Homeಅಂಕಣಗಳುನಮ್ಮ ನ್ಯಾಯ ವ್ಯವಸ್ಥೆಯ ನ್ಯಾಯ ಮತ್ತು ಅನ್ಯಾಯ

ನಮ್ಮ ನ್ಯಾಯ ವ್ಯವಸ್ಥೆಯ ನ್ಯಾಯ ಮತ್ತು ಅನ್ಯಾಯ

- Advertisement -
- Advertisement -

 ಗೌರಿ ಲಂಕೇಶ್
14 ಜನವರಿ, 2014 (`ಕಂಡಹಾಗೆ’ ಸಂಪಾದಕೀಯದಿಂದ) |

ನಾನು ಕೋರ್ಟಿಗೆ ಹೋದಾಗಲೆಲ್ಲಾ ಅಲ್ಲಿಗೆ ಬರುವ ತರಹೇವಾರಿ ಜನರನ್ನು ಗಮನಿಸುತ್ತಾ ಕಾಲ ಕಳೆಯುತ್ತೇನೆ. ಹಲವೊಮ್ಮೆ ನನ್ನ ಕುತೂಹಲ ಕೆರಳಿಸಿದವರನ್ನು ಮಾತನಾಡಿಸುತ್ತೇನೆ. ಆಗ ವಿಚಿತ್ರ ರೀತಿಯ ಜನಗಳ, ಸಮಸ್ಯೆ ಬದುಕುಗಳ ಕಿರುನೋಟ ನನಗೆ ದೊರಕುತ್ತದೆ.
ಇತ್ತೀಚೆಗೆ ಕೋರ್ಟ್ ಹಾಲ್ ಒಂದರಲ್ಲಿ ನನ್ನ ಪಕ್ಕ ಸುಮಾರು 50 ವರ್ಷ ವಯಸ್ಸಿನ ಮಹಿಳೆಯೊಬ್ಬರು ಕೂತಿದ್ದರು. ಅವರ ಮುಖದಲ್ಲಿ ಆತಂಕ, ಜಿಗುಪ್ಸೆ ತುಂಬಿತ್ತು. ಆಕೆಯೊಂದಿಗೆ ಮಾತನಾಡಿದಾಗ ಗೊತ್ತಾಗಿದ್ದು, ಅವರ ಮನೆಯನ್ನು ಅದ್ಯಾರಿಗೋ ಬಾಡಿಗೆ ಮೇಲೆ ನೀಡಿದ್ದರಂತೆ. ಆದರೆ ಬಾಡಿಗೆದಾರ ಎಂತೆಂತಹದ್ದೋ ತಕರಾರುಗಳನ್ನು ಎತ್ತಿ ಇವರ ವಿರುದ್ದ ನ್ಯಾಯಾಲಯದ ಮೆಟ್ಟಿಲನ್ನು ಹತ್ತಿದನಂತೆ. ಅ ವ್ಯಾಜ್ಯ ಐದಾರು ವರ್ಷ ನಡೆದು ಇನ್ನೇನು ತೀರ್ಪು ಬರಬೇಕು ಎನ್ನುವಾಗ ತಾನು ಬಾಡಿಗೆ ನೀಡುವುದಾಗಿ ಈ ಮಹಿಳೆಯ ಗಂಡನನ್ನು ಕರೆದನಂತೆ, ಆತನನ್ನು ಭೇಟಿಯಾಗಲೂ ಹೋದ ಗಂಡ ಎರಡು ದಿನವಾದರೂ ಮನೆಗೆ ಹಿಂದಿರುಗಲಿಲ್ಲ. ಬದಲಾಗಿ ಆತನ ಹೆಣ ಬೆಂಗಳೂರಿನ ಕೆರೆಯೊಂದರಲ್ಲಿ ಸಿಕ್ಕಿತು. ಬಾಡಿಗೆದಾರನೇ ಕೊಲೆ ಮಾಡಿಸಿದ್ದಾನೆಂದು ಈಕೆ ಪೊಲೀಸರಿಗೆ ದೂರು ನೀಡಿದರು. ಆದರೆ ಬಾಡಿಗೆದಾರನೊಂದಿಗೆ ಶಾಮೀಲಾದ ಪೊಲೀಸರು ಕೊಲೆಗಡುಕ ಸಿಕ್ಕಿಲ್ಲವೆಂದು ವರದಿ ಸಲ್ಲಿಸಿದರು. ಆಗ ಮಹಿಳೆ ಬಾಡಿಗೆದಾರ ಮತ್ತು ಪೊಲೀಸರ ವಿರುದ್ದ ನ್ಯಾಯಾಲಯದ ಮೊರೆಹೋದರು.
