Homeಮುಖಪುಟಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ...

ಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಎರಡನೇ ಅಲೆಯಿಂದ ಉಂಟಾದ ಆರ್ಥಿಕ ಕುಸಿತವನ್ನು ಸರಿದೂಗಿಸಲು 100 ದಿನಗಳ ಕ್ರಿಯಾ ಯೋಜನೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ತಿರುವನಂತಪುರಂನಲ್ಲಿ ಪ್ರಕಟಿಸಿದ್ದಾರೆ. ಯೋಜನೆಯು ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದು, ಗುಣಮಟ್ಟದ ಉದ್ಯೋಗವನ್ನು ಸೃಷ್ಟಿಸುವುದು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ಕೇಂದ್ರೀಕರಿಸುತ್ತದೆ ಮತ್ತು ಇದು ಜೂನ್ 11 ಮತ್ತು ಸೆಪ್ಟೆಂಬರ್ 19 ರ ನಡುವೆ ಜಾರಿಗೆ ಬರಲಿದೆ.

ವಿಜ್ಞಾನ, ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಜ್ಞಾನಾಧಾರಿತ ಆರ್ಥಿಕತೆಯ ನಿರ್ಮಾಣಕ್ಕೆ ಅನುವು ಮಾಡಿಕೊಡುವುದು ಕೂಡಾ ಇದರ ಉದ್ದೇಶ ಎಂದು ಪಿಣರಾಯಿ ವಿಜಯನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಭದ್ರತೆಯ ಸಾಧನೆಗಳನ್ನು ಮುನ್ನಡೆಸಲು, ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ಹಾಗೂ ಗುಣಮಟ್ಟದ ಉದ್ಯೋಗವನ್ನು ಸೃಷ್ಟಿಸಲು ಬೇಕಾಗಿ ನೀತಿಗಳು ಮತ್ತು ಯೋಜನೆಗಳಿಗೆ ಒತ್ತು ನೀಡಲಾಗುವುದು” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 7 ತಿಂಗಳು: ‘ಕೃಷಿ ಉಳಿಸಿ, ಪ್ರಜಾಪ್ರಭುತ್ವ ಉಳಿಸಿ ದಿನ’ ಪ್ರತಿಭಟನೆಗೆ ರೈತರ ಕರೆ

“ಬಡತನ ನಿವಾರಣೆ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಹೋಗಲಾಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿಯ ಅನುಷ್ಠಾನ ಮತ್ತು ಆರೋಗ್ಯಕರ ನಗರ ಜೀವನಕ್ಕೆ ಅನುಕೂಲಕರವಾದ ಆಧುನಿಕ ಘನತ್ಯಾಜ್ಯ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಈ ಯೋಜನೆಯ ಅತ್ಯಂತ ಮಹತ್ವದ ಅಂಶವಾಗಿದೆ” ಎಂದು ಅವರು ಹೇಳಿದ್ದಾರೆ.

ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದರ ಜೊತೆಗೆ, ವಿಷಕಾರಿಯಲ್ಲದ ಆಹಾರದ ಉತ್ಪಾದನೆಯೂ ಈ ಯೋಜನೆಯ ಆದ್ಯತೆಯಾಗಿದೆ ಎಂದು ಪಿಣರಾಯಿ ಹೇಳಿದ್ದಾರೆ.

