Homeಅಂಕಣಗಳುಬಹುಜನ ಭಾರತ; ಬಸ್ತರ್ - ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

ಬಹುಜನ ಭಾರತ; ಬಸ್ತರ್ – ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

- Advertisement -
- Advertisement -

ಆದಿವಾಸಿ ನೆಲೆಯ ಅಡವಿ-ಗುಡ್ಡಗಳಡಿಯ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಪ್ರಭುತ್ವಗಳು ಅವುಗಳಿಗೆ ನಡೆಮುಡಿ ಹಾಸುತ್ತಿವೆ.

ಭ್ರಮೆಯಲ್ಲಿ ಬದುಕುವ ಬಹುತೇಕ ಭಾರತವು ಬಸ್ತರ್ ಎಂಬ ಸೀಮೆಯ ಹೆಸರನ್ನು ಕೇಳಿರುವುದು ಅನುಮಾನ. ಮಧ್ಯಭಾರತದ ಕಾಡು ಕಣಿವೆ ಗುಡ್ಡಗಳಲ್ಲಿ ಹಲವು ಆದಿವಾಸಿ ನೆಲೆಗಳು ಹರಡಿ ಹಬ್ಬಿವೆ.

ಈ ಸೀಮೆಗಳ ಹೆಸರಾಂತ ತವರು ಛತ್ತೀಸಗಢದ ಬಸ್ತರ್. ಅಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ಸಿಲ್ಗೆರ್ ಎಂಬುದೊಂದು ಗ್ರಾಮ. ತಿಂಗಳೊಪ್ಪತ್ತಿನಿಂದ ಅಲ್ಲಿನ ಆದಿವಾಸಿಗಳ ಬದುಕು ಸರ್ಕಾರಿ ದಮನದ ಬೆಂಕಿಯಲ್ಲಿ ಬೇಯತೊಡಗಿದೆ.

ರಾಜ್ಯ ಸರ್ಕಾರ ರಾತ್ರೋರಾತ್ರಿ ತಮ್ಮ ನೆಲದಲ್ಲಿ ಸುರಕ್ಷಾಬಲದ ಶಿಬಿರವೊಂದನ್ನು ಎಬ್ಬಿಸಿರುವ ಬೆಳವಣಿಗೆ ಈ ಬಡಪಾಯಿಗಳ ಬದುಕುಗಳನ್ನು ಬುಡಮೇಲು ಮಾಡಿದೆ. ತಿಂಗಳೊಪ್ಪತ್ತಿನಿಂದ ಸಾವಿರಾರು ಆದಿವಾಸಿಗಳು ಸಂಘರ್ಷಕ್ಕೆ ಇಳಿದಿದ್ದಾರೆ. ಪ್ರತಿಭಟನೆಯಲ್ಲಿ ಹೆಣ್ಣುಮಕ್ಕಳು, ಗಂಡಸರು, ವೃದ್ಧರು, ಬಾಲರೆಲ್ಲ ಸೇರಿದ್ದಾರೆ.

ಕಳೆದ ಮೇ 17ರಂದು ಆಂದೋಲನನಿರತ ಆದಿವಾಸಿಗಳ ಮೇಲೆ ಸುರಕ್ಷಾಬಲ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಅಸುನೀಗಿದ್ದು 18 ಮಂದಿ ಗಾಯಗೊಂಡಿದ್ದಾರೆ. ಗೋಲಿಬಾರಿನಿಂದ ಉಂಟಾದ ನೂಕುನುಗ್ಗಲಿಗೆ ಸಿಕ್ಕಿ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ಗರ್ಭಿಣಿ ಪುನೆಮ್ ಸುಕ್ಲಿ ಮೇ 23ರಂದು ಅಸುನೀಗಿದಳು. ಈ ನಾಲ್ವರು ಹುತಾತ್ಮರಿಗೆ ಸಿಲ್ಗೇರ್ ಶಿಬಿರದ ಎದುರಿನಲ್ಲಿ ಸ್ಮಾರಕಗಳನ್ನು ನಿರ್ಮಿಸಿದ್ದಾರೆ ಆದಿವಾಸಿಗಳು.

