Homeಕರೋನಾ ತಲ್ಲಣಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

ಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

- Advertisement -
- Advertisement -

ಇಷ್ಟು ದೊಡ್ಡ ಜನಸಂಖ್ಯೆಯನ್ನು ನಾವು ಹೇಗೆ ಉಳಿಸಲಿದ್ದೇವೆ ಎಂಬುದರ ಬಗ್ಗೆ ಇಡೀ ದೇಶ ಮಾತನಾಡುತ್ತಿತ್ತು. ಒಂದು ವರ್ಷದಲ್ಲಿ, ನಾವು ಎರಡು ಲಸಿಕೆಗಳನ್ನು ಪ್ರಾರಂಭಿಸಿದ್ದೇವೆ. ಈವರೆಗೆ 23 ಕೋಟಿ ಜನರಿಗೆ ಚುಚ್ಚುಮದ್ದು ನೀಡಲಾಗಿದೆ. ಇನ್ನು ಮುಂದೆ ಕೇಂದ್ರ ಸರ್ಕಾರವೇ ಲಸಿಕೆಗಳನ್ನು ಖರೀದಿಸಿ, ರಾಜ್ಯಗಳಿಗೆ ಶೇ.75 ರಷ್ಟು ಲಸಿಕೆಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ’ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸೋಮವಾರ ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಕ್ರಾಮಿಕದ ಎರಡನೆ ಅಲೆ ಮತ್ತು ಲಸಿಕಾ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇದೇ ವೇಳೆ ಲಸಿಕೆ ಕುರಿತಂತೆ ವಿವಿಧ ರಾಜ್ಯಗಳು ಎತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ರೂಪಿಸುವ ಭರವಸೆ ನೀಡಿದರು.

‘ಲಸಿಕಾ ಅಭಿಯಾನದಲ್ಲಿ ರಾಜ್ಯಗಳು ವಿಕೇಂದ್ರಿಕರಣ ಬಯಸಿದವು. ಆರೋಗ್ಯ ರಾಜ್ಯದ ವಿಷಯವಾಗಿದ್ದರಿಂದ ಅದು ಸೂಕ್ತವಾಗಿತ್ತು. ಆದರೆ ರಾಜ್ಯ ಸರ್ಕಾರಗಳು ತಮಗೆ ಎದುರಾದ ಅಡೆತಡೆಗಳನ್ನು ನಿವಾರಿಸಿಕೊಳ್ಳಲು ವಿಫಲವಾದವು’ ಎಂದು ಮೋದಿ ರಾಜ್ಯ ಸರ್ಕಾರಗಳನ್ನು ದೂರಿದರು.

‘ಇನ್ನು ಮುಂದೆ 18-44 ವಯೋಮಾನದವರಿಗೂ ಉಚಿತ ಲಸಿಕೆ ಸಿಗಲಿದೆ. ಜೂನ್‍ 21ರಿಂದ ಉತ್ಪಾದಕರಿಂದ ಕೇಂದ್ರವು ಶೇ. 75 ಲಸಿಕೆಗಳನ್ನು ಖರೀದಿಸಲಿದ್ದು ರಾಜ್ಯಗಳಿಗೆ ಉಚಿತವಾಗಿ ನೀಡಲಿದೆ. ಉಳಿದ ಶೇ. 25ರಷ್ಟನ್ನು ಖಾಸಗಿ ವಲಯ ನೇರ ಉತ್ಪಾದಕರಿಂದ ಖರೀದಿಸಲಿದೆ’ ಎಂದು ಮೋದಿ ಮೊದಲಿನ ಲಸಿಕಾ ನೀತಿಗೆ ವಿಭಿನ್ನವಾದ ಹೊಸ ಲಸಿಕಾ ನೀತಿಯನ್ನು ಘೋಷಿಸಿದರು.

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯು ದೇಶದ ಕೆಲವು ಭಾಗಗಳಲ್ಲಿ ಕಡಿಮೆಯಾಗುವ ಲಕ್ಷಣಗಳನ್ನು ತೋರಿಸುತ್ತಿರುವ ಸಮಯದಲ್ಲಿ ಮತ್ತು ಅನೇಕ ರಾಜ್ಯಗಳು ಲಾಕ್‌ಡೌನ್‌ಗಳನ್ನು ಸರಾಗಗೊಳಿಸಲು ಆರಂಭಿಸಿದ ಸಂದರ್ಭದಲ್ಲಿ ಮೋದಿಯವರು ಇಂದು ಭಾಷಣ ಮಾಡಿದ್ದಾರೆ. ಪ್ರಕರಣಗಳು ಹೆಚ್ಚಾಗುತ್ತಿದ್ದಾಗ ಪ್ರಧಾನಿ ಮೋದಿ ಕೊನೆಯ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಏಪ್ರಿಲ್‍ 20ರಂದು ಮಾತನಾಡಿದ್ದರು.

