Homeಕರೋನಾ ತಲ್ಲಣಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

- Advertisement -
- Advertisement -

ಬಿಹಾರ ತನ್ನ ಕೋವಿಡ್ ಸಾವುಗಳ ಕುರಿತು ಪರಿಷ್ಕೃತ ವರದಿ ನೀಡಿದ್ದು, ಕೋವಿಡ್‍ ಸಾವುಗಳ ಸಂಖ್ಯೆ 9 ಸಾವಿರಕ್ಕಿಂತ ಹೆಚ್ಚಿದೆ ಎಂದು ತಿಳಿಸಿದೆ. ಇದು ಈಗ ವಿವಾದಾತ್ಮಕವಾಗಿದೆ,  ಅಂದರೆ ಕಳೆದ ವರ್ಷದಿಂದ ಅದು ಸಾವಿನ ಪ್ರಮಾಣವನ್ನು ಮುಚ್ಚಿಡುತ್ತ ಬಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಅದು ಮೊದಲು ಹೇಳುತ್ತ ಬಂದಿದ್ದ ಸಾವಿನ ಸಂಖ್ಯೆಗಿಂತ ಈಗ ನೀಡಿರುವ ಸಾವಿನ ಸಂಖ್ಯೆ ಶೇಕಡಾ 72 ರಷ್ಟು ಹೆಚ್ಚಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಿಹಾರದ ಈ ಪರಿಷ್ಕೃತ ವರದಿಯಿಂದಾಗಿ, ಭಾರತವು ಇಂದು 6,148 ಹೊಸ ಸಾವುಗಳನ್ನು ವರದಿ ಮಾಡಿದೆ, ಇದು ಇದುವರೆಗಿನ ಏಕದಿನದಲ್ಲಿ ಅತಿ ಗರಿಷ್ಠ! ಇದಕ್ಕೆ ಕಾರಣ, ಬಿಹಾರದಲ್ಲಿ ಮರೆಮಾಚಿದ್ದ ಕೋವಿಡ್‍ ಸಾವುಗಳ ಸಂಖ್ಯೆ ಈಗ ಸೇರ್ಪಡೆಯಾಗಿರುವುದಾಗಿದೆ.

ಸಾಂಕ್ರಾಮಿಕ ರೋಗದಲ್ಲಿ ರಾಜ್ಯಾದ್ಯಂತ ಒಟ್ಟು ಸಾವಿನ ಸಂಖ್ಯೆ 9,429 ಎಂದು ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಸರ್ಕಾರ ಬುಧವಾರ ವರದಿ ಮಾಡಿದೆ. ಮೊದಲು ಇದನ್ನು  5,424 ಎಂದು ತಿಳಿಸಲಾಗಿತ್ತು.

ರಾಜ್ಯದಲ್ಲಿ ಸೋಂಕುಗಳು ಮತ್ತು ಸಾವುಗಳ ಪ್ರಮಾಣವನ್ನು ಬಿಹಾರ ಸರ್ಕಾರ ಮರೆಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ, ಪಾಟ್ನಾ ಹೈಕೋರ್ಟ್ ಏಪ್ರಿಲ್-ಮೇ  ಅವಧಿಯ ಎರಡನೇ ಅಲೆಯಲ್ಲಿ ಸಾವುನೋವುಗಳ ಲೆಕ್ಕಪರಿಶೋಧನೆ (ಆಡಿಟ್‍) ಮಾಡಲು ಸೂಚಿಸಿತ್ತು.

ಕಳೆದ ತಿಂಗಳು ಬಕ್ಸಾರ್ ಬಳಿ ನದಿಯಲ್ಲಿ ಶವಗಳು ತೇಲುತ್ತಿರುವ ಆಘಾತಕಾರಿ ದೃಶ್ಯಗಳು ಪ್ರತಿಪಕ್ಷಗಳ ಆರೋಪವನ್ನು ಬಲಪಡಿಸಿದ್ದವು.

ಮೂರು ವಾರಗಳ ಲೆಕ್ಕಪರಿಶೋಧನೆಯ ನಂತರದ ಹೊಸ ಅಂಕಿ ಅಂಶಗಳು ಬಿಡುಗಡೆಯಾಗಿವೆ. ಮಾರ್ಚ್ 2020 ಮತ್ತು 2021 ರ ನಡುವೆ ಬಿಹಾರದಲ್ಲಿ ಕೋವಿಡ್‌ನಿಂದ 1,600 ಜನರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಿಂದ ಜೂನ್ 7 ರವರೆಗೆ ಸಾವಿನ ಸಂಖ್ಯೆ 7,775 ರಷ್ಟಿದೆ. ಇದು ಸುಮಾರು ಆರು ಪಟ್ಟು ಹೆಚ್ಚು!

