Homeಕರ್ನಾಟಕಐಬಿಪಿಎಸ್‌ ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸ ಅರ್ಜಿ ಆಹ್ವಾನಿಸಲು ಕುಮಾರಸ್ವಾಮಿ ಆಗ್ರಹ

ಐಬಿಪಿಎಸ್‌ ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸ ಅರ್ಜಿ ಆಹ್ವಾನಿಸಲು ಕುಮಾರಸ್ವಾಮಿ ಆಗ್ರಹ

- Advertisement -
- Advertisement -

ಐಬಿಪಿಎಸ್‌ ನಡೆಸುವ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿರುವುದನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕರ್ನಾಟಕದಲ್ಲಿ ಹುದ್ದೆಗಳನ್ನು ಖಾಲಿ ಇಲ್ಲ, ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸಿ ಎಂದು ಆಗ್ರಹಿಸಿದ್ದಾರೆ.

’ಐಬಿಪಿಎಸ್‌ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್‌ (ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

’ಆದರೆ, ಐಬಿಪಿಎಸ್‌ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್‌ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014‌ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್‌ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ’ ಎಂದಿದ್ದಾರೆ.

ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

’2014‌ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್‌ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‌ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ’ ಎಂದು ಟ್ವೀಟ್ ಮಾಡಿದ್ದಾರೆ.

’ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

’ಈ ಬಾರಿ ಐಬಿಪಿಎಸ್‌ ನಡೆಸುತ್ತಿರುವ ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಒಂದೂ ಹುದ್ದೆ ಇಲ್ಲ. ರಾಜ್ಯದ ಪ್ರತಿ ತಾಲ್ಲೂಕು, ಜಿಲ್ಲಾ ಕೇಂದ್ರದಲ್ಲಿಯೂ ಕೆವಿಜಿ, ಕೆವಿಜಿಬಿ ಬ್ಯಾಂಕ್‌ಗಳಿವೆ.  ಆದರೂ ಒಂದೂ ಹುದ್ದೆ ಇಲ್ಲದಿರುವುದು ಆಶ್ಚರ್ಯ ತಂದಿದೆ. ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸುವುದು ಅಗತ್ಯವಿದೆ’ ಎಂದು ಆಗ್ರಹಿಸಿದ್ದಾರೆ.

’ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಬೇಡಿಕೆಯಿಟ್ಟಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್ 100 ನಾಟೌಟ್: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ 5 ದಿನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...