Homeಅಂತರಾಷ್ಟ್ರೀಯಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

- Advertisement -
- Advertisement -

ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲೂ ಅಪಾರ ಗೌರವವಿದೆ. ಜಪಾನಿನ ಪೂರ್ವ ತುದಿಯಿಂದ ಅಮೇರಿಕದ ಪಶ್ಚಿಮ ತುದಿಯವರೆಗೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಗಾಂಧಿಯ ಪ್ರತಿಮೆಗಳಿವೆ. ಅಧ್ಯಯನ ಕೇಂದ್ರಗಳಿವೆ. ದಕ್ಷಿಣ ಆಫ್ರಿಕಾದಲ್ಲಂತೂ ಮಹಾತ್ಮ ಗಾಂಧಿಯವರಿಗೆ ಇನ್ನಿಲ್ಲದ ಪ್ರೀತಿ ಮತ್ತು ಅಪಾರ ಗೌರವವಿದೆ. ಭಾರತ ಬಿಟ್ಟರೆ ಗಾಂಧಿಯವರ ಎರಡನೇ ತವರೆಂದು ದಕ್ಷಿಣ ಆಫ್ರಿಕಾವನ್ನು ಕರೆಯಲಾಗುತ್ತದೆ. ದಕ್ಷಿಣ ಆಫ್ರಿಕಾದಿಂದ ಗಾಂಧೀಜಿ ಭಾರತಕ್ಕೆ ಮರಳಿದ ಮೇಲೂ ಅವರ ಕುಟುಂಬದ ಮುಂದಿನ ಪೀಳಿಗೆಗಳು ಆದೇಶದಲ್ಲಿಯೇ ನೆಲೆಸಿವೆ. ಈಗ  ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿರುವ ಮಹಾತ್ಮ ಗಾಂಧೀಜಿಯವರ ಮರಿ ಮೊಮ್ಮೊಗಳು ಆಶಿಶ್‌ ಲತಾ ರಾಮಗೋಬಿನ್‌ ಅವರು ವಂಚನೆಯ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.‌ ಒಂದು ಕಾಲದಲ್ಲಿ ವರ್ಣಬೇಧ ನೀತಿಯ ವಿರುದ್ದ ಹೋರಾಟ ಮಾಡುವ ಮೂಲಕ ಮಹಾತ್ಮ ಗಾಂಧೀಜಿ ದಕ್ಷಿಣ ಆಫ್ರಿಕಾದ ಜೈಲುಗಳಲ್ಲಿ ಅನೇಕವರ್ಷ ಸೆರೆವಾಸ ಅನುಭವಿಸಿದ್ದರು.

ದಕ್ಷಿಣ ಆಫ್ರಿಕಾದ ಬಂದರು ನಗರಿ ಡರ್ಬನ್‌ನ ನ್ಯಾಯಾಲಯ ಗಾಂಧಿ ಕುಟುಂಬದ ಕುಡಿ ಆಶಿಶ್ ಲತಾ ರಾಮಗೋಬಿನ್‌ ಅವರಿಗೆ $4,00,000 ಹಣದ ವಂಚನೆಯ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪಿತ್ತಿದೆ. ಜೊತೆಗೆ 7 ವರ್ಷಗಳ ಜೈಲು ಶಿಕೆಯನ್ನು ವಿಧಿಸಿದೆ. ಆಶಿಶ್‌ ಲತಾ ಅವರನ್ನು ಡರ್ಬನ್‌ ಪೊಲೀಸರು ಬಂಧಿಸಿ ಜೈಲಿಗೆ ಕರೆದೊಯ್ದಿದ್ದಾರೆ. ಗಾಂಧೀಜಿಯವರ ನಂತರ ಅವರ ಕುಟುಂಬದವರೊಬ್ಬರು ದಕ್ಷಿಣ ಆಫ್ರಿಕಾದಲ್ಲಿ ಜೈಲಿಗೆ ಹೋಗುತ್ತಿರುವುದು ಇದೇ ಮೊದಲ ನಿದರ್ಶನವೆಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.

