Homeಮುಖಪುಟಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

ಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

- Advertisement -
- Advertisement -

ಮೇ 2ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ನಂತರದಲ್ಲಿ, ಮೇ 4ರಿಂದ ಇಲ್ಲಿವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದ್ದು, ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಡೀಸೆಲ್‍ 100 ರೂ ದಾಟುವ ಮೂಲಕ ಇಂಧನ ದರಗಳು ಹೊಸ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಇಂಧನ ದರದಲ್ಲಿ ಮತ್ತೊಂದು ಏರಿಕೆಯ ನಂತರ ಡೀಸೆಲ್ ಬೆಲೆ ಇಂದು ರಾಜಸ್ಥಾನದಲ್ಲಿ ಲೀಟರ್‌ಗೆ 100 ರೂ. ದಾಟಿ ‘ದಾಖಲೆ’ ಬರೆದಿದೆ.

ಈ ಏರಿಕೆ ಕಾರಣಕ್ಕೆ ಪೆತ್ರೋಲ್‍ ದರ 100 ರೂ. ದಾಟಿದ 7 ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಿಕೊಂಡಿದೆ. ಹಾಗೆ ನೋಡಿದರೆ, ಕಳೆದ ಸಲದ ಏರಿಕೆಯಲ್ಲೇ ಬಳ್ಳಾರಿ ಮತ್ತು ಶಿರಸಿಯಲ್ಲಿ ಪೆಟ್ರೋಲ್‍ 100ರ ಗಡಿ ದಾಟಿತ್ತು.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಇಂದು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ದರವನ್ನು 23 ಪೈಸೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ, ಪೆಟ್ರೋಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಲೀಟರ್‌ಗೆ  96.12 ರೂ ಇದ್ದರೆ, ಡೀಸೆಲ್ ದರ 86.98 ರೂ ಇದೆ.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ – ಈ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ  100 ರೂ.ಗಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ.

ಈಗ ಕರ್ನಾಟಕವೂ ಈ ಲಿಸ್ಟಿಗೆ ಸೇರ್ಪಡೆಯಾಗಿದ್ದು, ಬೀದರ್, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಶಿರಸಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ಪೆಟ್ರೋಲ್‍ ದರ 100 ರೂ. ದಾಟಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 99.39  ಮತ್ತು ಡೀಸೆಲ್ 92.27 ರೂಗಳಿಗೆ ತಲುಪಿವೆ.

ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ರಾಜಸ್ಥಾನದ ಶ್ರೀಗಂಗನಗರ ಜಿಲ್ಲೆಯು ಫೆಬ್ರವರಿ ಮಧ್ಯದಲ್ಲಿ ಪೆಟ್ರೋಲ್ ದರ ನೂರು ರೂ. ದಾಟಿದ ಮೊದಲ ಪ್ರದೇಶವಾಗಿದೆ. ಇವತ್ತು ಶನಿವಾರ ಡೀಸೆಲ್ ಕೂಡ ಇಲ್ಲಿ ಸೆಂಚುರಿ ಬಾರಿಸಿ ಸಾರ್ವಕಾಲಿಕ ದಾಖಲೆ ಬರೆದಿದೆ.

ರಾಜಸ್ತಾನದ ನಗರಗಳಲ್ಲಿ ಪೆಟ್ರೋಲ್  107.22 ರೂ.ಗೆ ಮಾರಾಟವಾಗುತ್ತಿದೆ. ಇದು ದೇಶದಲ್ಲೇ ಗರಿಷ್ಠ ದರವಾಗಿದೆ. ಇವತ್ತಿನಿಂದ ನಗರಗಳಲ್ಲಿ ಡೀಸೆಲ್ 100.05 ರೂ.ಗೆ ಮಾರಾಟವಾಗುತ್ತಿದೆ. ಪಟ್ಟಣಗಳಲ್ಲಿ ಪ್ರೀಮಿಯಂ ಅಥವಾ ಸಂಯೋಜಕ ಪೆಟ್ರೋಲ್ ಲೀಟರ್‌ಗೆ. 110.50 ರೂ, ಮತ್ತು ಡೀಸೆಲ್ 103.72 ರೂ.ಗೆ  ಮಾರಾಟವಾಗುತ್ತಿವೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ  ಸರ್ಕಾರವು ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದು, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿವೆ.

ಮೇ 29ರಂದು ಮುಂಬೈ ಪೆಟ್ರೋಲ್‍ ದರ 100 ರೂ. ದಾಟಿದ ಮೊದಲ ಮೆಟ್ರೋ ನಗರವಾಯಿತು. ಪೆಟ್ರೋಲ್ ಈಗ ಮುಂಬೈನಲ್ಲಿ 102.02 ರೂ.ಗೆ ಮತ್ತು ಡೀಸೆಲ್ 94.39 ರೂ.ಗೆ  ಮಾರಾಟವಾಗುತ್ತಿವೆ.

ಲೇಹ್ ನಂತರ, ಶ್ರೀನಗರ ಕೂಡ ಪೆಟ್ರೋಲ್‌ ದರದಲ್ಲಿ  100 ರೂ. (ರೂ. 99.27 ರೂ) ಹತ್ತಿರ ಬಂದಿದೆ. ಹೈದರಾಬಾದ್‍ನಲ್ಲಿ ಕೂಡ ಪೆಟ್ರೋಲ್ ದರ 99.96 ರೂ,ಗೆ ತಲುಪಿದೆ.

ಪೆಟ್ರೋಲ್ ಲೇಹ್‌ನಲ್ಲಿ 101.73 ರೂ.ಗೆ ಮತ್ತು ಡೀಸೆಲ್ 93.66 ರೂ.ಗೆ ಮಾರಾಟವಾಗುತ್ತಿವೆ.

ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಕೊನೆಯ ಸುತ್ತಿನ ಮತದಾನಕ್ಕೂ ಮೊದಲು ಸರ್ಕಾರಿ  ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆಯಲ್ಲಿ 18 ದಿನಗಳ ವಿರಾಮವನ್ನು ಕಾಯ್ದುಕೊಂಡಿದ್ದವು. ಮೇ 2ರಂದು ಫಲಿತಾಂಶ  ಘೋಷಣೆಯಾಗಿತು. ಮೇ 4ರಿಂದ  ಇವತ್ತಿನವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದೆ.

ಈ 23 ಹೆಚ್ಚಳಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 5.72 ರೂ. ಮತ್ತು ಡೀಸೆಲ್  6.25 ರೂಗಳಷ್ಟು ಏರಿಕೆಯಾಗಿದೆ.

ಹಿಂದಿನ 15 ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನದ ಸರಾಸರಿ ಬೆಲೆ ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.

ಸದ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಸ್ಥಿರವಾಗಿ ಕಂಡುಬಂದರೂ, ದೇಶದಲ್ಲಿ ಇಂಧನ ದರ ಏರಿಕೆಯಾಗುತ್ತಿದೆ.

ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.  ಇದು ವಿವಿಧ ರಾಜ್ಯಗಳಲ್ಲಿ ವಿಭಿನ್ನವಾಗಿದೆ.


ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...