ಇದೆಲ್ಲಾ ನಡೆದು ಬರೋಬ್ಬರಿ 16 ವರ್ಷಗಳಾಗಿವೆ. ಈ ಮಧ್ಯೆ ಈಕೆಯ ಮಕ್ಕಳು ಬೆಳೆದು ನಿಂತಿದ್ದಾರೆ. ಪೊಲೀಸ್ ಅಧಿಕಾರಿ ನಿವೃತ್ತಿ ಪಡೆದು ತನ್ನ ಮನೆ ಸೇರಿದ್ದಾನೆ. ಬಾಡಿಗೆದಾರ ಇನ್ನೂ ಅದೇ ಮನೆಯಲ್ಲಿ ವಾಸಿಸುತ್ತಿದ್ದಾನೆ. ಆದರೆ ಈ ಮಹಿಳೆಯ ಅರ್ಜಿ ಅಂದು ಎಲ್ಲಿತ್ತೋ ಇವತ್ತಿಗೂ ಅಲ್ಲೇ ಇದೆ. ಆಕೆಗೆ ಬಾಡಿಗೆಯೂ ಬಂದಿಲ್ಲ. ಆಸ್ತಿಯೂ ವಾಪಸ್ಸಾಗಿಲ್ಲ, ನ್ಯಾಯವಂತೂ ಸಿಕ್ಕಿಲ್ಲ, ಈ ವ್ಯಾಜ್ಯ ಮ್ಯಾಜಿಸ್ಟ್ರೇಟರ ನಂತರ ಹೈಕೋರ್ಟಿಗೆ ಹೋಗಿ ಅಂತ್ಯಗೊಳ್ಳುವುದು ಇನ್ನು ಎಷ್ಟು ವರ್ಷಕ್ಕೋ?
ಇನ್ನೊಂದು ವಿಚಿತ್ರ ಪ್ರಕರಣ. ಸುಮಾರು 45 ಪ್ರಾಯದ ಈಕೆ ರಾಜ್ಯ ಸರ್ಕಾರಿ ನೌಕರಿಯಲ್ಲಿದ್ದಾರೆ. ಈಕೆಯ ಗಂಡ ಕೇಂದ್ರ ಸರ್ಕಾರದ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದಾನೆ. ಈಕೆ ಮದುವೆಯಾದ ಕೆಲ ವರ್ಷಗಳಲ್ಲೇ ಗಂಡ ಮತ್ತೊಬ್ಬಳನ್ನು ಮದುವೆಯಾದಾಗ ಈಕೆ ಆತನನ್ನು ತೊರೆದು ತಾನಾಯಿತು ತನ್ನ ಪಾಡಾಯಿತು ಎಂದು ಏಕಾಂಗಿ ಜೀವನ ಸಾಗಿಸಲಾರಂಭಿಸಿದಳು. ಆದರೆ ಗಂಡನ ಕಾಟ ಮುಂದುವರೆಯಿತು. ಆತ ಸರ್ಕಾರಿ ನೌಕರನಾದ್ದರಿಂದ ತನ್ನ ಎರಡನೇ ಪತ್ನಿಯ ಬಗ್ಗೆ ದಾಖಲಿಸುವಂತಿಲ್ಲ. ಆದ್ದರಿಂದ ಎರಡನೇ ಪತ್ನಿಯೊಂದಿಗೆ ಮಕ್ಕಳಾದಾಗ ಆತ ಆಸ್ಪತ್ರೆಯಲ್ಲಿ ತಾಯಿಯ ಹೆಸರು ನಮೂದಿಸಬೇಕಿದ್ದ ಜಾಗದಲ್ಲಿ ತನ್ನ ಮೊದಲನೆ ಹೆಂಡತಿಯ ಹೆಸರನ್ನೇ ದಾಖಲಿಸಿದ್ದ. ಇದು ಮೊದಲನೇ ಪತ್ನಿಗೆ ಗೊತ್ತಾದಾಗ ಆಕೆ ಕೆಂಡಾಮಂಡಲವಾದಳು. ತನ್ನ ಬದುಕನ್ನು ಹಾಳು ಮಾಡಿ ಏಕಾಂಗಿಯಾಗಿ ಸದ್ದಿಲ್ಲದೇ ತನ್ನದಲ್ಲದ ಮಕ್ಕಳನ್ನು ತನ್ನ ತಲೆಗೆ ಕಟ್ಟುತ್ತಿರುವ ನಾಳೆ ತನ್ನ ಚೂರುಪಾರು ಆಸ್ತಿಗೂ ಆತನ ಎರಡನೇ ಪತ್ನಿಯ ಮಕ್ಕಳು ತಾವೇ ವಾರಸುದಾರರು ಎಂದು ವಾದಿಸಿದರೆ ಏನು ಗತಿ ಎಂದು ಚಿಂತಿಸಿ ಗಂಡನ ವಿರುದ್ದ ನ್ಯಾಯಾಲಯದ ಮೆಟ್ಟಿಲನ್ನು ಏರಿದಳು. ಆ ಮಕ್ಕಳು ತನ್ನ ಮಕ್ಕಳಲ್ಲ, ಅವರುಗಳ ತಾಯಿ ತಾನಲ್ಲ ಎಂಬ ತೀರ್ಪು ಕೋರಿದಳು.