ಮೇ 17ರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಆದಿವಾಸಿಗಳು ಮುಖಾಮುಖಿಯಾಗಿದ್ದಾರೆ. ಒಂದೆಡೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದ ಮೀಸಲು ಪೊಲೀಸರು. ಮತ್ತೊಂದೆಡೆ ಧರಣಿ ಪ್ರದರ್ಶನ ನಡೆಸಿರುವ ಸಾವಿರಾರು ಆದಿವಾಸಿಗಳು.

ಸರ್ಕಾರ ಆದಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮೇ 12ರಂದು ರಾತ್ರೋರಾತ್ರಿ ಈ ಶಿಬಿರವನ್ನು ಎಬ್ಬಿಸಿ ನಿಲ್ಲಿಸಿದೆ. ಮರುದಿನ ಮಧ್ಯಾಹ್ನದ ವೇಳೆಗೆ ಈ ಸುದ್ದಿ ಸಿಲ್ಗೇರ್ ಸುತ್ತಮುತ್ತ ಹರಡಿದೆ. ಗ್ರಾಮೀಣರ ಸಮೂಹವೊಂದು ಅಧಿಕಾರಿಗಳೊಂದಿಗೆ ಮಾತುಕತೆಗೆ ಬಂದಿದ್ದಾರೆ. ಕೆಲ ಹೊತ್ತು ಚರ್ಚೆಯ ನಂತರ ಅವರನ್ನು ಗದರಿಸಿ ಓಡಿಸಲಾಗಿದೆ. ಸ್ವಾಭಾವಿಕವಾಗಿ ಆದಿವಾಸಿಗಳು ಸಿಟ್ಟಿಗೆದ್ದಿದ್ದಾರೆ. ಹಿಂದೆ ಸರಿಯಲು ಸಿದ್ಧರಿಲ್ಲ. ಸುತ್ತಮುತ್ತಲ ಹಲವಾರು ಪಂಚಾಯತಿಗಳ ಸಾವಿರಾರು ಮಂದಿ ಘಟನಾ ಸ್ಥಳದ ಬಳಿ ಸೇರಿದ್ದಾರೆ. ಈ ಜಮಾವಣೆಯ ಮುಂಚೂಣಿಯಲ್ಲಿ ನಿಂತಿರುವಾತ ಒಬ್ಬ ವೃದ್ಧ. ಆತನ ಹೆಸರು ಲಖಮಾ.

ಪೊಲೀಸ್ ಶಿಬಿರವನ್ನು ಹಿಂತೆಗೆದುಕೊಳ್ಳುವ ತನಕ ಪ್ರತಿಭಟನೆ ಕರಗುವುದಿಲ್ಲ ಎಂಬುದಾಗಿ ಆತ ಘೋಷಿಸಿದ್ದಾನೆ. ಸುರಕ್ಷಾ ಪಡೆಗಳ ಶಿಬಿರಗಳನ್ನು ಆದಿವಾಸಿಗಳು ವಿರೋಧಿಸಬೇಕಾದರೂ ಯಾಕೆ?

ಲಖಮಾ ನೀಡುವ ಉತ್ತರ ಹೀಗಿದೆ:

