Homeಕರೋನಾ ತಲ್ಲಣಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

ಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

- Advertisement -
- Advertisement -

ಇಷ್ಟು ದೊಡ್ಡ ಜನಸಂಖ್ಯೆಯನ್ನು ನಾವು ಹೇಗೆ ಉಳಿಸಲಿದ್ದೇವೆ ಎಂಬುದರ ಬಗ್ಗೆ ಇಡೀ ದೇಶ ಮಾತನಾಡುತ್ತಿತ್ತು. ಒಂದು ವರ್ಷದಲ್ಲಿ, ನಾವು ಎರಡು ಲಸಿಕೆಗಳನ್ನು ಪ್ರಾರಂಭಿಸಿದ್ದೇವೆ. ಈವರೆಗೆ 23 ಕೋಟಿ ಜನರಿಗೆ ಚುಚ್ಚುಮದ್ದು ನೀಡಲಾಗಿದೆ. ಇನ್ನು ಮುಂದೆ ಕೇಂದ್ರ ಸರ್ಕಾರವೇ ಲಸಿಕೆಗಳನ್ನು ಖರೀದಿಸಿ, ರಾಜ್ಯಗಳಿಗೆ ಶೇ.75 ರಷ್ಟು ಲಸಿಕೆಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ’ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸೋಮವಾರ ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಕ್ರಾಮಿಕದ ಎರಡನೆ ಅಲೆ ಮತ್ತು ಲಸಿಕಾ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇದೇ ವೇಳೆ ಲಸಿಕೆ ಕುರಿತಂತೆ ವಿವಿಧ ರಾಜ್ಯಗಳು ಎತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ರೂಪಿಸುವ ಭರವಸೆ ನೀಡಿದರು.

‘ಲಸಿಕಾ ಅಭಿಯಾನದಲ್ಲಿ ರಾಜ್ಯಗಳು ವಿಕೇಂದ್ರಿಕರಣ ಬಯಸಿದವು. ಆರೋಗ್ಯ ರಾಜ್ಯದ ವಿಷಯವಾಗಿದ್ದರಿಂದ ಅದು ಸೂಕ್ತವಾಗಿತ್ತು. ಆದರೆ ರಾಜ್ಯ ಸರ್ಕಾರಗಳು ತಮಗೆ ಎದುರಾದ ಅಡೆತಡೆಗಳನ್ನು ನಿವಾರಿಸಿಕೊಳ್ಳಲು ವಿಫಲವಾದವು’ ಎಂದು ಮೋದಿ ರಾಜ್ಯ ಸರ್ಕಾರಗಳನ್ನು ದೂರಿದರು.

‘ಇನ್ನು ಮುಂದೆ 18-44 ವಯೋಮಾನದವರಿಗೂ ಉಚಿತ ಲಸಿಕೆ ಸಿಗಲಿದೆ. ಜೂನ್‍ 21ರಿಂದ ಉತ್ಪಾದಕರಿಂದ ಕೇಂದ್ರವು ಶೇ. 75 ಲಸಿಕೆಗಳನ್ನು ಖರೀದಿಸಲಿದ್ದು ರಾಜ್ಯಗಳಿಗೆ ಉಚಿತವಾಗಿ ನೀಡಲಿದೆ. ಉಳಿದ ಶೇ. 25ರಷ್ಟನ್ನು ಖಾಸಗಿ ವಲಯ ನೇರ ಉತ್ಪಾದಕರಿಂದ ಖರೀದಿಸಲಿದೆ’ ಎಂದು ಮೋದಿ ಮೊದಲಿನ ಲಸಿಕಾ ನೀತಿಗೆ ವಿಭಿನ್ನವಾದ ಹೊಸ ಲಸಿಕಾ ನೀತಿಯನ್ನು ಘೋಷಿಸಿದರು.

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯು ದೇಶದ ಕೆಲವು ಭಾಗಗಳಲ್ಲಿ ಕಡಿಮೆಯಾಗುವ ಲಕ್ಷಣಗಳನ್ನು ತೋರಿಸುತ್ತಿರುವ ಸಮಯದಲ್ಲಿ ಮತ್ತು ಅನೇಕ ರಾಜ್ಯಗಳು ಲಾಕ್‌ಡೌನ್‌ಗಳನ್ನು ಸರಾಗಗೊಳಿಸಲು ಆರಂಭಿಸಿದ ಸಂದರ್ಭದಲ್ಲಿ ಮೋದಿಯವರು ಇಂದು ಭಾಷಣ ಮಾಡಿದ್ದಾರೆ. ಪ್ರಕರಣಗಳು ಹೆಚ್ಚಾಗುತ್ತಿದ್ದಾಗ ಪ್ರಧಾನಿ ಮೋದಿ ಕೊನೆಯ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಏಪ್ರಿಲ್‍ 20ರಂದು ಮಾತನಾಡಿದ್ದರು.

