Homeಮುಖಪುಟಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಕೊರೊನಾ ನಿರ್ವಹಣೆ ಟೀಕಿಸಿದ್ದ ಮತ್ತು ಕೇಂದ್ರವು “ಜೈವಿಕ ಶಸ್ತ್ರಾಸ್ತ್ರ” ವನ್ನು ಬಳಸಿದೆ ಎಂದು ಆರೋಪಿಸಿದ್ದ ಲಕ್ಷದ್ವೀಪ ಚಲನಚಿತ್ರ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ದೇಶದ್ರೋಹ ಮತ್ತು ದ್ವೇಷದ ಭಾಷಣ ಪ್ರಕರಣ ದಾಖಲಾಗಿದೆ.

ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಬಿಜೆಪಿ ಮುಖಂಡರ ದೂರಿನ ಅನ್ವಯ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ನಿರ್ಮಾಪಕಿ ಆಯೆಷಾ ಸುಲ್ತಾನಾ, ಪ್ರಾದೇಶಿಕ ಚಾನೆಲ್‌ನಲ್ಲಿ ಸುದ್ದಿ ಚರ್ಚೆಯ ಸಂದರ್ಭದಲ್ಲಿ, ಕೊರೊನಾ ನಿಯಂತ್ರಣಕ್ಕೆ ಪ್ರಫುಲ್ ಪಟೇಲ್ ನೇತೃತ್ವದ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಟೀಕಿಸಿದ್ದರು. ಕೇಂದ್ರವು ಲಕ್ಷದ್ವೀಪದ ವಿರುದ್ಧ “ಜೈವಿಕ ಶಸ್ತ್ರಾಸ್ತ್ರ” ವನ್ನು ಬಳಸಿದೆ ಎಂದು ಆರೋಪಿಸಿದ್ದರು.

“ಲಕ್ಷದ್ವೀಪದಲ್ಲಿ ಕೊರೊನಾ ಪ್ರಕರಣಗಳು ಶೂನ್ಯವಾಗಿದ್ದವು. ಈಗ ಪ್ರತಿದಿನ 100 ಪ್ರಕರಣಗಳನ್ನು ವರದಿ ಮಾಡುತ್ತಿದೆ. ಕೇಂದ್ರ ಸರ್ಕಾರವು “ಜೈವಿಕ ಶಸ್ತ್ರಾಸ್ತ್ರ” ಬಳಸುತ್ತಿದೆ ಎಂದು ನಾನು ಇದನ್ನು ಸ್ಪಷ್ಟವಾಗಿ ಹೇಳಬಲ್ಲೆ” ಎಂದು ಅವರು ಮಲಯಾಳಂನಲ್ಲಿ ಹೇಳಿದ್ದರು.

ಇದನ್ನೂ ಓದಿ:  ಲಸಿಕೆಗಾಗಿ ಆನ್‌ಲೈನ್ ನೋಂದಣಿ: ಇಂಟರ್‌ನೆಟ್ ಇಲ್ಲದವರಿಗೂ ಬದುಕುವ ಹಕ್ಕಿದೆ ಎಂದ ರಾಹುಲ್ ಗಾಂಧಿ

ಆಯೆಷಾ ಹೇಳಿಕೆಯಿಂದಾಗಿ ಬಿಜೆಪಿ ಕಾರ್ಯಕರ್ತರು ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಬಿಜೆಪಿಯ ಲಕ್ಷದ್ವೀಪ ಮುಖ್ಯಸ್ಥ ಸಿ.ಅಬ್ದುಲ್ ಖಾದರ್ ಹಾಜಿ ದೇಹ ವಿರೋಧಿ ಹೇಳಿಕೆಗಳಿಂದ ಕೇಂದ್ರ ಸರ್ಕಾರಕ್ಕೆ ಕಳಂಕ ತಂದಿದ್ದಾರೆ” ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ನಿರ್ಮಾಪಕಿ ಆಯೆಷಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗಿರುವ ಬಗ್ಗೆ ಚಿತ್ರನಿರ್ಮಾಪಕಿ ಆಯೆಷಾ ಫೇಸ್‌ಬುಕ್‌ನಲ್ಲಿ ತಮ್ಮ ಅಭಿಪ್ರಾಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಅವರು ನನ್ನ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದಾರೆ, ಆದರೆ, ಸತ್ಯವು ಗೆಲ್ಲುತ್ತದೆ ಎಂದು ನಾನು ಪುನರುಚ್ಚರಿಸಲು ಬಯಸುತ್ತೇನೆ. ಲಕ್ಷದ್ವೀಪದ ಬಿಜೆಪಿ ಕಾರ್ಯಕರ್ತರೊಬ್ಬರು ಪ್ರಕರಣ ದಾಖಲಿಸಿದ್ದಾರೆ. ನಾನು ಹುಟ್ಟಿದ ಭೂಮಿಗಾಗಿ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ನಾವು ಯಾರಿಗೂ ಹೆದರುವುದಿಲ್ಲ. ನನ್ನ ಧ್ವನಿ ಈಗ ಮತ್ತಷ್ಟು ಜೋರಾಗಿರುತ್ತದೆ” ಎಂದು ಬರೆದಿದ್ದಾರೆ.

ಆಯೆಷಾ ವಿರುದ್ಧ ಪ್ರಕರಣ ದಾಖಲಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಸಂಸದ ಶಶಿ ತರೂರ್ “ದೇಶದ್ರೋಹ” ಪದವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಲಕ್ಷದ್ವೀಪದಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿರುವ 3 ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ವಿರೋಧಿಸಿ ಲಕ್ಷದ್ವೀಪ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ವಿಭಿನ್ನ ಪ್ರತಿಭಟನೆಗಳಿಗೆ ಲಕ್ಷದ್ವೀಪ ಸಾಕ್ಷಿಯಾಗುತ್ತಿದೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...