Homeಮುಖಪುಟಶರದ್ ಪವಾರ್ ಭೇಟಿಯಾದ ಪ್ರಶಾಂತ್ ಕಿಶೋರ್: 2024ರಲ್ಲಿ ಮೋದಿ ವಿರುದ್ಧ ಮೈತ್ರಿಕೂಟಕ್ಕೆ ಸಿದ್ದತೆ?

ಶರದ್ ಪವಾರ್ ಭೇಟಿಯಾದ ಪ್ರಶಾಂತ್ ಕಿಶೋರ್: 2024ರಲ್ಲಿ ಮೋದಿ ವಿರುದ್ಧ ಮೈತ್ರಿಕೂಟಕ್ಕೆ ಸಿದ್ದತೆ?

- Advertisement -
- Advertisement -

ಬಂಗಾಳ ಮತ್ತು ತಮಿಳುನಾಡು ಚುನಾವಣಾ ಗೆಲುವಿನಿಂದ ಹುಮ್ಮಸ್ಸಿನಲ್ಲಿರುವ ರಾಜಕೀಯ ತಂತ್ರಜ್ಞ, ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ಇಂದು ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಒಟ್ಟಿಗೆ ಊಟ ಮಾಡಿದ್ದಾರೆ. ಇದು 2024ರಲ್ಲಿ ನರೇಂದ್ರ ಮೋದಿ ವಿರುದ್ಧದ ವಿರೋಧ ಪಕ್ಷಗಳ ಪ್ರಬಲ ಮೈತ್ರಿಕೂಟಕ್ಕೆ ಸಿದ್ದತೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದು ಸೌಜನ್ಯದ ಭೇಟಿ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ​ ಟಿಎಂಸಿ ಮತ್ತು ಡಿಎಂಕೆ ಪಕ್ಷಕ್ಕೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳ ಮುಖಂಡರನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿ ಧನ್ಯವಾದ ತಿಳಿಸುತ್ತಿದ್ದಾರೆ ಅವರ ಐಪ್ಯಾಕ್ ತಂಡ ಹೇಳಿದೆ.

ಆದರೂ 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನರೇಂದ್ರ ಮೋದಿ ಎದುರು ಪ್ರಬಲ ವಿರೋಧ ಪಕ್ಷಗಳ ಮೈತ್ರಿ ಸ್ಥಾಪಿಸುವ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆ ಎಂಬ ಉಹಾಪೋಹಗಳು ಹರಿದಾಡುತ್ತಿವೆ.

ತಾನು ಕೆಲಸ ಮಾಡಿದ್ದ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸುತ್ತಿದ್ದಂತೆ ಪ್ರಶಾಂತ್ ಕಿಶೋರ್‌ ತಾನು ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರು. “ಈಗ  ನಾನು ಮಾಡುತ್ತಿರುವುದನ್ನು ಮುಂದುವರಿಸಲು ಬಯಸುವುದಿಲ್ಲ. ನಾನು ಸಾಕಷ್ಟು ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಕ್ಷೇತ್ರವನ್ನು ತ್ಯಜಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು.

ಪ್ರಶಾಂತ್ ಕಿಶೋರ್ ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರೂ, ಬಹಳಷ್ಟು ಜನರು ಅದನ್ನು ನಂಬಲು ಸಿದ್ದರಿಲ್ಲ. ಅವರು ಮತ್ತಷ್ಟು ಕೆಲಸ ಮಾಡಬೇಕೆಂದು ಬಯಸಿದ್ದಾರೆ. ಅಲ್ಲದೇ 2022ರಲ್ಲಿ ಅವರು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪರವಾಗಿ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಇನ್ನು ಬಂಗಾಳ ಚುನಾವಣೆಯಲ್ಲಿ ಅವರನ್ನು ಇನ್ನಿಲ್ಲದಂತೆ ಕಾಡಿದ ಬಿಜೆಪಿ ವಿರುದ್ಧ 2024ರ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡುವಂತೆ ಹಲವು ವಿರೋಧ ಪಕ್ಷಗಳು ಕೇಳಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಇವತ್ತಿನ ಶರದ್ ಪವಾರ್‌ ಜೊತೆಗಿನ ಭೇಟಿಗೆ ಮಹತ್ವ ಬಂದಿದೆ.

ಇನ್ನೊಂದೆಡೆ ಮಹಾರಾಷ್ಟ್ರ ಮೈತ್ರಿಯಲ್ಲಿ ಬಿರುಕಿನ ಲಕ್ಷಣಗಳು ಗೋಚರಿಸಿವೆಯೆಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಶಿವಸೇನೆ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಪ್ರಧಾನಿ ಮೋದಿಯನ್ನು ಭೇಟಿಯಾದ ಬೆನ್ನಲ್ಲೆ ಶಿವಸೇನೆ ಮುಖಂಡ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್, “ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಉನ್ನತ ನಾಯಕ” ಎಂದು ಹೊಗಳಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಈ ಭೇಟಿಯನ್ನು ಅರ್ಥೈಸಲಾಗುತ್ತಿದೆ.


ಇದನ್ನೂ ಓದಿ: ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...