ಶಿಬಿರವೊಂದು ಎದ್ದಿತೆಂದರೆ ಪೊಲೀಸರು ಸುತ್ತಮುತ್ತಲ ಅಡವಿಯಲ್ಲಿ ಅಡ್ಡಾಡುವ ಆದಿವಾಸಿಗಳನ್ನು ಹಿಡಿದು ಬಡಿದು ಹಿಂಸಿಸುತ್ತಾರೆ. ಹಿಡಿದೊಯ್ದು ಜೈಲಿಗೆ ನೂಕುತ್ತಾರೆ. ಅಡವಿಯೇ ಆದಿವಾಸಿಗಳ ಅನ್ನ-ಉಸಿರು. ಉರುವಲು, ತೆಂದು ಎಲೆ (ಬೀಡಿ ಕಟ್ಟಲು ಬಳಸುವ ಎಲೆ) ತರಲು ಅಡವಿಗೆ ಹೋಗುತ್ತೇವೆ. ಕೆಲವೊಮ್ಮೆ ಶಿಕಾರಿಗಾಗಿ ಕೈಯಲ್ಲಿ ಬಿಲ್ಲು ಬಾಣ ಹಿಡಿದಿರುತ್ತೇವೆ. ಈ ಕಾರಣಕ್ಕಾಗಿಯೂ ನಮ್ಮನ್ನು ಗುಂಡುಹಾರಿಸಿ ಕೊಲ್ಲಲಾಗುತ್ತದೆ. ಈಗಷ್ಟೇ ಈ ಶಿಬಿರವನ್ನು ಎಬ್ಬಿಸಲಾಗಿದೆ. ವಿರೋಧ ಮಾಡಿದ ಕಾರಣಕ್ಕಾಗಿ ನಮ್ಮನ್ನು ಲಾಠಿಗಳಿಂದ ಬಡಿಯಲಾಗುತ್ತಿದೆ. 17ರಂದು ನಮ್ಮ ಮೇಲೆ ಗಂಡು ಹಾರಿಸಲಾಯಿತು. ನಮ್ಮ ಮೂವರು ಬಂಧುಗಳು ಬಲಿಯಾಗಿದ್ದಾರೆ. ನಮ್ಮ ನಡುವೆ ಮಾವೋವಾದಿಗಳಿದ್ದಾರೆ ಎನ್ನುತ್ತಾರೆ ಪೊಲೀಸರು. ಹಸಿ ಹಸಿ ಸುಳ್ಳು ಮಾತಿದು. ಈ ಆಂದೋಲನದಲ್ಲಿ ಗ್ರಾಮೀಣ ಆದಿವಾಸಿಗಳ ವಿನಾ ಬೇರೆ ಯಾರೊಬ್ಬರೂ ಇಲ್ಲ.

ಆಂದೋಲನಿರತ ಯುವತಿ ಸರಸಿತಾ ಹೇಳುವ ಪ್ರಕಾರ ಗುಂಡು ತಗುಲಿ ಸತ್ತ ಯುವಕರ ಪೈಕಿ ಒಬ್ಬಾತ ತನ್ನ ಗ್ರಾಮ ತಿಮಾಪುರಮ್‌ಗೆ ಸೇರಿದವನು. ಶಿಬಿರಗಳ ಯೋಧರು ಆದಿವಾಸಿ ಹೆಣ್ಣುಮಕ್ಕಳೊಂದಿಗೆ ಅಶ್ಲೀಲವಾಗಿ ವ್ಯವಹರಿಸುತ್ತಾರೆ. ಇಲ್ಲಿ ಶಿಬಿರ ಎದ್ದಿತೆಂದರೆ ಪುನಃ ಅದೇ ಗೋಳು. ಹೀಗಾಗಿ ನಾವು ವಿರೋಧಿಸುತ್ತಿದ್ದೇವೆ ಎನ್ನುವ. ಆದಿವಾಸಿಗಳ ಹಕ್ಕುಗಳ ಹೋರಾಟಗಾರ್ತಿ ಸೋನಿ ಸೋರಿ ಬಸ್ತರ್ ಪೊಲೀಸರ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರದೇ ತಪ್ಪು. ಈ ಕಾರಣದಿಂದಾಗಿಯೇ ಘಟನಾ ಸ್ಥಳವನ್ನು ತಾವು ಸೇರಿದಂತೆ ಯಾವುದೇ ಹೋರಾಟಗಾರರು ತಲುಪದಂತೆ ನಿರ್ಬಂಧ ಹೇರಲಾಗಿದೆ ಎಂದು ಆರೋಪಿಸಿದ್ದಾರೆ.

