Homeಮುಖಪುಟಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

- Advertisement -
- Advertisement -

ಹಿಂದೆ ರಾಹುಲ್‍ ಗಾಂಧಿಯವರಿಗೆ ನಿಕಟವಾಗಿದ್ದ ಕಾಂಗ್ರೆಸ್‍ ನಾಯಕ, ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ತನ್ನ ಕಚೇರಿಯಲ್ಲಿ ಕಾಂಗ್ರೆಸ್‍ ನಾಯಕತ್ವವು, ಪಂಜಾಬ್‍ ಕಾಂಗ್ರೆಸ್‍ನ ಆಂತರಿಕ ಬಿಕ್ಕಟ್ಟನ್ನು ನಿವಾರಿಸಲು ಸಭೆ ನಡೆಸುತ್ತಿರುವ ಸಮಯದಲ್ಲೇ, ಉತ್ತರಪ್ರದೇಶದಲ್ಲಿ ಕಾಂಗ್ರೆಸ್ಸಿನ ಪ್ರಧಾನ ಬ್ರಾಹ್ಮಣ ಮುಖವಾಗಿದ್ದ 47 ವರ್ಷದ ಜಿತಿನ್‍ ಪ್ರಸಾದ ಕಾಂಗ್ರೆಸ್‍ನಿಂದ ನಿರ್ಗಮಿಸಿದ್ದಾರೆ.

“ಬಿಜೆಪಿ ಮಾತ್ರ ನಿಜವಾದ ರಾಜಕೀಯ ಪಕ್ಷ. ಇದು ಏಕೈಕ ರಾಷ್ಟ್ರೀಯ ಪಕ್ಷ. ಉಳಿದ ಪಕ್ಷಗಳು ಪ್ರಾದೇಶಿಕ. ಬಿಜೆಪಿ ಮತ್ತು ಮೋದಿ ಮಾತ್ರ ದೇಶವು ಈಗ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಬಲ್ಲರು” ಎಂದು ಜಿತನ್ ಪ್ರಸಾದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ತೊರೆದ ನಂತರ ಜಿತಿನ್‍ ನಿರ್ಗಮನ ಎರಡನೇ ದೊಡ್ಡ ನಿರ್ಗಮನವಾಗಿದೆ. ಜಿತಿನ್‍ ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂಬ ವದಂತಿಗಳನ್ನು ಅವರು 2019ರಲ್ಲಿ ನಿರಾಕರಿಸಿದ್ದರು. ಆ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್‍ನಲ್ಲೇ ಉಳಿಯಲು ಜಿತಿನ್‍ ಅವರಿಗೆ ಮನವರಿಕೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

“ನೀವು ಪ್ರತಿನಿಧಿಸುವ ಜನರಿಗೆ ಸಹಾಯ ಮಾಡಲು ಸಾಧ್ಯವಾಗದಿದ್ದರೆ ಒಂದು ಪಕ್ಷವಾಗಿ ಇರುವುದರ ಅರ್ಥವೇನು?” ಎಂದು ಜಿತಿನ್‍ ಕಾಂಗ್ರೆಸ್‍ ಕುರಿತು ಇಂದು ಹೇಳಿದರು.

‘ಕಾಂಗ್ರೆಸ್‍ ಜೊತೆಗಿನ 20 ವರ್ಷಗಳ ಪಯಣದಲ್ಲಿ ಇದೇನೂ  ಅವರ ಮೊದಲ ಬಾರಿಯ ಹತಾಶೆಯಲ್ಲ ಎಂಬುದು ರಹಸ್ಯವೇನೂ ಅಲ್ಲ. ಅವರು “ಜಿ -23” ಅಥವಾ 23 ಕಾಂಗ್ರೆಸ್ ನಾಯಕರ ಗುಂಪಿನ ಭಾಗವಾಗಿದ್ದರು. ಈ ಗುಂಪು ಕಳೆದ ವರ್ಷ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳು ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಾವಧಿಯ ಜನಪ್ರಿಯ ನಾಯಕತ್ವಕ್ಕೆ ಕರೆ ನೀಡಿತ್ತು.

