Homeಮುಖಪುಟಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!

- Advertisement -
- Advertisement -

ಇದೇ ಭಾನುವಾರ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ‘ಸೋಶಿಯಲಿಸಂ’ ಎಂಬ ಯುವಕ ಮತ್ತು ‘ಮಮತಾ ಬ್ಯಾನರ್ಜಿ’ ಎಂಬ ಯುವತಿಯ ನಡುವೆ ಸರಳ ವಿವಾಹ ನಡೆಯಲಿದೆ. ಈ ಇಬ್ಬರ ಹೆಸರುಗಳು ವಿಶೇಷವಾದ ಕಾರಣಕ್ಕೆ ಈ ವಿವಾಹದ ಸುದ್ದಿ ಈಗ ದೇಶಾದ್ಯಂತ ವೈರಲ್ ಆಗಿವೆ. ವರನ ತಂದೆ ಅಪ್ಪಟ ಕಮ್ಯುನಿಷ್ಟ್ ಸಿದ್ದಾಂತ ಪ್ರೇಮಿಯಾದುದ್ದೇ ಈ ವಿವಾಹ ಇಂದು ದೇಶಾದ್ಯಂತ ಚರ್ಚೆಗೊಳಗಾಗಲು ಕಾರಣವಾಗಿವೆ.

ತಮಿಳುನಾಡಿನ ಸೇಲಂ ನಗರದ CPI ಕಾರ್ಯಕರ್ತರಾದ 52 ವರ್ಷದ ಮೋಹನ್ ಎಂಬುವವರು ಅಪ್ಪಟ ಕಮ್ಯುನಿಷ್ಟ್ ಹೋರಾಟಗಾರರು. ಅವರ ತಂದೆ ಮತ್ತು ತಾತ ಕೂಡ ಕಮ್ಯುನಿಷ್ಟರೆ.. ಅದೇ ಹಾದಿಯಲ್ಲಿ ಬೆಳೆದ ಮೋಹನ್ ಸೋವಿಯತ್ ರಷ್ಯಾ ವಿಭಜನೆ ಸಂದರ್ಭದಲ್ಲಿ ಕಮ್ಯುನಿಷ್ಟ್ ಸಿದ್ದಾಂತ ಮುಗಿದ ಅಧ್ಯಾಯ ಎಂಬ ಟೀಕೆಗಳನ್ನು ಕೇಳಿ ಬೇಸರಗೊಂಡಿದ್ದರು. ಆಗ ಅವರು ತಮ್ಮ ಮಕ್ಕಳಿಗೆ ತಾನು ನಂಬಿದ್ದ ಸಿದ್ದಾಂತದ ಹೆಸರಿಡಲು ದೃಢ ನಿರ್ಧಾರ ಮಾಡಿದರು. ಅಂತೆಯೇ ತಮ್ಮ ಮೂರು ಜನ ಮಕ್ಕಳಿಗೆ ಕಮ್ಯುನಿಸಂ, ಲೆನಿನಿಸಂ ಹಾಗೂ ಸೋಶಿಯಲಿಸಂ ಎಂದು ಹೆಸರಿಟ್ಟಿದ್ದಾರೆ. “ನಾವು ಒಂದು ದಿನ ಸಾಯಬಹುದು. ಆದರೆ ಈ ಹೆಸರುಗಳು ನಮ್ಮ ಸಿದ್ದಾಂತವನ್ನು ಯಾವಾಗಲೂ ಪ್ರತಿಬಿಂಬಿಸುತ್ತವೆ” ಎಂದು ಮೋಹನ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಹಂಚಿಕೊಂಡಿದ್ದಾರೆ.

ಈಗ ಸೋಶಿಯಲಿಸಂ ಎಂಬ ಹೆಸರಿನ ಮೂರನೇ ಮಗನಿಗೆ ಮದುವೆ ನಿಶ್ಚಯವಾಗಿದೆ. ಆದರೆ ಅದರಲ್ಲೂ ವಿಶೇಷವಿದೆ. ಅದೇನೆಂದರೆ ಆತ ಮದುವೆಯಾಗುತ್ತಿರುವ ಮದುಮಗಳ ಹೆಸರು ಮಮತಾ ಬ್ಯಾನರ್ಜಿ!. ಈ ಮಮತಾ ಬ್ಯಾನರ್ಜಿಯ ಕುಟುಂಬ ಸದಸ್ಯರೆಲ್ಲರೂ ಅನಾದಿ ಕಾಲದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಂತೆ. ಪಶ್ಚಿಮ ಬಂಗಾಳದ ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರು 20 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು ತುಂಬಾ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದನ್ನು ಗಮನಿಸಿ, ಅಭಿಮಾನದಿಂದ ಈ ತಮಿಳುನಾಡಿನ ಕಾಂಗ್ರೆಸ್ ಕುಟುಂಬ ತಮ್ಮ ಮನೆಯಲ್ಲಿ ಜನಿಸಿದ ಹೆಣ್ಣು ಮಗುವಿಗೆ ಮಮತಾ ಬ್ಯಾನರ್ಜಿ ಎಂದು ಹೆಸರಿಟ್ಟಿದ್ದರಂತೆ. ಆ ಹೆಣ್ಣು ಮಗು ಸದ್ಯದ ಮದುಮಗಳು.. ಇವರಿಬ್ಬರ ಮದುವೆಯ ಆಮಂತ್ರಣ ಪತ್ರಿಕೆ ಈಗ ಇಡೀ ದೇಶದಲ್ಲಿ ವೈರಲ್ ಆಗುತ್ತಿದೆ!

ಇವರಿಬ್ಬರ ಮದುವೆ ಭಾನುವಾರದಂದು ಸೇಲಂನಲ್ಲಿ ಜರುಗಲಿದೆ. ತಮಿಳುನಾಡಿನ ಸಿಪಿಐ ರಾಜ್ಯ ಕಾರ್ಯದರ್ಶಿ ಆರ್.ಮುಥಾರಸನ್ ಪಾಲ್ಗೊಳ್ಳಿದ್ದಾರೆ. ಈ ವಿವಾಹಕ್ಕೆ ನೂರಾರು ಜನ ಶುಭ ಹಾರೈಸಿದ್ದಾರೆ. ಇನ್ನು ಕೊನೆಯದಾಗಿ ಒಂದು ವಿಷಯವೆಂದರೆ ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!


ಇದನ್ನೂ ಓದಿ; 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ನರ್ತಕಿ ನಟರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...