Homeಮುಖಪುಟಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

ಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

- Advertisement -
- Advertisement -

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್‍ ವಿರುದ್ಧ ಪೊಲೀಸರು ನ್ಯಾಯಾಲಯದ ನಿರ್ದೇಶನದಂತೆ ಎಫ್‍ಐಆರ್ ದಾಖಲಿಸಿದ್ದಾರೆ.

ಮಂಜೇಶ್ವರಂನಲ್ಲಿ ಸ್ಪರ್ಧಿಸಿದ್ದ ಬಿಎಸ್‍ಪಿ ಅಭ್ಯರ್ಥಿ ಕೆ. ಸುಂದರ ಅವರಿಗೆ ಕಣದಿಂದ ಹಿಂದೆ ಸರಿಯಲು ಸುರೇಂದ್ರನ್‍ 2.5 ಲಕ್ಷ ರೂ. ಲಂಚ ನೀಡಿದ ಆರೋಪ ಎದುರಿಸುತ್ತಿದ್ದಾರೆ. ನಾಮಪತ್ರ ಹಿತೆಗೆದುಕೊಂಡು ಬಿಜೆಪಿ ಸೇರಿದ್ದ ಸುಂದರ ಅವರೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಎಕೆಎಂ ಅಶ್ರಫ್ ಈ ಕ್ಷೇತ್ರದಲ್ಲಿ 2 ಸಾವಿರ ಮತಗಳಿಂದ ಗೆದ್ದಿದ್ದಾರೆ.

ಫಲಿತಾಂಶದಲ್ಲಿ ಮೂರನೇ ಸ್ಥಾನದಲ್ಲಿದ್ದ ಸಿಪಿಎಂ ಮುಖಂಡ ವಿ.ವಿ.ರಮೇಶನ್‌ರ ಮನವಿಗೆ ಸ್ಥಳೀಯ ನ್ಯಾಯಾಲಯ ಸ್ಪಂದಿಸಿದ್ದು, ‘ಚುನಾವಣೆಗಳನ್ನು ಹಾಳುಮಾಡುವ ಉದ್ದೇಶದಿಂದ ಲಂಚ’ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು, ಕೆ ಸುಂದರ ಅವರ ಹೇಳಿಕೆಯನ್ನು ದಾಖಲಿಸಲಾಗಿದ್ದು, ಹಣ ಹೇಗೆ ವಿನಿಮಯವಾಯಿತು ಮತ್ತು ಯಾರು ಅದನ್ನು ನೀಡಿದರು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಕೆ. ಸುರೇಂದ್ರನ್ ವಿರುದ್ಧದ ಈ ಆರೋಪಗಳು ಇತ್ತೀಚಿನವು. ಅವರು ಮತ್ತು ಅವರ ಪಕ್ಷವು ಕೆಲವು ಮುಜುಗರದ ಆರೋಪಗಳನ್ನು ಎದುರಿಸುತ್ತಿದೆ. ಇದರಲ್ಲಿ ಒಂದು, ಜನತಿಪತ್ಯ ರಾಷ್ಟ್ರೀಯ ಪಕ್ಷ (ಜೆಆರ್‌ಪಿ) ಮುಖಂಡ ಪರಿಸಿಥಾ ಅಝಿಕೊಡೆ ಕೂಡ ಇಂಥದ್ದೇ ಆರೋಪ ಮಾಡಿದ್ದಾರೆ. ಜೆಆರ್‍ಪಿ ನಾಯಕ ಸಿ.ಕೆ. ಜಾನು ಅವರಿಗೆ ಎನ್‍ಡಿಎ ಸೇರಲು ಕೆ. ಸುರೇಂದ್ರನ್‍  10 ಲಕ್ಷ ರೂ. ಲಂಚ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸುರೇಂದ್ರನ್ ಈ ಆರೋಪವನ್ನು ನಿರಾಕರಿಸಿದ್ದಾರೆ.

3.5 ಕೋಟಿ ದರೋಡೆ ಪ್ರಕರಣ

ಏಪ್ರಿಲ್‍ 6ರ ಚುನಾವಣೆಗೂ ಮೂರು ದಿನ ಮುನ್ನ ಕೇರಳ ಹೆದ್ದಾರಿಯಲ್ಲಿ 3.5 ಕೋಟಿ ರೂ.ಗಳ ದರೋಡೆ ನಡೆದಿದೆ ಮತ್ತು ಇದು ಹವಾಲಾ ಹಣ ಎಂಬ ಆರೋಪವಿದೆ. ಇದರಲ್ಲೂ ಕೆ.ಸುರೇಂದ್ರನ್‍ ಹೆಸರು ಕೇಳಿ ಬಂದಿದ್ದು, ಈ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

