Homeಮುಖಪುಟಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

- Advertisement -
- Advertisement -

ಜಿತಿನ್ ಪ್ರಸಾದ್‍ ನಿರ್ಗಮನ ಕಾಂಗ್ರೆಸ್‍ ಪಕ್ಷದಲ್ಲಿನ ಆಳವಾದ ಬಿಕ್ಕಟ್ಟನ್ನು ಮತ್ತೊಮ್ಮೆ ಬಹಿರಂಗಗೊಳಿಸಿದೆ. ಈ ಹಿಂದೆ ಸೋನಿಯಾ ಗಾಂಧಿಗೆ ಪತ್ರ ಬರೆದ “ಜಿ -23” ಅಥವಾ 23 “ಭಿನ್ನಮತೀಯ” ನಾಯಕರ ಗುಂಪಿನ ಇತರ ಜನರ ಮೇಲೆ ಈ ಪ್ರಕರಣ ಬೆಳಕು ಚೆಲ್ಲುತ್ತದೆ. ಈ  ಜಿ-23 ಕ್ಲಬ್‌ನ ಪ್ರಮುಖ ಸದಸ್ಯರಾದ ಕಪಿಲ್ ಸಿಬಲ್, ಅಂತಹ ಯಾವುದೇ ಕ್ರಮವನ್ನು (ಜಿತಿನ್‍ ಮಾಡಿದಂತೆ) ನಾನು ತೆಗೆದುಕೊಳ್ಳಲಾರೆ. ನಾನು ಮೃತನಾದಾಗ ಅಂಥದ್ದನ್ನು ಊಹಿಸಬಹುದು, ನಾನೆಂದೂ ಬಿಜೆಪಿ ಸೇರಲಾರೆ ಎಂದಿದ್ದಾರೆ.

ಆದರೆ ಸಿಬಲ್‍ ತಮ್ಮ ಆಕ್ಷೇಪ ಮತ್ತು ಆಗ್ರಹಗಳನ್ನು ಪುನರುಚ್ಛರಿಸಿದ್ದಾರೆ. ಈ ಸಂದರ್ಭವನ್ನು ಅವರು ತಮ್ಮ ಪಕ್ಷದ ಉನ್ನತ ನಾಯಕರಿಗೆ ಒಂದು ಸಂದೇಶ ಕಳಿಸುವ ಅವಕಾಶವನ್ನಾಗಿ ಬಳಸಿಕೊಂಡಿದ್ದಾರೆ.

ಸಿದ್ಧಾಂತಕ್ಕಿಂತ ವೈಯಕ್ತಿಕ ಲಾಭದ ಆಧಾರದ ಮೇಲೆ ‘ಪ್ರಸಾದ್‍ ರಾಮ್‍’ (ಅವರೇ ಸೃಷ್ಟಿಸಿದ ಪದ) ಪಕ್ಷಾಂತರ ನಡೆದಿದೆ ಎಂಬುದನ್ನು ಅವರು ಒಪ್ಪಲಿಲ್ಲ ಎಂದು ಎನ್‍ಡಿಟಿವಿ ವರದಿ ಮಾಡಿದೆ.

“ಪಕ್ಷದ ನಾಯಕತ್ವ ಏನು ಮಾಡಿದೆ ಅಥವಾ ಮಾಡಿಲ್ಲ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಾವು ಭಾರತೀಯ ರಾಜಕಾರಣದಲ್ಲಿ ಒಂದು ಹಂತವನ್ನು ತಲುಪಿದ್ದೇವೆ, ಅಲ್ಲಿ ಈ ರೀತಿಯ (ಜಿತಿನ್‍ ನಿರ್ಧಾರ) ನಿರ್ಧಾರಗಳು ಸಿದ್ಧಾಂತವನ್ನು ಆಧರಿಸಿಲ್ಲ. ಅವು ಈಗ ನಾನು ಪ್ರಸಾದ ರಾಮ್ ಎಂದು ಕರೆಯುವ ಆಧಾರದ ಮೇಲೆ ನಡೆಯುತ್ತಿರುವ ರಾಜಕೀಯ. ಇದು ಹಿಂದೆ ಆಯಾ ರಾಮ್ ಗಯಾ ರಾಮ್ ಆಗಿತ್ತು. ಪಶ್ಚಿಮ ಬಂಗಾಳದಲ್ಲಿ ಇದು ನಡೆಯುತ್ತಿರುವುದನ್ನು ನಾವು ನೋಡಿದ್ದೇವೆ. ಬಿಜೆಪಿ ಯಶಸ್ವಿಯಾಗಲಿದೆ ಎಂದು ಭಾವಿಸಿದ್ದರಿಂದ ಜನರು ಇದ್ದಕ್ಕಿದ್ದಂತೆ ಬಿಜೆಪಿಗೆ ಪಕ್ಷಾಂತರಗೊಂಡರು. ಈಗ ಬಹುಪಾಲು ರಾಜಕಾರಣಿಗಳು ಚುನಾವಣೆಗಳಲ್ಲಿ ಹೋರಾಡಲು ಬಯಸುವುದು ಒಂದು ಸಿದ್ಧಾಂತದ ಬಗೆಗಿನ ನಂಬಿಕೆಗಳ ಆಧಾರದ ಮೇಲೆ ಅಲ್ಲ, ಆದರೆ ವೈಯಕ್ತಿಕವಾಗಿ ಏನನ್ನಾದರೂ ಪಡೆಯಬಹುದು’ ಎಂಬ ದೃಢೀಕರಣದ ಆಧಾರದ ಮೇಲೆ.. ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಇದೇ ಸಂಭವಿಸಿದೆ…’ ಎಂದು ಹೇಳಿದ್ದಾರೆ.

