Homeಮುಖಪುಟನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-ಟಿಎಂಸಿ ಸಂಸದೆ ನುಸ್ರತ್

ನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-ಟಿಎಂಸಿ ಸಂಸದೆ ನುಸ್ರತ್

- Advertisement -
- Advertisement -

ವಿವಾಹ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರುವ ತೃಣಮೂಲ ಸಂಸದೆ ನುಸ್ರತ್ ಜಹಾನ್ ಬುಧವಾರ ಹೇಳಿಕೆ ನೀಡಿದ್ದು, ನಿಖಿಲ್ ಜೈನ್ ಅವರೊಂದಿಗಿನ ಅವರ ವಿವಾಹವು ಎಂದಿಗೂ ಮಾನ್ಯವಾಗಿಲ್ಲ, ಹಾಗಾಗೀ ವಿಚ್ಛೇದನದ ಪ್ರಶ್ನೆ ಉದ್ಭವಿಸಲ್ಲ ಎಂದು ಹೇಳಿದ್ದಾರೆ.

ಭಾರತದಲ್ಲಿ ಅಂತರ್‌ ಧರ್ಮಿಯ ಮದುವೆಗೆ ವಿಶೇಷ ವಿವಾಹ ಕಾಯ್ದೆಯಡಿ ಮಾನ್ಯತೆಯ ಅಗತ್ಯವಿದೆ. ಆದರೆ ನಮ್ಮ ವಿವಾಹಕ್ಕೆ ಕಾನೂನುಬದ್ಧ ಮಾನ್ಯತೆ ಇಲ್ಲದ ಕಾರಣ ವಿಚ್ಛೇದನದ ಪ್ರಶ್ನೆಯೇ ಇಲ್ಲ. ನಾವು ಬಹಳ ಹಿಂದೆಯೇ ಬೇರೆಯಾಗಿದ್ದೇವೆ. ಆದರೆ ನನ್ನ ಖಾಸಗಿ ಜೀವನದ ವಿಚಾರವನ್ನು ನನ್ನಲ್ಲಿಯೇ ಇಟ್ಟುಕೊಳ್ಳುವ ಉದ್ದೇಶದಿಂದ ನಾನು ಅದರ ಬಗ್ಗೆ ಮಾತನಾಡಲಿಲ್ಲ” ಎಂದು ಸಂಸದೆ ನುಸ್ರತ್ ಹೇಳಿದ್ದಾರೆ.

ನಟಿ, ರಾಜಕಾರಣಿ ನುಸ್ರತ್ ಜಹಾನ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ 2019 ರಲ್ಲಿಯೇ ಟರ್ಕಿಯ ಉದ್ಯಮಿ ನಿಖಿಲ್ ಜೈನ್ ಅವರನ್ನು ವಿವಾಹವಾಗಿದ್ದರು. ಕೋಲ್ಕತ್ತಾದಲ್ಲೂ ‌ಆರತಾಕ್ಷತೆ ಸಮಾರಂಭ ನಡೆದಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದರು. ಟರ್ಕಿಯ ಮದುವೆ ಕಾಯ್ದೆ ಪ್ರಕಾರ ವಿವಾಹ ಸಮಾರಂಭವನ್ನು ಮಾಡಲಾಗಿತ್ತು ಎಂದು ಸಂಸದೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ

2021 ರ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನಟ, ರಾಜಕಾರಣಿ ಯಶ್ ದಾಸ್‌ಗುಪ್ತಾ ಅವರೊಂದಿಗೆ ನುಸ್ರತ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳು ಹಬ್ಬಿದ್ದವು. ಕೆಲವು ದಿನಗಳ ಹಿಂದೆ ನುಸ್ರತ್, ಯಶ್ ದಾಸ್‌ಗುಪ್ತಾ ಅವರ ಮಗುವಿನ ತಾಯಿಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹೆಚ್ಚಾದ ಹಿನ್ನೆಲೆ, ಬರಹಗಾರ್ತಿ ತಸ್ಲೀಮಾ ನಸ್ರೀನ್ ಈ ವದಂತಿಗಳು ನಿಜವಾಗಿದ್ದರೆ, ನುಸ್ರತ್ ನಿಖಿಲ್‌ನಿಂದ ವಿಚ್ಛೇದನ ಪಡೆಯಬೇಕು ಎಂದು ಹೇಳಿದ್ದರು.

ಸದ್ಯ ತನ್ನ ವಿವಾಹದ ಕುರಿತು ಸ್ಪಷ್ಟನೆ ನೀಡಿರುವ ಸಂಸದೆ ನುಸ್ರತ್, “ನನ್ನ ವೈಯಕ್ತಿಕ ಜೀವನದ ಬಗ್ಗೆ ಅಥವಾ ನನಗೆ ಸಂಬಂಧವಿಲ್ಲದ ಯಾರ ಬಗ್ಗೆಯೂ ನಾನು ಎಂದಿಗೂ ಮಾತನಾಡುವುದಿಲ್ಲ. ಹೀಗಾಗಿ, ತಮ್ಮನ್ನು ತಾವು ಸಾಮಾನ್ಯ ಜನರು ಎಂದು ಕರೆದುಕೊಳ್ಳುವವರು ಅವರಿಗೆ ಸಂಬಂಧವಿಲ್ಲದ ಯಾವುದರ ಬಗ್ಗೆಯೂ ಮಾತನಾಡಬಾರದು” ಎಂದು ನುಸ್ರತ್ ಹೇಳಿದ್ದಾರೆ.

ನಿಖಿಲ್ ಜೈನ್ ಕೋಲ್ಕತಾ ಮೂಲದ ಉದ್ಯಮಿಯಾಗಿದ್ದು, ಮದುವೆಗೂ ಒಂದು ವರ್ಷದ ಮೊದಲು ಇಬ್ಬರು ಭೇಟಿಯಾಗಿದ್ದರು. ಇತ್ತೀಚೆಗೆ, ನುಸ್ರತ್ ಗರ್ಭಧಾರಣೆಯ ವದಂತಿಗಳು ಹರಡುತ್ತಿದ್ದಂತೆ, ಕೆಲವು ಸುದ್ದಿ ವಾಹಿನಿಗಳು ನಿಖಿಲ್ ಅವರನ್ನು ಸಂಪರ್ಕಿಸಿದ್ದು, ಹಲವು ತಿಂಗಳುಗಳಿಂದ ಪರಸ್ಪರ ಸಂಪರ್ಕದಲ್ಲಿಲ್ಲದ ಕಾರಣ ನುಸ್ರತ್ ಅವರ ಗರ್ಭಧಾರಣೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...