- Advertisement -
- Advertisement -
ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲ ನೀಡಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ನೇತೃತ್ವದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿ ಭರವಸೆ ನೀಡಿದ್ದಾರೆ.
ಬುಧವಾರ ರೈತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ, ನೀತಿ ವಿಷಯಗಳ ಬಗ್ಗೆ ರಾಜ್ಯಗಳು ಸಂವಾದ ನಡೆಸುವ ವೇದಿಕೆ ಇರಬೇಕು ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ರೈತ ಮುಖಂಡರ ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ “ರೈತರ ಆಂದೋಲನಕ್ಕೆ ನನ್ನ ಬೆಂಬಲವಿದೆ” ಎಂದು ಘೋಷಿಸಿದ್ದಾರೆ. “ಭಾರತವು ಕೊರೊನಾ ವಿರುದ್ಧ ಹೋರಾಡಲು, ರೈತರಿಗೆ ಮತ್ತು ಉದ್ಯಮಗಳಿಗೆ ಸಹಾಯ ಮಾಡುವ ನೀತಿಗಳಿಗಾಗಿ ಹಸಿವಿನಿಂದ ಕಾಯುತ್ತಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್ ಟಿಕಾಯತ್