Homeಕರೋನಾ ತಲ್ಲಣಬಡಜನರ ಕೈಗೆ ನೇರ ನಗದು ನೀಡುವುದರಿಂದ ಮಾತ್ರ ಕುಸಿದಿರುವ ಆರ್ಥಿಕತೆ ಮೇಲೆತ್ತಲು ಸಾಧ್ಯ: ಆದರೆ ಸರ್ಕಾರಗಳು...

ಬಡಜನರ ಕೈಗೆ ನೇರ ನಗದು ನೀಡುವುದರಿಂದ ಮಾತ್ರ ಕುಸಿದಿರುವ ಆರ್ಥಿಕತೆ ಮೇಲೆತ್ತಲು ಸಾಧ್ಯ: ಆದರೆ ಸರ್ಕಾರಗಳು ಮಾಡುತ್ತಿರುವುದೇನು?

- Advertisement -
- Advertisement -

‘ಈಗ ಬಡತನ ರೇಖೆಗಿಂತ ಕೆಳಗೆ ಹೊಸದಾಗಿ ಸೇರಿರುವ ಜನರು ವಾಸ್ತವವಾಗಿ ಸಾಂಕ್ರಾಮಿಕಕ್ಕೆ ಮೊದಲು ಬಡತನ ರೇಖೆಗಿಂತ ಮೇಲಿದ್ದ ಜನರು. ಅವರು ಸಾಮಾನ್ಯ ಸ್ಥಿತಿಗೆ ಬರಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಎನ್‍ಡಿಟಿವಿಗೆ ಗುರುವಾರ ನೀಡಿದ ಸಂದರ್ಶನದಲ್ಲಿ ಅವರು, “ಕೌಶಲ್ಯರಹಿತ ಕಾರ್ಮಿಕರು ಕೆಲಸ ಮಾಡುವ ಹೋಟೆಲ್‌ಗಳು, ಉತ್ಪಾದನೆ ಮತ್ತು ನಿರ್ಮಾಣ ವಲಯ ತ್ವರಿತವಾಗಿ ಪುನರುಜ್ಜೀವನಗೊಂಡರೆ, ಪರಿಸ್ಥಿತಿ ಸುಧಾರಿಸಬಹುದು” ಎಂದಿದ್ದಾರೆ.

ದೇಶದಲ್ಲಿ ಹಲವಾರು ಪ್ರಗತಿಪರ ಸಂಘಟನೆಗಳು-ನಮ್ಮ ರಾಜ್ಯದ ಕರ್ನಾಟಕ ಜನಶಕ್ತಿ ಸಂಘಟನೆಯೂ ಸೇರಿ- ಇದೇ ರೀತಿ ಆಗ್ರಹಿಸುತ್ತ ಬಂದಿವೆ. ಸರ್ಕಾರಗಳ ಕಿವಿಗಳಿಗೆ ಇದು ತಲುಪುತ್ತಿಲ್ಲ ಅಥವಾ ತಲುಪಿದರೂ ಅವು ತಮ್ಮದೇ ಸ್ವ ಹಿತಾಸಕ್ತಿಯ ಕಾರಣಕ್ಕೆ ಇದನ್ನು ಕೇಳಿಸಿ ಕೊಳ್ಳುತ್ತಿಲ್ಲ ಎಂಬುದು ಕಳೆದ ವರ್ಷದಿಂದ ಸಾಬೀತಾಗುತ್ತಲೇ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿದ ಆರ್ಥಿಕ ಪ್ಯಾಕೇಜ್‍ಗಳು ಬಡವರನ್ನು ಭಾಗಶಃ ತಲುಪಿವೆ ಅಷ್ಟೇ.

