Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

- Advertisement -
- Advertisement -

ಕೊರೊನಾ ಲಸಿಕೆ ಪಡೆದ ವ್ಯಕ್ತಿಗಳಲ್ಲಿ ಸಣ್ಣ ತಲೆನೋವು, ಸ್ವಲ್ಪ ಜ್ವರ ಅಥವಾ ಅರೆನಿದ್ರಾವಸ್ಥೆಯಿಂದ ಬಳಲುತ್ತಿರುವ ವರದಿಗಳು ಈವರೆಗೆ ಬಂದಿವೆ. ಆದರೆ, ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿಯನ್ನು ಪಡೆದುಕೊಂಡಿದೆ ಎಂಬ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳದಲ್ಲಿ ವೈರಲ್ ಆಗಿದೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋವನ್ನು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಹಂಚಿಕೊಂಡಿದ್ದಾರೆ.

ನಾಸಿಕ್‌ನ ಸಿಡ್ಕೊ ಪ್ರದೇಶದ ಶಿವಾಜಿ ಚೌಕ್‌ನಲ್ಲಿ ವಾಸವಿರುವ 71 ವರ್ಷದ ಅರವಿಂದ್ ಸೋನಾರ್, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತಯಾರಿಸಿದ ಕೊವೀಡ್ ಲಸಿಕೆ ‘ಕೋವಿಶೀಲ್ಡ್’ ನ ಎರಡನೇ ಡೋಸ್ ತೆಗೆದುಕೊಂಡ ಮೂರು ದಿನದ ನಂತರ ಉಕ್ಕಿನ, ಕಬ್ಬಿಣದ ವಸ್ತುಗಳು ತನ್ನ ದೇಹಕ್ಕೆ ಅಂಟಿಕೊಳ್ಳುತ್ತಿವೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

 

View this post on Instagram

ಸೋಷಿಯಲ್ ಮೀಡಿಯಾದಲ್ಲಿ ಉಕ್ಕಿನ ವಸ್ತುಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವ ಪ್ರಕರಣಗಳನ್ನು ನೋಡಿದ ನಂತರ, ಅರವಿಂದ್ ಕೂಡ ಪ್ರಯತ್ನಿಸಿದ್ದಾರೆ. ಆಗ ಕಬ್ಬಿಣ ಮತ್ತು ಉಕ್ಕಿನ ವಸ್ತುಗಳು, ನಾಣ್ಯಗಳು ಮತ್ತು ಚಮಚಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವುದನ್ನು ನೋಡಿ ಆಶ್ಚರ್ಯ ಹೊಂದಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್ ಚೆಕಿಂಗ್ ಘಟಕ ‘ಪಿಐಬಿ ಫ್ಯಾಕ್ಟ್ ಚೆಕ್’ ಈ ಘಟನೆಗಳು “ಆಧಾರರಹಿತ” ಎಂದು ಕರೆದಿದೆ.

’ಲಸಿಕೆಗಳು ಮಾನವ ದೇಹದಲ್ಲಿ ಕಾಂತೀಯ ಪ್ರತಿಕ್ರಿಯೆಯನ್ನು ಉಂಟುಮಾಡಲು ಸಾಧ್ಯವಿಲ್ಲ. ಕೊರೊನಾ ಲಸಿಕೆಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಯಾವುದೇ ಲೋಹ ಆಧಾರಿತ ಪದಾರ್ಥಗಳನ್ನು ಹೊಂದಿರುವುದಿಲ್ಲ. ಲಸಿಕೆ ಪಡೆದ ಮೇಲೆ ಸ್ವಲ್ಪ ತಲೆನೋವು, ಇಂಜೆಕ್ಷನ್ ಕೊಟ್ಟ ಭಾಗದಲ್ಲಿ ನೋವು ಅಥವಾ ಸಣ್ಣ ಜ್ವರ ಮುಂತಾದ ಲಘು ಅಡ್ಡಪರಿಣಾಮಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

