Homeಅಂತರಾಷ್ಟ್ರೀಯ10 ರಲ್ಲಿ8 ಭಾರತೀಯ ಅಮೆರಿಕನ್ನರು ಮೇಲ್ಜಾತಿ ಅಥವಾ ಸಾಮಾನ್ಯ ಜಾತಿಯೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ - ಸಮೀಕ್ಷೆ

10 ರಲ್ಲಿ8 ಭಾರತೀಯ ಅಮೆರಿಕನ್ನರು ಮೇಲ್ಜಾತಿ ಅಥವಾ ಸಾಮಾನ್ಯ ಜಾತಿಯೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ – ಸಮೀಕ್ಷೆ

- Advertisement -
- Advertisement -

ಹಿಂದೂ ಜಾತಿಪದ್ದತಿಯ ಗುಂಪಿನೊಂದಿಗೆ ಗುರುತಿಸಿಕೊಳ್ಳುವ 10 ಜನರಲ್ಲಿ 8 ಕ್ಕೂ ಹೆಚ್ಚು ಭಾರತೀಯ ಅಮೆರಿಕನ್ನರು ತಾವು ಸಾಮಾನ್ಯ ಅಥವಾ ಮೇಲ್ಜಾತಿಗೆ ಸೇರಿದವರು ಎಂದು ತಿಳಿಸುತ್ತಾರೆ ಎಂಬ ವಿಷಯವನ್ನು ಬುಧವಾರ ಪ್ರಕಟವಾದ ಭಾರತೀಯ ಅಮೆರಿಕನ್ನರ ವರ್ತನೆ ಕುರಿತು ನಡೆಸಿರುವ ಹೊಸ ಸಮೀಕ್ಷೆಯೊಂದು ಬಹಿರಂಗಪಡಿಸಿದೆ.

ಇಂಡಿಯನ್ ಅಮೇರಿಕನ್ ಆಟಿಟ್ಯೂಡ್ಸ್ ಸರ್ವೆ (IAAS) ಯನ್ನು ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್, ಜಾನ್ಸ್ ಹಾಪ್ಕಿನ್ಸ್-ಎಸ್ಎಐಎಸ್ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸಮೀಕ್ಷೇ ನಡೆಸಲಾಗಿದೆ.

IAAS ಸಮೀಕ್ಷೆಯಲ್ಲಿ 1,200 ಭಾರತೀಯ ಅಮೆರಿಕನ್ನರ ಪ್ರತಿಕ್ರಿಯೆಗಳು ಸೇರಿವೆ. 632 ಮಂದಿ ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರೆ, ಕೇವಲ 293 ಮಂದಿ ಮಾತ್ರ ಜಾತಿಯನ್ನು ತಿಳಿಸಿದ್ದಾರೆ. ಈ ಗುಂಪಿನಲ್ಲಿ, ಶೇಕಡಾ 83 ರಷ್ಟು ಜನರು ತಮ್ಮನ್ನು ಸಾಮಾನ್ಯ ಅಥವಾ ಮೇಲ್ಜಾತಿ ಎಂದು ವರ್ಗೀಕರಿಸಿಕೊಂಡಿದ್ದಾರೆ, ಶೇಕಡಾ 16 ಪ್ರತಿಶತದಷ್ಟು ಜನರು ಹಿಂದುಳಿದ ವರ್ಗದ (OBC) ಸದಸ್ಯರೆಂದೂ, ಶೇಕಡಾ 1 ರಷ್ಟು ಪರಿಶಿಷ್ಟ ಪಂಗಡ (ST) ಅಥವಾ ಪರಿಶಿಷ್ಟ ಜಾತಿ (ST) ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ದಲಿತ ಉದ್ಯೋಗಿಯೊಬ್ಬರನ್ನು ಆತನ ಜಾತಿಯ ಆಧಾರದ ಮೇಲೆ ಭಾರತೀಯ ಅಮೆರಿಕನ್ ಕಂಪನಿ ವ್ಯವಸ್ಥಾಪಕರು ಕಿರುಕುಳ ನೀಡಿದ್ದಾರೆ ಎಂದು ಜುಲೈ 2020 ರಲ್ಲಿ, ಕ್ಯಾಲಿಫೋರ್ನಿಯಾ ರಾಜ್ಯವು ನೆಟ್‌ವರ್ಕ್ ಗೇರ್ ತಯಾರಕ ಸಿಸ್ಕೋ ಸಿಸ್ಟಮ್ಸ್ ಇಂಕ್ ಸಂಸ್ಥೆ ವಿರುದ್ಧ ಮೊಕದ್ದಮೆ ಹೂಡಿತ್ತು. ಈ ಉದಾಹರಣೆಯನ್ನು ಉದಾಹರಿಸಿ, ಐಎಎಎಸ್ ಸಮೀಕ್ಷೆಯು “ಅಮೆರಿಕಾಕ್ಕೆ ವಲಸೆ ಬಂದಿರುವ ಸಮುದಾಯದೊಳಗೆ, ಹಿಂದೂ ಧರ್ಮಕ್ಕೆ ಸಂಬಂಧಿಸಿದ ಜಾತಿ ಶ್ರೇಣಿಕರಣ ಮತ್ತು ಸ್ಥಾನಮಾನದ ಗುರುತಿನ ಜೊತೆಗೆ ಜಾತಿಯ ಭದ್ರವಾದ ಸ್ವರೂಪವಿದೆ” ಎಂದು ತಿಳಿಸಿದೆ.

ಮುಖ್ಯವಾಗಿ ಚರ್ಮದ ಬಣ್ಣಗಳ ಆಧಾರದ ಮೇಲೆ, ಇಬ್ಬರು ಭಾರತೀಯ ಅಮೆರಿಕನ್ನರಲ್ಲಿ ಒಬ್ಬರು ತಾರತಮ್ಯವನ್ನು ಎದುರಿಸುತ್ತಿದ್ದಾರೆಂದು ಕಳೆದ ಒಂದು ವರ್ಷದಲ್ಲಿ ನಡೆಸಿದ ಸಮೀಕ್ಷೆ ಆಧಾರದಲ್ಲಿ ವರದಿ ಮಾಡಿದೆ.

ಭಾರತೀಯರು ಎಂಬ ಗುರುತಿಗೆ ಸಂಬಂಧಿಸಿದಂತೆ, ಶೇಕಡಾ 88 ರಷ್ಟು ಹಿಂದೂಗಳು ತಮಗೆ ಭಾರತೀಯರು ಎನಿಸಿಕೊಳ್ಳುವುದು ಮುಖ್ಯ ಎಂದು ಹೇಳಿದ್ದಾರೆ.

“ಭಾರತೀಯ ಅಮೆರಿಕನ್ನರ ಈ ಹೇಳಿಕೆಯು ಬಹುಶಃ ಭಾರತದ ಪ್ರಸ್ತುತ ರಾಜಕೀಯ ವಾತಾವರಣದ ಪ್ರತಿಬಿಂಬವಾಗಿದೆ” ಎಂದು ಸಮೀಕ್ಷೆ ಹೇಳಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಕಾರ್ಯಕ್ಷಮತೆಯನ್ನು ಅಂಗೀಕರಿಸಲು ಹಿಂದೂ ಭಾರತೀಯ ಅಮೆರಿಕನ್ನರು ಇಷ್ಟಪಡುತ್ತಾರೆ ಎಂದು ಸಮೀಕ್ಷಾ ವರದಿ ಹೇಳಿದೆ.


ಇದನ್ನೂ ಓದಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...