Homeಅಂಕಣಗಳುಬಹುಜನ ಭಾರತ; ಬಸ್ತರ್ - ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

ಬಹುಜನ ಭಾರತ; ಬಸ್ತರ್ – ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

- Advertisement -
- Advertisement -

ಆದಿವಾಸಿ ನೆಲೆಯ ಅಡವಿ-ಗುಡ್ಡಗಳಡಿಯ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಪ್ರಭುತ್ವಗಳು ಅವುಗಳಿಗೆ ನಡೆಮುಡಿ ಹಾಸುತ್ತಿವೆ.

ಭ್ರಮೆಯಲ್ಲಿ ಬದುಕುವ ಬಹುತೇಕ ಭಾರತವು ಬಸ್ತರ್ ಎಂಬ ಸೀಮೆಯ ಹೆಸರನ್ನು ಕೇಳಿರುವುದು ಅನುಮಾನ. ಮಧ್ಯಭಾರತದ ಕಾಡು ಕಣಿವೆ ಗುಡ್ಡಗಳಲ್ಲಿ ಹಲವು ಆದಿವಾಸಿ ನೆಲೆಗಳು ಹರಡಿ ಹಬ್ಬಿವೆ.

ಈ ಸೀಮೆಗಳ ಹೆಸರಾಂತ ತವರು ಛತ್ತೀಸಗಢದ ಬಸ್ತರ್. ಅಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ಸಿಲ್ಗೆರ್ ಎಂಬುದೊಂದು ಗ್ರಾಮ. ತಿಂಗಳೊಪ್ಪತ್ತಿನಿಂದ ಅಲ್ಲಿನ ಆದಿವಾಸಿಗಳ ಬದುಕು ಸರ್ಕಾರಿ ದಮನದ ಬೆಂಕಿಯಲ್ಲಿ ಬೇಯತೊಡಗಿದೆ.

ರಾಜ್ಯ ಸರ್ಕಾರ ರಾತ್ರೋರಾತ್ರಿ ತಮ್ಮ ನೆಲದಲ್ಲಿ ಸುರಕ್ಷಾಬಲದ ಶಿಬಿರವೊಂದನ್ನು ಎಬ್ಬಿಸಿರುವ ಬೆಳವಣಿಗೆ ಈ ಬಡಪಾಯಿಗಳ ಬದುಕುಗಳನ್ನು ಬುಡಮೇಲು ಮಾಡಿದೆ. ತಿಂಗಳೊಪ್ಪತ್ತಿನಿಂದ ಸಾವಿರಾರು ಆದಿವಾಸಿಗಳು ಸಂಘರ್ಷಕ್ಕೆ ಇಳಿದಿದ್ದಾರೆ. ಪ್ರತಿಭಟನೆಯಲ್ಲಿ ಹೆಣ್ಣುಮಕ್ಕಳು, ಗಂಡಸರು, ವೃದ್ಧರು, ಬಾಲರೆಲ್ಲ ಸೇರಿದ್ದಾರೆ.

ಕಳೆದ ಮೇ 17ರಂದು ಆಂದೋಲನನಿರತ ಆದಿವಾಸಿಗಳ ಮೇಲೆ ಸುರಕ್ಷಾಬಲ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಅಸುನೀಗಿದ್ದು 18 ಮಂದಿ ಗಾಯಗೊಂಡಿದ್ದಾರೆ. ಗೋಲಿಬಾರಿನಿಂದ ಉಂಟಾದ ನೂಕುನುಗ್ಗಲಿಗೆ ಸಿಕ್ಕಿ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ಗರ್ಭಿಣಿ ಪುನೆಮ್ ಸುಕ್ಲಿ ಮೇ 23ರಂದು ಅಸುನೀಗಿದಳು. ಈ ನಾಲ್ವರು ಹುತಾತ್ಮರಿಗೆ ಸಿಲ್ಗೇರ್ ಶಿಬಿರದ ಎದುರಿನಲ್ಲಿ ಸ್ಮಾರಕಗಳನ್ನು ನಿರ್ಮಿಸಿದ್ದಾರೆ ಆದಿವಾಸಿಗಳು.