ಕಾಂಗ್ರೆಸ್‍ಗೆ  ಸುಧಾರಣೆಗಳು ಅಗತ್ಯವಾಗಿವೆ ಮತ್ತು ಪಕ್ಷದ ನಾಯಕತ್ವವು ಇದನ್ನು ಆಲಿಸಬೇಕಾಗಿದೆ ಎಂದು ಸಿಬಲ್ ಹೇಳಿದರು. ಅದೇ ಸಮಯದಲ್ಲಿ, ಜಿತಿನ್ ಪ್ರಸಾದ ಅವರಂತಹ ವ್ಯಕ್ತಿ ಬಿಜೆಪಿಗೆ ಸೇರುತ್ತಾರೆ ಎಂಬುದಕ್ಕೆ ವಿವರಣೆ ನೀಡುವುಸು ಅಸಾಧ್ಯ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.

“ಸಮಸ್ಯೆಗಳನ್ನು ಬಗೆಹರಿಸಿದ್ದರೂ, ನಾನು ಏನನ್ನೂ ಪಡೆಯುತ್ತಿಲ್ಲ ಎಂದು ಒಬ್ಬ ವ್ಯಕ್ತಿಯು ಭಾವಿಸಿದರೆ ಅವನು ಹೊರಟು ಹೋಗುತ್ತಾನೆ. ಜಿತಿನ್ ಹೊರಹೋಗಲು ಒಳ್ಳೆಯ ಕಾರಣಗಳಿರಬಹುದು. ಪಕ್ಷವನ್ನು ತೊರೆದಿದ್ದಕ್ಕಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ಬಿಜೆಪಿಗೆ ಸೇರಿದ ಕಾರಣಗಳಿಗಾಗಿ ನಾನು ಅವರನ್ನು ದೂಷಿಸುತ್ತೇನೆ. ಮೂರು ದಶಕಗಳಿಂದ ತಾನು ವಿರೋಧಿಸುತ್ತಿದ್ದ ಒಂದು ಸಿದ್ಧಾಂತವನ್ನು ಈಗ ಸ್ವೀಕರಿಸುತ್ತಿದ್ದೇನೆ ಎಂದು ಅವರು ಯಾವ ಮುಖದಿಂದ ಹೇಳಬಹುದು? ತತ್ವಬದ್ಧ ರಾಜಕೀಯದ ಬಗ್ಗೆ ಮಾತನಾಡುವ ಬಿಜೆಪಿಯವರು, ಜಿತಿನ್ ಅವರನ್ನು ಯಾವ ಮುಖದಿಂದ ತೆಗೆದುಕೊಳ್ಳುತ್ತಾರೆ? ಜನರು ಈ ರೀತಿಯ ರಾಜಕೀಯದ ಬಗ್ಗೆ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದು ಸಿಬಲ್‍ ಹೇಳಿದ್ದಾರೆ.

ಮಧ್ಯಪ್ರದೇಶದ ಪಕ್ಷಾಂತರಗಳು ಮತ್ತು ಹಿಂದಿನ ಲೋಕಸಭಾ  ಚುನಾವಣಾ ಸೋಲುಗಳ ಬಗ್ಗೆ ಕಪಿಲ್‍ ಸಿಬಲ್, ಗುಲಾಮ್ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಮುಂತಾದ 23 ಕಾಂಗ್ರೆಸ್‍ ನಾಯಕರು ಸೋನಿಯಾ ಗಾಂಧಿಯವರಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳಿಗ ಮನವಿ ಮಾಡಿದ್ದರು.

