Homeಅಂತರಾಷ್ಟ್ರೀಯಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

- Advertisement -
- Advertisement -

ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲೂ ಅಪಾರ ಗೌರವವಿದೆ. ಜಪಾನಿನ ಪೂರ್ವ ತುದಿಯಿಂದ ಅಮೇರಿಕದ ಪಶ್ಚಿಮ ತುದಿಯವರೆಗೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಗಾಂಧಿಯ ಪ್ರತಿಮೆಗಳಿವೆ. ಅಧ್ಯಯನ ಕೇಂದ್ರಗಳಿವೆ. ದಕ್ಷಿಣ ಆಫ್ರಿಕಾದಲ್ಲಂತೂ ಮಹಾತ್ಮ ಗಾಂಧಿಯವರಿಗೆ ಇನ್ನಿಲ್ಲದ ಪ್ರೀತಿ ಮತ್ತು ಅಪಾರ ಗೌರವವಿದೆ. ಭಾರತ ಬಿಟ್ಟರೆ ಗಾಂಧಿಯವರ ಎರಡನೇ ತವರೆಂದು ದಕ್ಷಿಣ ಆಫ್ರಿಕಾವನ್ನು ಕರೆಯಲಾಗುತ್ತದೆ. ದಕ್ಷಿಣ ಆಫ್ರಿಕಾದಿಂದ ಗಾಂಧೀಜಿ ಭಾರತಕ್ಕೆ ಮರಳಿದ ಮೇಲೂ ಅವರ ಕುಟುಂಬದ ಮುಂದಿನ ಪೀಳಿಗೆಗಳು ಆದೇಶದಲ್ಲಿಯೇ ನೆಲೆಸಿವೆ. ಈಗ  ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿರುವ ಮಹಾತ್ಮ ಗಾಂಧೀಜಿಯವರ ಮರಿ ಮೊಮ್ಮೊಗಳು ಆಶಿಶ್‌ ಲತಾ ರಾಮಗೋಬಿನ್‌ ಅವರು ವಂಚನೆಯ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.‌ ಒಂದು ಕಾಲದಲ್ಲಿ ವರ್ಣಬೇಧ ನೀತಿಯ ವಿರುದ್ದ ಹೋರಾಟ ಮಾಡುವ ಮೂಲಕ ಮಹಾತ್ಮ ಗಾಂಧೀಜಿ ದಕ್ಷಿಣ ಆಫ್ರಿಕಾದ ಜೈಲುಗಳಲ್ಲಿ ಅನೇಕವರ್ಷ ಸೆರೆವಾಸ ಅನುಭವಿಸಿದ್ದರು.

ದಕ್ಷಿಣ ಆಫ್ರಿಕಾದ ಬಂದರು ನಗರಿ ಡರ್ಬನ್‌ನ ನ್ಯಾಯಾಲಯ ಗಾಂಧಿ ಕುಟುಂಬದ ಕುಡಿ ಆಶಿಶ್ ಲತಾ ರಾಮಗೋಬಿನ್‌ ಅವರಿಗೆ $4,00,000 ಹಣದ ವಂಚನೆಯ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪಿತ್ತಿದೆ. ಜೊತೆಗೆ 7 ವರ್ಷಗಳ ಜೈಲು ಶಿಕೆಯನ್ನು ವಿಧಿಸಿದೆ. ಆಶಿಶ್‌ ಲತಾ ಅವರನ್ನು ಡರ್ಬನ್‌ ಪೊಲೀಸರು ಬಂಧಿಸಿ ಜೈಲಿಗೆ ಕರೆದೊಯ್ದಿದ್ದಾರೆ. ಗಾಂಧೀಜಿಯವರ ನಂತರ ಅವರ ಕುಟುಂಬದವರೊಬ್ಬರು ದಕ್ಷಿಣ ಆಫ್ರಿಕಾದಲ್ಲಿ ಜೈಲಿಗೆ ಹೋಗುತ್ತಿರುವುದು ಇದೇ ಮೊದಲ ನಿದರ್ಶನವೆಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.