ಎಲ್ಲಾ ಜಿಲ್ಲೆಗಳ ಪರಿಶೀಲನೆಯ ನಂತರ ಶೇಕಡಾ 72 ರಷ್ಟು ಹೆಚ್ಚಿನ ಸಾವುಗಳನ್ನು ಈಗ ಅಧಿಕೃತವಾಗಿ ಸೇರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಇದು 38 ಜಿಲ್ಲೆಗಳಿಂದ ದಾಖಲಾದ ಒಟ್ಟು ಕೋವಿಡ್‍ ಸಾವುಗಳ ವಿವರವಾಗಿದೆ. ಆದರೆ ಈ ‘ಹೆಚ್ಚುವರಿ’ ಸಾವುಗಳು ಯಾವಾಗ ಸಂಭವಿಸಿದವು ಎಂಬುದನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಇದು ಕೂಡ ಅನುಮಾನಕ್ಕೆ ಎಡೆ ಮಾಡಿದೆ.

ಹೊಸ ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಾವುಗಳು (2,303 ಸಾವು) ರಾಜ್ಯ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿವೆ. ಪರಿಶೀಲನೆಯ ನಂತರ ವರದಿಯಾದ ಹೆಚ್ಚುವರಿ ಸಾವುಗಳು ಪಾಟ್ನಾಕ್ಕೆ ಸಂಬಂಧಿಸಿವೆ.

ಆದರೆ ಪಾಟ್ನಾದಲ್ಲಿ ಸರ್ಕಾರ ನಡೆಸುತ್ತಿರುವ ಮೂರು ಶವಾಗಾರ ಕೇಂದ್ರಗಳ ದಾಖಲೆಗಳು 3,243 “ಕೋವಿಡ್ ದಹನ”ಗಳನ್ನು ದೃಢಪಡಿಸುತ್ತವೆ! ಈ ಹೊಸ ವ್ಯತ್ಯಾಸವು ಕೂಡ  ಇನ್ನಷ್ಟು ವಿವಾದಾತ್ಮಕ ವಿಷಯವಾಗುತ್ತಿದೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್,  ‘ಪಾಟ್ನಾದಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯೊಬ್ಬರು ಮೃತಪಟ್ಟರೆ ಮತ್ತು ಇಲ್ಲಿ ಅವರ ಅಂತ್ಯಸಂಸ್ಕಾರ ಮಾಡಿದರೆ, ಸಾವನ್ನು ಸಂತ್ರಸ್ತರ ಸ್ಥಳೀಯ ಜಿಲ್ಲೆಯ ಅಂಕಿಸಂಖ್ಯೆಯಲ್ಲಿಯೇ ಪರಿಗಣಿಸಲಾಗುತ್ತದೆಯೇ ಹೊರತು ಪಾಟ್ನಾದ ಅಂಕಿಸಂಖ್ಯೆಯಲ್ಲಿ ಅಲ್ಲ’ ಎಂದಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದಾದಲ್ಲಿ ಹೊಸದಾಗಿ 222 ಸಾವುಗಳನ್ನು ವರದಿಯಲ್ಲಿ ಸೇರಿಸಲಾಗಿದೆ

ರಾಜ್ಯದ ಚೇತರಿಕೆಯ ಪ್ರಮಾಣವನ್ನು ಶೇ. 98.70 ರಿಂದ 97.65ಕ್ಕೆ ಇಳಿದಿದೆ ಎಂದು ಪರಿಷ್ಕೃತ ವರದಿ ತಿಳಿಸಿದೆ.

ಕೋವಿಡ್‍ ಬಿಕ್ಕಟ್ಟನ್ನು ನಿಭಾಯಿಸುವಲ್ಲಿನ ವೈಫಲ್ಯವನ್ನು ಮರೆಮಾಚಲು ಬಿಹಾರದಲ್ಲಿ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ತಿರುಚುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತ ಬಂದಿದ್ದವು. ಈಗ ಹೈಕೋರ್ಟ್ ಸೂಚನೆ ಪ್ರಕಾರ ತಯಾರಿಸಿದ ಆಡಿಟ್‍ ವರದಿ ಇದನ್ನು ಪುಷ್ಟೀಕರಿಸಿದೆ. ಅಂಕಿಅಂಶಗಳನ್ನು ಮತ್ತೆ ಪರಿಷ್ಕರಿಸಬಹುದಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಿಜವಾದ ಸಾವಿನ ಸಂಖ್ಯೆ ಇಪ್ಪತ್ತು ಪಟ್ಟು ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

“ಜನರು ತಮ್ಮ ಕುಟುಂಬ ಸದಸ್ಯರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಂದು ಸಾಬೀತುಪಡಿಸಲು ನಿಜವಾದ ದಾಖಲೆಯೊಂದಿಗೆ  ಮುಂದೆ ಬಂದರೆ ಅಂಕಿಅಂಶಗಳನ್ನು ಪರಿಷ್ಕರಿಸಲು ನಾವು ಮುಕ್ತರಾಗಿದ್ದೇವೆ. ಸಹಾಯ ಮಾಡುವುದು ನಮ್ಮ ನಿಜವಾದ ಉದ್ದೇಶವೇ ಹೊರತು ವಿಷಯವನ್ನು  ಮರೆಮಾಡುವುದಲ್ಲ. ಇನ್ನೂ ಕಾಣೆಯಾಗಿರುವ ಕೆಲವು ಹೆಸರುಗಳನ್ನು ನಾವು ತಳ್ಳಿಹಾಕುತ್ತಿಲ್ಲ” ಎಂದು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....