ಪಕ್ಷವು ಇದೆಲ್ಲದರ ತಿದ್ದುಪಡಿಯ ಬಗ್ಗೆ ಮಾತನಾಡಿದ್ದರೂ ಮತ್ತು ಸಮಿತಿಯನ್ನೂ ನೇಮಿಸಿದ್ದರೂ ವಾಸ್ತವದಲ್ಲಿ ಏನೂ ಬದಲಾಗಿಲ್ಲ.

ಈ ಪತ್ರದ ನಂತರ, ಯಾವುದೇ ಮುಖ್ಯ ಪಾತ್ರವನ್ನು ಪಡೆಯಬಹುದಾದ ಕೆಲವೇ “ಭಿನ್ನಮತೀಯರಲ್ಲಿ” ಜಿತಿನ್‍ ಒಬ್ಬರಾಗಿದ್ದರು. ಕಾಂಗ್ರೆಸ್‍ನ ಬಂಗಾಳ ಚುನಾವಣಾ ಪ್ರಚಾರದ ಕಾರ್ಯವನ್ನು ಅವರು ನಿರ್ವಹಿಸಿದರು, ಆದರೆ ಅಲ್ಲಿ ತೀವ್ರ ಹಿನ್ನಡೆಯ ಫಲಿತಾಂಶ ಬಂದಿತು.

ಮೌಲ್ವಿಯೊಬ್ಬರ  ನೇತೃತ್ವದ ಇಂಡಿಯನ್‍ ಸೆಕ್ಯುಲರ್ ಫ್ರಂಟ್‍ ಜೊತೆ ಕಾಂಗ್ರೆಸ್‍ನ  ಮೈತ್ರಿ ಸೇರಿದಂತೆ, ತಮ್ಮ ಪಕ್ಷದ ಇತರ ನಿರ್ಧಾರಗಳನ್ನು ಅವರು ಬಹಿರಂಗವಾಗಿ ಟೀಕಿಸಿದ್ದರು. ನಂತರವೂ, ‘ಇದು ಪಕ್ಷದ ನಿರ್ಧಾರ. ಎಲ್ಲರೊಟ್ಟಿಗೆ ಕೆಲಸ ಮಾಡೋಣ’ ಎಂದು ಬಂಗಾಳ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು.

ಉತ್ತರ ಪ್ರದೇಶದ ಧೌರಾಹ್ರಾ ಕ್ಷೇತ್ರದ ಮಾಜಿ ಲೋಕಸಭಾ ಸಂಸದರಾದ ಜಿತಿನ್‍, ಉತ್ತರಪ್ರದೇಶದ ಉನ್ನತ ಕಾಂಗ್ರೆಸ್‍ ನಾಯಕರಲ್ಲಿ ಒಬ್ಬರಾಗಿದ್ದರು. ಈಗ ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು ಇದು ಕಾಂಗ್ರೆಸ್‍ಗೆ ಹಿನ್ನಡೆ ಎನ್ನಲಾಗಿದೆ.

ಲೆಟರ್ ಬಾಂಬ್ ನಂತರ, ಉತ್ತರಪ್ರದೇಶದ ಕಾಂಗ್ರೆಸ್ ಘಟಕವು ಜಿ -23 ಗುಂಪಿನ ವಿರುದ್ಧ ಕ್ರಮಕೈಗೊಳ್ಳಲು ಕರೆ ನೀಡಿತ್ತು. ಜಿತಿನ್‍ ತಂದೆ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜಿತೇಂದ್ರ ಪ್ರಸಾದ್‍ ಅವರು 1999ರಲ್ಲಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸಿದ್ದರು ಮತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಅವರು 2002ರಲ್ಲಿ ನಿಧನರಾದರು.

ರಾಹುಲ್ ಗಾಂಧಿಯವರ ಆಂತರಿಕ ವಲಯದಲ್ಲಿದ್ದ ಜಿತಿನ್ ಪ್ರಸಾದ ಅವರು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿದ್ದರು.


ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...