HomeಮುಖಪುಟITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆಯು ಈಗ ITI ವಿದ್ಯಾರ್ಥಿಗಳಿಗೆ ವೈದ್ಯಕೀಯ ಆಮ್ಲಜನಕ ಘಟಕದ ನಿರ್ವಹಣೆ ಮತ್ತು ಘಟಕದಲ್ಲಿ ಆಮ್ಲಜನಕ ಒತ್ತಡ (PSA) ನಿರ್ವಹಣೆಯ ಕುರಿತು ತರಬೇತಿ ನೀಡಲು ಮುಂದಾಗಿದೆ. ದೇಶಾದ್ಯಂತ ಐಐಟಿ ಕಾಲೇಜುಗಳಲ್ಲಿ ಆಮ್ಲಜನಕ ಘಟಕಕ್ಕೆ ಸಂಬಂಧಿಸಿದ ಹೊಸ  ತರಬೇತಿಯನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಮುಂದಾಗಿದೆ.

ಈಗಗಾಲೇ 84 ಜನರಿಗೆ ಆಮ್ಲಜನಕ ಘಟಕದ ತರಬೇತಿಯನ್ನು ನೀಡಲಾಗಿದ್ದು ಅವರು ಸ್ವತಂತ್ರವಾಗಿ ಆಮ್ಲಜನಕ ಘಟಕವನ್ನು ನಡೆಸಲು ಸಶಕ್ತರಾಗಿದ್ದಾರೆ. ಮುಂದೆ ಜಿಲ್ಲಾಮಟ್ಟದಲ್ಲಿ ಹೆಚ್ಚಿನ ಐಟಿಐ ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕ ನಿರ್ವಹಣೆಯ ತರಬೇತಿಯನ್ನು ನೀಡಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಆಮ್ಲಜನಕ ಘಟಕವನ್ನು ತೆರೆಯಲು ಪ್ರೋತ್ಸಾಹಿಸಲಾಗುವುದು ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕ ಘಟಕಗಳನ್ನು ಸುಸ್ಥಿತಿಯಲ್ಲಿ ನೋಡಿಕೊಳ್ಳುವಂತೆ ಸೂಚಿಸಿತ್ತು. ಹಾಗೇ ಸಿಬ್ಬಂದಿಗೆ ಘಟಕದ ನಿರ್ವಹಣೆಯ ತರಬೇತಿಯನ್ನು ಮತ್ತು ಅಗತ್ಯ ಒತ್ತಡವನ್ನು ರಕ್ಷಿಸಿಡುವ ತರಬೇತಿಯನ್ನು ನೀಡುವಂತೆಯೂ ಸೂಚಿಸಿತ್ತು.

ಇದನ್ನೂ ಓದಿ : ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಪ್ರಧಾನ ಮಂತ್ರಿಗಳ ಕಚೇರಿಯು ಇದಕ್ಕೆ ಪೂರಕವಾಗಿ ಏಪ್ರಿಲ್‌ನಲ್ಲಿ 541 ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ PM ಕೇರ್ಸ್‌ ಫಂಡ್‌ ಮೂಲಕ ಹಣವನ್ನು ಮಂಜೂರು ಮಾಡಿತ್ತು. ಹಾಗೆ ಅದಕ್ಕೆ ಹೆಚ್ಚಳವಾಗಿ 162 ಘಟಕಗಳ ಸ್ಥಾಪನೆಗೂ ಹಣ ಮಂಜೂರು ಮಾಡಿತ್ತು. ದೇಶದ ಪ್ರತಿ ಜಿಲ್ಲೆಯ ಜಿಲ್ಲಾಕೇಂದ್ರಗಳಲ್ಲಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಆಕ್ಸಿಜನ್‌ ಘಟಕವನ್ನು ಸ್ಥಾಪಿಸುವ ಯೋಜನೆ ಇದಾಗಿದೆ.