‘ಎರಡನೇ ಅಲೆಯು ಚಂಡಮಾರುತದಂತೆ ಭಾರತವನ್ನು ಅಪ್ಪಳಿಸಿದೆ. ಆದರೆ ಲಾಕ್‍ಡೌನ್‍ಗಳನ್ನು ಕೊನೆಯ ಉಪಾಯವಾಗಿ ಮಾತ್ರ ಬಳಸಬೇಕೆಂದು ರಾಜ್ಯಗಳಿಗೆ ಹಿಂದೆಯೇ ಮನವಿ ಮಾಡಿದ್ದೆ’ ಎಂದು ಅವರು ನೆನಪಿಸಿದ್ದಾರೆ.

‘ನಮ್ಮ ವಿಜ್ಞಾನಿಗಳಲ್ಲಿ ನಮಗೆ ನಂಬಿಕೆ ಇತ್ತು, ಅದಕ್ಕಾಗಿಯೇ ಅವರು ತಮ್ಮ ಸಂಶೋಧನೆ ನಡೆಸುತ್ತಿರುವಾಗ, ನಾವು ಲಸಿಕಾ ಅಭಿಯಾನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಸಿದ್ಧಪಡಿಸಿದ್ದೆವು…’ ಎಂದು ಪ್ರಧಾನಿ ತಮ್ಮ ಸರ್ಕಾರದ ಪೂರ್ವಸಿದ್ಧತೆಯ ಬಗ್ಗೆ ವಿವರಿಸಿದರು.

ಈ ಅದೃಶ್ಯ ವೈರಸ್ ವಿರುದ್ಧದ ಹೋರಾಟದಲ್ಲಿ ಆಂಟಿ-ಕೋವಿಡ್ ಪ್ರೋಟೋಕಾಲ್ ಪ್ರಮುಖ ಅಂಶವಾಗಿದೆ. ಲಸಿಕೆ ಇದರ ವಿರುದ್ಧ ರಕ್ಷಣೆಯ ಹೊದಿಕೆಯಂತಿದೆ … ನಮ್ಮಲ್ಲಿ ಭಾರತ ನಿರ್ಮಿತ ಲಸಿಕೆ ಇಲ್ಲದಿದ್ದರೆ ಸನ್ನಿವೇಶ ಹೇಗಿರುತ್ತಿತ್ತು ಎಂದು ಊಹಿಸಿ’ ಎಂದು ಪ್ರಧಾನಿ ಹೇಳಿದರು.

‘ಪೋಲಿಯೊ ಅಥವಾ ಹೆಪಟೈಟಿಸ್ ಬಿ ಆಗಿರಲಿ, ದೇಶವು ದಶಕಗಳವರೆಗೆ ಕಾಯಬೇಕಾಗಿತ್ತು. 2014ರಲ್ಲಿ ದೇಶವು ನಮಗೆ ಅವಕಾಶ ನೀಡಿದಾಗ, ವ್ಯಾಕ್ಸಿನೇಷನ್ ವ್ಯಾಪ್ತಿ ಆಗ ಕೇವಲ ಶೇ.60 ಆಗಿತ್ತು. ಅದು ಆತಂಕಕಾರಿ ಪರಿಸ್ಥಿತಿ. ಅದಕ್ಕೆ ಪರಿಹಾರವಾಗಿ ನಾವು ಮಿಷನ್ ಇಂದ್ರಧನುಷ್ ಅನ್ನು ಪ್ರಾರಂಭಿಸಿದ್ದೇವೆ. ನಾವು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದೇವೆ. ಕೇವಲ 5-6 ವರ್ಷಗಳಲ್ಲಿ, ಲಸಿಕೆ ವ್ಯಾಪ್ತಿಯನ್ನು ಶೇ 60 ರಿಂದ 90ಕ್ಕೆ ಹೆಚ್ಚಿಸಲಾಗಿದೆ’ ಎಂದು ಇತರ ಲಸಿಕಾ ಅಭಿಯಾನಗಳ ಕುರಿತು ತಿಳಿಸಿದರು.

‘ಈಗ ಐಸಿಯು ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಇತರ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲಾಯಿತು. ಏಪ್ರಿಲ್-ಮೇನಲ್ಲಿ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಊಹಿಸಲೂ  ಆಗದಷ್ಟು ಬೇಡಿಕೆ ಇತ್ತು. ನಾವು ಆಕ್ಸಿಜನ್‍ ಎಕ್ಸ್‌ಪ್ರೆಸ್‌ಗಳನ್ನು ಓಡಿಸುತ್ತಿದ್ದೇವೆ. ಸೈನ್ಯ ಮತ್ತು ನೌಕಾಪಡೆಯು ಕೂಡ ಭಾಗಿಯಾಗಿದ್ದವು. ಈಗ ಆಮ್ಲಜನಕ ಉತ್ಪಾದನೆಯನ್ನು ಹತ್ತು ಪಟ್ಟು ಹೆಚ್ಚಿಸಲಾಗಿದೆ’ ಎಂದು ಎರಡನೆ ಅಲೆ ಎದುರಿಸಲು ಮಾಡಲಾದ ಸಿದ್ಧತೆಗಳ ಬಗ್ಗೆ ತಿಳಿಸಿದರು.

