Homeಮುಖಪುಟಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ...

ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಈಗ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದಾದ ಮೇಲೊಂದರಂತೆ ವಲಸೆ ಹಕ್ಕಿಗಳು ತಮ್ಮ ಹಳೆಯ ಗೂಡುಗಳಿಗೆ ಮರಳಲಾರಾಂಭಿಸಿವೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುತ್ತಿದ್ದಂತೆ ಹಿಂದೆ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೆರಿದ್ದ ನಾಯಕರು ಮತ್ತೆ ತಮ್ಮ ಹಳೆಯ ಪಕ್ಷಗಳಿಗೆ ಮರಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಾಯಕರ ದೊಡ್ಡ ಹಿಂಡೇ ಈಗ ತೃಣಮೂಲ ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿದೆ. ಅದರ ಮೊದಲ ಭಾಗವಾಗಿ ಪಶ್ಚಿಮ ಬಂಗಾಳ ಬಿಜೆಪಿಯ ಹಿರಿಯ ನಾಯಕ ಮುಕುಲ್ ರಾಯ್ ಇಂದು ತಮ್ಮ ಪುತ್ರ ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ್ ಕಾಂಗ್ರೆಸ್ ನ ಕೇಂದ್ರ ಕಚೇರಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ.

ಇಷ್ಟುದಿನ ಮುಕುಲ್ ರಾಯ್ ಬಿಜೆಪಿ ತೊರೆಯಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಮುಕುಲ್ ರಾಯ್ ಈ ಕುರಿತು ಸ್ಪಷ್ಟನೆ ನೀಡಿರಲಿಲ್ಲ. ಅದು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮುಕುಲ್ ರಾಯ್ ಎಲ್ಲಾ ಕುತೂಹಲಗಳಿಗೆ ಮತ್ತು ವದಂತಿಗಳಿಗೆ ತೆರೆ ಎಳೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಸೇರ್ಪಡೆ ಕುರಿತು ಅಧಿಕೃತವಾಗಿ ತಮ್ಮ ನಡೆಯನ್ನು ಬಹಿರಂಗಗೊಳಿಸಿದ್ದಾರೆ.

ಇನ್ನು ಮಮತಾ ಬ್ಯಾನರ್ಜಿಯವರು “ಮುಕುಲ್ ರಾಯ್ ವಾಪಸ್ ಬಂದಿದ್ದಾರೆ. ಅವರು ಎಂದಿಗೂ ಇತರರಂತೆ ದ್ರೋಹವೆಸಗಲಿಲ್ಲ” ಎಂದಿದ್ದಾರೆ. ಅಲ್ಲದೇ ಮತ್ತಷ್ಟು ಜನರು ಬಿಜೆಪಿಯಿಂದ ಬರಲಿದ್ದಾರೆ ಎಂದು ಹೇಳಿದ್ದಾರೆ.

ಮುಕುಲ್ ರಾಯ್ ಮಾತನಾಡಿ “ಬಿಜೆಪಿಯನ್ನು ತೊರೆದ ನಂತರ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡುವುದರಲ್ಲಿ ನನಗೆ ತುಂಬಾ ಖುಷಿ ಇದೆ. ನಾನು ಬಿಜೆಪಿಯಲ್ಲಿ ಇರಲು ಸಾಧ್ಯವಿಲ್ಲ. ಮಮತಾ ಬ್ಯಾನರ್ಜಿ ಬಂಗಾಳದ ಮತ್ತು ಭಾರತದ ಏಕೈಕ ನಾಯಕಿ” ಎಂದು ಬಣ್ಣಿಸಿದ್ದಾರೆ.

ಮುಕುಲ್ ರಾಯ್ ಬಿಜೆಪಿ ತೊರೆಯಲು ಕಾರಣಗಳೇನು?

ತೃಣಮೂಲ ಕಾಂಗ್ರೆಸ್ ನಿಂದ ಮೊಟ್ಟ ಮೊದಲ ಬಾರಿಗೆ‌ ಬಿಜೆಪಿ ಸೇರಿದ ನಾಯಕರೆಂದರೆ ಅದು ಮುಕುಲ್ ರಾಯ್. 2017 ರಲ್ಲಿ ಮುಕುಲ್ ರಾಯ್ TMC ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಅದಾದನಂತರ ಮುಕುಲ್ ರಾಯ್ ಅವರನ್ನು ಬಿಜೆಪಿ ಪಶ್ಚಿಮ ಬಂಗಾಳದ ರಾಜ್ಯಾಧ್ಯಕ್ಷರನ್ನಾಗಿಯೂ ನೇಮಿಸಿತ್ತು. ಆದರೆ ದಿನ ಕಳೆದಂತೆ ಮುಕುಲ್ ರಾಯ್ ಅವರಿಗೆ ಬಿಜೆಪಿಯಲ್ಲಿ ಮೊದಲಿದ್ದ ಸ್ಥಾನಮಾನ ಮತ್ತು ಗೌರವ ಉಳಿಯಲಿಲ್ಲ.

ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ಮಾತ್ರ ಮುಕುಲ್ ರಾಯ್ ಬಿಜೆಪಿಯನ್ನು ತೊರೆಯುತ್ತಿಲ್ಲ. ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ತೃಣಮೂಲ ತೊರೆದು ಬಿಜೆಪಿ ಸೇರಿದ ನಾಯಕರ ದಂಡಿನ ಪ್ರಭಾವವೂ ಮುಕುಲ್ ರಾಯ್ ಅವರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸಿದೆ. ಮುಖ್ಯವಾಗಿ ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಮುಕುಲ್ ರಾಯ್ ಅವರಿಗೆ ಇರಿಸು ಮುರುಸು ಉಂಟುಮಾಡಿದೆ. ಈ ಕುರಿತು ಅವರು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಮುಕುಲ್ ರಾಯ್ ಹೇಳಿಕೊಂಡಿದ್ದಾರೆ.

ಇನ್ನೊಂದು ಮುಖ್ಯ ವಿಚಾರವೆಂದರೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯ ಭರ್ಜರಿ ಗೆಲುವಿನ ನಂತರ ಬಿಜೆಪಿಯ ಇತರ ನಾಯಕರಂತೆ ಮುಕುಲ್ ರಾಯ್ ಅವರಿಗೂ ತಮ್ಮ ರಾಜಕೀಯ ಭವಿಷ್ಯದ ಕುರಿತು ಅನಿಶ್ಚಿತತೆ ಕಾಡಲು ಆರಂಭವಾಗಿದೆ. ಮಮತಾ ಬ್ಯಾನರ್ಜಿಯವರಿಗೆ ಬಂಗಾಳದ ನಾಡಿ ಮಿಡಿತ ಗೊತ್ತಿದೆ. ಬಿಜೆಪಿ ಎಷ್ಟು ದೊಡ್ಡ ಪಕ್ಷವಾದರೂ ಬಂಗಾಳಕ್ಕೆ ಹೊರಗಿನ ಪಕ್ಷವೇ. ಬೆಂಗಾಳಿಗಳು ಬಿಜೆಪಿಯನ್ನು ಒಪ್ಪಲು ತಯಾರಿಲ್ಲ ಎಂಬ ಭಾವನೆ  ಮುಕುಲ್ ರಾಯ್ ಸೇರಿ ಪಕ್ಷ ತೊರೆಯಲು ಸಿದ್ಧರಾಗಿರುವ ಬಿಜೆಪಿಯ ಹಿರಿಯ ನಾಯಕರಲ್ಲಿ ಬೆಳೆಯತೊಡಗಿದೆ. ಈ ಎಲ್ಲ ಕಾರಣಗಳಿಂದ ಮುಕುಲ್ ರೊಯ್ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಕದತಟ್ಟಲು ಕಾರಣಗಳೆಂದು ಹೇಳಲಾಗುತ್ತಿದೆ.

ಕಳೆದ ವಾರ ಮುಕುಲ್ ರಾಯ್ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಮುಕುಲ್ ರಾಯ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಆಗಲೇ ಮುಕುಲ್ ರಾಯ್ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದರೆಂದು ಹೇಳಲಾಗುತ್ತಿದೆ. ಮಾರನೇ ದಿನ ಪ್ರಧಾನಿ ಮೋದಿಯವರು ರಾಯ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಮುಕುಲ್ ರಾಯ್ ಬಿಜೆಪಿ ತೊರೆಯುವ ಕುರಿತು ಸಂದೇಹಗಳು ಹುಟ್ಟಿಕೊಂಡಿದ್ದವು. ಇಂದು ಮುಕುಲ್ ರೊಯ್ ತಮ್ಮ ಪುತ್ರ  ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ ರಾಜ್ಯ ಕಚೇರಿಗೆ ಭೇಟಿ ನೀಡುವ ಮೂಲಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಎದ್ದಿರುವ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ : ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...