Homeಮುಖಪುಟಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

ಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

- Advertisement -
- Advertisement -

ಮೇ 2ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ನಂತರದಲ್ಲಿ, ಮೇ 4ರಿಂದ ಇಲ್ಲಿವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದ್ದು, ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಡೀಸೆಲ್‍ 100 ರೂ ದಾಟುವ ಮೂಲಕ ಇಂಧನ ದರಗಳು ಹೊಸ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಇಂಧನ ದರದಲ್ಲಿ ಮತ್ತೊಂದು ಏರಿಕೆಯ ನಂತರ ಡೀಸೆಲ್ ಬೆಲೆ ಇಂದು ರಾಜಸ್ಥಾನದಲ್ಲಿ ಲೀಟರ್‌ಗೆ 100 ರೂ. ದಾಟಿ ‘ದಾಖಲೆ’ ಬರೆದಿದೆ.

ಈ ಏರಿಕೆ ಕಾರಣಕ್ಕೆ ಪೆತ್ರೋಲ್‍ ದರ 100 ರೂ. ದಾಟಿದ 7 ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಿಕೊಂಡಿದೆ. ಹಾಗೆ ನೋಡಿದರೆ, ಕಳೆದ ಸಲದ ಏರಿಕೆಯಲ್ಲೇ ಬಳ್ಳಾರಿ ಮತ್ತು ಶಿರಸಿಯಲ್ಲಿ ಪೆಟ್ರೋಲ್‍ 100ರ ಗಡಿ ದಾಟಿತ್ತು.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಇಂದು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ದರವನ್ನು 23 ಪೈಸೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ, ಪೆಟ್ರೋಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಲೀಟರ್‌ಗೆ  96.12 ರೂ ಇದ್ದರೆ, ಡೀಸೆಲ್ ದರ 86.98 ರೂ ಇದೆ.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ – ಈ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ  100 ರೂ.ಗಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ.

ಈಗ ಕರ್ನಾಟಕವೂ ಈ ಲಿಸ್ಟಿಗೆ ಸೇರ್ಪಡೆಯಾಗಿದ್ದು, ಬೀದರ್, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಶಿರಸಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ಪೆಟ್ರೋಲ್‍ ದರ 100 ರೂ. ದಾಟಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 99.39  ಮತ್ತು ಡೀಸೆಲ್ 92.27 ರೂಗಳಿಗೆ ತಲುಪಿವೆ.

ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ರಾಜಸ್ಥಾನದ ಶ್ರೀಗಂಗನಗರ ಜಿಲ್ಲೆಯು ಫೆಬ್ರವರಿ ಮಧ್ಯದಲ್ಲಿ ಪೆಟ್ರೋಲ್ ದರ ನೂರು ರೂ. ದಾಟಿದ ಮೊದಲ ಪ್ರದೇಶವಾಗಿದೆ. ಇವತ್ತು ಶನಿವಾರ ಡೀಸೆಲ್ ಕೂಡ ಇಲ್ಲಿ ಸೆಂಚುರಿ ಬಾರಿಸಿ ಸಾರ್ವಕಾಲಿಕ ದಾಖಲೆ ಬರೆದಿದೆ.

ರಾಜಸ್ತಾನದ ನಗರಗಳಲ್ಲಿ ಪೆಟ್ರೋಲ್  107.22 ರೂ.ಗೆ ಮಾರಾಟವಾಗುತ್ತಿದೆ. ಇದು ದೇಶದಲ್ಲೇ ಗರಿಷ್ಠ ದರವಾಗಿದೆ. ಇವತ್ತಿನಿಂದ ನಗರಗಳಲ್ಲಿ ಡೀಸೆಲ್ 100.05 ರೂ.ಗೆ ಮಾರಾಟವಾಗುತ್ತಿದೆ. ಪಟ್ಟಣಗಳಲ್ಲಿ ಪ್ರೀಮಿಯಂ ಅಥವಾ ಸಂಯೋಜಕ ಪೆಟ್ರೋಲ್ ಲೀಟರ್‌ಗೆ. 110.50 ರೂ, ಮತ್ತು ಡೀಸೆಲ್ 103.72 ರೂ.ಗೆ  ಮಾರಾಟವಾಗುತ್ತಿವೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ  ಸರ್ಕಾರವು ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದು, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿವೆ.

ಮೇ 29ರಂದು ಮುಂಬೈ ಪೆಟ್ರೋಲ್‍ ದರ 100 ರೂ. ದಾಟಿದ ಮೊದಲ ಮೆಟ್ರೋ ನಗರವಾಯಿತು. ಪೆಟ್ರೋಲ್ ಈಗ ಮುಂಬೈನಲ್ಲಿ 102.02 ರೂ.ಗೆ ಮತ್ತು ಡೀಸೆಲ್ 94.39 ರೂ.ಗೆ  ಮಾರಾಟವಾಗುತ್ತಿವೆ.

ಲೇಹ್ ನಂತರ, ಶ್ರೀನಗರ ಕೂಡ ಪೆಟ್ರೋಲ್‌ ದರದಲ್ಲಿ  100 ರೂ. (ರೂ. 99.27 ರೂ) ಹತ್ತಿರ ಬಂದಿದೆ. ಹೈದರಾಬಾದ್‍ನಲ್ಲಿ ಕೂಡ ಪೆಟ್ರೋಲ್ ದರ 99.96 ರೂ,ಗೆ ತಲುಪಿದೆ.

ಪೆಟ್ರೋಲ್ ಲೇಹ್‌ನಲ್ಲಿ 101.73 ರೂ.ಗೆ ಮತ್ತು ಡೀಸೆಲ್ 93.66 ರೂ.ಗೆ ಮಾರಾಟವಾಗುತ್ತಿವೆ.

ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಕೊನೆಯ ಸುತ್ತಿನ ಮತದಾನಕ್ಕೂ ಮೊದಲು ಸರ್ಕಾರಿ  ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆಯಲ್ಲಿ 18 ದಿನಗಳ ವಿರಾಮವನ್ನು ಕಾಯ್ದುಕೊಂಡಿದ್ದವು. ಮೇ 2ರಂದು ಫಲಿತಾಂಶ  ಘೋಷಣೆಯಾಗಿತು. ಮೇ 4ರಿಂದ  ಇವತ್ತಿನವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದೆ.

ಈ 23 ಹೆಚ್ಚಳಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 5.72 ರೂ. ಮತ್ತು ಡೀಸೆಲ್  6.25 ರೂಗಳಷ್ಟು ಏರಿಕೆಯಾಗಿದೆ.

ಹಿಂದಿನ 15 ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನದ ಸರಾಸರಿ ಬೆಲೆ ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.

ಸದ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಸ್ಥಿರವಾಗಿ ಕಂಡುಬಂದರೂ, ದೇಶದಲ್ಲಿ ಇಂಧನ ದರ ಏರಿಕೆಯಾಗುತ್ತಿದೆ.

ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.  ಇದು ವಿವಿಧ ರಾಜ್ಯಗಳಲ್ಲಿ ವಿಭಿನ್ನವಾಗಿದೆ.


ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...