ಮೇ 17ರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಆದಿವಾಸಿಗಳು ಮುಖಾಮುಖಿಯಾಗಿದ್ದಾರೆ. ಒಂದೆಡೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದ ಮೀಸಲು ಪೊಲೀಸರು. ಮತ್ತೊಂದೆಡೆ ಧರಣಿ ಪ್ರದರ್ಶನ ನಡೆಸಿರುವ ಸಾವಿರಾರು ಆದಿವಾಸಿಗಳು.

ಸರ್ಕಾರ ಆದಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮೇ 12ರಂದು ರಾತ್ರೋರಾತ್ರಿ ಈ ಶಿಬಿರವನ್ನು ಎಬ್ಬಿಸಿ ನಿಲ್ಲಿಸಿದೆ. ಮರುದಿನ ಮಧ್ಯಾಹ್ನದ ವೇಳೆಗೆ ಈ ಸುದ್ದಿ ಸಿಲ್ಗೇರ್ ಸುತ್ತಮುತ್ತ ಹರಡಿದೆ. ಗ್ರಾಮೀಣರ ಸಮೂಹವೊಂದು ಅಧಿಕಾರಿಗಳೊಂದಿಗೆ ಮಾತುಕತೆಗೆ ಬಂದಿದ್ದಾರೆ. ಕೆಲ ಹೊತ್ತು ಚರ್ಚೆಯ ನಂತರ ಅವರನ್ನು ಗದರಿಸಿ ಓಡಿಸಲಾಗಿದೆ. ಸ್ವಾಭಾವಿಕವಾಗಿ ಆದಿವಾಸಿಗಳು ಸಿಟ್ಟಿಗೆದ್ದಿದ್ದಾರೆ. ಹಿಂದೆ ಸರಿಯಲು ಸಿದ್ಧರಿಲ್ಲ. ಸುತ್ತಮುತ್ತಲ ಹಲವಾರು ಪಂಚಾಯತಿಗಳ ಸಾವಿರಾರು ಮಂದಿ ಘಟನಾ ಸ್ಥಳದ ಬಳಿ ಸೇರಿದ್ದಾರೆ. ಈ ಜಮಾವಣೆಯ ಮುಂಚೂಣಿಯಲ್ಲಿ ನಿಂತಿರುವಾತ ಒಬ್ಬ ವೃದ್ಧ. ಆತನ ಹೆಸರು ಲಖಮಾ.

ಪೊಲೀಸ್ ಶಿಬಿರವನ್ನು ಹಿಂತೆಗೆದುಕೊಳ್ಳುವ ತನಕ ಪ್ರತಿಭಟನೆ ಕರಗುವುದಿಲ್ಲ ಎಂಬುದಾಗಿ ಆತ ಘೋಷಿಸಿದ್ದಾನೆ. ಸುರಕ್ಷಾ ಪಡೆಗಳ ಶಿಬಿರಗಳನ್ನು ಆದಿವಾಸಿಗಳು ವಿರೋಧಿಸಬೇಕಾದರೂ ಯಾಕೆ?

ಲಖಮಾ ನೀಡುವ ಉತ್ತರ ಹೀಗಿದೆ:

