Homeಮುಖಪುಟಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!

- Advertisement -
- Advertisement -

ಇದೇ ಭಾನುವಾರ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ‘ಸೋಶಿಯಲಿಸಂ’ ಎಂಬ ಯುವಕ ಮತ್ತು ‘ಮಮತಾ ಬ್ಯಾನರ್ಜಿ’ ಎಂಬ ಯುವತಿಯ ನಡುವೆ ಸರಳ ವಿವಾಹ ನಡೆಯಲಿದೆ. ಈ ಇಬ್ಬರ ಹೆಸರುಗಳು ವಿಶೇಷವಾದ ಕಾರಣಕ್ಕೆ ಈ ವಿವಾಹದ ಸುದ್ದಿ ಈಗ ದೇಶಾದ್ಯಂತ ವೈರಲ್ ಆಗಿವೆ. ವರನ ತಂದೆ ಅಪ್ಪಟ ಕಮ್ಯುನಿಷ್ಟ್ ಸಿದ್ದಾಂತ ಪ್ರೇಮಿಯಾದುದ್ದೇ ಈ ವಿವಾಹ ಇಂದು ದೇಶಾದ್ಯಂತ ಚರ್ಚೆಗೊಳಗಾಗಲು ಕಾರಣವಾಗಿವೆ.

ತಮಿಳುನಾಡಿನ ಸೇಲಂ ನಗರದ CPI ಕಾರ್ಯಕರ್ತರಾದ 52 ವರ್ಷದ ಮೋಹನ್ ಎಂಬುವವರು ಅಪ್ಪಟ ಕಮ್ಯುನಿಷ್ಟ್ ಹೋರಾಟಗಾರರು. ಅವರ ತಂದೆ ಮತ್ತು ತಾತ ಕೂಡ ಕಮ್ಯುನಿಷ್ಟರೆ.. ಅದೇ ಹಾದಿಯಲ್ಲಿ ಬೆಳೆದ ಮೋಹನ್ ಸೋವಿಯತ್ ರಷ್ಯಾ ವಿಭಜನೆ ಸಂದರ್ಭದಲ್ಲಿ ಕಮ್ಯುನಿಷ್ಟ್ ಸಿದ್ದಾಂತ ಮುಗಿದ ಅಧ್ಯಾಯ ಎಂಬ ಟೀಕೆಗಳನ್ನು ಕೇಳಿ ಬೇಸರಗೊಂಡಿದ್ದರು. ಆಗ ಅವರು ತಮ್ಮ ಮಕ್ಕಳಿಗೆ ತಾನು ನಂಬಿದ್ದ ಸಿದ್ದಾಂತದ ಹೆಸರಿಡಲು ದೃಢ ನಿರ್ಧಾರ ಮಾಡಿದರು. ಅಂತೆಯೇ ತಮ್ಮ ಮೂರು ಜನ ಮಕ್ಕಳಿಗೆ ಕಮ್ಯುನಿಸಂ, ಲೆನಿನಿಸಂ ಹಾಗೂ ಸೋಶಿಯಲಿಸಂ ಎಂದು ಹೆಸರಿಟ್ಟಿದ್ದಾರೆ. “ನಾವು ಒಂದು ದಿನ ಸಾಯಬಹುದು. ಆದರೆ ಈ ಹೆಸರುಗಳು ನಮ್ಮ ಸಿದ್ದಾಂತವನ್ನು ಯಾವಾಗಲೂ ಪ್ರತಿಬಿಂಬಿಸುತ್ತವೆ” ಎಂದು ಮೋಹನ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಹಂಚಿಕೊಂಡಿದ್ದಾರೆ.

ಈಗ ಸೋಶಿಯಲಿಸಂ ಎಂಬ ಹೆಸರಿನ ಮೂರನೇ ಮಗನಿಗೆ ಮದುವೆ ನಿಶ್ಚಯವಾಗಿದೆ. ಆದರೆ ಅದರಲ್ಲೂ ವಿಶೇಷವಿದೆ. ಅದೇನೆಂದರೆ ಆತ ಮದುವೆಯಾಗುತ್ತಿರುವ ಮದುಮಗಳ ಹೆಸರು ಮಮತಾ ಬ್ಯಾನರ್ಜಿ!. ಈ ಮಮತಾ ಬ್ಯಾನರ್ಜಿಯ ಕುಟುಂಬ ಸದಸ್ಯರೆಲ್ಲರೂ ಅನಾದಿ ಕಾಲದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಂತೆ. ಪಶ್ಚಿಮ ಬಂಗಾಳದ ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರು 20 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು ತುಂಬಾ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದನ್ನು ಗಮನಿಸಿ, ಅಭಿಮಾನದಿಂದ ಈ ತಮಿಳುನಾಡಿನ ಕಾಂಗ್ರೆಸ್ ಕುಟುಂಬ ತಮ್ಮ ಮನೆಯಲ್ಲಿ ಜನಿಸಿದ ಹೆಣ್ಣು ಮಗುವಿಗೆ ಮಮತಾ ಬ್ಯಾನರ್ಜಿ ಎಂದು ಹೆಸರಿಟ್ಟಿದ್ದರಂತೆ. ಆ ಹೆಣ್ಣು ಮಗು ಸದ್ಯದ ಮದುಮಗಳು.. ಇವರಿಬ್ಬರ ಮದುವೆಯ ಆಮಂತ್ರಣ ಪತ್ರಿಕೆ ಈಗ ಇಡೀ ದೇಶದಲ್ಲಿ ವೈರಲ್ ಆಗುತ್ತಿದೆ!

ಇವರಿಬ್ಬರ ಮದುವೆ ಭಾನುವಾರದಂದು ಸೇಲಂನಲ್ಲಿ ಜರುಗಲಿದೆ. ತಮಿಳುನಾಡಿನ ಸಿಪಿಐ ರಾಜ್ಯ ಕಾರ್ಯದರ್ಶಿ ಆರ್.ಮುಥಾರಸನ್ ಪಾಲ್ಗೊಳ್ಳಿದ್ದಾರೆ. ಈ ವಿವಾಹಕ್ಕೆ ನೂರಾರು ಜನ ಶುಭ ಹಾರೈಸಿದ್ದಾರೆ. ಇನ್ನು ಕೊನೆಯದಾಗಿ ಒಂದು ವಿಷಯವೆಂದರೆ ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!


ಇದನ್ನೂ ಓದಿ; 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ನರ್ತಕಿ ನಟರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...