ಸಾಂಕ್ರಾಮಿಕ ರೋಗದಿಂದಾಗಿ ಬಡತನಕ್ಕೆ ಇಳಿದ ಜನರಿಗೆ ಸಹಾಯ ಮಾಡಲು ನರೇಗಾ ಯೋಜನೆಯಡಿ ಸರ್ಕಾರ ದೊಡ್ಡ ಪ್ರಮಾಣದಲ್ಲಿ ನೇರ ಹಣ ಪಾವತಿ ಮಾಡಬೇಕೆಂದು ಹೇಳಿರುವ ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ದೊಡ್ಡ ಪ್ರಮಾಣದ ನೇರ ನಗದು ವರ್ಗಾವಣೆ ಬಗ್ಗೆ ಸರ್ಕಾರ ಆಸಕ್ತಿ ಹೊಂದಿಲ್ಲ ಎಂಬುದನ್ನು ಅದು ಈಗಾಗಲೇ ಸೂಚಿಸಿದೆ, ಜನರು ಹಣವನ್ನು ಬ್ಯಾಂಕ್ ಖಾತೆಗಳಲ್ಲಿ ಮಾತ್ರ ಇಡುತ್ತಾರೆ ಮತ್ತು ಅದನ್ನು ಖರ್ಚು ಮಾಡುವುದಿಲ್ಲ ಎಂದು ಸರ್ಕಾರ ಭಾವಿಸಿದೆ ಎಂದು ಟೀಕಿಸಿದ್ದಾರೆ.

“ಈ ಸಮಯದಲ್ಲಿ ನಮಗೆ ನೇರ ನಗದು ವರ್ಗಾವಣೆ ಬೇಕು ಎಂದು ಹೇಳುವವರ ದೃಷ್ಟಿಕೋನವನ್ನು ನಾನು ಅನುಮೋದಿಸುತ್ತೇನೆ. ಆದರೆ ಎಲ್ಲಾ ನಗದು ವರ್ಗಾವಣೆಯು ಹೆಚ್ಚಿನ ಬ್ಯಾಂಕ್ ಠೇವಣಿಗಳಿಗೆ ಮಾತ್ರ ಕಾರಣವಾಗುತ್ತದೆ ಮತ್ತು ಹೆಚ್ಚಿನ ಬಳಕೆಯ ಖರ್ಚು ಸಂಭವಿಸುವುದಿಲ್ಲ. ಇದು ನಮಗೆ ಅಗತ್ಯವಿಲ್ಲ” ಎಂದು ನೀತಿ ಆಯೋಗ ಉಪಾಧ್ಯಕ್ಷ ರಾಜೀವ್ ಕುಮಾರ್ ಈ ವಾರದ ಆರಂಭದಲ್ಲಿ ಹೇಳಿದ್ದಾರೆ. ಅಂದರೆ ಇದರರ್ಥ ಸರ್ಕಾರಕ್ಕೆ ನೇರ ವರ್ಗಾವಣೆ ಮಾಡಲು ಮನಸ್ಸಿಲ್ಲ. ಅದು ಪ್ಯಾಕೇಜ್‍ಗಳ ಮೂಲಕ ಭ್ರಷ್ಟಾಚಾರವನ್ನು ವಿಕೇಂದ್ರಿಕರಣ ಮಾಡುತ್ತಿದೆ ಅಥವಾ ದೊಡ್ಡ ಅಂಕಿಸಂಖ್ಯೆ ತೋರಿಸಿ ಜನರನ್ನು ಮರಳು ಮಾಡುತ್ತಿದೆ ಅಲ್ಲವೇ? ಕಳೆದ ವರ್ಷದ ಪ್ಯಾಕೇಜ್‍ಗಳ ಪರಿಣಾಮಗಳು ಕಣ್ಣ ಮುಂದೆಯೇ ಇವೆಯಲ್ಲ?

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿಂತಕ, ಸಾಮಾಜಿಕ ಹೋರಾಟಗಾರ ಬಂಜಗೆರೆ ಜಯಪ್ರಕಾಶ್‍, ‘ನರೇಗಾ ಕೆಲಸದ ದಿನಗಳನ್ನು ಹೆಚ್ಚಿಸುವುದು ಪರಿಣಾಮಕಾರಿ. ಆದರೆ ಇದು ರಾಜ್ಯದ ಬಹುಪಾಲು ಜನರನ್ನು ತಲುಪಲಾರದು. ಇಲ್ಲಿ ಟೇಲರ್‌ಗಳು, ಕ್ಷೌರಿಕರು, ಬಜ್ಜಿ-ಪಕೋಡಾ, ಸೊಪ್ಪು-ತರಕಾರಿ ಮಾರುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ತಿಂಗಳಿಗೆ 5 ಸಾವಿರ ರೂ. ಹಾಕಿದರೆ ಸರ್ಕಾರಕ್ಕೇನೂ ಹೊರೆ ಆಗಲಾರದು. ಉದ್ಯಮಿಗಳ ಸಾವಿರಾರು ಕೋಟಿ ರೂ ಸಾಲವನ್ನು ಮನ್ನಾ ಮಾಡಿರುವಾಗ ಇದೇನೂ ದೊಡ್ಡ ಹೊರೆಯಲ್ಲ, ಬದಲಿಗೆ ಅದು ಸಾಂವಿಧಾನಿಕ ಬದ್ಧತೆ’ ಎಂದು ಅಭಿಪ್ರಾಯಪಟ್ಟರು.

