Homeಮುಖಪುಟಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

ಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

- Advertisement -
- Advertisement -

ಆದಿವಾಸಿ ಯುವತಿಯ ಮೇಲೆ ಮೃಗೀಯ ಅತ್ಯಾಚಾರ ನಡೆಸಿ ಕೊಂದು, ನಂತರ ಮಾವೋವಾದಿಯಾಗಿದ್ದ ಯುವತಿ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾಳೆ ಎಂದು ಭದ್ರತಾ ಪಡೆಗಳು ಘೋಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಛತ್ತೀಸಗಡದ ಬಿಜಾಪುರ ಜಿಲ್ಲೆಯ ನೀರಂ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಬಸ್ತರ್ ಪ್ರದೇಶದಲ್ಲಿ ಇಂತಹ ಘಟನೆಗಳು ಹೊಸ ಪ್ರಕರಣವಲ್ಲ ಎನ್ನಲಾಗಿದೆ. ಈ ಹಿಂದೆ ಬಿಜೆಪಿಯ ಹಿಂಸಾತ್ಮಕ ಆಡಳಿತದಿಂದ ಮುಕ್ತವಾಗಲು ರಾಜ್ಯದ ಜನಸಾಮಾನ್ಯರು ಭಾರಿ ಬಹುಮತದಿಂದ ಕಾಂಗ್ರೆಸ್ ಅನ್ನು ಅಧಿಕಾರ ನೀಡಿದ್ದಾರೆ. ಆದರೆ ಆಡಳಿತ ಪಕ್ಷ ಕಾಂಗ್ರೆಸ್ ನೀಡಿದ ರಾಜಕೀಯ ಭರವಸೆಗಳನ್ನು ಅದರ ನಾಯಕರು ಈಗ ಮರೆತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇ 30ರ ರಾತ್ರಿ 11- 12ರ ನಡುವೆ, 24 ವರ್ಷದ ಆದಿವಾಸಿ ಯುವತಿ ಪೈಕೆ ವೆಕ್ಕೊ, ತಾಯಿ ಸುಕ್ಕಿ ವೆಕ್ಕೊ ಸೇರಿದಂತೆ ಇನ್ನೊಬ್ಬರ ಕುಟುಂದ ಸದಸ್ಯರ ಜೊತೆ ತಮ್ಮ ಮನೆಯ ಅಂಗಳದಲ್ಲಿ ಮಲಗಿದ್ದರು. ಮನೆ ಸುತ್ತುವರೆದ ಜಿಲ್ಲಾ ಮೀಸಲು ಕಾವಲುಗಾರ ಪಡೆಯ ಸಿಬ್ಬಂದಿ ಅಂಗಳಕ್ಕೆ ಪ್ರವೇಶಿಸಿ ಪೈಕೆ ಮೇಲೆ ಹಲ್ಲೆ ನಡೆಸಿದ್ದಾರೆ. ಆಕೆಯ ರಕ್ಷಣೆಗೆ ಹೋದ ಕುಟುಂಬ ಸದಸ್ಯರನ್ನು ಭೀಕರವಾಗಿ ಥಳಿಸಲಾಗಿತು. ನಂತರ ಯುವತಿಯನ್ನು ಸಿಬ್ಬಂದಿ ಕಾಡಿಗೆ ಎಳೆದೊಯ್ದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಡಿಜಿಆರ್‌ ಸದಸ್ಯರು ರಾಜ್ಯ ಭದ್ರತಾ ಪಡೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವುದರಿಂದ, ಪೈಕೆ ಅವರನ್ನು ಬಂಧಿಸಿರಬಹುದು ಎಂದು ಭಾವಿಸಿದ ಆಕೆಯ ಪೋಷಕರು ಮತ್ತು ನೆರೆಹೊರೆಯವರು ಮೇ 31 ರಂದು ದಂತೇವಾಡ ಜೈಲಿಗೆ ಹೋಗಿದ್ದಾರೆ. ನಂತರ ನೆಲಾಸ್ನರ್ ಪೊಲೀಸ್ ಠಾಣೆಯಲ್ಲಿ ಮಾವೋವಾದಿ ಎಂಬ ಕಾರಣಕ್ಕೆ ಪೈಕೆ ಅವರನ್ನು ‘ಎನ್‌ಕೌಂಟರ್‌’ನಲ್ಲಿ ಕೊಲ್ಲಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುವತಿ ಪೈಕೆ ಅವರ ಮೃತ ದೇಹವನ್ನು ನೋಡಿದ ಪೋಷಕರು ಮತ್ತು ಸಂಬಂಧಿಕರು, ಆಕೆಯ ಮೇಲೆ ಅತ್ಯಾಚಾರ ನಡೆಸಿ, ಡಿಜಿಆರ್‌ ಸಿಬ್ಬಂದಿ ಆಕೆಯ ದೇಹವನ್ನು ತೀವ್ರವಾಗಿ ವಿರೂಪಗೊಳಿಸಿದ್ದಾರೆ. ಸಂತ್ರಸ್ತೆಯ ಪೋಷಕರು ಮತ್ತು ಪ್ರದೇಶದ ಇತರ ಸ್ಥಳೀಯ ಆದಿವಾಸಿಗಳು ಪೈಕೆ ಯಾವುದೇ ಮಾವೋವಾದಿ ಬಣಕ್ಕೆ ಸೇರಿಲ್ಲ ಮತ್ತು ಆಕೆಯ ಹತ್ಯೆಯನ್ನು ಎನ್‌ಕೌಂಟರ್‌ ಎಂದು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ಎತ್ತರ ಮರ, ಬಾಗಿದ ಕೊಂಬೆ: ಪ್ರೊ. ರಹಮತ್ ತರೀಕೆರೆ

ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ ಎಂದಿರುವ ಸ್ಥಳೀಯ ಗುಂಪು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ಐಪಿಸಿಯ ಸೆಕ್ಷನ್ 302 (ಕೊಲೆ), 316 (ಅತ್ಯಾಚಾರ)  ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿ ಭದ್ರತಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದೆ.

ಜಿಲ್ಲಾ ಮೀಸಲು ಕಾವಲುಗಾರರು ಅಂದರೆ ಡಿಜಿಆರ್‌ ಎಂಬುದು ಒಂದು ಮಿಲಿಟಂಟ್ ಗುಂಪು, ಆದಿವಾಸಿಗಳ ವಿರುದ್ಧ ಆದಿವಾಸಿಗಳನ್ನು ಎತ್ತಿ ಕಟ್ಟಲು ಕಾಂಗ್ರೆಸ್ ಆಡಳಿತ ಮಾಡಿರುವ ಸೃಷ್ಟಿ ಇದಾಗಿದೆ. ಇದು ಶರಣಾದ ಮಾವೋವಾದಿಗಳು ಮತ್ತು ಹಳ್ಳಿಗಳ ಮಾವೋವಾದಿ ವಿರೋಧಿಗಳನ್ನು ಒಳಗೊಂಡಿದೆ. ವಾಸ್ತವವಾಗಿ, ಡಿಜಿಆರ್‌ ತಂಡವನ್ನು ಬಿಜೆಪಿಯ ಆಳ್ವಿಕೆಯಲ್ಲಿನ ಸಾಲ್ವಾ ಜುಡಮ್‌ಗೆ ಹೋಲಿಸಲಾಗಿದೆ. ಡಿಜಿಆರ್‌ ಸದಸ್ಯರು ಬಹುತೇಕ ಆದಿವಾಸಿಗಳೇ ಆಗಿದ್ದಾರೆ.

ಮೃತ ಸಂತ್ರಸ್ಥ ಯುವತಿಯ ಸಾವಿಗೆ ನ್ಯಾಯ ಬೇಕು ಎಂದು ಸ್ಥಳೀಯ ಆದಿವಾಸಿಗಳು ಪ್ರತಿಭಟನೆ ನಡೆಸಿ, ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...