ಪಾಲಾಗುಡಾದಿಂದ ಬಂದಿರುವ ಯುವಕ ಐತೂನ ಪ್ರಕಾರ- ನಮಗೆ ರಸ್ತೆ ಬೇಕು, ಆದರೆ ಶಿಬಿರ ಬೇಡ. ನಮ್ಮ ಹಳ್ಳಿಗಳಲ್ಲಿ ವಿಕಾಸ ಬೇಕು, ಆದರೆ ಸರ್ಕಾರ ಹೇರುವ ಮಾದರಿಯ ವಿಕಾಸ ಅಲ್ಲ. ಅಂಗನವಾಡಿ, ಶಾಲೆ, ಆಸ್ಪತ್ರೆ, ನ್ಯಾಯಬೆಲೆ ದಿನಸಿ ಅಂಗಡಿ, ರಸ್ತೆ ಬೇಕು. ಇಷ್ಟು ಭಾರೀ ಅಗಲದ ರಸ್ತೆ ಬೇಕಿಲ್ಲ. ರಸ್ತೆ ಕೆಲಸವನ್ನು ಆದಿವಾಸಿಗಳಿಗೇ ಕೊಡಲಿ. ನಮ್ಮ ಜರೂರತ್ತಿಗೆ ತಕ್ಕಂತೆ ರಸ್ತೆಗಳನ್ನು ನಾವೇ ನಿರ್ಮಿಸಿಕೊಳ್ಳುತ್ತೇವೆ. ರಸ್ತೆಯೂ ಆಗುತ್ತದೆ, ನಮ್ಮ ಯುವಕರಿಗೆ ಉದ್ಯೋಗವೂ ಸಿಗುತ್ತದೆ.

ಬಸ್ತರ್ ಸೀಮೆಯ ನಾನಾ ಭಾಗಗಳಲ್ಲಿ ಪೊಲೀಸ್ ಶಿಬಿರಗಳನ್ನು ಎಬ್ಬಿಸುವ ಕುರಿತು ಆದಿವಾಸಿಗಳ ವಿರೋಧ ಹೊಸದೇನಲ್ಲ. ಪೊಲೀಸರು ಈ ವಿರೋಧಗಳಿಗೆ ನಕ್ಸಲೀಯ ಪ್ರಾಯೋಜಿತ ಎಂಬ ಹಣೆಪಟ್ಟಿ ಹಚ್ಚಿದ್ದಾರೆ. ಸಿಲ್ಗೇರ್‌ನ ಈ ಆಂದೋಲನವನ್ನೂ ಮಾವೋವಾದಿಗಳ ಪ್ರಚಾರ ಎಂಬುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಕರೆದಿದ್ದಾರೆ.

ಸಿಲ್ಗೇರ್ ಬಳಿ ಪೊಲೀಸ್ ಶಿಬಿರ ನೆಲೆಯೂರಿತೆಂದರೆ ತಮ್ಮ ಮೇಲೆ ಅತ್ಯಾಚಾರ ನಿಶ್ಚಿತ ಎಂಬುದು ಆದಿವಾಸಿಗಳ ಅಳಲು. ಅವರು ಈ ಹಿಂದೆ ಅನುಭವಿಸಿರುವ ಕಷ್ಟನಷ್ಟ ಹಿಂಸೆಗಳೇ ಈ ಅಳಲಿಗೆ ಆಧಾರ.

ಮೇ 17ರಂದು ಪೊಲೀಸರ ಗೋಲಿಬಾರಿನಲ್ಲಿ ಅಸುನೀಗಿದ ಮೂವರು ಆದಿವಾಸಿ ಯುವಕರು ಮಾವೋವಾದಿಗಳು ಎಂಬುದು ಪೊಲೀಸರ ಹೇಳಿಕೆ. ಆದರೆ ಆದಿವಾಸಿಗಳು ಮತ್ತು ಮಾನವ ಹಕ್ಕು ಹೋರಾಟಗಾರರ ಪ್ರಕಾರ ಈ ಮೂವರು ಯುವಕರಿಗೂ ಮಾವೋವಾದಿಗಳಿಗೂ ದೂರ ದೂರದ ಸಂಬಂಧವೂ ಇರಲಿಲ್ಲ. ಪೊಲೀಸರಿಂದ ಬಂದೂಕು ಮತ್ತು ವೈರ್‌ಲೆಸ್ ಉಪಕರಣ ಕಿತ್ತುಕೊಳ್ಳುವ ಪ್ರಯತ್ನದ ಆರೋಪದ ಮೇರೆಗೆ ಎಂಟು ಮಂದಿ ಆದಿವಾಸಿಗಳನ್ನು ಬಂಧಿಸಲಾಗಿದೆ.

