Homeಮುಖಪುಟಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ, ನಾಯಕತ್ವ ದಿವಾಳಿಯಾಗಿದೆ: ಸಿದ್ದರಾಮಯ್ಯ

ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ, ನಾಯಕತ್ವ ದಿವಾಳಿಯಾಗಿದೆ: ಸಿದ್ದರಾಮಯ್ಯ

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಡಿಯೂರಪ್ಪ ಅವರನ್ನು ಕಿತ್ತುಹಾಕಲು ಹೈಕಮಾಂಡ್, ರಾಜ್ಯದ ನಾಯಕರು ಸಿದ್ದರಿದ್ದಾರೆ. ಆದರೆ ಪರ್ಯಾಯ ನಾಯಕರು ಆ ಪಕ್ಷದಲ್ಲಿ ಇಲ್ಲ ಎಂದಿದ್ದಾರೆ.

‘ರಾಜ್ಯದ ಜನರ ಹಿತ ಕಾಪಾಡಲು ವಿಫಲವಾಗಿರುವ ಬಿ.ಎಸ್ ಯಡಿಯೂರಪ್ಪ ಅವರು ಒಬ್ಬ ಅಸಮರ್ಥ, ವಿಫಲ ಮುಖ್ಯಮಂತ್ರಿ. ಅವರನ್ನು ಬದಲಾವಣೆ ಮಾಡುವುದರಿಂದ ಪಾಪ ತೊಳೆದುಕೊಳ್ಳಬಹುದು ಎಂದು ಬಿಜೆಪಿ ಹೈಕಮಾಂಡ್ ತಿಳಿದುಕೊಂಡಿದೆ. ಆದರೆ ಪೂರ್ತಿ ಬಸ್ ಕೆಟ್ಟುಹೋಗಿರುವ ಕಾರಣ ಡ್ರೈವರ್ ಬದಲಾಯಿಸಿದರೆ ಏನೂ ಪ್ರಯೋಜನವಾಗದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

’ಬಿಜೆಪಿಗೆ ಬಿ.ಎಸ್.ಯಡಿಯೂರಪ್ಪ ಬೇಡದ ಕೂಸಾಗಿದ್ದಾರೆ, ಕಿತ್ತುಹಾಕಲು ಹೈಕಮಾಂಡ್ ಸಿದ್ಧ ಇದೆ, ರಾಜ್ಯದ ನಾಯಕರು ಕೂಡಾ ಕೊಡವಿಕೊಳ್ಳಲು ಸಿದ್ಧ ಇದ್ದಾರೆ. ಯಡಿಯೂರಪ್ಪ ನಿರ್ಗಮನದ ನಂತರ ಪಕ್ಷದ ಸ್ಥಿತಿ ಏನಾಗಬಹುದೆಂಬ ಚಿಂತೆ ಅವರಿಗೆ. ಪರ್ಯಾಯ ನಾಯಕರು ಆ ಪಕ್ಷದಲ್ಲಿ ಇಲ್ಲ, ನಾಯಕತ್ವ ದಿವಾಳಿಯಾಗಿದೆ. ಅದಕ್ಕೆ ಒದ್ದಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಗಟ್ಟಿ ಮನುಷ್ಯ, ಸಿಎಂ ಹೇಳಿಕೆಯನ್ನು 2-3 ರೀತಿಯಲ್ಲಿ ವಿಶ್ಲೇಷಿಸಬಹುದು- ಡಿ.ಕೆ.ಶಿವಕುಮಾರ್‌

 

’ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಬಗೆಬಗೆಯ ಕಸರತ್ತು ನಡೆಸುತ್ತಿದ್ದಾರೆ. ಒಂದೆಡೆ ಹೈಕಮಾಂಡ್ ಹೇಳಿದ ಕೂಡಲೇ ರಾಜೀನಾಮೆ ಕೊಡ್ತೀನಿ ಅಂತಾರೆ, ಇನ್ನೊಂದೆಡೆ ತಮ್ಮ ರಾಜಕೀಯ ಕಾರ್ಯದರ್ಶಿ ಮೂಲಕ ಶಾಸಕರ ಸಹಿ ಸಂಗ್ರಹಿಸುತ್ತಿದ್ದಾರೆ. ಅವರಿಗೆ ರಾಜ್ಯದ ಚಿಂತೆ ಇಲ್ಲ, ಕುರ್ಚಿ ಉಳಿಸಿಕೊಳ್ಳುವುದೇ ಚಿಂತೆಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ರಾಜ್ಯ ಸರ್ಕಾರ ಈವರೆಗೆ ಸರಿಯಾಗಿ 1 ಸಾವಿರ ಕೋಟಿಯನ್ನು ಪರಿಹಾರವಾಗಿ ನೀಡಿಲ್ಲ, ಕೇವಲ ತೋರಿಕೆಗಾಗಿ ಕೆಲವರಿಗೆ ಪರಿಹಾರ ನೀಡಿದ್ದಾರೆ. ಎಲ್ಲಾ ಬಿ.ಪಿ.ಎಲ್ ಕಾರ್ಡುದಾರರಿಗೆ ತಲಾ ಹತ್ತು ಕೆ.ಜಿ ಅಕ್ಕಿ ಮತ್ತು ರೂ.10,000 ಪರಿಹಾರ ನೀಡಿದ್ದರೆ ನಿಜವಾದ ಪರಿಹಾರವಾಗುತ್ತಿತ್ತು’ ಎಂದು ಹೇಳಿದ್ದಾರೆ.

’ರಾಜಕಾರಣದಲ್ಲಿ ನಾನಾ ತಂತ್ರಗಾರಿಕೆ ಇರುತ್ತವೆ. ಹಾಗೆಯೇ ಯಡಿಯೂರಪ್ಪನವರ ರಾಜೀನಾಮೆ ಕುರಿತ ಹೇಳಿಕೆ ಹಿಂದೆ ಬೇರೆಯದೇ ತಂತ್ರಗಾರಿಕೆ ಇದೆ. ಯಡಿಯೂರಪ್ಪ ಗಟ್ಟಿ ಮನುಷ್ಯ, ಅವರ ಹೇಳಿಕೆಯನ್ನು ಎರಡು-ಮೂರು ರೀತಿಯಲ್ಲಿ ವಿಶ್ಲೇಷಿಸಬಹದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...