“ಕದ್ದ ಹವಾಲಾ ಹಣದ ಬಗ್ಗೆ ಕನಿಷ್ಠ ಇಬ್ಬರು ಬಿಜೆಪಿ ನಾಯಕರನ್ನು ಪ್ರಶ್ನಿಸಲಾಗಿದೆ. ಹಣದ ಮೂಲ ಮತ್ತು ಅದನ್ನು ಹಸ್ತಾಂತರಿಸಿದ ವಿವಿಧ ಜನರನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಹೆಚ್ಚಿನ ಬಿಜೆಪಿ ನಾಯಕರನ್ನು ಪ್ರಶ್ನಿಸುವ ಸಾಧ್ಯತೆಯಿದೆ. ನಾವು ಸತ್ಯಗಳನ್ನು ಕಂಡುಹಿಡಿಯುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಎರ್ನಾಕುಲಂ ವಲಯದ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಎಲ್ ಪದ್ಮಕುಮಾರ್ ಮತ್ತು ತ್ರಿಶೂರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಕೆ.ಕೆ. ಅನೀಶ್ ಕುಮಾರ್ ಅವರನ್ನು ಪ್ರಶ್ನಿಸಲಾಗಿದೆ. ಇವರಿಬ್ಬರು ಹಣ ಸಾಗಿಸುತ್ತಿದ್ದರು ಎಂಬ ಆರೋಪವಿದೆ. ಇವರಿಬ್ಬರನ್ನೂ ಈಗಾಗಲೇ ಪ್ರಶ್ನಿಸಲಾಗಿದೆ. ಹಣವಿದ್ದ ಇವರ ಕಾರನ್ನು ಅಡ್ಡಗಟ್ಟಿ 3.5 ಕೋಟಿ ರೂ ಹವಾಲಾ ಹಣವನ್ನು ದರೋಡೆ ಮಾಡಲಾದ ಆರೋಪವಿದ್ದು, ಇದರಲ್ಲೂ ಕೆ. ಸುರೇಂದ್ರನ್‍ ಅವರ ಕೈವಾಡ ಇದೆ ಎನ್ನಲಾಗಿದೆ.

ಈ ಹಣವು ಬಿಜೆಪಿಗೆ ಸಂಬಂಧಿಸಿದ ಹವಾಲಾ ನಗದು ಆಗಿರಬಹುದು ಎಂದು ಇದುವರೆಗೆ ನಡೆದ ತನಿಖೆಯಿಂದ ತಿಳಿದುಬಂದಿದೆ.

ಈಗ, ಈ ಪ್ರಕರಣವನ್ನು ತನಿಖೆ ಮಾಡುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುರೇಂದ್ರನ್ ಮತ್ತು ಅವನ ಮಗ ಹರಿ ಕೃಷ್ಣನ್ ಅವರನ್ನು ಪ್ರಶ್ನಿಸಲಿದೆ ಎಂದು ತಿಳಿದುಬಂದಿದೆ. ಕರೆ ವಿವರ ದಾಖಲೆಗಳನ್ನು ಆಧರಿಸಿ ಕೆ.ಸುರೇಂದ್ರನ್‍ ಅವರ ಮೇಲೆ ಶಂಕೆ ಶುರುವಾಗಿದೆ.

ಈ ಪ್ರಕರಣದಲ್ಲಿ ಸುರೇಂದ್ರನ್ ಅವರ ಚಾಲಕ ಮತ್ತು ಕಾರ್ಯದರ್ಶಿಯನ್ನು ಎಸ್ಐಟಿ ಈಗಾಗಲೇ ಪ್ರಶ್ನಿಸಿದೆ. ಆರೋಪಗಳನ್ನು ಪರಿಶೀಲಿಸಲು ಬಿಜೆಪಿ ಎರಡು ಸಮಿತಿಗಳನ್ನು ರಚಿಸಿದೆ.

ಚುನಾವಣಾ ನಿಧಿಯೂ ದುರ್ಬಳಕೆ

ಇದರ ಜೊತೆಗೆ ಬಿಜೆಪಿ ಪಕ್ಷವು ನೀಡಿದ ಚುನಾವಣಾ ನಿಧಿಯನ್ನೂ ಕೆ, ಸುರೇಂದ್ರನ್‍ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಕ್ಷದ ಹಲವರು ಆರೋಪಿಸಿದ್ದಾರೆ.

ಈ  ಎಲ್ಲ ಆರೋಪಗಳು ರಾಜ್ಯ ಬಿಜೆಪಿಯನ್ನು ಚುನಾವಣೆಯಲ್ಲಿ ಸೋತ ಕೆಲವೇ ವಾರಗಳ ನಂತರ ಬಿಕ್ಕಟ್ಟಿಗೆ ಸಿಲುಕಿಸಿವೆ. ಈ ಸಲ ಬಿಜೆಪಿ ಕೇರಳದಲ್ಲಿ ಇದ್ದ ಏಕೈಕ ಸ್ಥಾನವನ್ನೂ ಕಳೆದುಕೊಂಡಿದೆ.


ಇದನ್ನೂ ಓದಿ: ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...