Homeಕರೋನಾ ತಲ್ಲಣಮಾನವ ಬಂಧುತ್ವ ವೇದಿಕೆಯಿಂದ 10 ದಿನಗಳ ಅರೋಗ್ಯ ಬಂಧುತ್ವ ವೆಬಿನಾರ್‌ ಸರಣಿ ಆರಂಭ

ಮಾನವ ಬಂಧುತ್ವ ವೇದಿಕೆಯಿಂದ 10 ದಿನಗಳ ಅರೋಗ್ಯ ಬಂಧುತ್ವ ವೆಬಿನಾರ್‌ ಸರಣಿ ಆರಂಭ

- Advertisement -
- Advertisement -

ಸತೀಶ್ ಜಾರಕಿಹೋಳಿ ನೇತೃತ್ವದ ಮಾನವ ಬಂಧುತ್ವ ವೇದಿಕೆಯು ಕೋವಿಡ್‌ ಸಂಬಂಧ ಜಾಗೃತಿ ಮೂಡಿಸಲು 10 ದಿನಗಳ  ಆರೋಗ್ಯ ಬಂಧುತ್ವ ಅಭಿಯಾನ ಎಂಬ ವೆಬಿನಾರ್‌ ಸರಣಿಯನ್ನು ಆರಂಭಿಸಿದೆ.‌ ಜಾಗೃತಿ ಅಭಿಯಾನದ ಮೊದಲ ದಿನವಾದ ನಿನ್ನೆ ಜೂನ್‌ 10 ರ ಗುರುವಾರ ಸಂಜೆ 7 ಗಂಟೆಗೆ ಅಭಿಯಾನದ ಉದ್ಘಾಟನೆ ನಡೆಯಿತು. ಘಟಪ್ರಭಾದ ಡಾ. ಎನ್‌ ಎಸ್‌ ಹರ್ಡೀಕರ್‌ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.

ಅರೋಗ್ಯ ಬಂಧುತ್ವ ವೆಬಿನಾರ್‌ ಸರಣಿಯ ಮೊದಲ ಕಂತಿನಲ್ಲಿ ಕೋವಿಡ್‌ ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ವಿಚಾರ ಸಂಕೀರ್ಣ ನಡೆಯಿತು. ವಿಜ್ಞಾನಿ ಗಿರೀಶ್‌ ಮೂಡ್‌ ಮಾತನಾಡಿ, “ಪ್ರಕೃತಿಗಿಂತ ಯಾರೂ ದೊಡ್ಡವರಲ್ಲ. ವಿಜ್ಞಾನಿಗಳೂ ಕೂಡ ಪ್ರಕೃತಿಯ ವಿರುದ್ಧ ಹೋಗಲು ಸಾಧ್ಯವಿಲ್ಲ. 2019 ರಲ್ಲಿ ವೂಹಾನ್‌ ನಿಂದ ಕೇರಳಕ್ಕೆ ಭೇಟಿನೀಡಿದ ವ್ಯಕ್ತಿಯಲ್ಲಿ ಮೊಟ್ಟ ಮೊದಲು ಭಾರತದಲ್ಲಿ ಕೊರೋನಾ ವೈರಸ್‌ ಕಾಣಿಸಿಕೊಂಡಿತ್ತು. ಇಂದು ಅದು ಮನುಷ್ಯನಿಗೆ, ವಿಜ್ಞಾನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೊರೋನಾ  ವೈರಸ್‌ ಎಲ್ಲಿಗೂ ಹೋಗುವುದಿಲ್ಲ. ನಾವು ಅದನ್ನು ಎದುರಿಸಲು ಕಲಿಯಬೇಕು. ಕೋವಿಡ್‌ ಪಾಸಿಟಿವ್‌ ಅಥವಾ ನೆಗೆಟಿವ್‌ ಇರಲಿ ಸೂಕ್ತ ಜಾಗೃತೆಯನ್ನು ವಹಿಸಬೇಕು” ಎಂದರು.

ಇದನ್ನೂ ಓದಿ : 5 ವರ್ಷದಲ್ಲಿ 14 ಸರ್ಕಾರಿ ಹುದ್ದೆಗೆ ಆಯ್ಕೆಯಾದ ಬಾಗಲಕೋಟೆಯ ಮಹಂತೇಶ್ ಬ್ಯಾಡಗಿ

ಮಾನವ ಬಂಧುತ್ವ ವೇದಿಕೆಯ ವಿಭಾಗೀಯ ಸಂಚಾಲಕರಾದ ಅನಂತ್‌ ನಾಯ್ಕರ್‌ ದಿಕ್ಸೂಚಿ ಮಾತುಗಳನ್ನಾಡಿ ಕೊರೋನಾ ಇಡೀ ಜಗತ್ತನ್ನು ಬಗ್ಗು ಬಡಿಯುತ್ತಿದೆ . ಜನರ ಜೀವನ ತತ್ತರಿಸುತ್ತಿದೆ. ಆಳುವವರ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಮನೋಭಾವವೇ ಕಾರಣ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ರವಿಂದ್ರ ನಾಯ್ಕರ್‌, “ಬಂಧುತ್ವದಿಂದ ಮಾತ್ರ ಇಂತಹ ಸಂಕಷ್ಟಗಳನ್ನು ಎದುರಿಸಲು ಸಾಧ್ಯ. ಆತ್ವವಿಶ್ವಾಸ, ಆತ್ಮಸ್ಥೈರ್ಯ ಹೆಚ್ಚಿಸುವ ಮೂಲಕ ರೋಗವನ್ನು ಹೊಡೆದೋಡಿಸಲು ಸಾಧ್ಯ ಎಂದರು.


 

ಇದನ್ನೂ ಓದಿ : ಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...