Homeಕರ್ನಾಟಕಐಬಿಪಿಎಸ್‌ ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸ ಅರ್ಜಿ ಆಹ್ವಾನಿಸಲು ಕುಮಾರಸ್ವಾಮಿ ಆಗ್ರಹ

ಐಬಿಪಿಎಸ್‌ ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸ ಅರ್ಜಿ ಆಹ್ವಾನಿಸಲು ಕುಮಾರಸ್ವಾಮಿ ಆಗ್ರಹ

- Advertisement -
- Advertisement -

ಐಬಿಪಿಎಸ್‌ ನಡೆಸುವ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿರುವುದನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕರ್ನಾಟಕದಲ್ಲಿ ಹುದ್ದೆಗಳನ್ನು ಖಾಲಿ ಇಲ್ಲ, ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸಿ ಎಂದು ಆಗ್ರಹಿಸಿದ್ದಾರೆ.

’ಐಬಿಪಿಎಸ್‌ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್‌ (ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

’ಆದರೆ, ಐಬಿಪಿಎಸ್‌ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್‌ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014‌ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್‌ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ’ ಎಂದಿದ್ದಾರೆ.

ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

’2014‌ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್‌ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‌ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ’ ಎಂದು ಟ್ವೀಟ್ ಮಾಡಿದ್ದಾರೆ.

’ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

’ಈ ಬಾರಿ ಐಬಿಪಿಎಸ್‌ ನಡೆಸುತ್ತಿರುವ ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಒಂದೂ ಹುದ್ದೆ ಇಲ್ಲ. ರಾಜ್ಯದ ಪ್ರತಿ ತಾಲ್ಲೂಕು, ಜಿಲ್ಲಾ ಕೇಂದ್ರದಲ್ಲಿಯೂ ಕೆವಿಜಿ, ಕೆವಿಜಿಬಿ ಬ್ಯಾಂಕ್‌ಗಳಿವೆ.  ಆದರೂ ಒಂದೂ ಹುದ್ದೆ ಇಲ್ಲದಿರುವುದು ಆಶ್ಚರ್ಯ ತಂದಿದೆ. ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸುವುದು ಅಗತ್ಯವಿದೆ’ ಎಂದು ಆಗ್ರಹಿಸಿದ್ದಾರೆ.

’ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಬೇಡಿಕೆಯಿಟ್ಟಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್ 100 ನಾಟೌಟ್: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ 5 ದಿನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...