Homeಕರೋನಾ ತಲ್ಲಣಮನೆ ಬಾಗಿಲಿಗೆ ತೆರಳಿ ವ್ಯಾಕ್ಸಿನ್‌‌ ನೀಡಲು ನಿಮಗೇನು ಕಷ್ಟ?: ಒಕ್ಕೂಟ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಮನೆ ಬಾಗಿಲಿಗೆ ತೆರಳಿ ವ್ಯಾಕ್ಸಿನ್‌‌ ನೀಡಲು ನಿಮಗೇನು ಕಷ್ಟ?: ಒಕ್ಕೂಟ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಕೇರಳ ಮತ್ತು ಜಮ್ಮು ಕಾಶ್ಮೀರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ `ಮನೆ ಬಾಗಿಲಿಗೆ ಲಸಿಕೆ' ಕಾರ್ಯಕ್ರಮವನ್ನು ನೋಡಿ ಎಂದು ಅದು ಹೇಳಿದೆ

- Advertisement -
- Advertisement -

ಕೇರಳ ಮತ್ತು ಜಮ್ಮು ಕಾಶ್ಮೀರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ ಮನೆ ಬಾಗಿಲಿಗೆ ಲಸಿಕೆ ಕಾರ್ಯಕ್ರಮವನ್ನು ನೋಡಿ ಮತ್ತು ಮನೆ ಬಾಗಿಲಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಳುವ ಪ್ರಸ್ತುತ ನೀತಿಯ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಿ ಎಂದು ಬಾಂಬೆ ಹೈಕೋರ್ಟ್ ಒಕ್ಕೂಟ ಸರ್ಕಾರಕ್ಕೆ ಹೇಳಿದೆ.

ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ರಾಜ್ಯಗಳು ಈಗಾಗಲೇ ಇಂತಹ ಪ್ರಕ್ರಿಯೆಗಳನ್ನು ನಡೆಸುತ್ತಿರುವಾಗ ಮನೆ ಬಾಗಿಲಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಳುವ ಒಕ್ಕೂಟ ಸರ್ಕಾರದ ಸಮಸ್ಯೆ ಏನೆಂಬುದನ್ನು ಅರ್ಥವಾಗುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್. ಕುಲಕರ್ಣಿ ಅವರ ವಿಭಾಗೀಯ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಸಾಮರ್ಥ್ಯ ಹೊಂದಿರುವ, ಗಾಲಿಕುರ್ಚಿ ಅಥವಾ ಹಾಸಿಗೆ ಹಿಡಿದಿರುವ ವ್ಯಕ್ತಿಗಳ ಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡುವಂತೆ ಕೋರಿ ವಕೀಲರಾದ ಧ್ರುತಿ ಕಪಾಡಿಯಾ ಮತ್ತು ಕುನಾಲ್ ತಿವಾರಿ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ಪ್ರತ್ಯೇಕ ರಾಜ್ಯಗಳು ಮನೆ ಬಾಗಿಲಿಗೆ ತೆರಳಿ ಲಸಿಕೆಯನ್ನು ನೀಡುತ್ತಿರುವಾಗ ಒಕ್ಕೂಟ ಸರ್ಕಾರ ಮಾತ್ರ ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಗೆ ಹೇಳುತ್ತದೆ ಎಂದು ನ್ಯಾಯಾಲಯ ಕೇಳಿದೆ.

“ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ಪ್ರತ್ಯೇಕ ರಾಜ್ಯಗಳು ಮನೆ ಬಾಗಿಲಿಗೆ ತೆರಳಿ ಚುಚ್ಚುಮದ್ದನ್ನು ಯಶಸ್ವಿಯಾಗಿ ನೀಡುತ್ತಿರುವುದು ಹೇಗೆ? ಕೇರಳ ಮತ್ತು ಜಮ್ಮು ಕಾಶ್ಮೀರ ಮಾದರಿಯ ಬಗ್ಗೆ ಕೇಂದ್ರದ ಅಭಿಪ್ರಾಯವೇನು?” ನ್ಯಾಯಪೀಠ ಪ್ರಶ್ನಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

“ಒಕ್ಕೂಟ ಸರ್ಕಾರದ ಸಮಸ್ಯೆ ಏನೆಂದು ನಮಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವು ಈ ರಾಜ್ಯಗಳೊಂದಿಗೆ ಏಕೆ ಸಂವಹನ ನಡೆಸಬಾರದು. ಇದೇ ರೀತಿ ಲಸಿಕೆ ನೀಡಲು ನೀವು ಇತರ ರಾಜ್ಯಗಳಿಗೂ ಮನವಿ ಮಾಡಿದರೆ, ಅಲ್ಲಿ ಕೂಡ ಹಾಗೆಯೆ ಮಾಡಬಹುದು” ಎಂದು ನ್ಯಾಯಾಲಯ ಹೇಳಿದ್ದು, ಒಕ್ಕೂಟ ಸರ್ಕಾರಕ್ಕೆ “ಉತ್ತಮ ನಿರ್ಧಾರ” ತೆಗೆದುಕೊಳ್ಳಲು ಕೇಳಿದೆ.

ಸಾಂಕ್ರಾಮಿಕ ಸಮಯದಲ್ಲಿ ಮುಂಬೈ ಕಾರ್ಪೋರೇಷನ್‌‌(BMC) ಉತ್ತಮ ಕೆಲಸ ಮಾಡಲಾಗುತ್ತಿರುವುದು ತುಂಬಾ ಖುಷಿಕೊಟ್ಟಿದೆ ಎಂದು ನ್ಯಾಯಾಲಯ ಹೇಳಿದ್ದು, ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲು BMC ಯಾಕೆ ಹಿಂಜರಿಯುತ್ತಿದೆ ಎಂದು ಪ್ರಶ್ನಿಸಿದೆ.

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ BMC ಸಲಹೆಗಾರರಾದ ಸಖ್ರೆ ಅವರು, BMC ಆಯುಕ್ತ ಇಕ್ಬಾಲ್ ಚಾಹಲ್ ಅವರು ಕೇಂದ್ರಕ್ಕೆ ಬರೆದ ಪತ್ರದ ಬಗ್ಗೆ ಗಮನಸೆಳೆದು, “BMC ಮನೆ ಬಾಗಿಲಿಗೆ ಲಸಿಕೆ ನೀಡಲು ಸಿದ್ಧವಿದೆ. ಇದಕ್ಕಾಗಿ ಮಾರ್ಗಸೂಚಿಗಳನ್ನು ನೀಡುವಂತೆ ಒಕ್ಕೂಟ ಸರ್ಕಾರವನ್ನು ಕೋರಿದೆ” ಎಂದು ಹೇಳಿದ್ದಾರೆ.

ಈ ಪತ್ರದ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಕಾರ್ಯದರ್ಶಿಯ ಸೂಚನೆಗಳನ್ನು ತೆಗೆದುಕೊಳ್ಳುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ನೋಟು ಅಮಾನ್ಯೀಕರಣದಿಂದ ತೆರಿಗೆ ಸಂಗ್ರಹ ಹೆಚ್ಚಳ- ನಿರ್ಮಲ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...