Homeಮುಖಪುಟಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಕೊರೊನಾ ನಿರ್ವಹಣೆ ಟೀಕಿಸಿದ್ದ ಮತ್ತು ಕೇಂದ್ರವು “ಜೈವಿಕ ಶಸ್ತ್ರಾಸ್ತ್ರ” ವನ್ನು ಬಳಸಿದೆ ಎಂದು ಆರೋಪಿಸಿದ್ದ ಲಕ್ಷದ್ವೀಪ ಚಲನಚಿತ್ರ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ದೇಶದ್ರೋಹ ಮತ್ತು ದ್ವೇಷದ ಭಾಷಣ ಪ್ರಕರಣ ದಾಖಲಾಗಿದೆ.

ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಬಿಜೆಪಿ ಮುಖಂಡರ ದೂರಿನ ಅನ್ವಯ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ನಿರ್ಮಾಪಕಿ ಆಯೆಷಾ ಸುಲ್ತಾನಾ, ಪ್ರಾದೇಶಿಕ ಚಾನೆಲ್‌ನಲ್ಲಿ ಸುದ್ದಿ ಚರ್ಚೆಯ ಸಂದರ್ಭದಲ್ಲಿ, ಕೊರೊನಾ ನಿಯಂತ್ರಣಕ್ಕೆ ಪ್ರಫುಲ್ ಪಟೇಲ್ ನೇತೃತ್ವದ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಟೀಕಿಸಿದ್ದರು. ಕೇಂದ್ರವು ಲಕ್ಷದ್ವೀಪದ ವಿರುದ್ಧ “ಜೈವಿಕ ಶಸ್ತ್ರಾಸ್ತ್ರ” ವನ್ನು ಬಳಸಿದೆ ಎಂದು ಆರೋಪಿಸಿದ್ದರು.

“ಲಕ್ಷದ್ವೀಪದಲ್ಲಿ ಕೊರೊನಾ ಪ್ರಕರಣಗಳು ಶೂನ್ಯವಾಗಿದ್ದವು. ಈಗ ಪ್ರತಿದಿನ 100 ಪ್ರಕರಣಗಳನ್ನು ವರದಿ ಮಾಡುತ್ತಿದೆ. ಕೇಂದ್ರ ಸರ್ಕಾರವು “ಜೈವಿಕ ಶಸ್ತ್ರಾಸ್ತ್ರ” ಬಳಸುತ್ತಿದೆ ಎಂದು ನಾನು ಇದನ್ನು ಸ್ಪಷ್ಟವಾಗಿ ಹೇಳಬಲ್ಲೆ” ಎಂದು ಅವರು ಮಲಯಾಳಂನಲ್ಲಿ ಹೇಳಿದ್ದರು.

ಇದನ್ನೂ ಓದಿ:  ಲಸಿಕೆಗಾಗಿ ಆನ್‌ಲೈನ್ ನೋಂದಣಿ: ಇಂಟರ್‌ನೆಟ್ ಇಲ್ಲದವರಿಗೂ ಬದುಕುವ ಹಕ್ಕಿದೆ ಎಂದ ರಾಹುಲ್ ಗಾಂಧಿ

ಆಯೆಷಾ ಹೇಳಿಕೆಯಿಂದಾಗಿ ಬಿಜೆಪಿ ಕಾರ್ಯಕರ್ತರು ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಬಿಜೆಪಿಯ ಲಕ್ಷದ್ವೀಪ ಮುಖ್ಯಸ್ಥ ಸಿ.ಅಬ್ದುಲ್ ಖಾದರ್ ಹಾಜಿ ದೇಹ ವಿರೋಧಿ ಹೇಳಿಕೆಗಳಿಂದ ಕೇಂದ್ರ ಸರ್ಕಾರಕ್ಕೆ ಕಳಂಕ ತಂದಿದ್ದಾರೆ” ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ನಿರ್ಮಾಪಕಿ ಆಯೆಷಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗಿರುವ ಬಗ್ಗೆ ಚಿತ್ರನಿರ್ಮಾಪಕಿ ಆಯೆಷಾ ಫೇಸ್‌ಬುಕ್‌ನಲ್ಲಿ ತಮ್ಮ ಅಭಿಪ್ರಾಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಅವರು ನನ್ನ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದಾರೆ, ಆದರೆ, ಸತ್ಯವು ಗೆಲ್ಲುತ್ತದೆ ಎಂದು ನಾನು ಪುನರುಚ್ಚರಿಸಲು ಬಯಸುತ್ತೇನೆ. ಲಕ್ಷದ್ವೀಪದ ಬಿಜೆಪಿ ಕಾರ್ಯಕರ್ತರೊಬ್ಬರು ಪ್ರಕರಣ ದಾಖಲಿಸಿದ್ದಾರೆ. ನಾನು ಹುಟ್ಟಿದ ಭೂಮಿಗಾಗಿ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ನಾವು ಯಾರಿಗೂ ಹೆದರುವುದಿಲ್ಲ. ನನ್ನ ಧ್ವನಿ ಈಗ ಮತ್ತಷ್ಟು ಜೋರಾಗಿರುತ್ತದೆ” ಎಂದು ಬರೆದಿದ್ದಾರೆ.

ಆಯೆಷಾ ವಿರುದ್ಧ ಪ್ರಕರಣ ದಾಖಲಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಸಂಸದ ಶಶಿ ತರೂರ್ “ದೇಶದ್ರೋಹ” ಪದವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಲಕ್ಷದ್ವೀಪದಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿರುವ 3 ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ವಿರೋಧಿಸಿ ಲಕ್ಷದ್ವೀಪ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ವಿಭಿನ್ನ ಪ್ರತಿಭಟನೆಗಳಿಗೆ ಲಕ್ಷದ್ವೀಪ ಸಾಕ್ಷಿಯಾಗುತ್ತಿದೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...