ಶಿಬಿರವೊಂದು ಎದ್ದಿತೆಂದರೆ ಪೊಲೀಸರು ಸುತ್ತಮುತ್ತಲ ಅಡವಿಯಲ್ಲಿ ಅಡ್ಡಾಡುವ ಆದಿವಾಸಿಗಳನ್ನು ಹಿಡಿದು ಬಡಿದು ಹಿಂಸಿಸುತ್ತಾರೆ. ಹಿಡಿದೊಯ್ದು ಜೈಲಿಗೆ ನೂಕುತ್ತಾರೆ. ಅಡವಿಯೇ ಆದಿವಾಸಿಗಳ ಅನ್ನ-ಉಸಿರು. ಉರುವಲು, ತೆಂದು ಎಲೆ (ಬೀಡಿ ಕಟ್ಟಲು ಬಳಸುವ ಎಲೆ) ತರಲು ಅಡವಿಗೆ ಹೋಗುತ್ತೇವೆ. ಕೆಲವೊಮ್ಮೆ ಶಿಕಾರಿಗಾಗಿ ಕೈಯಲ್ಲಿ ಬಿಲ್ಲು ಬಾಣ ಹಿಡಿದಿರುತ್ತೇವೆ. ಈ ಕಾರಣಕ್ಕಾಗಿಯೂ ನಮ್ಮನ್ನು ಗುಂಡುಹಾರಿಸಿ ಕೊಲ್ಲಲಾಗುತ್ತದೆ. ಈಗಷ್ಟೇ ಈ ಶಿಬಿರವನ್ನು ಎಬ್ಬಿಸಲಾಗಿದೆ. ವಿರೋಧ ಮಾಡಿದ ಕಾರಣಕ್ಕಾಗಿ ನಮ್ಮನ್ನು ಲಾಠಿಗಳಿಂದ ಬಡಿಯಲಾಗುತ್ತಿದೆ. 17ರಂದು ನಮ್ಮ ಮೇಲೆ ಗಂಡು ಹಾರಿಸಲಾಯಿತು. ನಮ್ಮ ಮೂವರು ಬಂಧುಗಳು ಬಲಿಯಾಗಿದ್ದಾರೆ. ನಮ್ಮ ನಡುವೆ ಮಾವೋವಾದಿಗಳಿದ್ದಾರೆ ಎನ್ನುತ್ತಾರೆ ಪೊಲೀಸರು. ಹಸಿ ಹಸಿ ಸುಳ್ಳು ಮಾತಿದು. ಈ ಆಂದೋಲನದಲ್ಲಿ ಗ್ರಾಮೀಣ ಆದಿವಾಸಿಗಳ ವಿನಾ ಬೇರೆ ಯಾರೊಬ್ಬರೂ ಇಲ್ಲ.

ಆಂದೋಲನಿರತ ಯುವತಿ ಸರಸಿತಾ ಹೇಳುವ ಪ್ರಕಾರ ಗುಂಡು ತಗುಲಿ ಸತ್ತ ಯುವಕರ ಪೈಕಿ ಒಬ್ಬಾತ ತನ್ನ ಗ್ರಾಮ ತಿಮಾಪುರಮ್‌ಗೆ ಸೇರಿದವನು. ಶಿಬಿರಗಳ ಯೋಧರು ಆದಿವಾಸಿ ಹೆಣ್ಣುಮಕ್ಕಳೊಂದಿಗೆ ಅಶ್ಲೀಲವಾಗಿ ವ್ಯವಹರಿಸುತ್ತಾರೆ. ಇಲ್ಲಿ ಶಿಬಿರ ಎದ್ದಿತೆಂದರೆ ಪುನಃ ಅದೇ ಗೋಳು. ಹೀಗಾಗಿ ನಾವು ವಿರೋಧಿಸುತ್ತಿದ್ದೇವೆ ಎನ್ನುವ. ಆದಿವಾಸಿಗಳ ಹಕ್ಕುಗಳ ಹೋರಾಟಗಾರ್ತಿ ಸೋನಿ ಸೋರಿ ಬಸ್ತರ್ ಪೊಲೀಸರ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರದೇ ತಪ್ಪು. ಈ ಕಾರಣದಿಂದಾಗಿಯೇ ಘಟನಾ ಸ್ಥಳವನ್ನು ತಾವು ಸೇರಿದಂತೆ ಯಾವುದೇ ಹೋರಾಟಗಾರರು ತಲುಪದಂತೆ ನಿರ್ಬಂಧ ಹೇರಲಾಗಿದೆ ಎಂದು ಆರೋಪಿಸಿದ್ದಾರೆ.