‘ಎರಡನೇ ಅಲೆಯು ಚಂಡಮಾರುತದಂತೆ ಭಾರತವನ್ನು ಅಪ್ಪಳಿಸಿದೆ. ಆದರೆ ಲಾಕ್‍ಡೌನ್‍ಗಳನ್ನು ಕೊನೆಯ ಉಪಾಯವಾಗಿ ಮಾತ್ರ ಬಳಸಬೇಕೆಂದು ರಾಜ್ಯಗಳಿಗೆ ಹಿಂದೆಯೇ ಮನವಿ ಮಾಡಿದ್ದೆ’ ಎಂದು ಅವರು ನೆನಪಿಸಿದ್ದಾರೆ.

‘ನಮ್ಮ ವಿಜ್ಞಾನಿಗಳಲ್ಲಿ ನಮಗೆ ನಂಬಿಕೆ ಇತ್ತು, ಅದಕ್ಕಾಗಿಯೇ ಅವರು ತಮ್ಮ ಸಂಶೋಧನೆ ನಡೆಸುತ್ತಿರುವಾಗ, ನಾವು ಲಸಿಕಾ ಅಭಿಯಾನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಸಿದ್ಧಪಡಿಸಿದ್ದೆವು…’ ಎಂದು ಪ್ರಧಾನಿ ತಮ್ಮ ಸರ್ಕಾರದ ಪೂರ್ವಸಿದ್ಧತೆಯ ಬಗ್ಗೆ ವಿವರಿಸಿದರು.

ಈ ಅದೃಶ್ಯ ವೈರಸ್ ವಿರುದ್ಧದ ಹೋರಾಟದಲ್ಲಿ ಆಂಟಿ-ಕೋವಿಡ್ ಪ್ರೋಟೋಕಾಲ್ ಪ್ರಮುಖ ಅಂಶವಾಗಿದೆ. ಲಸಿಕೆ ಇದರ ವಿರುದ್ಧ ರಕ್ಷಣೆಯ ಹೊದಿಕೆಯಂತಿದೆ … ನಮ್ಮಲ್ಲಿ ಭಾರತ ನಿರ್ಮಿತ ಲಸಿಕೆ ಇಲ್ಲದಿದ್ದರೆ ಸನ್ನಿವೇಶ ಹೇಗಿರುತ್ತಿತ್ತು ಎಂದು ಊಹಿಸಿ’ ಎಂದು ಪ್ರಧಾನಿ ಹೇಳಿದರು.

‘ಪೋಲಿಯೊ ಅಥವಾ ಹೆಪಟೈಟಿಸ್ ಬಿ ಆಗಿರಲಿ, ದೇಶವು ದಶಕಗಳವರೆಗೆ ಕಾಯಬೇಕಾಗಿತ್ತು. 2014ರಲ್ಲಿ ದೇಶವು ನಮಗೆ ಅವಕಾಶ ನೀಡಿದಾಗ, ವ್ಯಾಕ್ಸಿನೇಷನ್ ವ್ಯಾಪ್ತಿ ಆಗ ಕೇವಲ ಶೇ.60 ಆಗಿತ್ತು. ಅದು ಆತಂಕಕಾರಿ ಪರಿಸ್ಥಿತಿ. ಅದಕ್ಕೆ ಪರಿಹಾರವಾಗಿ ನಾವು ಮಿಷನ್ ಇಂದ್ರಧನುಷ್ ಅನ್ನು ಪ್ರಾರಂಭಿಸಿದ್ದೇವೆ. ನಾವು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದೇವೆ. ಕೇವಲ 5-6 ವರ್ಷಗಳಲ್ಲಿ, ಲಸಿಕೆ ವ್ಯಾಪ್ತಿಯನ್ನು ಶೇ 60 ರಿಂದ 90ಕ್ಕೆ ಹೆಚ್ಚಿಸಲಾಗಿದೆ’ ಎಂದು ಇತರ ಲಸಿಕಾ ಅಭಿಯಾನಗಳ ಕುರಿತು ತಿಳಿಸಿದರು.

‘ಈಗ ಐಸಿಯು ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಇತರ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲಾಯಿತು. ಏಪ್ರಿಲ್-ಮೇನಲ್ಲಿ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಊಹಿಸಲೂ  ಆಗದಷ್ಟು ಬೇಡಿಕೆ ಇತ್ತು. ನಾವು ಆಕ್ಸಿಜನ್‍ ಎಕ್ಸ್‌ಪ್ರೆಸ್‌ಗಳನ್ನು ಓಡಿಸುತ್ತಿದ್ದೇವೆ. ಸೈನ್ಯ ಮತ್ತು ನೌಕಾಪಡೆಯು ಕೂಡ ಭಾಗಿಯಾಗಿದ್ದವು. ಈಗ ಆಮ್ಲಜನಕ ಉತ್ಪಾದನೆಯನ್ನು ಹತ್ತು ಪಟ್ಟು ಹೆಚ್ಚಿಸಲಾಗಿದೆ’ ಎಂದು ಎರಡನೆ ಅಲೆ ಎದುರಿಸಲು ಮಾಡಲಾದ ಸಿದ್ಧತೆಗಳ ಬಗ್ಗೆ ತಿಳಿಸಿದರು.

