Homeಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಒಂದು ಸಂಗತಿ ಈಗ ಕನ್ನಡದಲ್ಲೂ ವೈರಲ್‍ ಆಗಿದೆ. ಅದರ ಪ್ರಕಾರ, ಹಿಂದೂ ಯುವತಿಯರು ಎಚ್ಚೆತ್ತುಕೊಂಡಿದ್ದಾರಂತೆ. ಏಕೆ ಅಂದರೆ, ತಾನು ಹಿಂದೂ ಎಂದು ನಂಬಿಸಿದ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಒಬ್ಬಳನ್ನು ಉಗ್ರರಿಗೆ ಮಾರಲು ಹೊರಟಿದ್ದ, ಸತ್ಯ ತಿಳಿದ ಯುವತಿ ಆತನನ್ನು ಕೊಂದೇ ಬಿಟ್ಟಳು. ಹಿಂದೂ ಯುವತಿಯರು ಎಚ್ಚೆತ್ತುಕೊಳ್ಳುತ್ತಿದ್ದಾರೆ ಎಂಬುದು ಈ ಸಂದೇಶದ ಸಾರಾಂಶ..

ಇದನ್ನು ಕೆಲವರು ಸುಳ್ಳು ಅಂತ ಗೊತ್ತಿದ್ದರೂ ವೈರಲ್‍ ಮಾಡುತ್ತಿದ್ದರೆ, ಅವರನ್ನು ಫಾಲೋ ಮಾಡುವವರು ಕಣ್ಣುಮುಚ್ಚಿ ಷೇರ್ ಮಾಡುತ್ತಿದ್ದಾರೆ.

ವಾಸ್ತವ ಏನು?

ಈ ಸಂದೇಶದಲ್ಲಿ ಹಾಕಿರುವ ಫೋಟೋ ಒಂದು ವೆಬ್‍ ಸೀರೀಸ್‍ ಪಾತ್ರದ್ದು! ಫ್ಯಾಮಿಲಿ ಮ್ಯಾನ್‍ ಸಿರೀಸ್‍-2ನಲ್ಲಿ ಈ ಪಾತ್ರವಿದೆ. ಈ ಪಾತ್ರಕ್ಕೆ ಎರಡು ಹೆಸರುಗಳಿವೆ. ಕಲ್ಯಾಣ್‍ ಮತ್ತು ಸಲ್ಮಾನ್‍. ಇದು ಬ್ರೇನ್‍ವಾಶ್‍ಗೆ ಒಳಗಾದ ಮುಸ್ಲಿಂ ಯುವಕನ ಪಾತ್ರ. ಈ ಪಾತ್ರದ ಫೋಟೊವನ್ನೇ ಪೋಸ್ಟರ್ ಮಾಡಿ ಈ ಸಂದೇಶ ಹರಡಲಾಗಿದೆ. ಅಂದರೆ ರೀಲ್‍ ಲೈಫ್‍ ಪಾತ್ರವನ್ನು ರಿಯಲ್‍ ಲೈಫ್‍ಗೆ ತರಲು ತಿಣುಕಾಡಿದ್ದಾರೆ.

ಅಮೆಜಾನ್‍ ಪ್ರೈಂನಲ್ಲಿ ಪ್ರಸಾರವಾಗುವ ಈ ಸಿರೀಸ್‍ ತಕ್ಕಮಟ್ಟಿಗೆ ಜನಪ್ರಿಯವೂ ಆಗಿದೆ. ಇದು ಥ್ರಿಲ್ಲರ್ ಸ್ಟೋರಿಯಾಗಿದ್ದು, ಬಾಲಿವುಡ್‍ನ ಪ್ರತಿಭಾವಂತ ನಟ ಮನೋಜ್‍ ಬಾಜಪೈ ಇದರ ಹೀರೊ. ಶ್ರೀಕಾಂತ್‍ ತಿವಾರಿ (ಮನೋಜ್‍ ಬಾಜಪೈ) ಎನ್‍ಐಎನಲ್ಲಿ ಸ್ಪೇಷಲ್‍ ತನಿಖಾ ಆಫೀಸರ್. ಈ ಸಿರಿಯಲ್‍ನಲ್ಲಿ ಮೇಲೆ ತಿಳಿಸಿದ ಪೋಸ್ಟರ್‌ನಲ್ಲಿರುವ ಕಲ್ಯಾಣ್ ಅಲಿಯಾಸ್‍ ಸಲ್ಮಾನ್‍ (ಬ್ರೇನ್‍ವಾಶ್‍ಗೆ ಒಳಗಾದ ಮುಸ್ಲಿಂ ಯುವಕನ ಪಾತ್ರ) ಹೀರೊ ಶ್ರೀಕಾಂತ್‍ನ ಪುತ್ರಿಯನ್ನು ಅಪಹರಿಸುತ್ತಾನೆ. ಇದಿಷ್ಟು ಕತೆ.

ಅಭಯ ವರ್ಮಾ ಎನ್ನುವ ನಟ  ಕಲ್ಯಾಣ್‍/ಸಲ್ಮಾನ್‍ ಪಾತ್ರ ಮಾಡಿದ್ದಾರೆ. ಅವರ ಫೋಟೊ ಹಾಕಿ, ರೀಲ್‍ ಘಟನೆ ರಿಯಲ್‍ ಎಂಬಂತೆ ಬಿಂಬಿಸಿ ಪೋಸ್ಟರ್ ಮಾಡಲಾಗಿದೆ.

ನೂರಾರು ಭಕ್ತರು ಇದು ನೈಜ ಘಟನೆ ಎಂದು ಭಾವಿಸಿ ಈ ಫೇಕ್‍ ಸಂದೇಶವನ್ನು ವೈರಲ್‍ ಮಾಡುತ್ತಿದ್ದಾರೆ!


ಇದನ್ನೂ ಓದಿ: ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ – ಲಸಿಕೆ ಹಾಕಿಸಿಕೊಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...