Homeಮುಖಪುಟರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

ರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವುದು ಒಂದೆಡೆಯಾದರೆ, ಮತ್ತೊಂದು ಕಡೆ ಈ ಹೋರಾಟವನ್ನು ಬೆಂಬಲಿಸಿ ಹರಿಯಾಣ ಹಾಗೂ ಪಂಜಾಬ್‌ನ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಪ್ರತಿಭಟನೆಗಳು ಜರುಗುತ್ತಿವೆ. ಈ ಕಾನೂನುಗಳನ್ನು ಸಂಪೂರ್ಣವಾಗಿ ರೈತ ವಿರೋಧಿ ಎಂದು ಆ ಜನರು ಭಾವಿಸಿದ್ದಾರೆ. ಇವುಗಳನ್ನು ಬೆಂಬಲಿಸುವ ರಾಜಕೀಯ ನಾಯಕರು ಹಾಗೂ ಬಿಜೆಪಿ-ಜೆಜೆಪಿ ಶಾಸಕರು ಭೇಟಿ ನೀಡಿದ ಸ್ಥಳಗಳಲ್ಲೆಲ್ಲಾ ಪ್ರತಿಭಟನೆ ನಡೆಸುತ್ತಾ, ಮುತ್ತಿಗೆ ಹಾಕುತ್ತಾ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದೇ ರೀತಿ ಪದೇ ಪದೇ ರೈತರ ಪ್ರತಿಭಟನೆಯನ್ನು ಎದುರಿಸುತ್ತಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ರವರಿಗೆ ಈ ರೈತ ಹೋರಾಟ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅವರು ರೈತ ಪ್ರತಿಭಟನೆಯನ್ನು ಎದುರಿಸಲಾಗದೇ ವರ್ಚುವಲ್‌ ಕಾರ್ಯಕ್ರಮಗಳ ಮೊರೆ ಹೋಗಿದ್ದಾರೆ! ಈ ಹಿನ್ನೆಲೆಯಲ್ಲಿ ಗುರುವಾರ 16 ಜಿಲ್ಲೆಗಳಲ್ಲಿ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆಯನ್ನು ಆನ್‌ಲೈನ್‌ ಮೂಲಕ ಉದ್ಘಾಟಿಸಿದ್ದಾರೆ ಎನ್ನಲಾಗಿದೆ.

ಇದೇ ಕಾರ್ಯಕ್ರಮದ ಭಾಗವಾಗಿ ದಾದ್ರಿಗೆ ಭೇಟಿ ನೀಡಿದ್ದ ಹರಿಯಾಣ ಮಹಿಳಾ ಅಭಿವೃದ್ದಿ ಇಲಾಖೆಯ ಅಧ್ಯಕ್ಷರಾದ ಬಬಿತಾ ಪೋಗಾಟ್‌ ಹಾಗೂ ಕೈತಾಲ್‌ಗೆ ತೆರಳಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಮಲೇಶ್ ಧಂಡಾ ವಿರುದ್ಧ ರೈತರು ಕಪ್ಪು ಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ರೈತರು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರಿಂದ ಬಬಿತಾ ಪೋಗಾಟ್‌ ನಿರ್ಗಮಿಸಲು ಆಡಳಿತವು ಬೇರೆ ಮಾರ್ಗವನ್ನು ಬಳಸಿದೆ ಎಂದು ರೈತರು ತಿಳಿಸಿದ್ದಾರೆ.

ಬಬಿತಾ ಅವರ ಆಪ್ತ ಸಹವರ್ತಿ ರಾಹುಲ್‌ ಪೋಗಾಟ್‌ ಮಾತನಾಡಿ, ರೈತ ಪ್ರತಿಭಟನಾಕಾರರನ್ನು ಮುಖಾಮುಖಿಯಾಗುವುದನ್ನು ತಪ್ಪಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಆಡಳಿತವು ಅವರನ್ನು ಬೇರೆ ಮಾರ್ಗದಲ್ಲಿ ಕಳುಹಿಸಿದೆ ಎಂದು ಹೇಳಿದ್ದಾರೆ.

ಈ ನಡುವೆ ಕೈತಾಲ್‌ನ ಬಿಕೆಯು ಅಧ್ಯಕ್ಷ ಹೋಶಿಯಾರ್‌ ಸಿಂಗ್‌ ಗಿಲ್‌, ಬಿಜೆಪಿಯ ಕಮಲೇಶ್‌ ಧಂಡಾ ಸ್ಥಳೀಯ ಸರ್ಕಾರಿ ಕಚೇರಿಗೆ ಭೇಟಿನೀಡಿದ ಸಂದರ್ಭದಲ್ಲಿ ಕಪ್ಪು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾಗಿ ತಿಳಿಸಿದರು. ರೈತ ಮಹಿಳೆಯರು ಸೇರಿದಂತೆ ಎರಡು ಟ್ರ್ಯಾಕ್ಟರ್‌ ಟ್ಯ್ರಾಲಿಗಳಲ್ಲಿ ರೈತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಜೂನ್‌ 5 ರಂದು ಕರ್ನಾಲ್‌ನಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಖಟ್ಟರ್‌ರವರಿಂದ ಗಿಡ ನೆಡುವ ಕಾರ್ಯಕ್ರಮ ನಿಗದಿಯಾಗಿತ್ತು. ಅಲ್ಲಿ ಪ್ರತಿಭಟನೆಗೆ ರೈತರು ಸಹ ಸಜ್ಜುಗೊಂಡಿದ್ದರು. ಇದರ ಸುಳಿವು ಅರಿತ ಮುಖ್ಯಮಂತ್ರಿಗಳು ರೈತರ ಪ್ರತಿಭಟನೆಯನ್ನು ಎದುರಿಸಲಾರದೇ ಒಂದೂವರೆ ಗಂಟೆ ಮುಂಚೆಯೇ ಸ್ಥಳಕ್ಕೆ ಆಗಮಿಸಿ ಗಡಿಬಿಡಿಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಹೊರಟು ಹೋಗಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಮದುವೆ ಮತ್ತು ಶವಸಂಸ್ಕಾರಗಳಂತಹ ವೈಯಕ್ತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಬಿಜೆಪಿ ನಾಯಕರ ಭೇಟಿಯನ್ನು ವಿರೋಧಿಸದಿರಲು ಸಂಯುಕ್ತ ಕಿಸಾನ್‌ ಮೋರ್ಚಾ ನಿರ್ಧರಿಸಿದೆ. ಆದರೆ, ಅವರ ರಾಜಕೀಯ ಅಥವಾ ಆಡಳಿತವು ಆಯೋಜಿಸಿರುವ ಕಾರ್ಯಕ್ರಮಗಳಿಗೆ ಹೋದಾಗಲೆಲ್ಲಾ ನಾವು ಅವರ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ನಂಬರ್‌ದಾರ್‌ ತಿಳಿಸಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟದಿಂದ ನಾವು ಸ್ಥಳೀಯ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಿದ್ದೇವೆ: ಪಂಜಾಬ್ ಬಿಜೆಪಿ ಮುಖಂಡ ಅನಿಲ್ ಜೋಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...