Homeಅಂತರಾಷ್ಟ್ರೀಯಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಯುರೋಪಿಯನ್‌ ಒತ್ತಡ ಹೇರಿದೆ.

- Advertisement -
- Advertisement -

ಶ್ರೀಲಂಕಾ ಸರ್ಕಾರದ ತಮಿಳರ ಮೇಲಿನ ಧೋರಣೆ ಇಡಿ ಜಗತ್ತಿಗೆ ತಿಳಿದಿರುವಂತದ್ದು. ಶ್ರೀಲಂಕಾ ಸರ್ಕಾರವೇ ಮುಂದೆ ನಿಂತು ಅಲ್ಲಿನ ತಮಿಳು ಭಾಷಿಕ ಜನಾಂಗದ ಮೇಲೆ ದೌರ್ಜನ್ಯ ನಡೆಸಿದ ಪರಿಣಾಮ ಇಂದು ಲಕ್ಷಾಂತರ ಜನ ಶ್ರೀಲಂಕನ್‌ ತಮಿಳರು ತಮ್ಮ ತಾಯ್ನಾಡು ತೊರೆದು ಭಾರತ, ಸಿಂಗಾಪುರ್‌, ಯುರೋಪ್‌, ಬ್ರಿಟನ್‌, ಚೀನಾಗಳಲ್ಲಿ ನಿರಾಶ್ರಿತರಾಗಿ ನೆಲೆಸಿದ್ದಾರೆ. ಶ್ರೀಲಂಕಾ ಸರ್ಕಾರ ತಮಿಳರ ಹಕ್ಕೊತ್ತಾಯದ ಪ್ರತಿಭಟನೆಗಳನ್ನು ಭಯೋತ್ಪಾದನೆಯಂತೆಯೇ ಕಾಣುತ್ತ ಬಂದಿದೆ. ಇದನ್ನು ಅಂತರಾಷ್ಟ್ರೀಯ ಸಮುದಾಯ, ವಿಶ್ವ ಸಂಸ್ಥೆ, ವಿಶ್ವ ಮಾನವ ಹಕ್ಕುಗಳ ಆಯೋಗಳು ಖಂಡಿಸುತ್ತಲೇ ಬಂದಿವೆ. ವಿಶ್ವ ಸಂಸ್ಥೆಯು ಶ್ರೀಲಂಕಾ ದೇಶದ ಮೇಲೆ ಹಲವು ನಿರ್ಬಂಧಗಳನ್ನು ಈಗಾಗಲೇ ವಿಧಿಸಿದೆ. ಈಗ ಯುರೋಪಿಯನ್‌ ಯೂನಿಯನ್‌ ಕೂಡ ವಿಶ್ವ ಸಂಸ್ಥೆಯ ಹಾದಿಯಲ್ಲಿಯೇ ಹೆಜ್ಜೆ ಹಾಕಿದೆ.

ನೆನ್ನೆ ಗುರುವಾರ ಜೂನ್‌ 10 ರಂದು ಯುರೋಪಿಯನ್‌ ಯೂನಿಯನ್‌ನ ಸಂಸತ್ತು ಹೊಸ ನಿರ್ಣಯ ಒಂದನ್ನು ಅಂಗೀಕರಿಸಿದೆ. ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಒತ್ತಡ ಹೇರುವಂತೆ ಯುರೋಪಿಯನ್‌ ಯೂನಿಯನ್‌ ಭಾರಿ ಬಹುಮತದಿಂದ ನಿರ್ಣಯ ಅಂಗೀಕರಿಸಿದೆ. ಯೂನಿಯನ್‌ ಸಂಸತ್‌ ನ 705 ಸದಸ್ಯರಲ್ಲಿ 628 ಸದಸ್ಯರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ : ರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

ಗುರುವಾರ ಯುರೋಪಿಯನ್‌ ಯೂನಿಯನ್‌ ಸ್ವೀಕರಿಸಿದ ಈ ರೆಸಲ್ಯೂಶನ್‌ನಲ್ಲಿ ಶ್ರೀಲಂಕಾದ ಮೇಲೆ ತಾತ್ಕಾಲಿಕ ವಾಣಿಜ್ಯ ನಿರ್ಬಂಧ ಹೇರುವುದು ಮುಖ್ಯವಾದ ಅಂಶವಾಗಿದೆ. ಶ್ರೀಲಂಕಾದ ಉತ್ಪನ್ನಗಳು ಯೂರೋಪಿನ ಮಾರುಕಟ್ಟೆಗೆ ಪ್ರವೇಶಿಸಿದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಬೇಕು ಎಂದು ಯುರೋಪಿಯನ್‌ ಪಾರ್ಲಿಮೆಂಟ್ ತನ್ನ ಸದಸ್ಯ ರಾಷ್ಟ್ರಗಳಿಗೆ ತಿಳಿಸಿದೆ. ಶ್ರೀಲಂಕಾದ ಮುತ್ತು, ರತ್ನ, ರಬ್ಬರ್‌, ಸಾಂಬಾರು, ಚಹ ಉತ್ಪನ್ನಗಳಿಗೆ ಯುರೋಪನಲ್ಲಿ ಸಾಕಷ್ಟು ಬೇಡಿಕೆ ಇದೆ. ಈ ನಿರ್ಬಂಧ ಶ್ರೀಲಂಕಾದ ಆರ್ಥಿಕತೆ ಮತ್ತು ವಿದೇಶಿ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಲಿದೆ.