‘ನಾವು ಕೊರನಾ ಎರಡನೇ ಅಲೆಯೊಂದಿಗೆ ಹೋರಾಡುತ್ತಿದ್ದೇವೆ. ಇತರ ದೇಶಗಳಂತೆ, ಈ ಅಲೆಯ ಸಮಯದಲ್ಲಿ ಭಾರತವು ಪ್ರಕ್ಷುಬ್ಧ ಸಮಯವನ್ನು ಅನುಭವಿಸಿತು. ಬಹಳಷ್ಟು ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ, ನನ್ನ ಸಂತಾಪ ಅವರೊಂದಿಗೆ ಇದೆ’ ಎಂದರು.

ಇದು ಕಳೆದ 100 ವರ್ಷಗಳಲ್ಲಿ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದೆ. ಈ ಪ್ರಮಾಣದ ಸಾಂಕ್ರಾಮಿಕ ರೋಗಕ್ಕೆ ಆಧುನಿಕ ಪ್ರಪಂಚ ಸಾಕ್ಷಿಯಾಗಿಲ್ಲ. ಹೀಗಾಗಿ ಸವಾಲಿನಿಂದ ಇದರ ನಿರ್ಮೂಲನೆಗೆ ಎಲ್ಲರೂ ಯತ್ನಿಸಬೇಕಿದೆ’ ಎಂದರು.

ರಾಜಕೀಯ ಪಂಡಿತರು, ತಜ್ಞರ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿ ಬದಲಿಸುವ ಅಗತ್ಯವಿತ್ತು. 18-44 ವಯೋಮಾನದವರಿಗೂ ಉಚಿತ ನೀಡಲೇಬೇಕಿತ್ತು. ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಸಂಶೋಧನಾ ಸಂಸ್ಥೆಗಳು ಇದನ್ನೇ ಹೇಳಿದ್ದವು. ಜನರಲ್ಲೂ ಸರ್ಕಾರದ ಬಗ್ಗೆ ಅಸಮಾಧಾನ ಶುರುವಾಗಿತ್ತು. ಈಗ ಎಚ್ಚೆತ್ತುಕೊಂಡ ಮೋದಿ ಸರ್ಕಾರ ಲಸಿಕಾ ನೀತಿಯಲ್ಲಿ ಯು-ಟರ್ನ್ ತೆಗೆದುಕೊಂಡಿದೆ, ಇದು ಜನಾಗ್ರಹಕ್ಕೆ ಸಿಕ್ಕ ಗೆಲುವು’ ಎಂದಿದ್ದಾರೆ.


ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 1947 ರಿಂದ 2013 ರವರೆಗೆ ದೇಶದಲ್ಲಿ ಯಾವುದೆ ರೋಗಗಳು ಬಂದರೆ ಅದರ ಲಸಿಕೆ ಗಳನ್ನು ಕಂಡು ಹಿಡಿಯಲು ಹಿಂದಿನ ಸರ್ಕಾರ ಗಳು ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತಿದ್ದರು.
    ಈಗಿನ ಬಿಜೆಪಿ ಸರ್ಕಾರ ತಮ್ಮ ಪಕ್ಷದ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳಲು ಜನರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ.
    ಹಾಗೂ ಕರೋನಾ ಬಗ್ಗೆ ಜನರಿಗೆ ಧೈರ್ಯ ತೋರಲಿಲ್ಲ. ಸರ್ಕಾರ ಜನರಿಗೆ ಹೆದರಿಸಿ ಜೀವ ಹೋಗೋ ಹಾಗೆ ಮಾಡ್ತಾಯಿದ್ದಾರೆ.ಇವರು ಲಸಿಕೆ ಕಂಡುಹಿಡದಿದ್ದೆವೆ ಅಂತಾರೆ ಜನ ಸಾಯ್ತಾಯಿದ್ದಾರೆ. ಈ ಸರ್ಕಾರ ಉಂಡು ಹೋದಾ,ಕೊಂಡು ಹೋದಾ ಅಂತ ನೇಡ್ಸತಾಯಿದ್ದರೆ. ಈ ಸರ್ಕಾರ ಕ್ಕೆ ಮಾನ,ಮರ್ಯಾದೆ, ನಾಚಿಕೆ ಇಲ್ಲಾ.ಇವರಿಗೆ ದುಡ್ಡೆ ಬೇಕು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...