Homeಮುಖಪುಟಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

- Advertisement -
- Advertisement -

ಜಿತಿನ್ ಪ್ರಸಾದ್‍ ನಿರ್ಗಮನ ಕಾಂಗ್ರೆಸ್‍ ಪಕ್ಷದಲ್ಲಿನ ಆಳವಾದ ಬಿಕ್ಕಟ್ಟನ್ನು ಮತ್ತೊಮ್ಮೆ ಬಹಿರಂಗಗೊಳಿಸಿದೆ. ಈ ಹಿಂದೆ ಸೋನಿಯಾ ಗಾಂಧಿಗೆ ಪತ್ರ ಬರೆದ “ಜಿ -23” ಅಥವಾ 23 “ಭಿನ್ನಮತೀಯ” ನಾಯಕರ ಗುಂಪಿನ ಇತರ ಜನರ ಮೇಲೆ ಈ ಪ್ರಕರಣ ಬೆಳಕು ಚೆಲ್ಲುತ್ತದೆ. ಈ  ಜಿ-23 ಕ್ಲಬ್‌ನ ಪ್ರಮುಖ ಸದಸ್ಯರಾದ ಕಪಿಲ್ ಸಿಬಲ್, ಅಂತಹ ಯಾವುದೇ ಕ್ರಮವನ್ನು (ಜಿತಿನ್‍ ಮಾಡಿದಂತೆ) ನಾನು ತೆಗೆದುಕೊಳ್ಳಲಾರೆ. ನಾನು ಮೃತನಾದಾಗ ಅಂಥದ್ದನ್ನು ಊಹಿಸಬಹುದು, ನಾನೆಂದೂ ಬಿಜೆಪಿ ಸೇರಲಾರೆ ಎಂದಿದ್ದಾರೆ.

ಆದರೆ ಸಿಬಲ್‍ ತಮ್ಮ ಆಕ್ಷೇಪ ಮತ್ತು ಆಗ್ರಹಗಳನ್ನು ಪುನರುಚ್ಛರಿಸಿದ್ದಾರೆ. ಈ ಸಂದರ್ಭವನ್ನು ಅವರು ತಮ್ಮ ಪಕ್ಷದ ಉನ್ನತ ನಾಯಕರಿಗೆ ಒಂದು ಸಂದೇಶ ಕಳಿಸುವ ಅವಕಾಶವನ್ನಾಗಿ ಬಳಸಿಕೊಂಡಿದ್ದಾರೆ.

ಸಿದ್ಧಾಂತಕ್ಕಿಂತ ವೈಯಕ್ತಿಕ ಲಾಭದ ಆಧಾರದ ಮೇಲೆ ‘ಪ್ರಸಾದ್‍ ರಾಮ್‍’ (ಅವರೇ ಸೃಷ್ಟಿಸಿದ ಪದ) ಪಕ್ಷಾಂತರ ನಡೆದಿದೆ ಎಂಬುದನ್ನು ಅವರು ಒಪ್ಪಲಿಲ್ಲ ಎಂದು ಎನ್‍ಡಿಟಿವಿ ವರದಿ ಮಾಡಿದೆ.

“ಪಕ್ಷದ ನಾಯಕತ್ವ ಏನು ಮಾಡಿದೆ ಅಥವಾ ಮಾಡಿಲ್ಲ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಾವು ಭಾರತೀಯ ರಾಜಕಾರಣದಲ್ಲಿ ಒಂದು ಹಂತವನ್ನು ತಲುಪಿದ್ದೇವೆ, ಅಲ್ಲಿ ಈ ರೀತಿಯ (ಜಿತಿನ್‍ ನಿರ್ಧಾರ) ನಿರ್ಧಾರಗಳು ಸಿದ್ಧಾಂತವನ್ನು ಆಧರಿಸಿಲ್ಲ. ಅವು ಈಗ ನಾನು ಪ್ರಸಾದ ರಾಮ್ ಎಂದು ಕರೆಯುವ ಆಧಾರದ ಮೇಲೆ ನಡೆಯುತ್ತಿರುವ ರಾಜಕೀಯ. ಇದು ಹಿಂದೆ ಆಯಾ ರಾಮ್ ಗಯಾ ರಾಮ್ ಆಗಿತ್ತು. ಪಶ್ಚಿಮ ಬಂಗಾಳದಲ್ಲಿ ಇದು ನಡೆಯುತ್ತಿರುವುದನ್ನು ನಾವು ನೋಡಿದ್ದೇವೆ. ಬಿಜೆಪಿ ಯಶಸ್ವಿಯಾಗಲಿದೆ ಎಂದು ಭಾವಿಸಿದ್ದರಿಂದ ಜನರು ಇದ್ದಕ್ಕಿದ್ದಂತೆ ಬಿಜೆಪಿಗೆ ಪಕ್ಷಾಂತರಗೊಂಡರು. ಈಗ ಬಹುಪಾಲು ರಾಜಕಾರಣಿಗಳು ಚುನಾವಣೆಗಳಲ್ಲಿ ಹೋರಾಡಲು ಬಯಸುವುದು ಒಂದು ಸಿದ್ಧಾಂತದ ಬಗೆಗಿನ ನಂಬಿಕೆಗಳ ಆಧಾರದ ಮೇಲೆ ಅಲ್ಲ, ಆದರೆ ವೈಯಕ್ತಿಕವಾಗಿ ಏನನ್ನಾದರೂ ಪಡೆಯಬಹುದು’ ಎಂಬ ದೃಢೀಕರಣದ ಆಧಾರದ ಮೇಲೆ.. ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಇದೇ ಸಂಭವಿಸಿದೆ…’ ಎಂದು ಹೇಳಿದ್ದಾರೆ.

