Homeಮುಖಪುಟರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

- Advertisement -
- Advertisement -

ತಮ್ಮ ಮನೆ ಹೊರಗೆ ಅಂಟಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪೋಸ್ಟರ್‌ ತೆಗೆಯಲು ಆಕ್ಷೇಪ ವ್ಯಕ್ತಪಡಿಸಿದ 21 ವರ್ಷದ ದಲಿತ ಯುವಕನ ಮೇಲೆ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ನಡೆದಿದೆ.

ಭೀಮ್ ಸೈನ್ಯದ ಸದಸ್ಯರಾಗಿದ್ದ ವಿನೋದ್ ಬಾಮ್ನಿಯಾ ಅವರ ಮೇಲೆ ಜೂನ್ 5 ರಂದು ರಾಜಸ್ಥಾನದ ಹನುಮನ್‌ಗಢ ಜಿಲ್ಲೆಯ ಕಿಕ್ರಲಿಯಾ ಗ್ರಾಮದಲ್ಲಿರುವ ಅವರ ಮನೆಯ ಗೋಡೆಯ ಮೇಲೆ ಅಂಬೇಡ್ಕರ್‌ ಅವರ ಪೋಸ್ಟರ್‌ ಅಂಟಿಸಿದ್ದರು. ಇವುಗಳನ್ನು ತೆರವುಗೊಳಿಸುವಂತೆ ಒಬಿಸಿ ಸಮುದಾಯಕ್ಕೆ ಸೇರಿದ ಯುವಕರ ಗುಂಪು ಆಗ್ರಹಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿನೋದ್‌ ಮೇಲೆ ಹಲ್ಲೆ ಮಾಡಲಾಗಿದೆ. ಎರಡು ದಿನಗಳ ನಂತರ ಶ್ರೀಗಂಗನಗರದ ಆಸ್ಪತ್ರೆಯಲ್ಲಿ ಗಾಯಾಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟರ್ ಘಟನೆಯ ಬಗ್ಗೆ ಮೃತ ವಿನೋದ್ ಬಾಮ್ನಿಯಾ ಅವರ ಕುಟುಂಬದವರು ದಾಖಲಿಸಿದ್ದ ಎಫ್‌ಐಆರ್‌ ಆಧರಿಸಿ ಅನಿಲ್ ಸಿಹಾಗ್ ಮತ್ತು ರಾಕೇಶ್ ಸಿಹಾಗ್ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆ ವೇಳೆ ಆರೋಪಿಗಳು ಜಾತಿವಾದಿ ಗಲಾಟೆ ಮಾಡಿದ್ದಾರೆ. ಇವತ್ತು ನಿಮಗೆ ನಿಮ್ಮ ಅಂಬೇಡ್ಕರ್‌ ವಾದವನ್ನು ನೆನಪಿಸುತ್ತೇವೆ ಎಂದು ಹೇಳುತ್ತಾ ಹಲ್ಲೆ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರ ತನಿಖೆಯ ವಿಳಂಬದ ಬಗ್ಗೆ ಭೀಮ್ ಸೈನ್ಯ ಪ್ರತಿಭಟನೆ ನಡೆಸಿದೆ. ತನಿಖೆಯ ವಿಳಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ಮೃತ ವಿನೋದ್ ಬಾಮ್ನಿಯಾ ಈ ವರ್ಷದ ಆರಂಭದಲ್ಲಿ ಎರಡು ಬಾರಿ ವಿವಿಧ ವಿಷಯಗಳ ಬಗ್ಗೆ ದೂರುಗಳನ್ನು ದಾಖಲಿಸಿದ್ದರು. ಶಾಲೆಯಲ್ಲಿ ಹನುಮಾನ್ ಚಾಲೀಸಾ ಪ್ರತಿಗಳನ್ನು ವಿತರಿಸುವುದನ್ನು ಆಕ್ಷೇಪಿಸಿ, ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದರು. ತಮ್ಮ ಕುಟುಂಬಕ್ಕೆ ರಸ್ತೆ ನಿರ್ಬಂಧವನ್ನು ಆಕ್ಷೇಪಿಸಿದ್ದಕ್ಕಾಗಿ ಗ್ರಾಮದ ನಿವಾಸಿಗಳು ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದರು.