5,898 ಕೋಟಿ ರೂ.ಗಳ ಸಾಲವನ್ನು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಾದ ವಿಶ್ವ ಬ್ಯಾಂಕ್, ಜರ್ಮನ್ ಬ್ಯಾಂಕ್ ಕೆಎಫ್‌ಡಬ್ಲ್ಯೂ ಮತ್ತು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (ಎಐಐಬಿ) ನಿಂದ ರೀಬ್ಯುಲ್ಡ್‌ ಕೇರಳ ಇನಿಶಿಯೇಟಿವ್ (ಆರ್‌ಕೆಐ) ಗೆ ಮಂಜೂರು ಮಾಡಲಾಗಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಈ ಸಾಲಕ್ಕೆ ರಾಜ್ಯದ ಪಾಲನ್ನು ಸೇರಿಸಿದರೆ ಆರ್‌ಕೆಐ ಯೋಜನೆಗಳಿಗೆ 8,425 ಕೋಟಿ ರೂ. ಲಭ್ಯವಾಗುತ್ತದೆ. ಮುಂದಿನ 100 ದಿನಗಳಲ್ಲಿ 945.35 ಕೋಟಿ ರೂ.ಗಳ ಒಂಬತ್ತು ರಸ್ತೆ ಯೋಜನೆಗಳನ್ನು ಆರ್‌ಕೆಐ ಹಣವನ್ನು ಬಳಸಿಕೊಂಡು ಪ್ರಾರಂಭಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ಇದಲ್ಲದೆ, ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯು ಈ 100 ದಿನಗಳಲ್ಲಿ 1,519.57 ಕೋಟಿ ರೂ.ಗಳ ಯೋಜನೆಗಳನ್ನು ಪೂರ್ಣಗೊಳಿಸಲಿದೆ ಎಂದರು.

ಪಿಡಬ್ಲ್ಯುಡಿ, ಆರ್‌ಕೆಐ ಮತ್ತು ಕೇರಳ ಇನ್ಪ್ರಾಸ್ಟ್ರಕ್ಚರ್‌‌ ಇನ್ವೆಸ್ಟ್‌ಮೆಂಟ್‌‌ ಫಂಡ್‌ ಬೋರ್ಡ್‌ ಮೂಲಕ 2,464.92 ಕೋಟಿ ರೂ.ಗಳ 100 ದಿನಗಳ ಕ್ರಿಯಾ ಯೋಜನೆಯು ನಡೆಯಲಿದೆ ಎಂದು ಸರ್ಕಾರದ ಪತ್ರಿಕಾ ಹೇಳಿಕೆಯು ತಿಳಿಸಿದೆ.

“ಕೆ-ಡಿಐಎಸ್ಸಿ (ಕೇರಳ ಅಭಿವೃದ್ಧಿ ಮತ್ತು ಇನ್ನೋವೇಶನ್ ಸ್ಟ್ರಾಟೆಜಿಕ್ ಕೌನ್ಸಿಲ್) ರಾಜ್ಯದ 20 ಲಕ್ಷ ವಿದ್ಯಾವಂತರಿಗೆ ಉದ್ಯೋಗ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪೂರ್ಣಗೊಳಿಸುತ್ತಿದೆ. ಎಲ್ಲಾ ಸ್ಥಳೀಯ ಸಂಸ್ಥೆಗಳು 1,000 ಜನರಲ್ಲಿ ಐದು ಜನರಿಗೆ ಉದ್ಯೋಗ ಸೃಷ್ಟಿಸುವ ಕರಡು ಯೋಜನೆಯನ್ನು ಸಿದ್ಧಪಡಿಸುತ್ತವೆ” ಎಂದು ಹೇಳಿಕೆ ತಿಳಿಸಿದೆ.

ಕೈಗಾರಿಕೆಗಳು ಮತ್ತು ವಾಣಿಜ್ಯ ವಿಭಾಗದಲ್ಲಿ ತಲಾ 10,000 ಉದ್ಯೋಗಗಳು, ಕುಡುಂಬಶ್ರೀಯಲ್ಲಿ 2,000, ಮತ್ತು ಸಾರಿಗೆ ಇಲಾಖೆಯಲ್ಲಿ 7,500 ಉದ್ಯೋಗಗಳು ಸೇರಿದಂತೆ ವಿವಿಧ ಇಲಾಖೆಗಳ ಅಡಿಯಲ್ಲಿ ಸುಮಾರು 77,350 ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು 100 ದಿನಗಳಲ್ಲಿ ಸೃಷ್ಟಿಸಲಾಗುವುದು ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...