ಕಾಂಗ್ರೆಸ್‍ಗೆ  ಸುಧಾರಣೆಗಳು ಅಗತ್ಯವಾಗಿವೆ ಮತ್ತು ಪಕ್ಷದ ನಾಯಕತ್ವವು ಇದನ್ನು ಆಲಿಸಬೇಕಾಗಿದೆ ಎಂದು ಸಿಬಲ್ ಹೇಳಿದರು. ಅದೇ ಸಮಯದಲ್ಲಿ, ಜಿತಿನ್ ಪ್ರಸಾದ ಅವರಂತಹ ವ್ಯಕ್ತಿ ಬಿಜೆಪಿಗೆ ಸೇರುತ್ತಾರೆ ಎಂಬುದಕ್ಕೆ ವಿವರಣೆ ನೀಡುವುಸು ಅಸಾಧ್ಯ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.

“ಸಮಸ್ಯೆಗಳನ್ನು ಬಗೆಹರಿಸಿದ್ದರೂ, ನಾನು ಏನನ್ನೂ ಪಡೆಯುತ್ತಿಲ್ಲ ಎಂದು ಒಬ್ಬ ವ್ಯಕ್ತಿಯು ಭಾವಿಸಿದರೆ ಅವನು ಹೊರಟು ಹೋಗುತ್ತಾನೆ. ಜಿತಿನ್ ಹೊರಹೋಗಲು ಒಳ್ಳೆಯ ಕಾರಣಗಳಿರಬಹುದು. ಪಕ್ಷವನ್ನು ತೊರೆದಿದ್ದಕ್ಕಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ಬಿಜೆಪಿಗೆ ಸೇರಿದ ಕಾರಣಗಳಿಗಾಗಿ ನಾನು ಅವರನ್ನು ದೂಷಿಸುತ್ತೇನೆ. ಮೂರು ದಶಕಗಳಿಂದ ತಾನು ವಿರೋಧಿಸುತ್ತಿದ್ದ ಒಂದು ಸಿದ್ಧಾಂತವನ್ನು ಈಗ ಸ್ವೀಕರಿಸುತ್ತಿದ್ದೇನೆ ಎಂದು ಅವರು ಯಾವ ಮುಖದಿಂದ ಹೇಳಬಹುದು? ತತ್ವಬದ್ಧ ರಾಜಕೀಯದ ಬಗ್ಗೆ ಮಾತನಾಡುವ ಬಿಜೆಪಿಯವರು, ಜಿತಿನ್ ಅವರನ್ನು ಯಾವ ಮುಖದಿಂದ ತೆಗೆದುಕೊಳ್ಳುತ್ತಾರೆ? ಜನರು ಈ ರೀತಿಯ ರಾಜಕೀಯದ ಬಗ್ಗೆ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದು ಸಿಬಲ್‍ ಹೇಳಿದ್ದಾರೆ.

ಮಧ್ಯಪ್ರದೇಶದ ಪಕ್ಷಾಂತರಗಳು ಮತ್ತು ಹಿಂದಿನ ಲೋಕಸಭಾ  ಚುನಾವಣಾ ಸೋಲುಗಳ ಬಗ್ಗೆ ಕಪಿಲ್‍ ಸಿಬಲ್, ಗುಲಾಮ್ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಮುಂತಾದ 23 ಕಾಂಗ್ರೆಸ್‍ ನಾಯಕರು ಸೋನಿಯಾ ಗಾಂಧಿಯವರಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳಿಗ ಮನವಿ ಮಾಡಿದ್ದರು.