‘ನಾವು ಕೊರನಾ ಎರಡನೇ ಅಲೆಯೊಂದಿಗೆ ಹೋರಾಡುತ್ತಿದ್ದೇವೆ. ಇತರ ದೇಶಗಳಂತೆ, ಈ ಅಲೆಯ ಸಮಯದಲ್ಲಿ ಭಾರತವು ಪ್ರಕ್ಷುಬ್ಧ ಸಮಯವನ್ನು ಅನುಭವಿಸಿತು. ಬಹಳಷ್ಟು ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ, ನನ್ನ ಸಂತಾಪ ಅವರೊಂದಿಗೆ ಇದೆ’ ಎಂದರು.

ಇದು ಕಳೆದ 100 ವರ್ಷಗಳಲ್ಲಿ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದೆ. ಈ ಪ್ರಮಾಣದ ಸಾಂಕ್ರಾಮಿಕ ರೋಗಕ್ಕೆ ಆಧುನಿಕ ಪ್ರಪಂಚ ಸಾಕ್ಷಿಯಾಗಿಲ್ಲ. ಹೀಗಾಗಿ ಸವಾಲಿನಿಂದ ಇದರ ನಿರ್ಮೂಲನೆಗೆ ಎಲ್ಲರೂ ಯತ್ನಿಸಬೇಕಿದೆ’ ಎಂದರು.

ರಾಜಕೀಯ ಪಂಡಿತರು, ತಜ್ಞರ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿ ಬದಲಿಸುವ ಅಗತ್ಯವಿತ್ತು. 18-44 ವಯೋಮಾನದವರಿಗೂ ಉಚಿತ ನೀಡಲೇಬೇಕಿತ್ತು. ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಸಂಶೋಧನಾ ಸಂಸ್ಥೆಗಳು ಇದನ್ನೇ ಹೇಳಿದ್ದವು. ಜನರಲ್ಲೂ ಸರ್ಕಾರದ ಬಗ್ಗೆ ಅಸಮಾಧಾನ ಶುರುವಾಗಿತ್ತು. ಈಗ ಎಚ್ಚೆತ್ತುಕೊಂಡ ಮೋದಿ ಸರ್ಕಾರ ಲಸಿಕಾ ನೀತಿಯಲ್ಲಿ ಯು-ಟರ್ನ್ ತೆಗೆದುಕೊಂಡಿದೆ, ಇದು ಜನಾಗ್ರಹಕ್ಕೆ ಸಿಕ್ಕ ಗೆಲುವು’ ಎಂದಿದ್ದಾರೆ.


ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 1947 ರಿಂದ 2013 ರವರೆಗೆ ದೇಶದಲ್ಲಿ ಯಾವುದೆ ರೋಗಗಳು ಬಂದರೆ ಅದರ ಲಸಿಕೆ ಗಳನ್ನು ಕಂಡು ಹಿಡಿಯಲು ಹಿಂದಿನ ಸರ್ಕಾರ ಗಳು ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತಿದ್ದರು.
    ಈಗಿನ ಬಿಜೆಪಿ ಸರ್ಕಾರ ತಮ್ಮ ಪಕ್ಷದ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳಲು ಜನರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ.
    ಹಾಗೂ ಕರೋನಾ ಬಗ್ಗೆ ಜನರಿಗೆ ಧೈರ್ಯ ತೋರಲಿಲ್ಲ. ಸರ್ಕಾರ ಜನರಿಗೆ ಹೆದರಿಸಿ ಜೀವ ಹೋಗೋ ಹಾಗೆ ಮಾಡ್ತಾಯಿದ್ದಾರೆ.ಇವರು ಲಸಿಕೆ ಕಂಡುಹಿಡದಿದ್ದೆವೆ ಅಂತಾರೆ ಜನ ಸಾಯ್ತಾಯಿದ್ದಾರೆ. ಈ ಸರ್ಕಾರ ಉಂಡು ಹೋದಾ,ಕೊಂಡು ಹೋದಾ ಅಂತ ನೇಡ್ಸತಾಯಿದ್ದರೆ. ಈ ಸರ್ಕಾರ ಕ್ಕೆ ಮಾನ,ಮರ್ಯಾದೆ, ನಾಚಿಕೆ ಇಲ್ಲಾ.ಇವರಿಗೆ ದುಡ್ಡೆ ಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...