Homeಮುಖಪುಟರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

- Advertisement -
- Advertisement -

ತಮ್ಮ ಮನೆ ಹೊರಗೆ ಅಂಟಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪೋಸ್ಟರ್‌ ತೆಗೆಯಲು ಆಕ್ಷೇಪ ವ್ಯಕ್ತಪಡಿಸಿದ 21 ವರ್ಷದ ದಲಿತ ಯುವಕನ ಮೇಲೆ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ನಡೆದಿದೆ.

ಭೀಮ್ ಸೈನ್ಯದ ಸದಸ್ಯರಾಗಿದ್ದ ವಿನೋದ್ ಬಾಮ್ನಿಯಾ ಅವರ ಮೇಲೆ ಜೂನ್ 5 ರಂದು ರಾಜಸ್ಥಾನದ ಹನುಮನ್‌ಗಢ ಜಿಲ್ಲೆಯ ಕಿಕ್ರಲಿಯಾ ಗ್ರಾಮದಲ್ಲಿರುವ ಅವರ ಮನೆಯ ಗೋಡೆಯ ಮೇಲೆ ಅಂಬೇಡ್ಕರ್‌ ಅವರ ಪೋಸ್ಟರ್‌ ಅಂಟಿಸಿದ್ದರು. ಇವುಗಳನ್ನು ತೆರವುಗೊಳಿಸುವಂತೆ ಒಬಿಸಿ ಸಮುದಾಯಕ್ಕೆ ಸೇರಿದ ಯುವಕರ ಗುಂಪು ಆಗ್ರಹಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿನೋದ್‌ ಮೇಲೆ ಹಲ್ಲೆ ಮಾಡಲಾಗಿದೆ. ಎರಡು ದಿನಗಳ ನಂತರ ಶ್ರೀಗಂಗನಗರದ ಆಸ್ಪತ್ರೆಯಲ್ಲಿ ಗಾಯಾಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟರ್ ಘಟನೆಯ ಬಗ್ಗೆ ಮೃತ ವಿನೋದ್ ಬಾಮ್ನಿಯಾ ಅವರ ಕುಟುಂಬದವರು ದಾಖಲಿಸಿದ್ದ ಎಫ್‌ಐಆರ್‌ ಆಧರಿಸಿ ಅನಿಲ್ ಸಿಹಾಗ್ ಮತ್ತು ರಾಕೇಶ್ ಸಿಹಾಗ್ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆ ವೇಳೆ ಆರೋಪಿಗಳು ಜಾತಿವಾದಿ ಗಲಾಟೆ ಮಾಡಿದ್ದಾರೆ. ಇವತ್ತು ನಿಮಗೆ ನಿಮ್ಮ ಅಂಬೇಡ್ಕರ್‌ ವಾದವನ್ನು ನೆನಪಿಸುತ್ತೇವೆ ಎಂದು ಹೇಳುತ್ತಾ ಹಲ್ಲೆ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರ ತನಿಖೆಯ ವಿಳಂಬದ ಬಗ್ಗೆ ಭೀಮ್ ಸೈನ್ಯ ಪ್ರತಿಭಟನೆ ನಡೆಸಿದೆ. ತನಿಖೆಯ ವಿಳಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ಮೃತ ವಿನೋದ್ ಬಾಮ್ನಿಯಾ ಈ ವರ್ಷದ ಆರಂಭದಲ್ಲಿ ಎರಡು ಬಾರಿ ವಿವಿಧ ವಿಷಯಗಳ ಬಗ್ಗೆ ದೂರುಗಳನ್ನು ದಾಖಲಿಸಿದ್ದರು. ಶಾಲೆಯಲ್ಲಿ ಹನುಮಾನ್ ಚಾಲೀಸಾ ಪ್ರತಿಗಳನ್ನು ವಿತರಿಸುವುದನ್ನು ಆಕ್ಷೇಪಿಸಿ, ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದರು. ತಮ್ಮ ಕುಟುಂಬಕ್ಕೆ ರಸ್ತೆ ನಿರ್ಬಂಧವನ್ನು ಆಕ್ಷೇಪಿಸಿದ್ದಕ್ಕಾಗಿ ಗ್ರಾಮದ ನಿವಾಸಿಗಳು ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದರು.

