HomeUncategorizedಕೊರೋನಾ ಕಾರಣದಿಂದ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಇನ್ನೂ ವಿಳಂಬ

ಕೊರೋನಾ ಕಾರಣದಿಂದ ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಇನ್ನೂ ವಿಳಂಬ

- Advertisement -
- Advertisement -

ಬೆಂಗಳೂರು-ಮೈಸೂರು ನಡುವೆ ನಿರ್ಮಾಣವಾಗುತ್ತಿರುವ 10 ಲೈನ್‌ಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ವಿಳಂಬವಾಗುತ್ತಲೇ ಸಾಗುತ್ತಿದೆ. ಮೊದಲಿಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಗೊಂದಲಗಳಿಂದ ತಡವಾದ ರಸ್ತೆ ಕಾಮಗಾರಿಯ ಆರಂಭ, ಈಗ ಕೊರೋನಾ ಲಾಕ್‌ಡೌನ್ ಕಾರಣದಿಂದ ಇನ್ನಷ್ಟು ವಿಳಂಬಗೊಳ್ಳುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 2018 ರಲ್ಲಿ ಕಾಮಗಾರಿ ಆರಂಭಿಸಿ 30 ತಿಂಗಳಲ್ಲಿ ಅಂತ್ಯಗೊಳಿಸಬೇಕೆಂದು ಗಡುವು ಹಾಕಿಕೊಂಡಿತ್ತು. ಆರಂಭದಲ್ಲಿ ಭೂಮಿ ವರ್ಗಾವಣೆ, ಭೂ ವಂಚಿತರಿಗೆ ಪರಿಹಾರ, ಕಾನೂನು ವ್ಯಾಜ್ಯ ಸೇರಿ ರಸ್ತೆ ನಿರ್ಮಾಣ ಕಾರ್ಯ ವಿಳಂಬವಾಗುತ್ತಲೇ ಸಾಗುತ್ತಿತ್ತು. ರಸ್ತೆ ಕಾರ್ಯ ಆರಂಭವಾದ ಮೇಲೆ ಕೊರೋನಾ ಕಾರಣದಿಂದ ಬೆಂಗಳೂರು ಮೈಸೂರು 10 ಲೈನ್‌ ಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಇನ್ನಷ್ಟು ವಿಳಂಬವಾಗುತ್ತಿದೆ.

ಕೇಂದ್ರ ಸರ್ಕಾರದ ಮಾರ್ಗ ಸೂಚಿಯ ಪ್ರಕಾರ ಬೆಂಗಳೂರಿನ ನೈಸ್‌ ರಸ್ತೆಯಿಂದ ಮೈಸೂರಿನ ರಿಂಗ್‌ ರೋಡ್‌ ಜಂಕ್ಷನ್‌ ವರೆಗಿನ 116 ಕಿಲೋಮೀಟರ್‌ ರಾಷ್ಟ್ರೀಯ ಹೆದ್ದಾರಿಯು 2021 ರ ಕೊನೆಯಲ್ಲಿ ವಾಹನ ಸಂಚಾರಕ್ಕೆ ಮುಕ್ತವಾಗಬೇಕಿತ್ತು. ಬೆಂಗಳೂರು ಮೈಸೂರಿನ ನಡುವೆ ಓಡಾಟದ ಅವಧಿಯನ್ನು 90 ನಿಮಿಷಕ್ಕೆ ಇಳಿಸಲಾಗುತ್ತದೆ ಎನ್ನುವ ಈ ರಾಷ್ಟ್ರೀಯ ಹೆದ್ದಾರಿ ಕಾರ್ಯ ಸದ್ಯ ಕುಂಟುತ್ತ ಸಾಗುತ್ತಿದೆ.

ಬೆಂಗಳೂರಿನಿಂದ ಮದ್ದೂರು ಸಮೀಪದ ನಿಡಘಟ್ಟ(56.2km), ನಿಡಘಟ್ಟದಿಂದ ಮೈಸೂರಿಗೆ (60 km) ಹೀಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (NH275) ಯ ಕಾಮಗಾರಿಯನ್ನು ಎರಡು ಹಂತದಲ್ಲಿ ವಿಭಾಗಿಸಲಾಗಿದೆ. 7400 ಕೋಟಿ ಅಂದಾಜು ವೆಚ್ಚದ ಈ ರಸ್ತೆ ಕಾಮಗಾರಿಯ ಎರಡೂ ಹಂತಗಳ ಕಾಮಗಾರಿಗಳು ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. 9 ದೊಡ್ಡ ಸೇತುವೆಗಳು, 44 ಸಣ್ಣ ಸೇತುವೆಗಳು, ರಸ್ತೆ ಸೇತುವೆಗಳನ್ನೊಳಗೊಂಡ ಈ ಮಾರ್ಗದಲ್ಲಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀ ರಂಗಪಟ್ಟಣದಲ್ಲಿ ಬೈ ಪಾಸ್‌ಗಳನ್ನು ನಿರ್ಮಿಸಲಾಗುತ್ತಿದೆ. ಆದರೆ ರಸ್ತೆ ನಿರ್ಮಾಣ ಯೋಜನೆಯ ಡೆಡ್‌ಲೈನ್‌ ಮಾತ್ರ ಮೇಲಿಂದ ಮೇಲೆ ಮುಂದಕ್ಕೆ ಹೋಗುತ್ತಲೇ ಇದೆ. ರಸ್ತೆ ನಿರ್ಮಾಣ ನಡೆಯುತ್ತಿರುವ ಕಾರಣದಿಂದ ಈಗಿರುವ ರಸ್ತೆಯಲ್ಲಿ ಸಹ ಹೆಚ್ಚಿನ ವಾಹನ ದಟ್ಟಣೆ ಸಂಭವಿಸುತ್ತಿದೆ. ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಈ ವರ್ಷಾಂತ್ಯದಲ್ಲಿ ಯೋಜನೆಯನ್ನು ಪೂರ್ಣಗೊಳಿಸಲು ಮುಂದಾದರೆ ಬೆಂಗಳೂರು ಮೈಸೂರು ಮಧ್ಯೆ ದಿನ ನಿತ್ಯ ಓಡಾಡುವ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದು.


ಇದನ್ನೂ ಓದಿ : ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...