ಬಡತನವನ್ನು ಕಡಿಮೆ ಮಾಡುವ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿರುವ ಅಭಿಜಿತ್ ಬ್ಯಾನರ್ಜಿ, ನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಅಡಿಯಲ್ಲಿ ವಾರ್ಷಿಕ ಕೆಲಸದ ದಿನಗಳನ್ನು 100 ದಿನಗಳಿಂದ 150 ದಿನಗಳವರೆಗೆ ಹೆಚ್ಚಿಸಲು ಸೂಚಿಸುತ್ತಾರೆ.

ದುರ್ಬಲ ಕುಟುಂಬಗಳಿಗೆ ನೇರ ನಗದು ಹಸ್ತಾಂತರಿಸುವ ಬದಲು ಕಠಿಣವಾದ ವ್ಯವಹಾರಗಳಿಗೆ ಸಾಲವನ್ನು ಕೇಂದ್ರೀಕರಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ. ಬಡ ಗ್ರಾಮೀಣ ಪ್ರದೇಶಗಳನ್ನು ಆವರಿಸಿರುವ ವಿನಾಶಕಾರಿ ಎರಡನೇ ಅಲೆಯು ಹೆಚ್ಚಿನ ಪ್ರಮಾಣದ ಸಾವುಗಳ ಮೂಲಕ ಹೊಸ ಅನಾಹುತಕ್ಕೆ ಕಾರಣವಾಗಬಹುದು ಎಂಬ ಆತಂಕಗಳಿವೆ.

‘ಎಲ್ಲಿಯವರೆಗೆ ಗ್ರಾಹಕರು ಹೊರಹೋಗಲು ಮತ್ತು ಸಂವಹನ ನಡೆಸಲು ಭಯ ಪಡುತ್ತಾರೋ  ಅಲ್ಲಿವರೆಗೆ ನೀವು ಏನೇ ಮಾಡಿದರೂ ಹೆಚ್ಚಿನ ಬಳಕೆ, ಹೆಚ್ಚಿನ ಬೇಡಿಕೆ ಮತ್ತು ಹೆಚ್ಚಿನ ಆರ್ಥಿಕ ಚಟುವಟಿಕೆ ಅಸಾಧ್ಯ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳುತ್ತಾರೆ.

ಜನರನ್ನು ಮನೆಯಲ್ಲಿ ಲಾಕ್‍ ಮಾಡಿದರೂ ಕೂಡ ನಿಗದಿತ ಅನುಮತಿಯ ಅವಧಿಯಲ್ಲಿ ಹೊರ ಬಂದು ತಮಗೆ ತೀರಾ ಅಗತ್ಯ ವಸ್ತುಗಳನ್ನು ಖರೀದಿಸುತ್ತಾರೆ ಎಂಬ ಪರಿಜ್ಞಾನವಿಲ್ಲದೇ ನೀತಿ ಆಯೋಗದ ಉಪಾಧ್ಯಕ್ಷ  ರಾಜೀವ್ ಕುಮಾರ್ ಮಾತನಾಡುತ್ತಿದ್ದಾರೆ. ಅವರ ಒಟ್ಟೂ ಉದ್ದೇಶ ನರೇಗಾಕ್ಕೆ ಹೆಚ್ಚು ಹಣ ನೀಡುವುದನ್ನು ಮತ್ತು ಜನರಿಗೆ ನೇರ ನಗದು ವರ್ಗಾವಣೆ ಮಾಡುವುದನ್ನು ವಿರೋಧಿಸುವ ಧಾಟಿಯಲ್ಲಿಯೇ ಇದೆ.

