Homeಮುಖಪುಟಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

- Advertisement -
- Advertisement -

ಜೂನ್ 9 ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ ಜಿತಿನ್ ಪ್ರಸಾದ್ ಕೇಂದ್ರ ಮಂತ್ರಿ ಪಿಯುಶ್ ಗೋಯಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯೆಂದು ಅನೇಕರು ಚರ್ಚಿಸುತ್ತಿದ್ದಾರೆ. ಒಂದು ಕಾಲದಲ್ಲಿ ರಾಹುಲ್ ಗಾಂಧಿಯ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮತ್ತು ಕೇಂದ್ರದಲ್ಲಿ ಎರಡು ಅವಧಿಗೆ ಮಂತ್ರಿಯಾಗಿದ್ದ ಜಿತಿನ್ ಪ್ರಸಾದ್ ಬಿಜೆಪಿಯತ್ತ ಮುಖ ಮಾಡಿದ್ದು ಯಾಕೆ ? ಜಿತಿನ್ ಪ್ರಸಾದ್ ಸೇರ್ಪಡೆಯ ಹಿಂದಿನ ಬಿಜೆಪಿಯ ರಾಜಕೀಯ ಲೆಕ್ಕಾಚಾರವೇನು?

ಜಿತಿನ್ ಪ್ರಸಾದ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದು ಯಾಕೆ ?

ಕಾಂಗ್ರೆಸ್ ನ ಹಿರಿಯ ನಾಯಕ ಜಿತಿನ್ ಪ್ರಸಾದ್ ಕಳೆದ ವರ್ಷ “ಪಕ್ಷದ ನಾಯಕತ್ವದಲ್ಲಿ ಅಮೂಲಾಗ್ರ ಬದಲಾವಣೆಯಾಗಬೇಕು. ನೆಹರು-ಗಾಂಧಿ ಪರಿವಾರದವರನ್ನು ಹೊರತುಪಡಿಸಿ ಇತರರು ಕಾಂಗ್ರೆಸ್ ನ ಅಧ್ಯಕ್ಷರಾಗಬೇಕು. ಸೋನಿಯಾ-ರಾಹುಲ್ ಆಪ್ತ ವಲಯವನ್ನು ಹೊರತುಪಡಿಸಿ ಇತರರಿಗೂ ಅಧಿಕಾರ ನೀಡಬೇಕೆಂದು” ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. ಜಿತಿನ್ ಪ್ರಸಾದ್ ಜೊತೆಗೆ ಕಪಿಲ್ ಸಿಬಲ್, ಶಶಿ ತರೂರ್ ಸೇರಿ ಉಳಿದ 22 ನಾಯಕರೂ ಸಹ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. G-23 ಎಂದು ಕರೆಯಲಾಗುವ ಈ ನಾಯಕರ ಗುಂಪನ್ನು ಕಾಂಗ್ರೆಸ್ ಹೈಕಮಾಂಡ್ ಕ್ರಮೇಣ ಕಡೆಗಣನೆ ಮಾಡುತ್ತಲೇ ಬಂದಿದೆ. ನಡುವೆ ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆ ಉಸ್ತುವಾರಿಯನ್ನು ಜಿತಿನ್ ಪ್ರಸಾದ್ ಅವರಿಗೆ ನೀಡಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿ ಸಹ ಗೆಲುವು ಸಾಧಿಸಿಲ್ಲ. ಇದೆಲ್ಲ ಬೆಳವಣಿಗೆಯಿಂದ ಜಿತಿನ್ ಪ್ರಸಾದ್ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪಾಗಿದ್ದಾರೆ. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ರೇಣುಕಾದೇವಿ ಶರ್ಮ ವಿರುದ್ಧ ಸೋತ ನಂತರ ಜಿತಿನ್ ಪ್ರಸಾದ್ ಮತ್ತೆ ಚುನಾವಣೆಗಳಲ್ಲಿ ಗೆಲುವು ಸಾಧಿಸಿಲ್ಲ. ಮುಂದಿನ‌ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಜಿತಿನ್ ಪ್ರಸಾದ್ ಬಿಜೆಪಿಯಿಂದ ತಮ್ಮ ರಾಜಕೀಯ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ

ಇದನ್ನೂ ಓದಿ :‌ ನಮ್ಮ ವಿವಾಹಕ್ಕೆ ಕಾನೂನಿನ ಮಾನ್ಯತೆಯಿಲ್ಲ ಹಾಗಾಗಿ ವಿಚ್ಛೇದನದ ಪ್ರಶ್ನೆಯಿಲ್ಲ-  ಟಿಎಂಸಿ ಸಂಸದೆ ನುಸ್ರತ್

ಜಿತಿನ್ ಪ್ರಸಾದ್ ಸೇರ್ಪಡೆಯ ಹಿಂದಿನ ಬಿಜೆಪಿ ರಾಜಕೀಯ ಲೆಕ್ಕಾಚಾರವೇನು ?