ನಿರಾಯುಧ ಆಂದೋಲನನಿರತರ ಮೇಲೆ ಗುಂಡು ಹಾರಿಸುವ ಅಗತ್ಯವಾದರೂ ಏನಿತ್ತು? ಆಂದೋಲನ ನಿರತ ಆದಿವಾಸಿಗಳ ನಡುವೆ ಅಡಗಿಕೊಂಡು ಮಾವೋವಾದಿಗಳು ಪೊಲೀಸರತ್ತ ಗುಂಡು ಹಾರಿಸಿದ್ದಾರೆ ಎಂದೂ ಪೊಲೀಸರು ಆರೋಪಿಸಿದ್ದಾರೆ. ಆದರೆ ಈ ಸಂಬಂಧದ ವಿಡಿಯೋ ಹೊರಬಿದ್ದಿದ್ದು, ಪೊಲೀಸರ ಆರೋಪ ನಿರಾಧಾರವೆಂದು ನಿಚ್ಚಳವಾಗಿದೆ. ಒಂದು ವೇಳೆ ಆದಿವಾಸಿಗಳು ಮಾವೋವಾದಿಗಳ ಒತ್ತಡಕ್ಕೆ ಒಳಗಾಗಿ ಆಂದೋಲನ ನಡೆಸುತ್ತಿದ್ದಾರೆಂದು ವಾದಕ್ಕಾಗಿ ಒಪ್ಪಿಕೊಂಡರೂ, ನಿರಾಯುಧ ಆದಿವಾಸಿಗಳನ್ನು ಪೊಲೀಸರು ರಕ್ಷಿಸಬೇಕೇ ವಿನಾ ಗುಂಡು ಹೊಡೆದು ಕೊಲ್ಲುವುದು ಯಾವ ನ್ಯಾಯ ಎಂಬ ಪ್ರಶ್ನೆಗಳೆದ್ದಿವೆ.

ಪ್ರತಿಪಕ್ಷದಲ್ಲಿದ್ದಾಗ ಆದಿವಾಸಿಗಳ ಹಿತದ ಪರವಾಗಿ ಮಾತನಾಡುತ್ತಿದ್ದ ಕಾಂಗ್ರೆಸ್ ಪಕ್ಷ ಈಗ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷದ ಎರಡೆಳೆ ನಾಲಗೆಯ ಕುರಿತು ಆದಿವಾಸಿಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಅವರು ಆಂದೋಲನದಿಂದ ಹಿಂದೆ ಸರಿಯುವ ಸೂಚನೆಗಳಿಲ್ಲ.

ಆದಿವಾಸಿಗಳ ಮೇಲೆ ನಡೆಯುವ ದಾಳಿಗಳ ಹಿಂದೆ ಅವರು ವಾಸಿಸುವ ಅಡವಿಗಳಲ್ಲಿ ಗುಡ್ಡಗಳಲ್ಲಿ ಅಡಗಿರುವ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಅವುಗಳಿಗೆ ನಡೆಮುಡಿ ಹಾಸುವ ಪ್ರಭುತ್ವಗಳಿವೆ.

ತಮ್ಮ ನೆಲದಲ್ಲೇ ತಬ್ಬಲಿಗಳಾಗಿ ಬದುಕಿಯೂ ಸತ್ತಂತಾಗಿರುವ, ಸತ್ತು ಬದುಕುತ್ತಿರುವ ಆದಿವಾಸಿಗಳಿಗಾಗಿ ತಾಯಿ ಭಾರತಿಯ ಕಣ್ಣೀರು ಇಂಗಿ ಹೋಗಿದೆ. ಆದಿವಾಸಿಗಳ ಪಾಲಿಗೆ ಆಕೆ ಕಿವುಡಿಯೂ ಕುರುಡಿಯೂ ಮೂಕಿಯೂ ಆಗಿ ಹೋಗಿರುವುದು ಬಹುದೊಡ್ಡ ದುರಂತ.


ಇದನ್ನೂ ಓದಿ: ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...