Homeಕರ್ನಾಟಕನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಟ ಚೇತನ್ ವಿರುದ್ಧ ದೂರು ದಾಖಲಿಸಿರುವ ಸಚ್ಚಿದಾನಂದ ಮೂರ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ದೂರು ನೀಡಿದ್ದಾರೆ.

- Advertisement -
- Advertisement -

ಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ್ ’ಬ್ರಾಹ್ಮಣ್ಯ’ ಎಂಬ ಪದ ಬಳಸಿರುವುದರ ವಿರುದ್ಧ ಬ್ರಾಹ್ಮಣ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದೆ.

’ಚಿತ್ರನಟ ಚೇತನ್ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಅವಮಾನ ಮಾಡಿರುತ್ತಾರೆ. ಇದರಿಂದ ಸಮುದಾಯ ಮಾನಸಿಕವಾಗಿ ನೊಂದಿದ್ದು, ರಾಜ್ಯಾದ್ಯಂತ ವಿವಿಧ ಸಂಗ ಸಂಸ್ಥೆಗಳು ನನಗೆ ಮನವಿ ಮಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನಗರ ಪೊಲೀಸ್​ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಚೇತನ್ ವಿರುದ್ಧ ಬ್ರಾಹ್ಮಣ ನೀಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಬ್ರಾಹ್ಮಣರ ಕ್ಷಮೆ ಕೇಳಲು ಚೇತನ್ ಯಾವ ತಪ್ಪು ಮಾಡಿಲ್ಲ ಎಂದಿದ್ದಾರೆ. #IStandWithChetanAhimsa ಎಂಬ ಹ್ಯಾಶ್‌ಟ್ಯಾಗ್ ಹಾಕಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಟ ಚೇತನ್ ಪೋಸ್ಟ್‌ನಲ್ಲಿ ಇದ್ದದ್ದು ಏನು…?

ಜೂನ್ 6 ರಂದು ನಟ ಚೇತನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಪೆರಿಯಾರ್‌ ಅವರ ಹೇಳಿಕೆಗಳನ್ನು ಕೋಟ್ ಮಾಡಿ, ಪೋಸ್ಟ್ ಮಾಡಿದ್ದರು.
” ‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ — ಅಂಬೇಡ್ಕರ್
‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪ್ರಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ’- ಪೆರಿಯಾರ್

ಇಬ್ಬರ ಹೇಳಿಕೆಗಳ ಜೊತೆಗೆ #Brahminism #Ambedkar #Periyar ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದರು.

ಇದನ್ನೂ ಓದಿ: ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಹೋರಾಟಗಾರ, ನಟ ಚೇತನ್ ವಿರುದ್ಧ ದೂರು ನೀಡಿರುವುದಕ್ಕೆ ಹಲವು ಮಂದಿ ಅಸಮಾಧಾನ, ಟೀಕೆ ವ್ಯಕ್ತಪಡಿಸಿದ್ದಾರೆ.

’ಚೇತನ್ ಅವರು ತಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧ ಹೊರತು ಬ್ರಾಹ್ಮಣರ ವಿರುದ್ಧ ಅಲ್ಲ ಅಂತ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ. ಅವರೆಲ್ಲೂ ಜನಾಂಗದ ನಿಂದನೆ ಮಾಡಿಲ್ಲ. ಆದರೂ ಅವರೇಕೆ ಕ್ಷಮೆ ಕೇಳಬೇಕು’ ಎಂದು ’ಹೊಸತು’ ಟ್ವಿಟರ್‌ ಖಾತೆ ಬಳಕೆದಾರರು ಪ್ರಶ್ನಿಸಿದ್ದಾರೆ.

“ಬ್ರಾಹ್ಮಣ್ಯತ್ವದಿಂದ ಭಾರತದಲ್ಲಿ ಜಾತಿ, ಅಸಮಾನತೆ, ಮೂಲಭೂತವಾದ ಹುಟ್ಟು ಹಾಕಿ ಜಾತಿ ಕೇಳಿ ಇಂದಿಗೂ ಮೂತ್ರ ಮಾಡುವ ಬ್ರಾಹ್ಮಣರೇ ನಮಗೆ ನೀವು ಕ್ಷಮೆ ಕೇಳಿ! ನಮ್ಮದು ಕ್ಷಮೆ ಕೇಳುವ ವಂಶ ಅಲ್ಲ, ದ್ರಾವಿಡ ವಂಶ, ಬಸವಣ್ಣನ ವಂಶ, ಅಂಬೇಡ್ಕರ್ ವಂಶ!” ಎಂದು ಆಜಾದ್ ಸಮಾಜ್ ಪಾರ್ಟಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಇನ್ನು ನಟನ ವಿರುದ್ಧ ದೂರು ದಾಖಲಿಸಿರುವ ಹೆಚ್ ಎಸ್ ಸಚ್ಚಿದಾನಂದ ಮೂರ್ತಿ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ದೂರು ನೀಡಿದ್ದಾರೆ.

ನಟ ಚೇತನ್ ಅವರ ವಿರುದ್ದ ಬ್ರಾಹ್ಮಣರನ್ನು ಎತ್ತಿಕಟ್ಟಿ ಅಶಾಂತಿ ಸೃಷ್ಟಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಎಂಬವರು ಯತ್ನ ನಡೆಸುತ್ತಿದ್ದಾರೆ. ಇದಕ್ಕಾಗಿ ಸರ್ಕಾರಿ ಸಂಸ್ಥೆಯ ಹೆಸರು ಮತ್ತು ಸರ್ಕಾರಿ ಮುದ್ರೆ/ಲಾಂಛನವನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಅಪರಾಧ ಮಾಡಿದ್ದಾರೆ. ಸಚ್ಚಿದಾನಂದ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಮನುವಾದಿಗಳಿಗೆ ಅದಿಕಾರದ ಮದದಿಂದಾಗಿ ಪಿತ್ತ ನೆತ್ತಿಗೇರಿರುವಂತಿದೆ. ವಿಚಾರವಾದಿಗಳ ವಿರುದ್ಧ ದೂರು ಕೊಟ್ಟಾಕ್ಶಣ ವಿಚಾರವಾದ ಅಳಿಯುವುದಿಲ್ಲ ಅಥವಾ ದುರ್ಬಲಗೊಳ್ಳುವುದಿಲ್ಲ, ಬದಲಿಗೆ ಮತ್ತಷ್ಟು ಗಟ್ಟಿಗೊಳ್ಳುತ್ತದೆ.
    ಜೈಬೀಮ್.

  2. ಪರದೇಶದಿಂದ ಬಂದಿರೋ ಬ್ರಾಹ್ಮಣರಿಗೆ ಇಷ್ಟು ಕೊಬ್ಬಿರಬೇಕಾದ್ರೆ ನಾವು ಈ ದೇಶದ ಮೂಲನಿವಾಸಿಗಳು ದ್ರಾವಿಡರು ನಮಗೆಷ್ಟಿರಬೇಡ ಚೇತನ್ ಸರ್ ಜೊತೆ ನಾವಿದೀವಿ ಅದೆಷ್ಟೇ ಬ್ರಾಹ್ಮಣರು ಬಂಧರೂ ನಮ್ಮನ್ನು ಏನು ಕಿತ್ಕೊಳ್ಳಾಕ್ಕಾಗಲ್ಲ. ಜೈ ಭೀಮ್ ಜೈ ಟಿಪ್ಪು ಸುಲ್ತಾನ್

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...