Homeಮುಖಪುಟಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

ಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

- Advertisement -
- Advertisement -

ದೊಡ್ಡ ಸಭೆ, ಸಮಾರಂಭಗಳು ಕೊರೊನಾ ಸೋಂಕಿನ ಹರಡುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ತಿಳಿದಿದ್ದರೂ ಕೂಡ, ಒಡಿಶಾ ಸರ್ಕಾರ ಜುಲೈ 12 ರಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಘೋಷಿಸಿದೆ.

ಪ್ರತಿ ವರ್ಷ ರಥಯಾತ್ರೆ ನಡೆಯಲಿದ್ದು, ಭಗವಾನ್ ಜಗನ್ನಾಥ, ಭಗವಾನ್ ಬಾಲಭದ್ರ ಮತ್ತು ದೇವಿ ಸುಭದ್ರಾ ರಥಗಳನ್ನು ಸಾವಿರಾರು ಭಕ್ತರು ಎಳೆಯುತ್ತಾರೆ. ಕೊರೊನಾ ಕಾರಣದಿಂದ ಕಳೆದ ಬಾರಿಯು ಸೀಮಿತ ಜನರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿಯು ಸೀಮಿತ 500 ಮಂದಿಗೆ ಅವಕಾಶ ನೀಡಲಾಗಿದೆ.

ಜುಲೈ 12 ರಂದು ನಡೆಯಲಿರುವ ರಥಯಾತ್ರೆಯಲ್ಲಿ ಭಕ್ತರು ಭಾಗವಹಿಸದಂತೆ ಪುರಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಲಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಜೆನಾ ಹೇಳಿದ್ದಾರೆ. ಪುರಿ ಬಿಟ್ಟು ಬೇರೆ ಯಾವುದೇ ಸ್ಥಳದಲ್ಲಿ ಯಾತ್ರೆ ನಡೆಯುವುದಿಲ್ಲ. ಆದರೆ, ದೇವಾಲಯದ ಆವರಣದಲ್ಲಿ ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ಈ ವರ್ಷ ರಥಯಾತ್ರೆಯನ್ನು ಜಗನ್ನಾಥ ದೇವಸ್ಥಾನದ ಮುಂಭಾಗದ ಭವ್ಯವಾದ ರಸ್ತೆಯಾದ ಬಾದದಂಡದಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಮಾಡಿದಂತೆ ರಾಜ್ಯದಲ್ಲಿ ಬೇರೆಲ್ಲಿಯೂ ಯಾತ್ರೆ ನಡೆಸಲಾಗುವುದಿಲ್ಲ. ಆದಾಗ್ಯೂ, ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳನ್ನು ಆವರಣದೊಳಗಿನ ದೇವಾಲಯಗಳಲ್ಲಿ ಮಾಡಬಹುದು. ಪುರಿಯನ್ನು ಹೊರತುಪಡಿಸಿ ಒಡಿಶಾದ ಸ್ಥಳಗಳಲ್ಲಿ ಅಥವಾ ದೇವಾಲಯಗಳಲ್ಲಿ ಯಾವುದೇ ರಥಗಳನ್ನು ಎಳೆಯಲಾಗುವುದಿಲ್ಲ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಭಗವಾನ್ ಜಗನ್ನಾಥನ ಪುರೋಹಿತರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಅಂತಿಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವವರು ಅಥವಾ ರಥಯಾತ್ರೆಗೆ ಮುನ್ನ 48 ಗಂಟೆಗಳ ಒಳಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರ ತಂದವರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ರಥಯಾತ್ರೆಯಲ್ಲಿ 500 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ರಥಯಾತ್ರೆಯಲ್ಲಿ ರೈಲುಗಳು, ಬಸ್ಸುಗಳು ಮತ್ತು ಖಾಸಗಿ ವಾಹನಗಳನ್ನು ಪುರಿ ಪಟ್ಟಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ. ಕೊರೊನಾ ಮಾನದಂಡಗಳನ್ನು ಪಾಲಿಸಿಕೊಂಡೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೊದಲು ಪುರಿ ಜಗನ್ನಾಥ ಯಾತ್ರೆಯಲ್ಲಿ ದಿನಕ್ಕೆ ಸುಮಾರು 8 ಲಕ್ಷ ಭಕ್ತರು ಸೇರುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...