ಇದನ್ನೂ ಓದಿ : ದಕ್ಷಿಣ ಆಫ್ರಿಕಾದಲ್ಲಿ ಕೊರೋನಾ ಮೂರನೇ ಅಲೆ ಆರಂಭ

ಆಶಿಶ್‌ ಲತಾ ಅವರು ಭಾರತದಿಂದ ಬಟ್ಟೆಗಳನ್ನು ಆಮದು ಮಾಡಿಕೊಳ್ಳುವ ಸಲುವಾಗಿ ನಕಲಿ ದಾಖಲೆಗಳನ್ನು ನೀಡಿ ಹೂಡಿಕೆದಾರರಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಅವರ ಮೇಲೆ ಎಸ್‌ಎ ಮಹರಾಜ್‌ ಎಂಬುವವರು 2015 ರಲ್ಲಿ ಪ್ರಕರಣ ದಾಖಲಿಸಿದ್ದರು. ಆರ್ಥಿಕ ವಂಚನೆ ಆರೋಪಕ್ಕೆ ಸಂಬಂಧಿಸಿದ ಈ 2015 ರ ಪ್ರಕರಣದಲ್ಲಿ ಡರ್ಬನ್‌ ನ್ಯಾಯಾಲಯ ಆಶಿಶ್‌ ಲತಾ ಅವರಿಗೆ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಎಸ್ಎ. ಮಹರಾಜ್‌ ಅವರು ಆಶಿಶ್‌ ಲತಾ ಅವರ ಕೌಟುಂಬಿಕ ಹಿನ್ನೆಲೆಯ ನಂಬಿಕೆಯಲ್ಲಿ ವ್ಯವಹಾರಕ್ಕೆ ಸಹಿ ಹಾಕಿದ್ದರು ಎನ್ನಲಾಗಿದೆ.

ಆಶಿಶ್‌ ಲತಾ ಅವರ ತಾಯಿ, ಗಾಂಧೀಜಿಯವರ ಮೊಮ್ಮಗಳು ಇಳಾಗಾಂಧಿ ದಕ್ಷಿಣ ಆಫ್ರಿಕಾದ ಪ್ರಸಿದ್ಧ ಮಾನವ ಹಕ್ಕುಗಳ ಹೋರಾಟಗಾರ್ತಿಯಾಗಿದ್ದಾರೆ. ಅವರು 1994-2004 ರ ಅವಧಿಯಲ್ಲಿ ದಕ್ಷಿಣ ಆಫ್ರಿಕಾ ಸಂಸತ್ತಿನಲ್ಲಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದರು.

ಇಳಾ ಗಾಂಧಿಯವರ ಮಗಳು ಮತ್ತು ವಂಚನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆಶಿಶ್‌ ಲತಾ ರಾಮ್‌ಗೋಬಿನ್ ತಮ್ಮನ್ನು ತಾವು ಮಾನವ ಹಕ್ಕುಗಳ ಹೋರಾಟಗಾರ್ತಿಯೆಂದು ಕರೆದುಕೊಂಡಿದ್ದಾರೆ. ಜೊತೆಗೆ ಇಂಟರ್ನ್ಯಾಷನಲ್‌ ಸೆಂಟರ್‌ ಫಾರ್‌ ನಾನ್‌ ವಯಲೆನ್ಸ್‌ ಎಂಬ ಎನ್‌ಜಿಒ ನಡೆಸುತ್ತಿರುವುದಾಗಿಯೂ ತಿಳಿಸಿದ್ದಾರೆ.


ಇದನ್ನೂ ಓದಿ: ಖ್ಯಾತ ಪತ್ರಕರ್ತ ರವೀಶ್ ಕುಮಾರ್‌ಗೆ ಕೊಲೆ ಬೆದರಿಕೆ: ಆರೋಪಿಯ ಹಿಂದಿದೆ ಹಿಂಸಾವಾದಿ ಹಿಂದುತ್ವ ಪರಿವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...