Homeಚಳವಳಿದೆಹಲಿ ಹೋರಾಟದ ಕಣಗಳಿಗೆ ಹರಿದು ಬಂದ ರೈತ ಪ್ರತಿಭಟನಾಕಾರರ ದಂಡು

ದೆಹಲಿ ಹೋರಾಟದ ಕಣಗಳಿಗೆ ಹರಿದು ಬಂದ ರೈತ ಪ್ರತಿಭಟನಾಕಾರರ ದಂಡು

- Advertisement -
- Advertisement -

ಅಖಿಲ ಭಾರತ ಕಿಸಾನ್ ಸಭಾ, ಕ್ರಾಂತಿಕಾರಿ ಕಿಸಾನ್ ಯೂನಿಯನ್, ಜಮ್ಹೂರಿ ಕಿಸಾನ್ ಸಭಾ ಮತ್ತು ಬಿಕೆಯು ಕಡಿಯನ್‌ ಸೇರಿದಂತೆ ವಿವಿಧ ರೈತ ಸಂಘಗಳ ಹಲವಾರು ದೊಡ್ಡ ದೊಡ್ಡ ಗುಂಪುಗಳು ಬುಧವಾರ ಪಂಜಾಬಿನಿಂದ ಬಂದು ದೆಹಲಿಯ ಪ್ರತಿಭಟನಾ ನಿರತ ಗಡಿಗಳಿಗೆ ಬಂದು ಸೇರಿಕೊಂಡಿದ್ದಾರೆ.

ಮಂಗಳವಾರ ಉದಮಸಿಂಗ್ ನಗರ ಮತ್ತು ಉತ್ತರಾಖಂಡದ ಇತರ ಪ್ರದೇಶಗಳಿಂದ ಘಾಜಿಪುರ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಬಂದಿದ್ದಾರೆ. ಕಿಸಾನ್ ಸಂಘರ್ಷ ಸಮಿತಿ ಹರಿಯಾಣದ ಗುಂಪಿನ ನೂರಾರು ಸದಸ್ಯರು ನಿನ್ನೆ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಲಕ್ಷಾಂತರ ರೈತರು ಗಡಿಗಳಲ್ಲಿ ತಿಂಗಳುಗಟ್ಟಲೆ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದ “ಎಂಎಸ್‌ಪಿ ಜುಮ್ಲಾ” ಮುಂದುವರಿಯುತ್ತಿದೆ ಎಂದಿರುವ ಎಸ್‌ಕೆಎಂ ಸರ್ಕಾರದ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸರ್ಕಾರ ಸೂಚನೆ: ರೈತ ಹೋರಾಟ ಬೆಂಬಲಿಸಿದ ನಾಲ್ಕು ಟ್ವಿಟರ್‌ ಖಾತೆಗಳಿಗೆ ನಿರ್ಬಂಧ

ಇಂದು (ಜೂನ್ 9) ಪ್ರತಿಭಟನಾ ಸ್ಥಳಗಳಲ್ಲಿ ಸಿಖ್ ವಾರಿಯರ್ ಬಂಡಾ ಸಿಂಗ್ ಬಹದ್ದೂರ್ ಮತ್ತು ಬುಡಕಟ್ಟು ಮುಖಂಡ, ಹುತಾತ್ಮ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಲಾಯಿತು. ಹದಿನೆಂಟನೇ ಶತಮಾನದ ಆರಂಭದಲ್ಲಿ, ಮೊಘಲರು ದೇಶವನ್ನು ವಶಪಡಿಸಿಕೊಳ್ಳುವ ಮೊದಲು, ಜಮೀನ್ದಾರಿ ವ್ಯವಸ್ಥೆಯನ್ನು ರದ್ದುಗೊಳಿಸಲು ಮತ್ತು ಭೂಮಿಯನ್ನು ಉಳುಮೆ ಮಾಡುವವರಿಗೆ ಆಸ್ತಿ ಹಕ್ಕುಗಳನ್ನು ನೀಡುವಲ್ಲಿ ಬಂಡಾ ಸಿಂಗ್ ಬಹದ್ದೂರ್ ಹೆಸರುವಾಸಿಯಾಗಿದ್ದಾರೆ. ಇವರು 1716 ರ ಜೂನ್ 9 ರಂದು ಹುತಾತ್ಮರಾಗಿದ್ದಾರೆ ಎಂದು ಎಸ್‌ಕೆಎಂ ತಿಳಿಸಿದೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರನ್ನು ಆದಿವಾಸಿಗಳು ಮತ್ತು ಹಲವು ಮಂದಿ ಪೂಜಿಸುತ್ತಾರೆ. ಭಾರತದ ಕಾಡುಗಳು ಮತ್ತು ಭೂಮಿಯ ಮೇಲಿನ ಆದಿವಾಸಿ ಹಕ್ಕುಗಳನ್ನು ರಕ್ಷಿಸಲು ಬ್ರಿಟಿಷ್ ಆಡಳಿತಗಾರರ ವಿರುದ್ಧ ಹೋರಾಟ ನಡೆಸಿ ಅವರ ಹಕ್ಕುಗಳನ್ನು ರಕ್ಷಿಸಿದ್ದಾರೆ. ಜೊತೆಗೆ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳಿಗಾಗಿ ಗೌರವಿಸಲ್ಪಟ್ಟಿದ್ದಾರೆ. ಕೇವಲ ತಮ್ಮ 25 ವರ್ಷ ವಯಸ್ಸಿನಲ್ಲೇ ಜೂನ್ 9, 1900 ರಂದು ಬ್ರಿಟಿಷ್ ಜೈಲಿನಲ್ಲಿ ಬಿರ್ಸಾ ಮುಂಡಾ ಹುತಾತ್ಮರಾಗಿದ್ದಾರೆ.

ಪ್ರತಿಭಟನಾಕಾರರು ಈ ಇಬ್ಬರು ಹುತಾತ್ಮರ ಜೀವನ ಕಥೆಗಳು ಮತ್ತು ಹೋರಾಟಗಳಿಂದ ಸ್ಫೂರ್ತಿ ಪಡೆದು, ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಪ್ರಸ್ತುತ ಹೋರಾಟವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...