಕುರಿತು ತಿಳಿಸಿದರು.

‘ಈಗ ಐಸಿಯು ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಇತರ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲಾಯಿತು. ಏಪ್ರಿಲ್-ಮೇನಲ್ಲಿ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಊಹಿಸಲೂ  ಆಗದಷ್ಟು ಬೇಡಿಕೆ ಇತ್ತು. ನಾವು ಆಕ್ಸಿಜನ್‍ ಎಕ್ಸ್‌ಪ್ರೆಸ್‌ಗಳನ್ನು ಓಡಿಸುತ್ತಿದ್ದೇವೆ. ಸೈನ್ಯ ಮತ್ತು ನೌಕಾಪಡೆಯು ಕೂಡ ಭಾಗಿಯಾಗಿದ್ದವು. ಈಗ ಆಮ್ಲಜನಕ ಉತ್ಪಾದನೆಯನ್ನು ಹತ್ತು ಪಟ್ಟು ಹೆಚ್ಚಿಸಲಾಗಿದೆ’ ಎಂದು ಎರಡನೆ ಅಲೆ ಎದುರಿಸಲು ಮಾಡಲಾದ ಸಿದ್ಧತೆಗಳ ಬಗ್ಗೆ ತಿಳಿಸಿದರು.

‘ನಾವು ಕೊರನಾ ಎರಡನೇ ಅಲೆಯೊಂದಿಗೆ ಹೋರಾಡುತ್ತಿದ್ದೇವೆ. ಇತರ ದೇಶಗಳಂತೆ, ಈ ಅಲೆಯ ಸಮಯದಲ್ಲಿ ಭಾರತವು ಪ್ರಕ್ಷುಬ್ಧ ಸಮಯವನ್ನು ಅನುಭವಿಸಿತು. ಬಹಳಷ್ಟು ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ, ನನ್ನ ಸಂತಾಪ ಅವರೊಂದಿಗೆ ಇದೆ’ ಎಂದರು.

ಇದು ಕಳೆದ 100 ವರ್ಷಗಳಲ್ಲಿ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದೆ. ಈ ಪ್ರಮಾಣದ ಸಾಂಕ್ರಾಮಿಕ ರೋಗಕ್ಕೆ ಆಧುನಿಕ ಪ್ರಪಂಚ ಸಾಕ್ಷಿಯಾಗಿಲ್ಲ. ಹೀಗಾಗಿ ಸವಾಲಿನಿಂದ ಇದರ ನಿರ್ಮೂಲನೆಗೆ ಎಲ್ಲರೂ ಯತ್ನಿಸಬೇಕಿದೆ’ ಎಂದರು.

ರಾಜಕೀಯ ಪಂಡಿತರು, ತಜ್ಞರ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿ ಬದಲಿಸುವ ಅಗತ್ಯವಿತ್ತು. 18-44 ವಯೋಮಾನದವರಿಗೂ ಉಚಿತ ನೀಡಲೇಬೇಕಿತ್ತು. ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಸಂಶೋಧನಾ ಸಂಸ್ಥೆಗಳು ಇದನ್ನೇ ಹೇಳಿದ್ದವು. ಜನರಲ್ಲೂ ಸರ್ಕಾರದ ಬಗ್ಗೆ ಅಸಮಾಧಾನ ಶುರುವಾಗಿತ್ತು. ಈಗ ಎಚ್ಚೆತ್ತುಕೊಂಡ ಮೋದಿ ಸರ್ಕಾರ ಲಸಿಕಾ ನೀತಿಯಲ್ಲಿ ಯು-ಟರ್ನ್ ತೆಗೆದುಕೊಂಡಿದೆ, ಇದು ಜನಾಗ್ರಹಕ್ಕೆ ಸಿಕ್ಕ ಗೆಲುವು’ ಎಂದಿದ್ದಾರೆ.


ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 1947 ರಿಂದ 2013 ರವರೆಗೆ ದೇಶದಲ್ಲಿ ಯಾವುದೆ ರೋಗಗಳು ಬಂದರೆ ಅದರ ಲಸಿಕೆ ಗಳನ್ನು ಕಂಡು ಹಿಡಿಯಲು ಹಿಂದಿನ ಸರ್ಕಾರ ಗಳು ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತಿದ್ದರು.
    ಈಗಿನ ಬಿಜೆಪಿ ಸರ್ಕಾರ ತಮ್ಮ ಪಕ್ಷದ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳಲು ಜನರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ.
    ಹಾಗೂ ಕರೋನಾ ಬಗ್ಗೆ ಜನರಿಗೆ ಧೈರ್ಯ ತೋರಲಿಲ್ಲ. ಸರ್ಕಾರ ಜನರಿಗೆ ಹೆದರಿಸಿ ಜೀವ ಹೋಗೋ ಹಾಗೆ ಮಾಡ್ತಾಯಿದ್ದಾರೆ.ಇವರು ಲಸಿಕೆ ಕಂಡುಹಿಡದಿದ್ದೆವೆ ಅಂತಾರೆ ಜನ ಸಾಯ್ತಾಯಿದ್ದಾರೆ. ಈ ಸರ್ಕಾರ ಉಂಡು ಹೋದಾ,ಕೊಂಡು ಹೋದಾ ಅಂತ ನೇಡ್ಸತಾಯಿದ್ದರೆ. ಈ ಸರ್ಕಾರ ಕ್ಕೆ ಮಾನ,ಮರ್ಯಾದೆ, ನಾಚಿಕೆ ಇಲ್ಲಾ.ಇವರಿಗೆ ದುಡ್ಡೆ ಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...