Homeಮುಖಪುಟಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ...

ಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ ತುಷಾರ್ ಪಾಂಚಾಲ್‍

ಪಾಂಚಾಲ್‍ ಈ ಹಿಂದೆ ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ...’ ಎಂದು ಟ್ವೀಟ್ ಮಾಡಿದ್ದರು.

- Advertisement -
- Advertisement -

ಮಧ್ಯಪ್ರದೇಶ ಮುಖ್ಯಮಂತ್ರಿ ಬಿಜೆಪಿಯ ಶಿವರಾಜ್‌ ಸಿಂಗ್‍ ಚೌಹಾಣ್‌ರವರ ಸಂವಹನ (ಮಾಧ್ಯಮ) ಸಲಹೆಗಾರರಾಗಿ ತುಷಾರ್ ಪಾಂಚಾಲ್‍ ಅವರನ್ನು ಅಧಿಕೃತವಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆ ಆಫೀಸರ್ ಆನ್‍ ಸ್ಪೆಷಲ್‍ ಡ್ಯೂಟಿ (ಒಎಸ್‍ಡಿ) ಸ್ಥಾನಮಾನ ನೀಡಲಾಗಿತ್ತು. ಆದರೆ ಇಂದು ಮಧ್ಯಾಹ್ನ ತುಷಾರ್ ಪಾಂಚಾಲ್ ಆ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ.

ಆದರೆ ಅವರನ್ನು ಕೂಡಲೇ ತೆಗೆದು ಹಾಕುವಂತೆ ಕಟ್ಟಾ ಆರ್ಎಸ್‍ಎಸ್‍ ಮತ್ತು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಟ್ವೀಟರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.

ಏಕೆ ಅಂತೀರಾ? ಹಿಂದೆಲ್ಲ ಮೋದಿ ಮತ್ತು ಹಿಂದುತ್ವದ ವಿರುದ್ಧ ಪಾಂಚಾಲ್‍ ಬರೆದಿದ್ದಾರೆ. ಅವರ ಟ್ವೀಟ್‍ಗಳಂತೂ ಮೋದಿ ಮತ್ತು ಹಿಂದುತ್ವವಾದಿಗಳನ್ನು ಮೊನಚಾಗಿ ತಿವಿಯುವಂತಿವೆ.

ಪಾಂಜಾಲ್ ಅವರ ಹಿಂದಿನ ‘ಹಿಂದುತ್ವ ವಿರೋಧಿ’ ಮತ್ತು ಮೋದಿ ವಿರೋಧಿ ಟ್ವೀಟ್‌ಗಳನ್ನು ಉಲ್ಲೇಖಿಸಿ ಬಿಜೆಪಿ, ಆರ್‌ಎಸ್‌ಎಸ್ ಮುಖಂಡರು, ಬೆಂಬಲಿಗರು ತುಷಾರ್ ಪಾಂಚಾಲ್ ಅವರನ್ನು ಒಎಸ್‌ಡಿ ಸ್ಥಾನದಿಂದ ತೆಗೆದುಹಾಕುವಂತೆ ಸಿಎಂ ಶಿವರಾಜ್ ಚೌಹಾಣ್ ಅವರನ್ನು ಒತ್ತಾಯಿಸಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತುಷಾರ್ ಪಾಂಚಾಲ್ ಅವರನ್ನು ತಮ್ಮ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (ಒಎಸ್‍ಡಿ) ನೇಮಕ ಮಾಡಿದ ಒಂದು ದಿನದ ನಂತರ, ಹಲವಾರು ಬಿಜೆಪಿ, ಆರೆಸ್ಸೆಸ್ ಮುಖಂಡರು ಮತ್ತು ಬೆಂಬಲಿಗರು ಟ್ವಿಟರ್‌ನಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಅನೇಕರು, ಚೌಹಾಣರಿಗೆ ಪಾಂಚಾಲ್‍ರಂತಹ ಜನರು ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರಲ್ಲದೇ, ಪಾಂಚಾಲ್‍ ಅವರನ್ನು “ಮೋದಿ ದ್ವೇಷಿ” ಎಂದೂ ಕರೆದಿದ್ದಾರೆ.

“ಸ್ನೇಹಿತರೇ, ನಿಮ್ಮಲ್ಲಿ ಹಲವರು ನನ್ನನ್ನು ಪರದೆಯ ಹಿಂದೆ ಇರುವ ವ್ಯಕ್ತಿ ಎಂದು ತಿಳಿದಿದ್ದೀರಿ. ನಾನು 2001ರಿಂದ ದೇಶಾದ್ಯಂತ ಅನೇಕ ಸಿಎಂಗಳು ಮತ್ತು ರಾಜಕೀಯ ಮುಖಂಡರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ” ಎಂದು ಪಾಂಚಾಲ್ ಸೋಮವಾರ ಟ್ವೀಟ್ ಮಾಡಿದ್ದಾರೆ.