ಕಳೆದ ವರ್ಷ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದ ನಂತರ ಪಕ್ಷದಲ್ಲಿ ಉತ್ತಮ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದ ಸಚಿನ್ ಪೈಲಟ್ ಬಗ್ಗೆ ಆಗ ಊಹಾಪೋಹ ಹರಿದಾಡಿದ್ದವು.

ತಪ್ಪುಗಳ ತಿದ್ದುಪಡಿಯ ಭರವಸೆಯ ಮೇರೆಗೆ ಪೈಲಟ್ ಅವರ ಬಂಡಾಯವನ್ನು ಕೊನೆಗೊಳಿಸುವಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಯಶಸ್ವಿಯಾಗಿದ್ದರು.

ಪರಿಹಾರಗಳನ್ನು ನೀಡುವಲ್ಲಿ ಕಾಂಗ್ರೆಸ್ ವಿಫಲವಾದ ಬಗ್ಗೆ ಕೇಳಿದಾಗ ಸಿಬಲ್, “ಸಮಸ್ಯೆಗಳನ್ನು ಬಗೆಹರಿಸಲಾಗಿಲ್ಲ, ಅದು ನಿಜ. ಅವುಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ನಾವು ಆ ಪ್ರಶ್ನೆಗಳನ್ನು  ಎತ್ತುವುದನ್ನು  ಮುಂದುವರಿಸುತ್ತೇವೆ. ಕೆಲವು ಕಾರಣಗಳಿಂದ  ನಾನು ಪಕ್ಷಕ್ಕೆ ಅಗತ್ಯವಿಲ್ಲ ಎಂದು ಪಕ್ಷ ನನಗೆ ಹೇಳಿದರೆ ನಾನು ಪಕ್ಷವನ್ನು ಬಿಡುತ್ತೇನೆ. ನಾನು ನನಗಾಗಿ ಈ ಪಕ್ಷದಲ್ಲಿ ಇಲ್ಲ. ಆದರೆ ರಾಜಕಾರಣಿಯಾಗಿ ಹುಟ್ಟಿದಾಗಿನಿಂದ ವಿರೋಧಿಸಿದ ಬಿಜೆಪಿಗೆ ನಾನು ಎಂದಿಗೂ ಸೇರುವುದಿಲ್ಲ. ಇದು ಜಿತೀನ್ ಪ್ರಸಾದ್‍ ಎತ್ತಿರುವ ಇಶ್ಯೂ’ ಎಂದು ಸಿಬಲ್‍ ತಿಳಿಸಿದ್ದಾರೆ.

ಪಕ್ಷದಲ್ಲಿ ಸುಧಾರಣೆಗಳು ಅಂದರೆ ಏನು ಎಂಬ ಪ್ರಶ್ನೆಗೆ,  “ನನ್ನನ್ನು ಕೇಳಬೇಡಿ, ಯಾರು ಅವನ್ನು ಪರಿಹರಿಸಬೇಕೋ ಅವರನ್ನು ಕೇಳಿ. ಕಾಂಗ್ರೆಸ್ ಮತ್ತೆ ಹಳೆಯ ಭವ್ಯತೆ ಪಡೆದ ಪಕ್ಷವಾಗಬೇಕು. ಅದಕ್ಕಾಗಿ ನಮಗೆ ಸುಧಾರಣೆಗಳು ಬೇಕಾಗುತ್ತವೆ. ನಾವು ಹೇಳಲು ಬಯಸುವುದನ್ನು ಪಕ್ಷ ಆಲಿಸುವ ಸಮಯವಿದು. ಮುಖ್ಯಸ್ಥರು ಆಲಿಸುವುದನ್ನು  ನಿಲ್ಲಿಸಿದರೆ ಪಕ್ಷ ಕುಸಿಯುತ್ತದೆ. ನಮಗೆ ಬೇಕಾಗಿರುವುದು ಕಾಂಗ್ರೆಸ್ ಪಕ್ಷ ನಮ್ಮ ಮಾತನ್ನು ಆಲಿಸಬೇಕು ಎಂಬುದಷ್ಟೇ’ ಎಂದು ಸಿಬಲ್‍ ಹೇಳಿದರು.


ಇದನ್ನೂ ಓದಿ: ಉತ್ತರ ಪ್ರದೇಶ ಸಿಎಂ ಬದಲಾವಣೆ ವದಂತಿ: ಮೋದಿ, ಶಾ ಭೇಟಿಯಾಗಲಿರುವ ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...