 

ಇನ್ನು, ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ತನ್ನ ವೆಬ್‌ಸೈಟ್‌ನಲ್ಲಿ ’ಕೊವೀಡ್ ಲಸಿಕೆಗಳು ಚುಚ್ಚುಮದ್ದು ಪಡೆದ ಸ್ಥಳದಲ್ಲಿ  ಅಯಸ್ಕಾಂತೀಯ ಗುಣವನ್ನು ಉತ್ಪಾದಿಸುವ ಅಂಶಗಳನ್ನು ಒಳಗೊಂಡಿಲ್ಲ. ಎಲ್ಲಾ ಲಸಿಕೆಗಳು ಕಬ್ಬಿಣ, ನಿಕಲ್, ಕೋಬಾಲ್ಟ್, ಲಿಥಿಯಂ ಮತ್ತು ಅಪರೂಪದ ಭೂಮಿಯ ಮಿಶ್ರಲೋಹಗಳಂತಹ ಲೋಹಗಳಿಂದ ಮುಕ್ತವಾಗಿವೆ’ ಎಂದು ವಿವರಿಸಿದೆ. ಡಬ್ಲ್ಯುಎಚ್‌ಒ ಸಹ ಅದನ್ನೇ ಹೇಳಿದೆ.

ನಾಸಿಕ್‌ ವ್ಯಕ್ತಿಯ ದೇಹಕ್ಕೆ ಕಬ್ಬಿಣ, ಸ್ಟೀಲ್‌ ವಸ್ತುಗಳು ಅಂಟಿಕೊಳ್ಳುವುದಕ್ಕೂ, ಅವರು ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಅವರ ಮನೆಗೆ ಹೋಗಿ ಪರಿಶೀಲಿಸಿದ್ದೇವೆ. ಅವರ ಆರೋಗ್ಯದ ಸೂಚ್ಯಂಕಗಳು ಸರಿಯಾಗಿವೆ. ಈ ಕುರಿತು ನಾವು ವಿವರವಾದ ವರದಿ ತಯಾರಿಸುತ್ತೇವೆ ಎಂದು ನಾಸಿಕ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ನಾನು ಈ ರೀತಿಯ ವಿಡಿಯೋ ನೋಡಿದ್ದೆ. ಹಾಗಾಗಿ ಎರಡೂ ಡೋಸ್ ಲಸಿಕೆ ಪಡೆದ ನಮ್ಮ ತಂದೆ ತಾಯಿಯ ಮೇಲೆ ಸ್ಟೀಲ್ ಚಮಚಗಳು ಮತ್ತು ನಾಣ್ಯಗಳನ್ನು ಅಂಟಿಸಲು ಯತ್ನಿಸಿದೆ. ನಮ್ಮ ತಂದೆಯ ದೇಹದ ಮೇಲೆ ಅವು ಅಂಟಿಕೊಂಡವು, ನಮ್ಮ ತಾಯಿಯ ದೇಹದ ಮೇಲಲ್ಲ” ಎಂದು ಸೋನಾರ್‌ರವರ ಮಗ ಜಯಂತ್ ತಿಳಿಸಿದ್ದಾರೆ.

ಈ ಕುರಿತು ವಿವರವಾದ ಅಧ್ಯಯನ, ಸಂಶೋಧನೆ ನಡೆಸಲು ಸ್ಥಳೀಯ ಕಾರ್ಯಕರ್ತರು, ವೈದ್ಯರು ಮುಂದಾಗಿದ್ದಾರೆ.


ಇದನ್ನೂ ಓದಿ: ಲಸಿಕೆಗಾಗಿ ಆನ್‌ಲೈನ್ ನೋಂದಣಿ: ಇಂಟರ್‌ನೆಟ್ ಇಲ್ಲದವರಿಗೂ ಬದುಕುವ ಹಕ್ಕಿದೆ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...