“ಇಂದು, ನನ್ನ ಹಣೆಬರಹ ನನ್ನನ್ನು ಮುಖ್ಯಮಂತ್ರಿ ಚೌಹಾಣ್‍ ಅವರ ಸಂವಹನ ಸಲಹೆಗಾರನ ಕಚೇರಿಯಲ್ಲಿ ಇರಿಸಿದೆ. ದಯವಿಟ್ಟು ನನಗೆ ಶುಭ ಹಾರೈಸಿ. ಹೆಚ್ಚಿನ ವಿವರಗಳನ್ನು ನಂತರ ನೀಡುವೆ” ಎಂದು ಟ್ವೀಟ್‍ನಲ್ಲಿ ಕೋರಿದ್ದರು.

ಇದಾದ ನಂತರ, ದೆಹಲಿ ಬಿಜೆಪಿ ವಕ್ತಾರ ತಾಜಿಂದರ್ ಬಗ್ಗ ಅವರು ಪಾಂಚಾಲ್ ಅವರ ಹಳೆಯ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಪೋಸ್ಟ್ ಮಾಡಿ, ಪಾಂಚಾಲ್ ಅವರಂತಹ “ಜನರು” ಅಗತ್ಯವಿದೆಯೇ ಎಂದು ಸಿಎಂ ಚೌಹಾಣ್ ಅವರನ್ನು ಕೇಳಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದೆಹಲಿ ರಾಜ್ಯ ಕಾರ್ಯವಾಹಕ ಸದಸ್ಯ ರಾಜೀವ್ ಟುಲಿ ಕೂಡ ಪಾಂಚಾಲ್‍ ಅವರ ಹಳೆಯ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಾರೆ. “ಚೌಹಾನ್ ಶಿವರಾಜ್ ಜಿ ಅವರಿಗೆ ನಿಜವಾಗಿಯೂ ಅಗತ್ಯವಿದೆಯೇ? ಮಧ್ಯಪ್ರದೇಶವು ನಮ್ಮ ಸಿದ್ಧಾಂತ ನಂಬುವ ಪ್ರಖ್ಯಾತ ಪತ್ರಕರ್ತರ ಶ್ರೀಮಂತ ಸಂಸ್ಕೃತಿಯನ್ನು ನೀಡಿದೆ. ಹೀಗಿರುವಾಗ ನಮ್ಮವರಲ್ಲದ ಪಾಂಚಾಲ್‍ ಬೇಕಿತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇತರ ಕಾರ್ಯಕರ್ತರು ಕೂಡ ಪಾಂಚಾಲ್‍ ಅವರ ಟ್ವೀಟ್‌ಗಳ ಬಗ್ಗೆ ಪೋಸ್ಟ್ ಮಾಡಿ, ಅವರ ನೇಮಕಾತಿಯನ್ನು ಪ್ರಶ್ನಿಸಿದ್ದಾರೆ. ಆದರೂ ಕೆಲವರು ಅವರನ್ನು ಬೆಂಬಲಿಸಿದ್ದಾರೆ.

ಪಾಂಚಾಲ್‍ ಅವರು ಶಿವರಾಜ್ ಸಿಂಗ್ ಚೌಹಾಣ್‌ ಅವರೊಂದಿಗೆ ಸ್ವಲ್ಪ ಸಮಯದಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ಸಾಮಾಜಿಕ ಮಾಧ್ಯಮವನ್ನು ಸಹ ನಿರ್ವಹಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

“ಇದು ರಾಜಕೀಯ ಪ್ರೇರಿತ ಅಭಿಯಾನವಲ್ಲದೆ ಮತ್ತೇನಲ್ಲ. ಅವರ ಹಳೆಯ ಟ್ವೀಟ್‌ಗಳನ್ನು ಸಂದರ್ಭವಿಲ್ಲದೆ ಪೋಸ್ಟ್ ಮಾಡಲಾಗಿದೆ. ಅವರು ಚೌಹಾಣ್ ಜೊತೆಯಲ್ಲಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಯಾವಾಗಲೂ ಪಕ್ಷಕ್ಕೆ ಮೊದಲ ಸ್ಥಾನ ನೀಡುತ್ತಾರೆ” ಎಂದು ಮೂಲವೊಂದು ತಿಳಿಸಿದೆ.