ಆಕೆ ಇಂಥದ್ದೊಂದು ಅರ್ಜಿ ಸಲ್ಲಿಸಿ, ಈಗ ಹನ್ನೊಂದು ವರ್ಷಗಳಾಗಿವೆ. ಆದರೆ ಅರ್ಜಿ ಮಾತ್ರ ಮುಂದಕ್ಕೆ ಹೋಗದೇ ಎಲ್ಲಿದೆಯೋ ಅಲ್ಲೇ ಇದೆ. ಇದನ್ನೆಲ್ಲಾ ಹೇಳಿದಕ್ಕೆ ಕಾರಣವಿದೆ. ಇವತ್ತು 21 ಹೈಕೋರ್ಟ್‍ಗಳ ಮುಂದೆ ಮೂವತ್ತು ಲಕ್ಷಕ್ಕಿಂತಲೂ ಹೆಚ್ಚು ಕೇಸುಗಳಿವೆ. ಇನ್ನು ಇತರೆ ನ್ಯಾಯಾಲಯಗಳ ಮುಂದೆ ಸುಮಾರು ಮೂರು ಕೋಟಿ ಕೇಸುಗಳಿವೆ. ಅಷ್ಟೇ ಅಲ್ಲ ದೇಶದಾದ್ಯಂತ ಕನಿಷ್ಠ ಮೂರು ಸಾವಿರ ಜಡ್ಜ್‍ಗಳ ಕೊರತೆ ಇದೆ. ಹೀಗಿರುವಾಗ ಈ ಲಕ್ಷಾಂತರ ಕೇಸುಗಳು ಇತ್ಯರ್ಥವಾಗುವುದೆಂದು? ಜನಸಾಮಾನ್ಯರಿಗೆ ನ್ಯಾಯ ಸಿಗುವುದೆಂದು?
ನಮ್ಮ ನ್ಯಾಯ ವ್ಯವಸ್ಥೆಯ ಒಂದು ಮಗ್ಗಲು ಇದಾದರೆ ಇನ್ನೊಂದು ಮಗ್ಗಲು ನಮ್ಮ ಜೈಲಿನಲ್ಲಿರುವ ಎರಡೂವರೆ ಲಕ್ಷ ವಿಚಾರಣಾಧೀನ ಬಂಧಿಗಳು. ಅವರಲ್ಲಿ ಬಹಳಷ್ಟು ಜನ ಐದು ವರ್ಷಕ್ಕಿಂತಲೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ.
ಒಂದು ಅಂದಾಜಿನ ಪ್ರಕಾರ ಬಹಳಷ್ಟು ವಿಚಾರಣಾಧೀನ ಖೈದಿಗಳ ವಿರುದ್ದದ ಕೇಸುಗಳು ಸಾಬೀತಾಗದೆ ಕೊನೆಗೆ ಅವರು ನಿರಪರಾಧಿಗಳು ಎಂದು ಬಿಡುಗಡೆ ಹೊಂದುತ್ತಾರೆ. ಆದರೆ ಅಷ್ಟರ ಮಟ್ಟಿಗೆ ಅವರ ಬದುಕಿನ ಹಲವಾರು ವರ್ಷಗಳು ಜೈಲಿನಲ್ಲೇ ಕಳೆದು ಹೋಗಿರುತ್ತದಲ್ಲದೇ, ಅವರು ಬಿಡುಗಡೆಗೊಂಡು ಹೊರಬರುವ ಹೊತ್ತಿಗೆ ಸಮಾಜದಲ್ಲಿನ ಅವರ ಮಾನ ಮತ್ತು ಬದುಕಿನ ಅವಕಾಶಗಳು ನಾಶವಾಗಿರುತ್ತವೆ. ಹಾಗೆಯೇ ಬಹಳಷ್ಟು ಪ್ರಕರಣಗಳಲ್ಲಿ ವಿಚಾರಣಾಧೀನ ಖೈದಿಯೇ ಆತನ ಸಂಸಾರದ ಆರ್ಥಿಕ ಸ್ತಂಭವಾಗಿರುವುದರಿಂದ ಆತ ಜೈಲಿನಲ್ಲಿರುವಾಗ ಆ ಸಂಸಾರವೇ ಛಿದ್ರಗೊಂಡಿರುತ್ತದೆ. ಇದೆಲ್ಲದರ ಅರ್ಥ ಕೊನೆಗೂ ವಿಚಾರಣಾಧೀನ ಖೈದಿಗೆ ನ್ಯಾಯ ಸಿಕ್ಕರೂ ಅನ್ಯಾಯವಾಗಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...