Homeಮುಖಪುಟಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ...

ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಈಗ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದಾದ ಮೇಲೊಂದರಂತೆ ವಲಸೆ ಹಕ್ಕಿಗಳು ತಮ್ಮ ಹಳೆಯ ಗೂಡುಗಳಿಗೆ ಮರಳಲಾರಾಂಭಿಸಿವೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುತ್ತಿದ್ದಂತೆ ಹಿಂದೆ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೆರಿದ್ದ ನಾಯಕರು ಮತ್ತೆ ತಮ್ಮ ಹಳೆಯ ಪಕ್ಷಗಳಿಗೆ ಮರಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಾಯಕರ ದೊಡ್ಡ ಹಿಂಡೇ ಈಗ ತೃಣಮೂಲ ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿದೆ. ಅದರ ಮೊದಲ ಭಾಗವಾಗಿ ಪಶ್ಚಿಮ ಬಂಗಾಳ ಬಿಜೆಪಿಯ ಹಿರಿಯ ನಾಯಕ ಮುಕುಲ್ ರಾಯ್ ಇಂದು ತಮ್ಮ ಪುತ್ರ ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ್ ಕಾಂಗ್ರೆಸ್ ನ ಕೇಂದ್ರ ಕಚೇರಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ.

ಇಷ್ಟುದಿನ ಮುಕುಲ್ ರಾಯ್ ಬಿಜೆಪಿ ತೊರೆಯಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಮುಕುಲ್ ರಾಯ್ ಈ ಕುರಿತು ಸ್ಪಷ್ಟನೆ ನೀಡಿರಲಿಲ್ಲ. ಅದು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮುಕುಲ್ ರಾಯ್ ಎಲ್ಲಾ ಕುತೂಹಲಗಳಿಗೆ ಮತ್ತು ವದಂತಿಗಳಿಗೆ ತೆರೆ ಎಳೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಸೇರ್ಪಡೆ ಕುರಿತು ಅಧಿಕೃತವಾಗಿ ತಮ್ಮ ನಡೆಯನ್ನು ಬಹಿರಂಗಗೊಳಿಸಿದ್ದಾರೆ.

ಇನ್ನು ಮಮತಾ ಬ್ಯಾನರ್ಜಿಯವರು “ಮುಕುಲ್ ರಾಯ್ ವಾಪಸ್ ಬಂದಿದ್ದಾರೆ. ಅವರು ಎಂದಿಗೂ ಇತರರಂತೆ ದ್ರೋಹವೆಸಗಲಿಲ್ಲ” ಎಂದಿದ್ದಾರೆ. ಅಲ್ಲದೇ ಮತ್ತಷ್ಟು ಜನರು ಬಿಜೆಪಿಯಿಂದ ಬರಲಿದ್ದಾರೆ ಎಂದು ಹೇಳಿದ್ದಾರೆ.

ಮುಕುಲ್ ರಾಯ್ ಮಾತನಾಡಿ “ಬಿಜೆಪಿಯನ್ನು ತೊರೆದ ನಂತರ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡುವುದರಲ್ಲಿ ನನಗೆ ತುಂಬಾ ಖುಷಿ ಇದೆ. ನಾನು ಬಿಜೆಪಿಯಲ್ಲಿ ಇರಲು ಸಾಧ್ಯವಿಲ್ಲ. ಮಮತಾ ಬ್ಯಾನರ್ಜಿ ಬಂಗಾಳದ ಮತ್ತು ಭಾರತದ ಏಕೈಕ ನಾಯಕಿ” ಎಂದು ಬಣ್ಣಿಸಿದ್ದಾರೆ.

ಮುಕುಲ್ ರಾಯ್ ಬಿಜೆಪಿ ತೊರೆಯಲು ಕಾರಣಗಳೇನು?

ತೃಣಮೂಲ ಕಾಂಗ್ರೆಸ್ ನಿಂದ ಮೊಟ್ಟ ಮೊದಲ ಬಾರಿಗೆ‌ ಬಿಜೆಪಿ ಸೇರಿದ ನಾಯಕರೆಂದರೆ ಅದು ಮುಕುಲ್ ರಾಯ್. 2017 ರಲ್ಲಿ ಮುಕುಲ್ ರಾಯ್ TMC ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಅದಾದನಂತರ ಮುಕುಲ್ ರಾಯ್ ಅವರನ್ನು ಬಿಜೆಪಿ ಪಶ್ಚಿಮ ಬಂಗಾಳದ ರಾಜ್ಯಾಧ್ಯಕ್ಷರನ್ನಾಗಿಯೂ ನೇಮಿಸಿತ್ತು. ಆದರೆ ದಿನ ಕಳೆದಂತೆ ಮುಕುಲ್ ರಾಯ್ ಅವರಿಗೆ ಬಿಜೆಪಿಯಲ್ಲಿ ಮೊದಲಿದ್ದ ಸ್ಥಾನಮಾನ ಮತ್ತು ಗೌರವ ಉಳಿಯಲಿಲ್ಲ.

ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ಮಾತ್ರ ಮುಕುಲ್ ರಾಯ್ ಬಿಜೆಪಿಯನ್ನು ತೊರೆಯುತ್ತಿಲ್ಲ. ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ತೃಣಮೂಲ ತೊರೆದು ಬಿಜೆಪಿ ಸೇರಿದ ನಾಯಕರ ದಂಡಿನ ಪ್ರಭಾವವೂ ಮುಕುಲ್ ರಾಯ್ ಅವರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸಿದೆ. ಮುಖ್ಯವಾಗಿ ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಮುಕುಲ್ ರಾಯ್ ಅವರಿಗೆ ಇರಿಸು ಮುರುಸು ಉಂಟುಮಾಡಿದೆ. ಈ ಕುರಿತು ಅವರು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಮುಕುಲ್ ರಾಯ್ ಹೇಳಿಕೊಂಡಿದ್ದಾರೆ.

ಇನ್ನೊಂದು ಮುಖ್ಯ ವಿಚಾರವೆಂದರೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯ ಭರ್ಜರಿ ಗೆಲುವಿನ ನಂತರ ಬಿಜೆಪಿಯ ಇತರ ನಾಯಕರಂತೆ ಮುಕುಲ್ ರಾಯ್ ಅವರಿಗೂ ತಮ್ಮ ರಾಜಕೀಯ ಭವಿಷ್ಯದ ಕುರಿತು ಅನಿಶ್ಚಿತತೆ ಕಾಡಲು ಆರಂಭವಾಗಿದೆ. ಮಮತಾ ಬ್ಯಾನರ್ಜಿಯವರಿಗೆ ಬಂಗಾಳದ ನಾಡಿ ಮಿಡಿತ ಗೊತ್ತಿದೆ. ಬಿಜೆಪಿ ಎಷ್ಟು ದೊಡ್ಡ ಪಕ್ಷವಾದರೂ ಬಂಗಾಳಕ್ಕೆ ಹೊರಗಿನ ಪಕ್ಷವೇ. ಬೆಂಗಾಳಿಗಳು ಬಿಜೆಪಿಯನ್ನು ಒಪ್ಪಲು ತಯಾರಿಲ್ಲ ಎಂಬ ಭಾವನೆ  ಮುಕುಲ್ ರಾಯ್ ಸೇರಿ ಪಕ್ಷ ತೊರೆಯಲು ಸಿದ್ಧರಾಗಿರುವ ಬಿಜೆಪಿಯ ಹಿರಿಯ ನಾಯಕರಲ್ಲಿ ಬೆಳೆಯತೊಡಗಿದೆ. ಈ ಎಲ್ಲ ಕಾರಣಗಳಿಂದ ಮುಕುಲ್ ರೊಯ್ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಕದತಟ್ಟಲು ಕಾರಣಗಳೆಂದು ಹೇಳಲಾಗುತ್ತಿದೆ.

ಕಳೆದ ವಾರ ಮುಕುಲ್ ರಾಯ್ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಮುಕುಲ್ ರಾಯ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಆಗಲೇ ಮುಕುಲ್ ರಾಯ್ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದರೆಂದು ಹೇಳಲಾಗುತ್ತಿದೆ. ಮಾರನೇ ದಿನ ಪ್ರಧಾನಿ ಮೋದಿಯವರು ರಾಯ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಮುಕುಲ್ ರಾಯ್ ಬಿಜೆಪಿ ತೊರೆಯುವ ಕುರಿತು ಸಂದೇಹಗಳು ಹುಟ್ಟಿಕೊಂಡಿದ್ದವು. ಇಂದು ಮುಕುಲ್ ರೊಯ್ ತಮ್ಮ ಪುತ್ರ  ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ ರಾಜ್ಯ ಕಚೇರಿಗೆ ಭೇಟಿ ನೀಡುವ ಮೂಲಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಎದ್ದಿರುವ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ : ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...