ಮಧ್ಯಪ್ರದೇಶದ ಹಿರಿಯ ಬಿಜೆಪಿ ಮುಖಂಡರ ಪ್ರಕಾರ, 2018ರ ಚುನಾವಣೆಯ ಸಮಯದಲ್ಲಿ ಪಾಂಚಾಲ್‍ ತಂಡವು ಚೌಹಾಣ್ ಮತ್ತು ಅವರ ಸರ್ಕಾರದ ಸಾಮಾಜಿಕ ಮಾಧ್ಯಮ ಕಾರ್ಯಗಳನ್ನು ನೋಡಿಕೊಂಡಿತ್ತು.

“ಕೊರೋನಾ ಎರಡನೇ ಅಲೆಯಿಂದ ರಾಜ್ಯ ಹಾನಿಗೊಳಗಾಯಿತು, ಅದು ರಾಜ್ಯ ಸರ್ಕಾರದ ಇಮೇಜ್‍ ಮೇಲೆ ನೇರವಾಗಿ ಪರಿಣಾಮ ಬೀರಿತು. ನಂತರ ಮುಖ್ಯಮಂತ್ರಿ ತುಷಾರ್ ಪಾಂಚಾಲ್ ಅವರನ್ನು ಸಂವಹನ ಸಲಹಾ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲು ನಿರ್ಧರಿಸಿದರು. ಮೊದಲಿಲ್ಲದ ಆಕ್ಷೇಪ ಈಗ ಅಧಿಕೃತ ನೇಮಕದ ನಂತರ ಶುರುವಾಗಿದೆ’ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ಈ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಎತ್ತಿದೆ. “ಶಿವರಾಜ್ ಸಿಂಗ್‍ ಮೋದಿಯ ವಿರುದ್ಧ ಯುದ್ಧ ಮಾಡುತ್ತಿದ್ದಾರೆ! ಏಕೆಂದರೆ, ಮೋದಿಯವರನ್ನು ಅವರ ಹೊಸ ಸಲಹೆಗಾರರು ತೀವ್ರವಾಗಿ ವಿರೋಧಿಸಿದ್ದರು” ಎಂದು ಪಕ್ಷದ ಅಧಿಕೃತ ಹ್ಯಾಂಡಲ್ ಪೋಸ್ಟ್ ಮಾಡಿದೆ. ಮೋದಿಯವರನ್ನು ಸೋಶಿಯಲ್ ಮೀಡಿಯಾದಲ್ಲಿ ಅಪಹಾಸ್ಯ ಮಾಡಿದ, ಅವರ ನಿಲುವನ್ನು ಟೀಕಿಸಿದ ಮತ್ತು ಬಿಜೆಪಿಯ ತತ್ವಗಳ ಬಗ್ಗೆ ಅನಿಯಂತ್ರಿತ ಟೀಕೆಗಳನ್ನು ಮಾಡಿದವರನ್ನು ಶಿವರಾಜ್ ಸಿಂಗ್ ಚೌಹಾಣ್ ಅವರು ಒಎಸ್‍ಡಿ ಮಾಡಿದ್ದಾರೆ. ಯೋಗಿಯ ನಂತರ, ಈಗ ಶಿವರಾಜ್ ಮೋದಿಯ ಆಡಳಿತವನ್ನು ದುರ್ಬಲಗೊಳಿಸುತ್ತಾರೆ’ ಎಂದು ಕಾಂಗ್ರೆಸ್‍ ಹೇಳಿದೆ.

ಪಾಂಚಾಲ್‍ ಅವರ ಹಳೆಯ ಟ್ವೀಟ್‍ಗಳು ಮೊನಚಾಗಿವೆ: ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ…’ ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

‘ದೇಸಿ ಸಾರಾಯಿ ಜೊತೆಗೆ ಗೋಮೂತ್ರ ಮಿಕ್ಸ್ ಮಾಡಿ ಕುಡಿದರೆ ಕೊರೋನಾ ಹೋಗುತ್ತಂತೆ. ಬೇಕಾದವರು ಪರೀಕ್ಷಿಸಿ ಅನುಭವಿಸಿ’ ಎಂದು ರಾಮದೇವ್‍ ಅವರನ್ನು ಟೀಕಿಸಿದ್ದರು.

ತೀವ್ರ ಟೀಕೆಗಳು ಕೇಳಿಬಂದ ನಂತರ “ಸಿಎಂ ಶಿವರಾಜ್‌ಸಿಂಗ್‌ ಚೌಹಾಣ್‌ರವರು ನನಗೆ ನೀಡಿದ ಜವಾಬ್ದಾರಿಯನ್ನು ಸ್ವೀಕರಿಸದಿರಲು ನಾನು ನಿರ್ಧರಿಸಿದ್ದೇನೆ. ಈ ನನ್ನ ಅಸಾಮರ್ಥ್ಯವನ್ನು ಸಿಎಂಗೆ ತಿಳಿಸಿದ್ದೇನೆ” ಎಂದು ತುಷಾರ್ ಪಾಂಚಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ; ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...