ಮೃತ ವಿನೋದ್ ಬಾಮ್ನಿಯಾ

“ಇತ್ತೀಚೆಗೆ, ನಮ್ಮ ಹಳ್ಳಿಯಲ್ಲಿ ವಾಸಿಸುವ ಅನಿಲ್ ಸಿಹಾಗ್ ಮತ್ತು ರಾಕೇಶ್ ಸಿಹಾಗ್ ಸೇರಿದಂತೆ ಕೆಲವು ಯುವಕರು ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯ ನಂತರ ನಮ್ಮ ಮನೆಯ ಹೊರಗೆ ಹಾಕಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬ್ಯಾನರ್‌ಗಳನ್ನು ಹರಿದು ಹಾಕಿದ್ದರು. ನಾವು ಅವರನ್ನು ಗುರುತಿಸಿ ಅವರ ಕುಟುಂಬಗಳಿಗೆ ವಿಷಯ ತಿಳಿಸಿದ್ದೇವು. ಈ ವಿಷಯವನ್ನು ಪಂಚಾಯಿತಿಯ ಮಧ್ಯಸ್ಥಿಕೆಯೊಂದಿಗೆ ಬಗೆಹರಿಸಲಾಗಿತ್ತು. ಯುವಕರ ಪರವಾಗಿ ಅವರ ಕುಟುಂಬ ಸದಸ್ಯರು ಕ್ಷಮೆಯಾಚಿಸಿದ್ದರು” ಎಂದು ಮೃತ ವಿನೋದ್ ಸೋದರಸಂಬಂಧಿ ಮುಖೇಶ್ ಹೇಳಿದ್ದಾರೆ.

“ಆದರೆ ನಿಜವಾದ ಅಪರಾಧಿಗಳು ಈ ಘಟನೆಗೆ ಸೇಡು ತೀರಿಸಿಕೊಳ್ಳಲು ಬಯಸಿದ್ದರು. ಜೂನ್ 5 ರಂದು ವಿನೋದ್ ಮತ್ತು ನಾನು ಹಳ್ಳಿಯ ನಮ್ಮ ಹೊಲಗಳಿಗೆ ಹೋಗುವಾಗ ರಾಕೇಶ್, ಅನಿಲ್ ಮತ್ತು ಇನ್ನೂ ಕೆಲವರು ನಮ್ಮ ಮೇಲೆ ಹಲ್ಲೆ ನಡೆಸಿದ್ದರು. ಸಣ್ಣಪುಟ್ಟ ಗಾಯಗಳೊಂದಿಗೆ ನಾನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಅವರು ವಿನೋದ್ ಅವರನ್ನು ಹಾಕಿ ಸ್ಟಿಕ್‌ಗಳಿಂದ ಸುಮಾರು 20-30 ಬಾರಿ ಮನ ಬಂದಂತೆ ಥಳಿಸಿದರು. ವಿನೋದ್‌ನನ್ನು ಹನುಮನ್‌ಗಢ ಮತ್ತು ಶ್ರೀಗಂಗನಗರ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಆದರು ಚಿಕಿತ್ಸೆ ಫಲಿಸದೇ ವಿನೋದ್ ಸಾವನ್ನಪ್ಪಿದ್ದಾರೆ” ಎಂದು ಮುಖೇಶ್ ತಿಳಿಸಿದರು.

ಐಪಿಸಿ ಸೆಕ್ಷನ್‌ಗಳು 307 (ಕೊಲೆ ಯತ್ನ), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡಿದ ಶಿಕ್ಷೆ), 341, 143  ಮತ್ತು ಎಸ್‌ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಹಲ್ಲೆಯ ಆರಂಭಿಕ ಎಫ್‌ಐಆರ್ ಅನ್ನು ಪೊಲೀಸರು ದಾಖಲಿಸಿದ್ದರು. ವಿನೋದ್ ಮರಣದ ನಂತರ, ಕೊಲೆ ಯತ್ನದ ಆರೋಪವನ್ನು ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಎಂದು ಬದಲಾಯಿಸಲಾಗಿದೆ.


ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತ ಯುವಕನನ್ನು ಕೊಂದವರಿಗೆ ಕಟಿಣ ಶಿಕ್ಷೆ ಆಗಬೇಕು. ದುರಂತವೆಂದರೆ ಇಲ್ಲಿ ಕೊಲೆ ಮಾಡಿರುವವರು ಮೇಲ್ಜಾತಿಯವರಲ್ಲ, ಹಿಂದುಳಿದ ಜಾತಿಯವರು!

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...