ಜಿತಿನ್ ಪ್ರಸಾದ್ ಮೂಲತಃ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ರಾಜಕೀಯ ನಾಯಕ. ಉತ್ತರ ಪ್ರದೇಶದಲ್ಲಿ ಸರಿ ಸುಮಾರು 10% ಮತದಾರರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.‌ 90 ರ ದಶಕದಿಂದಲೂ ಬ್ರಾಹ್ಮಣ ಸಮುದಾಯ ಬಿಜೆಪಿಯ ಬೆನ್ನಿಗೆ ನಿಂತಿದೆ. ಆದರೆ 2011 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ರಜಪೂತ ಸಮುದಾಯಕ್ಕೆ ಸೇರಿದ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದು ಬ್ರಾಹ್ಮಣ ಸುಮುದಾಯಕ್ಕೆ ಸರಿ ಬಂದಿರಲಿಲ್ಲ. ಅದರ ನಡುವೆ ಗ್ಯಾಂಗ್‌ ಸ್ಟರ್ ವಿಕಾಸ್ ದುಬೆಯ ಹತ್ಯೆ ಕೂಡ ಬ್ರಾಹ್ಮಣ ಸಮುದಾಯ ಬಿಜೆಪಿ ಮೇಲೆ ಮುನಿಸಿಕೊಳ್ಳುವಂತೆ ಮಾಡಿತ್ತು. ಜೊತೆಗೆ ಯೋಗಿ ಆದಿತ್ಯನಾಥ್ ಮತ್ತು ರಾಜ್ಯದ ಇತರ ಬಿಜೆಪಿ ನಾಯಕರ ನಡುವಿನ ಸಂಬಂಧ ಹಳಸಿದೆ ಎಂದು ಹೇಳಲಾಗುತ್ತಿದೆ. ಪಕ್ಷದಿಂದ ದೂರ ಸರಿಯುತ್ತಿರುವ ಬಿಜೆಪಿಯ ಬ್ರಾಹ್ಮಣ ವೋಟ್ ಬ್ಯಾಂಕ್ ಅನ್ನು ಹಿಡಿದಿಡಲು ಜಿತಿನ್ ಪ್ರಸಾದ್ ಸೇರ್ಪಡೆ ಬಿಜೆಪಿಗೆ ಬಲ ತುಂಬಲಿದೆ ಎನ್ನಲಾಗಿದೆ.

ರೀಟಾ ಬಹುಗುಣ ಜೋಶಿಯವರನ್ನು ಬಿಜೆಪಿ ಹಿಂದೆ ಬ್ರಾಹ್ಮಣ ಸಮುದಾಯದ ನಾಯಕಿಯನ್ನಾಗಿ ಬಿಂಬಿಸಿತ್ತು. ಆದರೆ ರಿಟಾ ಬಹುಗುಣ ಜೋಶಿಯವರಿಂದ ಬಿಜೆಪಿಗೆ ಹೆಚ್ಚಿನ ಲಾಭವಾಗಿರಲಿಲ್ಲ. ಅವರು ಉತ್ತರ ಪ್ರದೇಶದಲ್ಲಿ ಹೆಚ್ಚು ಜನಪ್ರಿಯರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ಜಿತಿನ್ ಪ್ರಸಾದ್ ಸೇರ್ಪಡೆ ಉತ್ತರ ಪ್ರದೇಶ ಬಿಜೆಪಿಗೆ ಬ್ರಾಹ್ಮಣ ಮತಬ್ಯಾಂಕ್ ಅನ್ನು ಸೆಳೆಯಲು ಒಂದಷ್ಟು ಬಲ ತುಂಬಲಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ದಿನೇ ದಿನೇ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಮತ್ತೊಂದೆಡೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಮಾಯವತಿಯ BSP ಕೆಲವೇ ಕೆಲವು ಕ್ಷೇತ್ರಗಳಲ್ಲಿ ಮತ್ತು ಕೆಲವು ಸಮುದಾಯಗಳಲ್ಲಿ‌ತಮ್ಮ ಪ್ರಭಾವವನ್ನು ಹೊಂದಿವೆ. 2022 ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಬಿಜಿಪಿ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಿದೆ. ಕೋವಿಡ್ ನಿರ್ವಹಣೆಯಲ್ಲಿ ಯೋಗಿ ಆದಿತ್ನಾಥ್ ಸರ್ಕಾರದ ವೈಫಲ್ಯ ಪಕ್ಷಕ್ಕೆ ಹಿನ್ನಡೆಯನ್ನುಂಟು ಮಾಡುವ ಸಾದ್ಯತೆಯನ್ನು ಅರಿತ ಬಿಜೆಪಿ ಈಗ ಬೇರೆ ಬೇರೆ ಸಮುದಾಯಗಳ ನಾಯಕತ್ವವನ್ನು ಬಲಪಡಿಸಲು ಮುಂದಾಗಿದೆ. ಆ ಪ್ರಯತ್ನವಾಗಿ ಇಂದು ಜಿತಿನ್ ಪ್ರಸಾದ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದೆ. ಜಿತಿನ್ ಪ್ರಸಾದ್ ಸೇರ್ಪಡೆ ಬಿಜೆಪಿಗೆ ಎಷ್ಟು ನೆರವಾಗಲಿದೆ ಎಂದು ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ನಂತರವಷ್ಟೇ ತಿಳಿಯಬಹುದು.


ಇದನ್ನೂ ಓದಿ : ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...