ಮೃತ ವಿನೋದ್ ಬಾಮ್ನಿಯಾ

“ಇತ್ತೀಚೆಗೆ, ನಮ್ಮ ಹಳ್ಳಿಯಲ್ಲಿ ವಾಸಿಸುವ ಅನಿಲ್ ಸಿಹಾಗ್ ಮತ್ತು ರಾಕೇಶ್ ಸಿಹಾಗ್ ಸೇರಿದಂತೆ ಕೆಲವು ಯುವಕರು ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯ ನಂತರ ನಮ್ಮ ಮನೆಯ ಹೊರಗೆ ಹಾಕಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬ್ಯಾನರ್‌ಗಳನ್ನು ಹರಿದು ಹಾಕಿದ್ದರು. ನಾವು ಅವರನ್ನು ಗುರುತಿಸಿ ಅವರ ಕುಟುಂಬಗಳಿಗೆ ವಿಷಯ ತಿಳಿಸಿದ್ದೇವು. ಈ ವಿಷಯವನ್ನು ಪಂಚಾಯಿತಿಯ ಮಧ್ಯಸ್ಥಿಕೆಯೊಂದಿಗೆ ಬಗೆಹರಿಸಲಾಗಿತ್ತು. ಯುವಕರ ಪರವಾಗಿ ಅವರ ಕುಟುಂಬ ಸದಸ್ಯರು ಕ್ಷಮೆಯಾಚಿಸಿದ್ದರು” ಎಂದು ಮೃತ ವಿನೋದ್ ಸೋದರಸಂಬಂಧಿ ಮುಖೇಶ್ ಹೇಳಿದ್ದಾರೆ.

“ಆದರೆ ನಿಜವಾದ ಅಪರಾಧಿಗಳು ಈ ಘಟನೆಗೆ ಸೇಡು ತೀರಿಸಿಕೊಳ್ಳಲು ಬಯಸಿದ್ದರು. ಜೂನ್ 5 ರಂದು ವಿನೋದ್ ಮತ್ತು ನಾನು ಹಳ್ಳಿಯ ನಮ್ಮ ಹೊಲಗಳಿಗೆ ಹೋಗುವಾಗ ರಾಕೇಶ್, ಅನಿಲ್ ಮತ್ತು ಇನ್ನೂ ಕೆಲವರು ನಮ್ಮ ಮೇಲೆ ಹಲ್ಲೆ ನಡೆಸಿದ್ದರು. ಸಣ್ಣಪುಟ್ಟ ಗಾಯಗಳೊಂದಿಗೆ ನಾನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಅವರು ವಿನೋದ್ ಅವರನ್ನು ಹಾಕಿ ಸ್ಟಿಕ್‌ಗಳಿಂದ ಸುಮಾರು 20-30 ಬಾರಿ ಮನ ಬಂದಂತೆ ಥಳಿಸಿದರು. ವಿನೋದ್‌ನನ್ನು ಹನುಮನ್‌ಗಢ ಮತ್ತು ಶ್ರೀಗಂಗನಗರ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಆದರು ಚಿಕಿತ್ಸೆ ಫಲಿಸದೇ ವಿನೋದ್ ಸಾವನ್ನಪ್ಪಿದ್ದಾರೆ” ಎಂದು ಮುಖೇಶ್ ತಿಳಿಸಿದರು.

ಐಪಿಸಿ ಸೆಕ್ಷನ್‌ಗಳು 307 (ಕೊಲೆ ಯತ್ನ), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡಿದ ಶಿಕ್ಷೆ), 341, 143  ಮತ್ತು ಎಸ್‌ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಹಲ್ಲೆಯ ಆರಂಭಿಕ ಎಫ್‌ಐಆರ್ ಅನ್ನು ಪೊಲೀಸರು ದಾಖಲಿಸಿದ್ದರು. ವಿನೋದ್ ಮರಣದ ನಂತರ, ಕೊಲೆ ಯತ್ನದ ಆರೋಪವನ್ನು ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಎಂದು ಬದಲಾಯಿಸಲಾಗಿದೆ.


ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತ ಯುವಕನನ್ನು ಕೊಂದವರಿಗೆ ಕಟಿಣ ಶಿಕ್ಷೆ ಆಗಬೇಕು. ದುರಂತವೆಂದರೆ ಇಲ್ಲಿ ಕೊಲೆ ಮಾಡಿರುವವರು ಮೇಲ್ಜಾತಿಯವರಲ್ಲ, ಹಿಂದುಳಿದ ಜಾತಿಯವರು!

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...