ಪಾಲಾಗುಡಾದಿಂದ ಬಂದಿರುವ ಯುವಕ ಐತೂನ ಪ್ರಕಾರ- ನಮಗೆ ರಸ್ತೆ ಬೇಕು, ಆದರೆ ಶಿಬಿರ ಬೇಡ. ನಮ್ಮ ಹಳ್ಳಿಗಳಲ್ಲಿ ವಿಕಾಸ ಬೇಕು, ಆದರೆ ಸರ್ಕಾರ ಹೇರುವ ಮಾದರಿಯ ವಿಕಾಸ ಅಲ್ಲ. ಅಂಗನವಾಡಿ, ಶಾಲೆ, ಆಸ್ಪತ್ರೆ, ನ್ಯಾಯಬೆಲೆ ದಿನಸಿ ಅಂಗಡಿ, ರಸ್ತೆ ಬೇಕು. ಇಷ್ಟು ಭಾರೀ ಅಗಲದ ರಸ್ತೆ ಬೇಕಿಲ್ಲ. ರಸ್ತೆ ಕೆಲಸವನ್ನು ಆದಿವಾಸಿಗಳಿಗೇ ಕೊಡಲಿ. ನಮ್ಮ ಜರೂರತ್ತಿಗೆ ತಕ್ಕಂತೆ ರಸ್ತೆಗಳನ್ನು ನಾವೇ ನಿರ್ಮಿಸಿಕೊಳ್ಳುತ್ತೇವೆ. ರಸ್ತೆಯೂ ಆಗುತ್ತದೆ, ನಮ್ಮ ಯುವಕರಿಗೆ ಉದ್ಯೋಗವೂ ಸಿಗುತ್ತದೆ.

ಬಸ್ತರ್ ಸೀಮೆಯ ನಾನಾ ಭಾಗಗಳಲ್ಲಿ ಪೊಲೀಸ್ ಶಿಬಿರಗಳನ್ನು ಎಬ್ಬಿಸುವ ಕುರಿತು ಆದಿವಾಸಿಗಳ ವಿರೋಧ ಹೊಸದೇನಲ್ಲ. ಪೊಲೀಸರು ಈ ವಿರೋಧಗಳಿಗೆ ನಕ್ಸಲೀಯ ಪ್ರಾಯೋಜಿತ ಎಂಬ ಹಣೆಪಟ್ಟಿ ಹಚ್ಚಿದ್ದಾರೆ. ಸಿಲ್ಗೇರ್‌ನ ಈ ಆಂದೋಲನವನ್ನೂ ಮಾವೋವಾದಿಗಳ ಪ್ರಚಾರ ಎಂಬುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಕರೆದಿದ್ದಾರೆ.

ಸಿಲ್ಗೇರ್ ಬಳಿ ಪೊಲೀಸ್ ಶಿಬಿರ ನೆಲೆಯೂರಿತೆಂದರೆ ತಮ್ಮ ಮೇಲೆ ಅತ್ಯಾಚಾರ ನಿಶ್ಚಿತ ಎಂಬುದು ಆದಿವಾಸಿಗಳ ಅಳಲು. ಅವರು ಈ ಹಿಂದೆ ಅನುಭವಿಸಿರುವ ಕಷ್ಟನಷ್ಟ ಹಿಂಸೆಗಳೇ ಈ ಅಳಲಿಗೆ ಆಧಾರ.

ಮೇ 17ರಂದು ಪೊಲೀಸರ ಗೋಲಿಬಾರಿನಲ್ಲಿ ಅಸುನೀಗಿದ ಮೂವರು ಆದಿವಾಸಿ ಯುವಕರು ಮಾವೋವಾದಿಗಳು ಎಂಬುದು ಪೊಲೀಸರ ಹೇಳಿಕೆ. ಆದರೆ ಆದಿವಾಸಿಗಳು ಮತ್ತು ಮಾನವ ಹಕ್ಕು ಹೋರಾಟಗಾರರ ಪ್ರಕಾರ ಈ ಮೂವರು ಯುವಕರಿಗೂ ಮಾವೋವಾದಿಗಳಿಗೂ ದೂರ ದೂರದ ಸಂಬಂಧವೂ ಇರಲಿಲ್ಲ. ಪೊಲೀಸರಿಂದ ಬಂದೂಕು ಮತ್ತು ವೈರ್‌ಲೆಸ್ ಉಪಕರಣ ಕಿತ್ತುಕೊಳ್ಳುವ ಪ್ರಯತ್ನದ ಆರೋಪದ ಮೇರೆಗೆ ಎಂಟು ಮಂದಿ ಆದಿವಾಸಿಗಳನ್ನು ಬಂಧಿಸಲಾಗಿದೆ.