ಕಳೆದ ವರ್ಷ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದ ನಂತರ ಪಕ್ಷದಲ್ಲಿ ಉತ್ತಮ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದ ಸಚಿನ್ ಪೈಲಟ್ ಬಗ್ಗೆ ಆಗ ಊಹಾಪೋಹ ಹರಿದಾಡಿದ್ದವು.

ತಪ್ಪುಗಳ ತಿದ್ದುಪಡಿಯ ಭರವಸೆಯ ಮೇರೆಗೆ ಪೈಲಟ್ ಅವರ ಬಂಡಾಯವನ್ನು ಕೊನೆಗೊಳಿಸುವಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಯಶಸ್ವಿಯಾಗಿದ್ದರು.

ಪರಿಹಾರಗಳನ್ನು ನೀಡುವಲ್ಲಿ ಕಾಂಗ್ರೆಸ್ ವಿಫಲವಾದ ಬಗ್ಗೆ ಕೇಳಿದಾಗ ಸಿಬಲ್, “ಸಮಸ್ಯೆಗಳನ್ನು ಬಗೆಹರಿಸಲಾಗಿಲ್ಲ, ಅದು ನಿಜ. ಅವುಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ನಾವು ಆ ಪ್ರಶ್ನೆಗಳನ್ನು  ಎತ್ತುವುದನ್ನು  ಮುಂದುವರಿಸುತ್ತೇವೆ. ಕೆಲವು ಕಾರಣಗಳಿಂದ  ನಾನು ಪಕ್ಷಕ್ಕೆ ಅಗತ್ಯವಿಲ್ಲ ಎಂದು ಪಕ್ಷ ನನಗೆ ಹೇಳಿದರೆ ನಾನು ಪಕ್ಷವನ್ನು ಬಿಡುತ್ತೇನೆ. ನಾನು ನನಗಾಗಿ ಈ ಪಕ್ಷದಲ್ಲಿ ಇಲ್ಲ. ಆದರೆ ರಾಜಕಾರಣಿಯಾಗಿ ಹುಟ್ಟಿದಾಗಿನಿಂದ ವಿರೋಧಿಸಿದ ಬಿಜೆಪಿಗೆ ನಾನು ಎಂದಿಗೂ ಸೇರುವುದಿಲ್ಲ. ಇದು ಜಿತೀನ್ ಪ್ರಸಾದ್‍ ಎತ್ತಿರುವ ಇಶ್ಯೂ’ ಎಂದು ಸಿಬಲ್‍ ತಿಳಿಸಿದ್ದಾರೆ.

ಪಕ್ಷದಲ್ಲಿ ಸುಧಾರಣೆಗಳು ಅಂದರೆ ಏನು ಎಂಬ ಪ್ರಶ್ನೆಗೆ,  “ನನ್ನನ್ನು ಕೇಳಬೇಡಿ, ಯಾರು ಅವನ್ನು ಪರಿಹರಿಸಬೇಕೋ ಅವರನ್ನು ಕೇಳಿ. ಕಾಂಗ್ರೆಸ್ ಮತ್ತೆ ಹಳೆಯ ಭವ್ಯತೆ ಪಡೆದ ಪಕ್ಷವಾಗಬೇಕು. ಅದಕ್ಕಾಗಿ ನಮಗೆ ಸುಧಾರಣೆಗಳು ಬೇಕಾಗುತ್ತವೆ. ನಾವು ಹೇಳಲು ಬಯಸುವುದನ್ನು ಪಕ್ಷ ಆಲಿಸುವ ಸಮಯವಿದು. ಮುಖ್ಯಸ್ಥರು ಆಲಿಸುವುದನ್ನು  ನಿಲ್ಲಿಸಿದರೆ ಪಕ್ಷ ಕುಸಿಯುತ್ತದೆ. ನಮಗೆ ಬೇಕಾಗಿರುವುದು ಕಾಂಗ್ರೆಸ್ ಪಕ್ಷ ನಮ್ಮ ಮಾತನ್ನು ಆಲಿಸಬೇಕು ಎಂಬುದಷ್ಟೇ’ ಎಂದು ಸಿಬಲ್‍ ಹೇಳಿದರು.


ಇದನ್ನೂ ಓದಿ: ಉತ್ತರ ಪ್ರದೇಶ ಸಿಎಂ ಬದಲಾವಣೆ ವದಂತಿ: ಮೋದಿ, ಶಾ ಭೇಟಿಯಾಗಲಿರುವ ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...