ಇದನ್ನೂ ಓದಿ : ದಕ್ಷಿಣ ಆಫ್ರಿಕಾದಲ್ಲಿ ಕೊರೋನಾ ಮೂರನೇ ಅಲೆ ಆರಂಭ

ಆಶಿಶ್‌ ಲತಾ ಅವರು ಭಾರತದಿಂದ ಬಟ್ಟೆಗಳನ್ನು ಆಮದು ಮಾಡಿಕೊಳ್ಳುವ ಸಲುವಾಗಿ ನಕಲಿ ದಾಖಲೆಗಳನ್ನು ನೀಡಿ ಹೂಡಿಕೆದಾರರಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಅವರ ಮೇಲೆ ಎಸ್‌ಎ ಮಹರಾಜ್‌ ಎಂಬುವವರು 2015 ರಲ್ಲಿ ಪ್ರಕರಣ ದಾಖಲಿಸಿದ್ದರು. ಆರ್ಥಿಕ ವಂಚನೆ ಆರೋಪಕ್ಕೆ ಸಂಬಂಧಿಸಿದ ಈ 2015 ರ ಪ್ರಕರಣದಲ್ಲಿ ಡರ್ಬನ್‌ ನ್ಯಾಯಾಲಯ ಆಶಿಶ್‌ ಲತಾ ಅವರಿಗೆ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಎಸ್ಎ. ಮಹರಾಜ್‌ ಅವರು ಆಶಿಶ್‌ ಲತಾ ಅವರ ಕೌಟುಂಬಿಕ ಹಿನ್ನೆಲೆಯ ನಂಬಿಕೆಯಲ್ಲಿ ವ್ಯವಹಾರಕ್ಕೆ ಸಹಿ ಹಾಕಿದ್ದರು ಎನ್ನಲಾಗಿದೆ.

ಆಶಿಶ್‌ ಲತಾ ಅವರ ತಾಯಿ, ಗಾಂಧೀಜಿಯವರ ಮೊಮ್ಮಗಳು ಇಳಾಗಾಂಧಿ ದಕ್ಷಿಣ ಆಫ್ರಿಕಾದ ಪ್ರಸಿದ್ಧ ಮಾನವ ಹಕ್ಕುಗಳ ಹೋರಾಟಗಾರ್ತಿಯಾಗಿದ್ದಾರೆ. ಅವರು 1994-2004 ರ ಅವಧಿಯಲ್ಲಿ ದಕ್ಷಿಣ ಆಫ್ರಿಕಾ ಸಂಸತ್ತಿನಲ್ಲಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದರು.

ಇಳಾ ಗಾಂಧಿಯವರ ಮಗಳು ಮತ್ತು ವಂಚನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆಶಿಶ್‌ ಲತಾ ರಾಮ್‌ಗೋಬಿನ್ ತಮ್ಮನ್ನು ತಾವು ಮಾನವ ಹಕ್ಕುಗಳ ಹೋರಾಟಗಾರ್ತಿಯೆಂದು ಕರೆದುಕೊಂಡಿದ್ದಾರೆ. ಜೊತೆಗೆ ಇಂಟರ್ನ್ಯಾಷನಲ್‌ ಸೆಂಟರ್‌ ಫಾರ್‌ ನಾನ್‌ ವಯಲೆನ್ಸ್‌ ಎಂಬ ಎನ್‌ಜಿಒ ನಡೆಸುತ್ತಿರುವುದಾಗಿಯೂ ತಿಳಿಸಿದ್ದಾರೆ.


ಇದನ್ನೂ ಓದಿ: ಖ್ಯಾತ ಪತ್ರಕರ್ತ ರವೀಶ್ ಕುಮಾರ್‌ಗೆ ಕೊಲೆ ಬೆದರಿಕೆ: ಆರೋಪಿಯ ಹಿಂದಿದೆ ಹಿಂಸಾವಾದಿ ಹಿಂದುತ್ವ ಪರಿವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...