ನಿರಾಯುಧ ಆಂದೋಲನನಿರತರ ಮೇಲೆ ಗುಂಡು ಹಾರಿಸುವ ಅಗತ್ಯವಾದರೂ ಏನಿತ್ತು? ಆಂದೋಲನ ನಿರತ ಆದಿವಾಸಿಗಳ ನಡುವೆ ಅಡಗಿಕೊಂಡು ಮಾವೋವಾದಿಗಳು ಪೊಲೀಸರತ್ತ ಗುಂಡು ಹಾರಿಸಿದ್ದಾರೆ ಎಂದೂ ಪೊಲೀಸರು ಆರೋಪಿಸಿದ್ದಾರೆ. ಆದರೆ ಈ ಸಂಬಂಧದ ವಿಡಿಯೋ ಹೊರಬಿದ್ದಿದ್ದು, ಪೊಲೀಸರ ಆರೋಪ ನಿರಾಧಾರವೆಂದು ನಿಚ್ಚಳವಾಗಿದೆ. ಒಂದು ವೇಳೆ ಆದಿವಾಸಿಗಳು ಮಾವೋವಾದಿಗಳ ಒತ್ತಡಕ್ಕೆ ಒಳಗಾಗಿ ಆಂದೋಲನ ನಡೆಸುತ್ತಿದ್ದಾರೆಂದು ವಾದಕ್ಕಾಗಿ ಒಪ್ಪಿಕೊಂಡರೂ, ನಿರಾಯುಧ ಆದಿವಾಸಿಗಳನ್ನು ಪೊಲೀಸರು ರಕ್ಷಿಸಬೇಕೇ ವಿನಾ ಗುಂಡು ಹೊಡೆದು ಕೊಲ್ಲುವುದು ಯಾವ ನ್ಯಾಯ ಎಂಬ ಪ್ರಶ್ನೆಗಳೆದ್ದಿವೆ.

ಪ್ರತಿಪಕ್ಷದಲ್ಲಿದ್ದಾಗ ಆದಿವಾಸಿಗಳ ಹಿತದ ಪರವಾಗಿ ಮಾತನಾಡುತ್ತಿದ್ದ ಕಾಂಗ್ರೆಸ್ ಪಕ್ಷ ಈಗ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷದ ಎರಡೆಳೆ ನಾಲಗೆಯ ಕುರಿತು ಆದಿವಾಸಿಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಅವರು ಆಂದೋಲನದಿಂದ ಹಿಂದೆ ಸರಿಯುವ ಸೂಚನೆಗಳಿಲ್ಲ.

ಆದಿವಾಸಿಗಳ ಮೇಲೆ ನಡೆಯುವ ದಾಳಿಗಳ ಹಿಂದೆ ಅವರು ವಾಸಿಸುವ ಅಡವಿಗಳಲ್ಲಿ ಗುಡ್ಡಗಳಲ್ಲಿ ಅಡಗಿರುವ ಖನಿಜ ಸಂಪತ್ತಿಗಾಗಿ ಜೊಲ್ಲು ಸುರಿಸುವ ಕಾರ್ಪೊರೇಟುಗಳಿವೆ. ಅವುಗಳಿಗೆ ನಡೆಮುಡಿ ಹಾಸುವ ಪ್ರಭುತ್ವಗಳಿವೆ.

ತಮ್ಮ ನೆಲದಲ್ಲೇ ತಬ್ಬಲಿಗಳಾಗಿ ಬದುಕಿಯೂ ಸತ್ತಂತಾಗಿರುವ, ಸತ್ತು ಬದುಕುತ್ತಿರುವ ಆದಿವಾಸಿಗಳಿಗಾಗಿ ತಾಯಿ ಭಾರತಿಯ ಕಣ್ಣೀರು ಇಂಗಿ ಹೋಗಿದೆ. ಆದಿವಾಸಿಗಳ ಪಾಲಿಗೆ ಆಕೆ ಕಿವುಡಿಯೂ ಕುರುಡಿಯೂ ಮೂಕಿಯೂ ಆಗಿ ಹೋಗಿರುವುದು ಬಹುದೊಡ್ಡ ದುರಂತ.


ಇದನ್ನೂ ಓದಿ: ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...