ನಾವು ಶ್ರೀಲಂಕಾ ಸರ್ಕಾರ ತನ್ನ ಜನರಿಗೆ ನೀಡಿದ್ದ ಸಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ. ನಾವು ಶ್ರೀಲಂಕಾದ ಅಪಾರದರ್ಶಕ ನ್ಯಾಯ ನಿರ್ಣಯಗಳನ್ನು ನೋಡುತ್ತಿದ್ದೇವೆ. ನಿರ್ದಿಷ್ಟ ಸಮುದಾಯವನ್ನು ಶ್ರೀಲಂಕಾದಿಂದ ಹೊರಹಾಕುವ ಪ್ರಯತ್ನವನ್ನು ನೋಡುತ್ತಿದ್ದೇವೆ. ಶ್ರೀಲಂಕಾದಲ್ಲಿ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಕಾಯ್ದೆಯು ಹೋರಾಟಗಾರರು, ಬರಹಗಾರರನ್ನು ಮತ್ತು ವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವವರನ್ನು ದಮನಿಸಲು ಬಳಕೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ ಎಂದು ಯುರೋಪಿನ್‌ ಕಮಿಷನರ್‌ ಹೆಲೇನಾ ಡಾಲಿ ಅವರು ತಿಳಿಸಿದ್ದಾರೆ.

ಶ್ರೀಲಂಕಾ

 

ಯುರೋಪಿಯನ್‌ ಯುನಿಯನ್‌ ಜಗತ್ತಿನ ಎಲ್ಲರ ಮಾನವ ಹಕ್ಕುಗಳನ್ನು ಬೆಂಬಲಿಸುತ್ತದೆ. ಶ್ರೀಲಂಕಾದಲ್ಲಿ ಭಯೋತ್ಪಾದನಾ ನಿಷೇಧ ಕಾಯ್ದೆಯಡಿ ಬಂಧಿಸಿದವರನ್ನು ಸರಿಯಾದ ರೀತಿಯಲ್ಲಿ ಕಾನೂನು ಪ್ರಕಾರ ವಿಚಾರಣೆ ನಡೆಸಬೇಕು. ಈ ಕ್ರೂರಿ ದಮನಕಾರಿ ಕಾನೂನು ವಜಾಗೊಳ್ಳಬೇಕೆಂದು ಯುರೋಪಿಯನ್‌ ಯೂನಿಯನ್‌ ಶ್ರೀಲಂಕಾದ ಮೇಲೆ ಒತ್ತಡವನ್ನು ಹೇರುತ್ತದೆ ಎಂದು ಹೆಲೇನಾ ಡಾಲಿ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಸತತವಾಗಿ ನಡೆಯುತ್ತಿರುವ ಮಾನವ ಹಕ್ಕುಗಳ ಕಗ್ಗೊಲೆಯ ಕುರಿತು ಹೊಸ ರೆಸಲ್ಯೂಶನ್‌ನಲ್ಲಿ ಯುರೋಪಿಯನ್‌ ಸಂಸತ್ತು ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಜೊತೆಗೆ ಶ್ರೀಲಂಕಾ ಕುರಿತಾದ ವಿಶ್ವಸಂಸ್ಥೆಯ ವಿವಿಧ ವರದಿಗಳನ್ನೂ ಸಹ ರೆಸಲ್ಯೂಶನ್‌ನಲ್ಲಿ ಉಲ್ಲೇಖಿಸಲಾಗಿದೆ.

ಶ್ರೀಲಂಕಾಗೆ ಯುರೋಪ್‌ನಲ್ಲಿ ಕಲ್ಪಿಸಲಾಗಿದ್ದ ವಿಶೇಷ ತೆರಿಗೆ ಮತ್ತು ಆಮದು ಸುಂಕ ರಹಿತ ಮಾರುಕಟ್ಟೆ ಸೌಲಭ್ಯಕ್ಕೆ (GSP) ಯುರೋಪಿಯನ್‌ ಸಂಸತ್ತು ಅಂತ್ಯ ಹಾಡಿದೆ.

ಈ ಹಿಂದೆ 2021 ರ ಮಾರ್ಚ್‌ನಲ್ಲಿ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್‌ ಮಿಷೆಲ್‌ ಬ್ಯಾಚಲೆಟ್‌ ಶ್ರೀಲಂಕಾದ ಮೇಲೆ ಸಾಧ್ಯವಾದಷ್ಟು ನಿರ್ಬಂಧಗಳನ್ನು ಹೇರುವಂತೆ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಮನವಿ ಮಾಡಿದ್ದರು.

ಶ್ರೀಲಂಕಾದಲ್ಲಿ ದಿನೇ ದಿನೇ ಭಯೋತ್ಪಾದನಾ ನಿಷೇಧ ಕಾಯ್ದೆ ಅಡಿಯಲ್ಲಿ ಹೋರಾಟಗಾರರ ಮೇಲೆ, ತಮಿಳು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಲೈಂಗಿಕ ದೌರ್ಜನ್ಯ, ಕಗ್ಗೊಲೆ ಮುಂತಾದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ವರದಿಗಳು ಶ್ರೀಲಂಕಾದಿಂದ ಬರುತ್ತಿವೆ. ಯುರೋಪಿಯನ್‌ ಯೂನಿಯನ್‌ ನಿರ್ಬಂಧದ ನಂತರ ವಿಶ್ವ ಸಂಸ್ಥೆ ಕೂಡ ಶ್ರೀಲಂಕಾದ ಮೇಲೆ ಇನ್ನಷ್ಟು ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಗಳಿವೆ.


ಇದನ್ನೂ ಓದಿ : ಸಂಚಾರ ನಿರ್ಬಂಧ ತೆರವಿಗೆ ಚೀನಾ ಜೊತೆ ಭಾರತ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...