Homeಕರ್ನಾಟಕನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಟ ಚೇತನ್ ವಿರುದ್ಧ ದೂರು ದಾಖಲಿಸಿರುವ ಸಚ್ಚಿದಾನಂದ ಮೂರ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ದೂರು ನೀಡಿದ್ದಾರೆ.

- Advertisement -
- Advertisement -

ಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ್ ’ಬ್ರಾಹ್ಮಣ್ಯ’ ಎಂಬ ಪದ ಬಳಸಿರುವುದರ ವಿರುದ್ಧ ಬ್ರಾಹ್ಮಣ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದೆ.

’ಚಿತ್ರನಟ ಚೇತನ್ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಅವಮಾನ ಮಾಡಿರುತ್ತಾರೆ. ಇದರಿಂದ ಸಮುದಾಯ ಮಾನಸಿಕವಾಗಿ ನೊಂದಿದ್ದು, ರಾಜ್ಯಾದ್ಯಂತ ವಿವಿಧ ಸಂಗ ಸಂಸ್ಥೆಗಳು ನನಗೆ ಮನವಿ ಮಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನಗರ ಪೊಲೀಸ್​ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಚೇತನ್ ವಿರುದ್ಧ ಬ್ರಾಹ್ಮಣ ನೀಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಬ್ರಾಹ್ಮಣರ ಕ್ಷಮೆ ಕೇಳಲು ಚೇತನ್ ಯಾವ ತಪ್ಪು ಮಾಡಿಲ್ಲ ಎಂದಿದ್ದಾರೆ. #IStandWithChetanAhimsa ಎಂಬ ಹ್ಯಾಶ್‌ಟ್ಯಾಗ್ ಹಾಕಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಟ ಚೇತನ್ ಪೋಸ್ಟ್‌ನಲ್ಲಿ ಇದ್ದದ್ದು ಏನು…?

ಜೂನ್ 6 ರಂದು ನಟ ಚೇತನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಪೆರಿಯಾರ್‌ ಅವರ ಹೇಳಿಕೆಗಳನ್ನು ಕೋಟ್ ಮಾಡಿ, ಪೋಸ್ಟ್ ಮಾಡಿದ್ದರು.
” ‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ — ಅಂಬೇಡ್ಕರ್
‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪ್ರಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ’- ಪೆರಿಯಾರ್

ಇಬ್ಬರ ಹೇಳಿಕೆಗಳ ಜೊತೆಗೆ #Brahminism #Ambedkar #Periyar ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದರು.

ಇದನ್ನೂ ಓದಿ: ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಹೋರಾಟಗಾರ, ನಟ ಚೇತನ್ ವಿರುದ್ಧ ದೂರು ನೀಡಿರುವುದಕ್ಕೆ ಹಲವು ಮಂದಿ ಅಸಮಾಧಾನ, ಟೀಕೆ ವ್ಯಕ್ತಪಡಿಸಿದ್ದಾರೆ.

’ಚೇತನ್ ಅವರು ತಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧ ಹೊರತು ಬ್ರಾಹ್ಮಣರ ವಿರುದ್ಧ ಅಲ್ಲ ಅಂತ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ. ಅವರೆಲ್ಲೂ ಜನಾಂಗದ ನಿಂದನೆ ಮಾಡಿಲ್ಲ. ಆದರೂ ಅವರೇಕೆ ಕ್ಷಮೆ ಕೇಳಬೇಕು’ ಎಂದು ’ಹೊಸತು’ ಟ್ವಿಟರ್‌ ಖಾತೆ ಬಳಕೆದಾರರು ಪ್ರಶ್ನಿಸಿದ್ದಾರೆ.

“ಬ್ರಾಹ್ಮಣ್ಯತ್ವದಿಂದ ಭಾರತದಲ್ಲಿ ಜಾತಿ, ಅಸಮಾನತೆ, ಮೂಲಭೂತವಾದ ಹುಟ್ಟು ಹಾಕಿ ಜಾತಿ ಕೇಳಿ ಇಂದಿಗೂ ಮೂತ್ರ ಮಾಡುವ ಬ್ರಾಹ್ಮಣರೇ ನಮಗೆ ನೀವು ಕ್ಷಮೆ ಕೇಳಿ! ನಮ್ಮದು ಕ್ಷಮೆ ಕೇಳುವ ವಂಶ ಅಲ್ಲ, ದ್ರಾವಿಡ ವಂಶ, ಬಸವಣ್ಣನ ವಂಶ, ಅಂಬೇಡ್ಕರ್ ವಂಶ!” ಎಂದು ಆಜಾದ್ ಸಮಾಜ್ ಪಾರ್ಟಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಇನ್ನು ನಟನ ವಿರುದ್ಧ ದೂರು ದಾಖಲಿಸಿರುವ ಹೆಚ್ ಎಸ್ ಸಚ್ಚಿದಾನಂದ ಮೂರ್ತಿ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ದೂರು ನೀಡಿದ್ದಾರೆ.

ನಟ ಚೇತನ್ ಅವರ ವಿರುದ್ದ ಬ್ರಾಹ್ಮಣರನ್ನು ಎತ್ತಿಕಟ್ಟಿ ಅಶಾಂತಿ ಸೃಷ್ಟಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಎಂಬವರು ಯತ್ನ ನಡೆಸುತ್ತಿದ್ದಾರೆ. ಇದಕ್ಕಾಗಿ ಸರ್ಕಾರಿ ಸಂಸ್ಥೆಯ ಹೆಸರು ಮತ್ತು ಸರ್ಕಾರಿ ಮುದ್ರೆ/ಲಾಂಛನವನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಅಪರಾಧ ಮಾಡಿದ್ದಾರೆ. ಸಚ್ಚಿದಾನಂದ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಮನುವಾದಿಗಳಿಗೆ ಅದಿಕಾರದ ಮದದಿಂದಾಗಿ ಪಿತ್ತ ನೆತ್ತಿಗೇರಿರುವಂತಿದೆ. ವಿಚಾರವಾದಿಗಳ ವಿರುದ್ಧ ದೂರು ಕೊಟ್ಟಾಕ್ಶಣ ವಿಚಾರವಾದ ಅಳಿಯುವುದಿಲ್ಲ ಅಥವಾ ದುರ್ಬಲಗೊಳ್ಳುವುದಿಲ್ಲ, ಬದಲಿಗೆ ಮತ್ತಷ್ಟು ಗಟ್ಟಿಗೊಳ್ಳುತ್ತದೆ.
    ಜೈಬೀಮ್.

  2. ಪರದೇಶದಿಂದ ಬಂದಿರೋ ಬ್ರಾಹ್ಮಣರಿಗೆ ಇಷ್ಟು ಕೊಬ್ಬಿರಬೇಕಾದ್ರೆ ನಾವು ಈ ದೇಶದ ಮೂಲನಿವಾಸಿಗಳು ದ್ರಾವಿಡರು ನಮಗೆಷ್ಟಿರಬೇಡ ಚೇತನ್ ಸರ್ ಜೊತೆ ನಾವಿದೀವಿ ಅದೆಷ್ಟೇ ಬ್ರಾಹ್ಮಣರು ಬಂಧರೂ ನಮ್ಮನ್ನು ಏನು ಕಿತ್ಕೊಳ್ಳಾಕ್ಕಾಗಲ್ಲ. ಜೈ ಭೀಮ್ ಜೈ ಟಿಪ್ಪು ಸುಲ್ತಾನ್

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...