ಈ ಬಗ್ಗೆ ನಾನುಗೌರಿ. ಕಾಂ ಗೆ ಪ್ರತಿಕ್ರಿಯೆ ನೀಡಿದ ಜನಶಕ್ತಿ ಸಂಘಟನೆಯ ಸಂಚಾಲಕಿ ಮಲ್ಲಿಗೆ ಸಿರಿಮನೆ, ‘ನೀತಿ ಆಯೋಗ ಎಂಬುದೇ ಬ್ರಾಹ್ಮಣಶಾಹಿ ಆಲೋಚನೆಯಲ್ಲಿ ಮುಳುಗಿದೆ. ಬೆವರಿನ ಬೆಲೆ ಗೊತ್ತಿಲ್ಲದ, ಉದ್ಯಮಿಗಳ ಆರಾಧನೆ ಮಾಡುವ ಜನರೇ ಅಲ್ಲಿ ತುಂಬಿದ್ದಾರೆ. ಅಭಿಜಿತ್ ಬ್ಯಾನರ್ಜಿ, ಅಮರ್ತ್ಯಾ ಸೇನ್‍, ರಘುರಾಮ ರಾಜನ್‍ ತರಹದವರ ಜನಪರ ಆರ್ಥಿಕ ನಿಲುವುಗಳನ್ನು ನಮ್ಮ ಜನಶಕ್ತಿಯೂ ಬೆಂಬಲಿಸುತ್ತದೆ. ಸರ್ಕಾರದ ಮಾನದಂಡಗಳ ಪ್ರಕಾರವೇ ಒಂದು ಕುಟುಂಬಕ್ಕೆ ಕನಿಷ್ಠ ಮಾಸಿಕ 18 ಸಾವಿರ ರೂ. ಬೇಕು. ಇವರು ಅಷ್ಟು ಕೊಡುವುದು ಬೇಕಿಲ್ಲ. ಕುಟುಂಬದಲ್ಲಿ ದುಡಿಯುವ ಒಬ್ಬರಿಗೆ ಕನಿಷ್ಠ 5 ಸಾವಿರ ರೂ. ಮಾಸಿಕ ನಗದು ನೀಡಲಿ. ಕುಟುಂಬದಲ್ಲಿ ದುಡಿಯುವ ಏಕೈಕ ವ್ಯಕ್ತಿ  ಕೋವಿಡ್‍ನಿಂದ ಮೃತನಾಗಿದ್ದರೆ ಆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಕೂಡಲೇ ಒದಗಿಸಲಿ. ಎನ್‍ಪಿಎಗೆ (ವಸೂಲಾಗದ ಉದ್ಯಮಿಗಳ ಸಾಲ) ಹೋಲಿಸಿದರೆ ಇದೇನೂ ದೊಡ್ಡ ಮೊತ್ತವಲ್ಲ. ಇದನ್ನು ಮಾಡುವುದು ಸರ್ಕಾರಗಳ ಸಾಂವಿದಾನಿಕ ಬದ್ಧತೆ. ಸಾಮಾನ್ಯ ಜನರ ಕೈಗೆ ಬರುವ ನೇರ ನಗದು ಮರಳಿ ಮಾರುಕಟ್ಟೆಗೇ ಬರುತ್ತದೆ. ಇದರಿಂದ ಕುಸಿದ ಆರ್ಥಿಕತೆ ಚಿಗುರುತ್ತದೆ. ಎನ್‍ಪಿಎ ಗಿರಾಕಿಗಳು ದೇಶ ಬಿಟ್ಟು ಓಡಿ ಹೋಗಿ ಅಲ್ಲಿ ತಮ್ಮ ಅಕ್ರಮ ಸಂಪತ್ತನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಜನರ ಕೈಗೆ ನಗದು ನೀಡಿ ನೋಡಿ, ಅವರು ಅದನ್ನು ಇಲ್ಲೇ ಹಾಕುತ್ತಾರೆ, ನಮ್ಮ ಆರ್ಥಿಕತೆಯನ್ನು ಕೆಳಗಿನಿಂದ ಮೇಲಕ್ಕೆ ಎತ್ತುತ್ತಾರೆ’ ಎಂದು ವಿವರಿಸಿದರು.