ಕಳೆದ ತಿಂಗಳು ಮಹರಾಷ್ಟ್ರದ ನಾಸಿಕ್‌ನಲ್ಲಿ ಆಕ್ಸಿಜನ್‌ ಘಟಕದಲ್ಲಿ ಸೋರಿಕೆ ಉಂಟಾದ ಪರಿಣಾಮ 22 ರೋಗಿಗಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟರು. ಇದೇ ತರಹದ ಘಟನೆ ಮಹರಾಷ್ಟ್ರದ ಪ್ರಭಾನಿಯಲ್ಲಿಯೂ ನಡೆದಿತ್ತು. ಜೊತೆಗೆ ಕೊರೋನಾ ಎರಡನೇ ಅಲೆಯ ವೇಳೆ ದೇಶಾದ್ಯಂತ ಮೆಡಿಕಲ್‌ ಆಕ್ಸಿಜನ್‌ ಕೊರತೆ ಉಂಟಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಸಕ್ಷಮ ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ ಮುಂದಾಗಿದೆ.

ಕೇಂದ್ರ ಆರೋಗ್ಯ ಇಲಾಖೆಯು ಜಿಲ್ಲಾಸ್ಪತ್ರೆಯಲ್ಲಿರುವ ಆಕ್ಸಿಜನ್‌ ಘಟಕಗಳ ನಿರ್ವಹಣೆಗೆ ಕನಿಷ್ಠ 2-3 ತರಬೇತಿ ಹೊಂದಿದ ಸಿಬ್ಬಂದಿಯನ್ನು ಗುರುತಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಹಾಗೇ ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ ಘಟಕದ ಸಿಬ್ಬಂದಿಯನ್ನು ತರಬೇತಿಗೊಳಿಸುವ 5 ಜನ ಮಾಸ್ಟರ್‌ ಟ್ರೈನರ್‌ಗಳನ್ನು ಗುರುತಿಸುವಂತೆ ಕೇಂದ್ರ ಕೌಶಲ್ಯಾಭಿವೃದ್ದಿ ಇಲಾಖೆ  ರಾಜ್ಯಗಳಿಗೆ ತಿಳಿಸಿದೆ.

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆ  IIT ಕಾನ್ಪುರ ಮತ್ತು ನೇವಲ್‌ ಡಾಕ್‌ ವಿಶಾಖಪಟ್ಟಣ ಸಂಸ್ಥೆಗಳ ಸಹಯೋಗದಲ್ಲಿ 84 ಜನರನ್ನು ಮಾಸ್ಟರ್‌ ಟ್ರೈನರ್‌ಗಳನ್ನಾಗಿ ಈಗಾಗಲೇ ತರಬೇತಿಗೊಳಿಸಿದೆ. ರಾಜ್ಯ ಸರ್ಕಾರ ಇವರನ್ನು ತನ್ನ ಸಿಬ್ಬಂದಿಗಳ ತರಬೇತಿಗೆ ಕರೆಸಿಕೊಳ್ಳ ಬಹುದಾಗಿದೆ ಎಂದು ಇಲಾಖೆಯ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕ್ಸಿಜನ್‌ ಘಟಕವನ್ನು ನಿರ್ವಹಿಸುವ ಸಿಬ್ಬಂದಿಗಳು ಎಲೆಕ್ಟ್ರಿಕ್‌ ಮತ್ತು ತಾಂತ್ರಿಕ ದೋಶಗಳನ್ನು ಸರಿಪಡಿಸಲು ತಿಳಿದಿರುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಿದೆ. ಬೆಡ್‌ ಸೈಡ್‌ ಸಿಲಿಂಡರ್‌, ಚಿಕ್ಕ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ನಿರ್ವಹಣೆ ಮುಂತಾದ ತರಬೇತಿಗಳನ್ನು ಜಿಲ್ಲಾಮಟ್ಟದ ಸಿಬ್ಬಂದಿಗಳಿಗೆ ನೀಡಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಂಸ್ಥೆ ಸೂಚಿಸಿದೆ.


ಇದನ್ನೂ ಓದಿ : ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...