‘ರಾಜ್ಯದಲ್ಲಿ 7 ಸಾವಿರ ಕೋಟಿ ರೂ. ಹಣವನ್ನು ಬಿಪಿಎಲ್‍ ಕುಟುಂಬಗಳಿಗೆ ನೇರ ವರ್ಗಾಯಿಸಬೇಕು. ಇದೇನೂ ದೊಡ್ಡ ಹೊರೆಯಾ? ಈಗಾಗಲೇ ಅನ್ನಭಾಗ್ಯ ಯೋಜನೆ ಇದೆಯಲ್ಲ, ಅದರಲ್ಲಿ ಕನಿಷ್ಠ 10 ಕೆ.ಜಿ. ಅಕ್ಕಿಯನ್ನಾದರೂ ಕೊಡಬೇಕು. ಇದೆಲ್ಲ ಸರ್ಕಾರದ ಪ್ರಾಥಮಿಕ ಕರ್ತವ್ಯ. ಅತಂತ್ರವಾದ ಕುಟುಂಬಗಳಿಗೆ ಕನಿಷ್ಠ 5 ಸಾವಿರ ರೂ ನೇರ ನಗದು ನೀಡಬೇಕು. ಆಗ ಅವರ ಖರೀದಿ ಶಕ್ತಿಯೂ ಹೆಚ್ಚಾಗುತ್ತದೆ, ಅದರಿಂದ ಒಟ್ಟೂ ಆರ್ಥಿಕತೆ ಬಲಗೊಳ್ಳುತ್ತದೆ’ ಎನ್ನುತ್ತಾರೆ ಸಾಮಾಜಿಕ ಹೋರಾಟಗಾರ ಕೆ.ಎಲ್‍ ಅಶೋಕ್‍.

‘ಭಾರತದಂತಹ ಬಡ ದೇಶಗಳಿಗಿಂತ ಭಿನ್ನವಾಗಿ, ಸಾಂಕ್ರಾಮಿಕ ಪರಿಣಾಮಗಳನ್ನು ನಿವಾರಿಸಲು ಅಮೆರಿಕ, ಬ್ರಿಟನ್‍ ಮತ್ತು ಯುರೋಪಿಯನ್‍ ಒಕ್ಕೂಟದ  ಶ್ರೀಮಂತ ಸರ್ಕಾರಗಳು  ಕೂಡ ಬೃಹತ್ ಪ್ರಮಾಣದಲ್ಲಿ ಸಾಲ ಪಡೆದು, ಸಾಂಕ್ರಾಮಿಕದಿಂದ ನಿರುದ್ಯೋಗಿ ಆದವರಿಗೆ  ನಗದು ಪಾವತಿಸುತ್ತಿವೆ ಎಂದು ಬ್ಯಾನರ್ಜಿ ಹೇಳುತ್ತಾರೆ. ಸಾಂಕ್ರಾಮಿಕ ರೋಗದ ಆರಂಭದ ಮೊದಲಿಗಿಂತ ಈಗ ಜಾಗತಿಕವಾಗಿ ಸುಮಾರು 100 ಮಿಲಿಯನ್ ಜನರು ತೀವ್ರ ಬಡತನದಲ್ಲಿ ಬದುಕುತ್ತಿದ್ದಾರೆ ಎಂದು ಅವರು ಅಂದಾಜಿಸಿದ್ದಾರೆ.

ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಲಾಕ್‌ಡೌನ್ ಮೂಲಕ  ಆರ್ಥಿಕತೆಯನ್ನು ವಿನಾಶ  ಮಾಡುತ್ತಿವೆ. ಸದ್ಯ ಸಾಂಕ್ರಾಮಿಕ ಇನ್ನಷ್ಟು ಹೆಚ್ಚಿದೆ ಮತ್ತು ಸಾವಿನ ಸಂಖ್ಯೆ ಉಲ್ಬಣಗೊಂಡಿದೆ ಎನ್ನುವ ಬ್ಯಾನರ್ಜಿ, ಭಾರತದಲ್ಲಿ ಮೊದಲ ಲಾಕ್‌ಡೌನ್ ಕಾರಣಕ್ಕೆ ದೇಶದ ಜಿಡಿಪಿಯ ಕಾಲು ಭಾಗ ಕುಸಿದಿತ್ತು ಎನ್ನುತ್ತಾರೆ.

ತಜ್ಞರ ಮಾತುಗಳನ್ನೂ ಕೇಳದ, ತಳಮಟ್ಟದಲ್ಲಿ ಕೆಲಸ ಮಾಡುವ ಸಾಮಾಜಿಕ ಕಾರ್ಯಕರ್ತರ ಬೇಡಿಕೆಗಳನ್ನೂ ಪರಿಗಣಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕುಸಿದಿರುವ ಆರ್ಥಿಕತೆ ಯಾವ ರೀತಿ ಮೇಲೆತ್ತುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...